HomeಮುಖಪುಟCRPF ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ: ಗೃಹಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಡ

CRPF ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ: ಗೃಹಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಡ

ಟ್ವಿಟ್ಟರ್‌ನಲ್ಲಿ #ResignHMBommai ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಸಾವಿರಾರು ಜನ ಸೈನಿಕನ ಪರ ನಿಂತಿದ್ದಾರೆ.

- Advertisement -
- Advertisement -

CRPF ಸೈನಿಕ ಸಚಿನ್ ಸಾವಂತ್ ಮೇಲೆ ಬೆಳಗಾವಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಸೈನಿಕನನ್ನು ಬಂಧಿಸಿ, ಕೈಕೊಳ ಹಾಕಿ ಚಿತ್ರಹಿಂಸೆ ಕೊಟ್ಟಿದ್ದರ ಹೊಣೆ ಹೊತ್ತು ಕರ್ನಾಟಕದ ಗೃಹಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜೀನಾಮೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹೇರಲಾಗಿದೆ.

ಟ್ವಿಟ್ಟರ್‌ನಲ್ಲಿ #ResignHMBommai ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಸಾವಿರಾರು ಜನ ಸೈನಿಕನ ಪರ ನಿಂತಿದ್ದಾರೆ.

ಇದೇ ಸಂದರ್ಭದಲ್ಲಿ CRPF ಸೈನಿಕ ಸಚಿನ್ ಸಾವಂತ್ ಮೇಲಿನ ಪ್ರಕರಣವನ್ನು ಪೊಲೀಸ್‌ ಇಲಾಖೆ ಕೈಬಿಡಲಿದೆ ಎಂದು ಎಎನ್‌ಐ ವರದಿ ಮಾಡಿದೆ. ಸಚಿನ್‌ ಸಾವಂತ್‌ಗೆ ಜಾಮೀನು ದೊರೆತಿದ್ದು ಇಂದು ಬಿಡುಗಡೆಯಾಗಿದ್ದಾರೆ.

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ  ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿತ್ತು.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದು ತಮ್ಮ ಬೈಕ್‌ ತೊಳೆಯುತ್ತಿದ್ದರು. ಅದಕ್ಕಾಗಿ ತನ್ನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿ.ಆರ್.ಪಿ.ಎಫ್. ಯೋದನ ವಿರುದ್ಧ ಅಮಾನುಶವಾಗಿ ವರ್ತಿಸಿರುವ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...