Homeಕರೋನಾ ತಲ್ಲಣ‘ಮುಂದಿನ 4 ವಾರ ಕೇರಳಕ್ಕೆ ನಿರ್ಣಾಯಕ’ - ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ ವೀಣಾ ಜಾರ್ಜ್‌

‘ಮುಂದಿನ 4 ವಾರ ಕೇರಳಕ್ಕೆ ನಿರ್ಣಾಯಕ’ – ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ ವೀಣಾ ಜಾರ್ಜ್‌

- Advertisement -
- Advertisement -

ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮುಂಬರುವ ನಾಲ್ಕು ವಾರಗಳು ರಾಜ್ಯಕ್ಕೆ ಬಹಳ ನಿರ್ಣಾಯಕವಾಗಲಿದೆ ಎಂದು ಜನರಿಗೆ ಸೋಮವಾರ ಎಚ್ಚರಿಕೆ ನೀಡಿದ್ದಾರೆ. “ಆರ್ಥಿಕ ಚಟುವಟಿಕೆಗಳು ನಡೆಯಬೇಕಾಗಿರುವುದರಿಂದ ಲಾಕ್‌ಡೌನ್ ಅನ್ನು ಸಾರ್ವಕಾಲಿಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಜೀವನ ಮತ್ತು ಜೀವನೋಪಾಯ ಎರಡನ್ನೂ ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

‘‘ಎಲ್ಲಾ ಕೋವಿಡ್ ಪ್ರೋಟೋಕಾಲ್‌ಗಳು ನಿರ್ವಹಣೆಯಾಗುವಂತೆ ಖಚಿತಪಡಿಸಿಕೊಳ್ಳಲು ನಾವು ಸ್ಪಷ್ಟಪಡಿಸಿದ್ದೇವೆ. ಕೆಲವು ಕಡೆ ಅವುಗಳನ್ನು ಪಾಲಿಸಲಾಗಿದೆ, ಆದರೆ ಅನೇಕ ಸ್ಥಳಗಳಲ್ಲಿ ನಾವು ಬಯಸಿದ ರೀತಿಯಲ್ಲಿ ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಆಧಾರಿತ ಜನಗಣತಿಯಿಂದ ವಿವಿಧ ವರ್ಗದವರಿಗೆ ಕಲ್ಯಾಣ ಯೋಜನೆ ಜಾರಿಗೆ ಸಹಾಯ: ತೇಜಸ್ವಿ ಯಾದವ್

“ಡೆಲ್ಟಾ ರೂಪಾಂತರದ ಪತ್ತೆಯಾಗುತ್ತಿರುವುದು ನಮ್ಮ ಕಳವಳಕ್ಕೆ ಕಾರಣ. ಇದರ ಜೊತೆಗೆ ಮೂರನೇ ಅಲೆಯನ್ನು ಕೂಡಾ ನಿರೀಕ್ಷಿಸಲಾಗಿದೆ. ಆದ್ದರಿಂದ ಮುಂಬರುವ ವಾರಗಳು ಬಹಳ ನಿರ್ಣಾಯಕವಾಗಲಿವೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

ಕೇರಳದಲ್ಲಿ 10 ದಿನಗಳ ಓಣಂ ಹಬ್ಬಗಳು ಭಾನುವಾರ ಮುಕ್ತಾಯಗೊಂಡಿದೆ. ಹಬ್ಬದ ವಾರ ಶುರುವಾಗುವ ಮೊದಲೇ ದೇಶದ 50% ಕೊರೊನಾ ಪ್ರಕರಣ ಕೇರಳ ರಾಜ್ಯವೊಂದರಲ್ಲೆ ವರದಿಯಾಗುತ್ತಿತ್ತು.

“ಮೂರನೇ ಅಲೆಯ ಸಾಧ್ಯತೆಯನ್ನು ಪರಿಗಣಿಸಿ, ಆರೋಗ್ಯ ಮೂಲಸೌಕರ್ಯವನ್ನು ಪರಿಷ್ಕರಿಸಲಾಗಿದೆ. ನಾವು ಪ್ರಸ್ತುತ 870 ಟನ್ ಆಕ್ಸಿಜನ್ ಸ್ಟಾಕ್ ಮತ್ತು 33 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸುತ್ತಿದ್ದೇವೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

“ಸಾಧ್ಯವಾದಷ್ಟು ಜನರನ್ನು ಒಳಗೊಳ್ಳಲು ಲಸಿಕೆ ಅಭಿಯಾನವನ್ನು ವೇಗಗೊಳಿಸುವುದು ನಮ್ಮ ಗುರಿಯಾಗಿದೆ. ಲಸಿಕೆಗಳನ್ನು ಅನೇಕರು ತೆಗೆದುಕೊಂಡಿದ್ದರೂ, ಡೆಲ್ಟಾ ರೂಪಾಂತರವು ಬೇಗನೆ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಎಲ್ಲರೂ ಜಾಗರೂಕರಾಗಿರಬೇಕು ಮತ್ತು ಎಲ್ಲಾ ಸುರಕ್ಷತಾ ನಿಯಮಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ” ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕಾಂಗ್ರೆಸ್ ಹಿರಿಯ ನಾಯಕ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ಸೋಮವಾರ (ಏ.13) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಟಾಚಾರ)...

ಮಹಿಳಾ ಮೀಸಲಾತಿ ಮಸೂದೆ: ಏಪ್ರಿಲ್ 15 ರಂದು ಕಾಂಗ್ರೆಸ್ ಸರ್ವಪಕ್ಷ ಸಭೆ ಕರೆಯಲಿದೆ: ಮಲ್ಲಿಕಾರ್ಜುನ ಖರ್ಗೆ 

ಮಹಿಳಾ ಮೀಸಲಾತಿ ಮಸೂದೆಯನ್ನು ಚರ್ಚಿಸಲು ಏಪ್ರಿಲ್ 15 ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಕರೆಯಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ,...

ಗುಜರಾತ್‌| ಮುಸ್ಲಿಂ ವ್ಯಕ್ತಿಯ ಬೀದಿ ವ್ಯಾಪಾರಕ್ಕೆ ಅಡ್ಡಿಪಡಿಸಿದ ಹಿಂದುತ್ವ ಗೂಂಡಾಗಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಬಹುಸಂಖ್ಯಾತ ಪ್ರದೇಶವೊಂದರಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ಬೀದಿ ವ್ಯಾಪಾರಿಗೆ ಬಜರಂಗದಳ ಸದಸ್ಯರು ಬೆದರಿಕೆ ಹಾಕಿ ಅಲ್ಲಿಂದ ಅಂಗಡಿ ತೆರವುಗೊಳಿಸಿದ್ದಾರೆ. ಮುಸ್ಲಿಂ ವ್ಯಾಪಾರಿಯ ಗುರುತನ್ನು ಕೇಳಿದ ಹಿಂದುತ್ವ ಗೂಂಡಾಗಳು, ನಂತರ ಅವರನ್ನು...

“ನೀವು ಆರ್‌ಎಸ್‌ಎಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ 4 ಬಾರಿ ಭಾಗವಹಿಸಿದ್ದೀರಿ” : ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಗಂಭೀರ ವಾದ

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಏ.13) ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಆರ್‌ಎಸ್‌ಎಸ್ ಸಂಯೋಜಿತ...

ನಕಲಿ ನ್ಯಾಯಾಧೀಶನನ್ನು ಬಂಧಿಸಿದ ದೆಹಲಿ ಪೊಲೀಸರು; ಬಂದೂಕು ಹೊಂದಿದ್ದ ವ್ಯಕ್ತಿಗಳು

ನಕಲಿ ದಾಖಲೆಗಳನ್ನು ಬಳಸಿ ನ್ಯಾಯಾಂಗ ಅಧಿಕಾರಿಯಂತೆ ನಟಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ನವದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಅವರ ಬಳಿಯಿಂದ ಬಂದೂಕು ಮತ್ತು ಜೀವಂತ ಮದ್ದುಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಉತ್ತರ...

ಪಶ್ಚಿಮ ಬಂಗಾಳ| ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಾಂಡೆಲ್ ಬಂಧನ

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ (ಏಪ್ರಿಲ್ 13) ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿಯ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ...

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...