Homeಕರೋನಾ ತಲ್ಲಣ‘ಮುಂದಿನ 4 ವಾರ ಕೇರಳಕ್ಕೆ ನಿರ್ಣಾಯಕ’ - ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ ವೀಣಾ ಜಾರ್ಜ್‌

‘ಮುಂದಿನ 4 ವಾರ ಕೇರಳಕ್ಕೆ ನಿರ್ಣಾಯಕ’ – ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ ವೀಣಾ ಜಾರ್ಜ್‌

- Advertisement -
- Advertisement -

ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮುಂಬರುವ ನಾಲ್ಕು ವಾರಗಳು ರಾಜ್ಯಕ್ಕೆ ಬಹಳ ನಿರ್ಣಾಯಕವಾಗಲಿದೆ ಎಂದು ಜನರಿಗೆ ಸೋಮವಾರ ಎಚ್ಚರಿಕೆ ನೀಡಿದ್ದಾರೆ. “ಆರ್ಥಿಕ ಚಟುವಟಿಕೆಗಳು ನಡೆಯಬೇಕಾಗಿರುವುದರಿಂದ ಲಾಕ್‌ಡೌನ್ ಅನ್ನು ಸಾರ್ವಕಾಲಿಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಜೀವನ ಮತ್ತು ಜೀವನೋಪಾಯ ಎರಡನ್ನೂ ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

‘‘ಎಲ್ಲಾ ಕೋವಿಡ್ ಪ್ರೋಟೋಕಾಲ್‌ಗಳು ನಿರ್ವಹಣೆಯಾಗುವಂತೆ ಖಚಿತಪಡಿಸಿಕೊಳ್ಳಲು ನಾವು ಸ್ಪಷ್ಟಪಡಿಸಿದ್ದೇವೆ. ಕೆಲವು ಕಡೆ ಅವುಗಳನ್ನು ಪಾಲಿಸಲಾಗಿದೆ, ಆದರೆ ಅನೇಕ ಸ್ಥಳಗಳಲ್ಲಿ ನಾವು ಬಯಸಿದ ರೀತಿಯಲ್ಲಿ ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಆಧಾರಿತ ಜನಗಣತಿಯಿಂದ ವಿವಿಧ ವರ್ಗದವರಿಗೆ ಕಲ್ಯಾಣ ಯೋಜನೆ ಜಾರಿಗೆ ಸಹಾಯ: ತೇಜಸ್ವಿ ಯಾದವ್

“ಡೆಲ್ಟಾ ರೂಪಾಂತರದ ಪತ್ತೆಯಾಗುತ್ತಿರುವುದು ನಮ್ಮ ಕಳವಳಕ್ಕೆ ಕಾರಣ. ಇದರ ಜೊತೆಗೆ ಮೂರನೇ ಅಲೆಯನ್ನು ಕೂಡಾ ನಿರೀಕ್ಷಿಸಲಾಗಿದೆ. ಆದ್ದರಿಂದ ಮುಂಬರುವ ವಾರಗಳು ಬಹಳ ನಿರ್ಣಾಯಕವಾಗಲಿವೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

ಕೇರಳದಲ್ಲಿ 10 ದಿನಗಳ ಓಣಂ ಹಬ್ಬಗಳು ಭಾನುವಾರ ಮುಕ್ತಾಯಗೊಂಡಿದೆ. ಹಬ್ಬದ ವಾರ ಶುರುವಾಗುವ ಮೊದಲೇ ದೇಶದ 50% ಕೊರೊನಾ ಪ್ರಕರಣ ಕೇರಳ ರಾಜ್ಯವೊಂದರಲ್ಲೆ ವರದಿಯಾಗುತ್ತಿತ್ತು.

“ಮೂರನೇ ಅಲೆಯ ಸಾಧ್ಯತೆಯನ್ನು ಪರಿಗಣಿಸಿ, ಆರೋಗ್ಯ ಮೂಲಸೌಕರ್ಯವನ್ನು ಪರಿಷ್ಕರಿಸಲಾಗಿದೆ. ನಾವು ಪ್ರಸ್ತುತ 870 ಟನ್ ಆಕ್ಸಿಜನ್ ಸ್ಟಾಕ್ ಮತ್ತು 33 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸುತ್ತಿದ್ದೇವೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

“ಸಾಧ್ಯವಾದಷ್ಟು ಜನರನ್ನು ಒಳಗೊಳ್ಳಲು ಲಸಿಕೆ ಅಭಿಯಾನವನ್ನು ವೇಗಗೊಳಿಸುವುದು ನಮ್ಮ ಗುರಿಯಾಗಿದೆ. ಲಸಿಕೆಗಳನ್ನು ಅನೇಕರು ತೆಗೆದುಕೊಂಡಿದ್ದರೂ, ಡೆಲ್ಟಾ ರೂಪಾಂತರವು ಬೇಗನೆ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಎಲ್ಲರೂ ಜಾಗರೂಕರಾಗಿರಬೇಕು ಮತ್ತು ಎಲ್ಲಾ ಸುರಕ್ಷತಾ ನಿಯಮಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ” ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...