HomeಮುಖಪುಟCRPF ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ: ಗೃಹಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಡ

CRPF ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ: ಗೃಹಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಡ

ಟ್ವಿಟ್ಟರ್‌ನಲ್ಲಿ #ResignHMBommai ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಸಾವಿರಾರು ಜನ ಸೈನಿಕನ ಪರ ನಿಂತಿದ್ದಾರೆ.

- Advertisement -
- Advertisement -

CRPF ಸೈನಿಕ ಸಚಿನ್ ಸಾವಂತ್ ಮೇಲೆ ಬೆಳಗಾವಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಸೈನಿಕನನ್ನು ಬಂಧಿಸಿ, ಕೈಕೊಳ ಹಾಕಿ ಚಿತ್ರಹಿಂಸೆ ಕೊಟ್ಟಿದ್ದರ ಹೊಣೆ ಹೊತ್ತು ಕರ್ನಾಟಕದ ಗೃಹಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜೀನಾಮೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹೇರಲಾಗಿದೆ.

ಟ್ವಿಟ್ಟರ್‌ನಲ್ಲಿ #ResignHMBommai ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಸಾವಿರಾರು ಜನ ಸೈನಿಕನ ಪರ ನಿಂತಿದ್ದಾರೆ.

ಇದೇ ಸಂದರ್ಭದಲ್ಲಿ CRPF ಸೈನಿಕ ಸಚಿನ್ ಸಾವಂತ್ ಮೇಲಿನ ಪ್ರಕರಣವನ್ನು ಪೊಲೀಸ್‌ ಇಲಾಖೆ ಕೈಬಿಡಲಿದೆ ಎಂದು ಎಎನ್‌ಐ ವರದಿ ಮಾಡಿದೆ. ಸಚಿನ್‌ ಸಾವಂತ್‌ಗೆ ಜಾಮೀನು ದೊರೆತಿದ್ದು ಇಂದು ಬಿಡುಗಡೆಯಾಗಿದ್ದಾರೆ.

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ  ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿತ್ತು.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದು ತಮ್ಮ ಬೈಕ್‌ ತೊಳೆಯುತ್ತಿದ್ದರು. ಅದಕ್ಕಾಗಿ ತನ್ನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿ.ಆರ್.ಪಿ.ಎಫ್. ಯೋದನ ವಿರುದ್ಧ ಅಮಾನುಶವಾಗಿ ವರ್ತಿಸಿರುವ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...