Homeಕರೋನಾ ತಲ್ಲಣ‘ಮುಂದಿನ 4 ವಾರ ಕೇರಳಕ್ಕೆ ನಿರ್ಣಾಯಕ’ - ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ ವೀಣಾ ಜಾರ್ಜ್‌

‘ಮುಂದಿನ 4 ವಾರ ಕೇರಳಕ್ಕೆ ನಿರ್ಣಾಯಕ’ – ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ ವೀಣಾ ಜಾರ್ಜ್‌

- Advertisement -
- Advertisement -

ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮುಂಬರುವ ನಾಲ್ಕು ವಾರಗಳು ರಾಜ್ಯಕ್ಕೆ ಬಹಳ ನಿರ್ಣಾಯಕವಾಗಲಿದೆ ಎಂದು ಜನರಿಗೆ ಸೋಮವಾರ ಎಚ್ಚರಿಕೆ ನೀಡಿದ್ದಾರೆ. “ಆರ್ಥಿಕ ಚಟುವಟಿಕೆಗಳು ನಡೆಯಬೇಕಾಗಿರುವುದರಿಂದ ಲಾಕ್‌ಡೌನ್ ಅನ್ನು ಸಾರ್ವಕಾಲಿಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಜೀವನ ಮತ್ತು ಜೀವನೋಪಾಯ ಎರಡನ್ನೂ ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

‘‘ಎಲ್ಲಾ ಕೋವಿಡ್ ಪ್ರೋಟೋಕಾಲ್‌ಗಳು ನಿರ್ವಹಣೆಯಾಗುವಂತೆ ಖಚಿತಪಡಿಸಿಕೊಳ್ಳಲು ನಾವು ಸ್ಪಷ್ಟಪಡಿಸಿದ್ದೇವೆ. ಕೆಲವು ಕಡೆ ಅವುಗಳನ್ನು ಪಾಲಿಸಲಾಗಿದೆ, ಆದರೆ ಅನೇಕ ಸ್ಥಳಗಳಲ್ಲಿ ನಾವು ಬಯಸಿದ ರೀತಿಯಲ್ಲಿ ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಆಧಾರಿತ ಜನಗಣತಿಯಿಂದ ವಿವಿಧ ವರ್ಗದವರಿಗೆ ಕಲ್ಯಾಣ ಯೋಜನೆ ಜಾರಿಗೆ ಸಹಾಯ: ತೇಜಸ್ವಿ ಯಾದವ್

“ಡೆಲ್ಟಾ ರೂಪಾಂತರದ ಪತ್ತೆಯಾಗುತ್ತಿರುವುದು ನಮ್ಮ ಕಳವಳಕ್ಕೆ ಕಾರಣ. ಇದರ ಜೊತೆಗೆ ಮೂರನೇ ಅಲೆಯನ್ನು ಕೂಡಾ ನಿರೀಕ್ಷಿಸಲಾಗಿದೆ. ಆದ್ದರಿಂದ ಮುಂಬರುವ ವಾರಗಳು ಬಹಳ ನಿರ್ಣಾಯಕವಾಗಲಿವೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

ಕೇರಳದಲ್ಲಿ 10 ದಿನಗಳ ಓಣಂ ಹಬ್ಬಗಳು ಭಾನುವಾರ ಮುಕ್ತಾಯಗೊಂಡಿದೆ. ಹಬ್ಬದ ವಾರ ಶುರುವಾಗುವ ಮೊದಲೇ ದೇಶದ 50% ಕೊರೊನಾ ಪ್ರಕರಣ ಕೇರಳ ರಾಜ್ಯವೊಂದರಲ್ಲೆ ವರದಿಯಾಗುತ್ತಿತ್ತು.

“ಮೂರನೇ ಅಲೆಯ ಸಾಧ್ಯತೆಯನ್ನು ಪರಿಗಣಿಸಿ, ಆರೋಗ್ಯ ಮೂಲಸೌಕರ್ಯವನ್ನು ಪರಿಷ್ಕರಿಸಲಾಗಿದೆ. ನಾವು ಪ್ರಸ್ತುತ 870 ಟನ್ ಆಕ್ಸಿಜನ್ ಸ್ಟಾಕ್ ಮತ್ತು 33 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸುತ್ತಿದ್ದೇವೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

“ಸಾಧ್ಯವಾದಷ್ಟು ಜನರನ್ನು ಒಳಗೊಳ್ಳಲು ಲಸಿಕೆ ಅಭಿಯಾನವನ್ನು ವೇಗಗೊಳಿಸುವುದು ನಮ್ಮ ಗುರಿಯಾಗಿದೆ. ಲಸಿಕೆಗಳನ್ನು ಅನೇಕರು ತೆಗೆದುಕೊಂಡಿದ್ದರೂ, ಡೆಲ್ಟಾ ರೂಪಾಂತರವು ಬೇಗನೆ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಎಲ್ಲರೂ ಜಾಗರೂಕರಾಗಿರಬೇಕು ಮತ್ತು ಎಲ್ಲಾ ಸುರಕ್ಷತಾ ನಿಯಮಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ” ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...