Homeಕರೋನಾ ತಲ್ಲಣ‘ಮುಂದಿನ 4 ವಾರ ಕೇರಳಕ್ಕೆ ನಿರ್ಣಾಯಕ’ - ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ ವೀಣಾ ಜಾರ್ಜ್‌

‘ಮುಂದಿನ 4 ವಾರ ಕೇರಳಕ್ಕೆ ನಿರ್ಣಾಯಕ’ – ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ ವೀಣಾ ಜಾರ್ಜ್‌

- Advertisement -
- Advertisement -

ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮುಂಬರುವ ನಾಲ್ಕು ವಾರಗಳು ರಾಜ್ಯಕ್ಕೆ ಬಹಳ ನಿರ್ಣಾಯಕವಾಗಲಿದೆ ಎಂದು ಜನರಿಗೆ ಸೋಮವಾರ ಎಚ್ಚರಿಕೆ ನೀಡಿದ್ದಾರೆ. “ಆರ್ಥಿಕ ಚಟುವಟಿಕೆಗಳು ನಡೆಯಬೇಕಾಗಿರುವುದರಿಂದ ಲಾಕ್‌ಡೌನ್ ಅನ್ನು ಸಾರ್ವಕಾಲಿಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಜೀವನ ಮತ್ತು ಜೀವನೋಪಾಯ ಎರಡನ್ನೂ ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

‘‘ಎಲ್ಲಾ ಕೋವಿಡ್ ಪ್ರೋಟೋಕಾಲ್‌ಗಳು ನಿರ್ವಹಣೆಯಾಗುವಂತೆ ಖಚಿತಪಡಿಸಿಕೊಳ್ಳಲು ನಾವು ಸ್ಪಷ್ಟಪಡಿಸಿದ್ದೇವೆ. ಕೆಲವು ಕಡೆ ಅವುಗಳನ್ನು ಪಾಲಿಸಲಾಗಿದೆ, ಆದರೆ ಅನೇಕ ಸ್ಥಳಗಳಲ್ಲಿ ನಾವು ಬಯಸಿದ ರೀತಿಯಲ್ಲಿ ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಆಧಾರಿತ ಜನಗಣತಿಯಿಂದ ವಿವಿಧ ವರ್ಗದವರಿಗೆ ಕಲ್ಯಾಣ ಯೋಜನೆ ಜಾರಿಗೆ ಸಹಾಯ: ತೇಜಸ್ವಿ ಯಾದವ್

“ಡೆಲ್ಟಾ ರೂಪಾಂತರದ ಪತ್ತೆಯಾಗುತ್ತಿರುವುದು ನಮ್ಮ ಕಳವಳಕ್ಕೆ ಕಾರಣ. ಇದರ ಜೊತೆಗೆ ಮೂರನೇ ಅಲೆಯನ್ನು ಕೂಡಾ ನಿರೀಕ್ಷಿಸಲಾಗಿದೆ. ಆದ್ದರಿಂದ ಮುಂಬರುವ ವಾರಗಳು ಬಹಳ ನಿರ್ಣಾಯಕವಾಗಲಿವೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

ಕೇರಳದಲ್ಲಿ 10 ದಿನಗಳ ಓಣಂ ಹಬ್ಬಗಳು ಭಾನುವಾರ ಮುಕ್ತಾಯಗೊಂಡಿದೆ. ಹಬ್ಬದ ವಾರ ಶುರುವಾಗುವ ಮೊದಲೇ ದೇಶದ 50% ಕೊರೊನಾ ಪ್ರಕರಣ ಕೇರಳ ರಾಜ್ಯವೊಂದರಲ್ಲೆ ವರದಿಯಾಗುತ್ತಿತ್ತು.

“ಮೂರನೇ ಅಲೆಯ ಸಾಧ್ಯತೆಯನ್ನು ಪರಿಗಣಿಸಿ, ಆರೋಗ್ಯ ಮೂಲಸೌಕರ್ಯವನ್ನು ಪರಿಷ್ಕರಿಸಲಾಗಿದೆ. ನಾವು ಪ್ರಸ್ತುತ 870 ಟನ್ ಆಕ್ಸಿಜನ್ ಸ್ಟಾಕ್ ಮತ್ತು 33 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸುತ್ತಿದ್ದೇವೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

“ಸಾಧ್ಯವಾದಷ್ಟು ಜನರನ್ನು ಒಳಗೊಳ್ಳಲು ಲಸಿಕೆ ಅಭಿಯಾನವನ್ನು ವೇಗಗೊಳಿಸುವುದು ನಮ್ಮ ಗುರಿಯಾಗಿದೆ. ಲಸಿಕೆಗಳನ್ನು ಅನೇಕರು ತೆಗೆದುಕೊಂಡಿದ್ದರೂ, ಡೆಲ್ಟಾ ರೂಪಾಂತರವು ಬೇಗನೆ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಎಲ್ಲರೂ ಜಾಗರೂಕರಾಗಿರಬೇಕು ಮತ್ತು ಎಲ್ಲಾ ಸುರಕ್ಷತಾ ನಿಯಮಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ” ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...