HomeಮುಖಪುಟCRPF ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ: ಗೃಹಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಡ

CRPF ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ: ಗೃಹಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಡ

ಟ್ವಿಟ್ಟರ್‌ನಲ್ಲಿ #ResignHMBommai ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಸಾವಿರಾರು ಜನ ಸೈನಿಕನ ಪರ ನಿಂತಿದ್ದಾರೆ.

- Advertisement -
- Advertisement -

CRPF ಸೈನಿಕ ಸಚಿನ್ ಸಾವಂತ್ ಮೇಲೆ ಬೆಳಗಾವಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಸೈನಿಕನನ್ನು ಬಂಧಿಸಿ, ಕೈಕೊಳ ಹಾಕಿ ಚಿತ್ರಹಿಂಸೆ ಕೊಟ್ಟಿದ್ದರ ಹೊಣೆ ಹೊತ್ತು ಕರ್ನಾಟಕದ ಗೃಹಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜೀನಾಮೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹೇರಲಾಗಿದೆ.

ಟ್ವಿಟ್ಟರ್‌ನಲ್ಲಿ #ResignHMBommai ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಸಾವಿರಾರು ಜನ ಸೈನಿಕನ ಪರ ನಿಂತಿದ್ದಾರೆ.

ಇದೇ ಸಂದರ್ಭದಲ್ಲಿ CRPF ಸೈನಿಕ ಸಚಿನ್ ಸಾವಂತ್ ಮೇಲಿನ ಪ್ರಕರಣವನ್ನು ಪೊಲೀಸ್‌ ಇಲಾಖೆ ಕೈಬಿಡಲಿದೆ ಎಂದು ಎಎನ್‌ಐ ವರದಿ ಮಾಡಿದೆ. ಸಚಿನ್‌ ಸಾವಂತ್‌ಗೆ ಜಾಮೀನು ದೊರೆತಿದ್ದು ಇಂದು ಬಿಡುಗಡೆಯಾಗಿದ್ದಾರೆ.

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ  ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿತ್ತು.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದು ತಮ್ಮ ಬೈಕ್‌ ತೊಳೆಯುತ್ತಿದ್ದರು. ಅದಕ್ಕಾಗಿ ತನ್ನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿ.ಆರ್.ಪಿ.ಎಫ್. ಯೋದನ ವಿರುದ್ಧ ಅಮಾನುಶವಾಗಿ ವರ್ತಿಸಿರುವ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...