HomeಮುಖಪುಟCRPF ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ: ಗೃಹಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಡ

CRPF ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ: ಗೃಹಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಡ

ಟ್ವಿಟ್ಟರ್‌ನಲ್ಲಿ #ResignHMBommai ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಸಾವಿರಾರು ಜನ ಸೈನಿಕನ ಪರ ನಿಂತಿದ್ದಾರೆ.

- Advertisement -
- Advertisement -

CRPF ಸೈನಿಕ ಸಚಿನ್ ಸಾವಂತ್ ಮೇಲೆ ಬೆಳಗಾವಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಸೈನಿಕನನ್ನು ಬಂಧಿಸಿ, ಕೈಕೊಳ ಹಾಕಿ ಚಿತ್ರಹಿಂಸೆ ಕೊಟ್ಟಿದ್ದರ ಹೊಣೆ ಹೊತ್ತು ಕರ್ನಾಟಕದ ಗೃಹಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜೀನಾಮೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹೇರಲಾಗಿದೆ.

ಟ್ವಿಟ್ಟರ್‌ನಲ್ಲಿ #ResignHMBommai ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಸಾವಿರಾರು ಜನ ಸೈನಿಕನ ಪರ ನಿಂತಿದ್ದಾರೆ.

ಇದೇ ಸಂದರ್ಭದಲ್ಲಿ CRPF ಸೈನಿಕ ಸಚಿನ್ ಸಾವಂತ್ ಮೇಲಿನ ಪ್ರಕರಣವನ್ನು ಪೊಲೀಸ್‌ ಇಲಾಖೆ ಕೈಬಿಡಲಿದೆ ಎಂದು ಎಎನ್‌ಐ ವರದಿ ಮಾಡಿದೆ. ಸಚಿನ್‌ ಸಾವಂತ್‌ಗೆ ಜಾಮೀನು ದೊರೆತಿದ್ದು ಇಂದು ಬಿಡುಗಡೆಯಾಗಿದ್ದಾರೆ.

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ  ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿತ್ತು.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದು ತಮ್ಮ ಬೈಕ್‌ ತೊಳೆಯುತ್ತಿದ್ದರು. ಅದಕ್ಕಾಗಿ ತನ್ನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿ.ಆರ್.ಪಿ.ಎಫ್. ಯೋದನ ವಿರುದ್ಧ ಅಮಾನುಶವಾಗಿ ವರ್ತಿಸಿರುವ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...