Homeಅಂಕಣಗಳುಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

ಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

- Advertisement -
- Advertisement -

ಭೀಮಾ ಕೋರೆಗಾಂವ್ ಆಪಾದಿತರ ಪೈಕಿ ಒಬ್ಬರಾದ ರೋನಾ ವಿಲ್ಸನ್ ಅವರ ಕಂಪ್ಯೂಟರಿನಲ್ಲಿ ಅಜ್ಞಾತ ಹ್ಯಾಕರ್ ಒಬ್ಬನು ಮೂವತ್ತು ದಸ್ತಾವೇಜುಗಳನ್ನು ’ನೆಟ್ಟಿದ್ದ’ನೆಂದು ವಾಷಿಂಗ್ಟನ್ ಪೋಸ್ಟ್ ಈ ವರ್ಷದ ಶುರುವಿನಲ್ಲಿ ವರದಿ ಮಾಡಿತ್ತು. ಆರ್ಸೆನಾಲ್ ಕನ್ಸಲ್ಟಿಂಗ್ ಎಂಬ ವಿಧಿವಿಜ್ಞಾನ ಸಂಸ್ಥೆಯ ತನಿಖೆಯನ್ನು ಈ ವರದಿ ಆಧರಿಸಿತ್ತು. ಕಳೆದ ತಿಂಗಳು ಇದೇ ವಿಧಿವಿಜ್ಞಾನ ಸಂಸ್ಥೆ ಆಪಾದಿತರಲ್ಲಿ ಒಬ್ಬರಾದ ಸುರೇಂದ್ರ ಗಾಡ್ಲಿಂಗ್ ಎಂಬ ದಲಿತ ಹಕ್ಕುಗಳ ಹೋರಾಟಗಾರರ ಕಂಪ್ಯೂಟರಿನ ಹಾರ್ಡ್ ಡ್ರೈವ್‌ನ್ನು ವಿಶ್ಲೇಷಿಸಿತ್ತು. ಹ್ಯಾಕಿಂಗ್ ಮಾಡಿ ಅವರ ಕಂಪ್ಯೂಟರಿಗೆ ಸುಳ್ಳು ಸಾಕ್ಷ್ಯಗಳನ್ನು ಹುದುಗಿಸಿದ ಕುರಿತು ಈ ಸಲ ಆರ್ಸೆನಾಲ್ ಕನ್ಸಲ್ಟಿಂಗ್ ಸಂಸ್ಥೆಗೆ ಇನ್ನಷ್ಟು ಆಳವಾದ ಪುರಾವೆ ದೊರೆತಿದೆ. ಬಾಸ್ಟನ್ ಮ್ಯಾರಥಾನ್ ಬಾಂಬಿಂಗ್ ಮುಂತಾದ ತೀರಾ ಗಂಭೀರ ಪ್ರಕರಣಗಳ ಸಾಕ್ಷ್ಯಗಳನ್ನು ಈ ಸಂಸ್ಥೆ ವಿಶ್ಲೇಷಿಸಿದೆ.

ಆದರೆ ಸುರೇಂದ್ರ ಗಾಡ್ಲಿಂಗ್ ಕಂಪ್ಯೂಟರಿನಲ್ಲಿ ಹ್ಯಾಕಿಂಗ್ ಮೂಲಕ ಸುಳ್ಳು ಸಾಕ್ಷ್ಯ ನೆಟ್ಟು, ಆಪಾದಿತರ ವಿರುದ್ಧ ಸಾಕ್ಷ್ಯ ಸೃಷ್ಟಿಸಿರುವ ಪ್ರಕರಣದಂತಹ ಮತ್ತೊಂದು ಗಂಭೀರ ಪ್ರಕರಣವನ್ನು ತಾನು ಕಂಡಿಲ್ಲವೆಂದು ಈ ಸಂಸ್ಥೆ ಹೇಳಿದೆ. 2016ರ ಫೆಬ್ರವರಿಯಿಂದ 2017ರ ನವೆಂಬರ್ ತನಕ 20 ತಿಂಗಳ ಕಾಲ ಗಾಡ್ಲಿಂಗ್ ಅವರ ಕಂಪ್ಯೂಟರನ್ನು ಹ್ಯಾಕಿಂಗ್ ಮೂಲಕ ಸುಳ್ಳು ಸಾಕ್ಷ್ಯ ನೆಡಲು ಗುರಿಯಾಗಿಸಲಾಗಿತ್ತು. ರೋನಾ ವಿಲ್ಸನ್ ಅವರ ಕಂಪ್ಯೂಟರಿನಲ್ಲಿ 30 ದಸ್ತಾವೇಜುಗಳನ್ನು ನೆಟ್ಟಿದ್ದ ಅದೇ ಹ್ಯಾಕರ್, ಗಾಡ್ಲಿಂಗ್ ಅವರ ಕಂಪ್ಯೂಟರಿನಲ್ಲಿ 14 ಸುಳ್ಳು ಸಾಕ್ಷ್ಯದ ದಸ್ತಾವೇಜುಗಳನ್ನು ನೆಟ್ಟಿದ್ದಾನೆ ಎಂದು ಆಸೆನಾಲ್ ಹೇಳಿದೆ

ಸುರೇಂದ್ರ ಗಾಡ್ಲಿಂಗ್ ಮತ್ತು ರೋನಾ ವಿಲ್ಸನ್ ಅವರಂತೆ ಸ್ಟ್ಯಾನ್ ಸ್ವಾಮಿ ಮತ್ತು ಎಲ್ಗರ್ ಪರಿಷತ್- ಭೀಮಾ ಕೋರೆಗಾಂವ್ ಪ್ರಕರಣದ ಇತರೆ 13 ಮಂದಿ ಬಂಧಿತರೂ ಹ್ಯಾಕಿಂಗ್ ಸಂಚಿನ ಬಲಿಪಶುಗಳಾಗಿದ್ದರೆ ಆಶ್ಚರ್ಯವಿಲ್ಲ ಎಂದೂ ಆರ್ಸೆನಾಲ್- ವಾಷಿಂಗ್ಟನ್ ಪೋಸ್ಟ್ ವರದಿ ಹೇಳಿದೆ.

ಇದೀಗ ಇಸ್ರೇಲಿ ಮೂಲದ ಬೇಹುಗಾರಿಕೆ ತಂತ್ರಾಂಶವನ್ನು ಮೊಬೈಲು ಫೋನುಗಳಲ್ಲಿ ಹೊಗಿಸಿ ನಮ್ಮ ದೇಶದ ಪತ್ರಕರ್ತರು, ಮಾನವ ಹಕ್ಕುಗಳ ಹೋರಾಟಗಾರರು, ರಾಜಕಾರಣಿಗಳು, ನ್ಯಾಯಮೂರ್ತಿಗಳ ಬೇಹುಗಾರಿಕೆ ಮಾಡಲಾಗಿದೆ ಎಂಬುದಾಗಿ ವರದಿಯಾಗಿದೆ. ಪ್ಯಾರಿಸ್‌ನಲ್ಲಿರುವ Forbidden Stories ಎಂಬ ಲಾಭದ ಉದ್ದೇಶವಿಲ್ಲದ ಮೀಡಿಯಾ ಸಂಸ್ಥೆ ಮತ್ತು ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯನ್ನು ಒಳಗೊಂಡ ಅಂತಾರಾಷ್ಟ್ರೀಯ ಸಹಕಾರಿ ತನಿಖೆಯ ಭಾಗವಾಗಿ ಈ ಬೇಹುಗಾರಿಕೆ ಪ್ರಕರಣ ಹೊರಬಿದ್ದಿದೆ. ಜಗತ್ತಿನ 16 ಮೀಡಿಯಾ ಸಂಸ್ಥೆಗಳು ಈ ಪ್ರಕರಣಗಳನ್ನು ಪರಿಶೀಲಿಸಿವೆ. ಟೊರಾಂಟೋ ವಿಶ್ವವಿದ್ಯಾಲಯದ ಪ್ರತಿಷ್ಠಿತ ಸಿಟಜನ್ ಲ್ಯಾಬ್ ಈ ಡೇಟಾವನ್ನು ವಿಶ್ಲೇಷಿಸಿ ಪೆಗಸಸ್ ಬೇಹುಗಾರಿಕೆ ತಂತ್ರಾಂಶದ ಪ್ರಯೋಗವನ್ನು ಪುಷ್ಟೀಕರಿಸಿದೆ. ಹೀಗಾಗಿ ಇದನ್ನು ಗಾಳಿಸುದ್ದಿಯೆಂದು ತಳ್ಳಿ ಹಾಕಲು ಬರುವುದಿಲ್ಲ.

2019ರಲ್ಲಿ ಪೆಗಸಸ್ ಬೇಹುಗಾರಿಕೆ ತಂತ್ರಾಂಶ ಪ್ರಯೋಗಿಸಿ ಭಾರತದ 121 ಮಂದಿ ನಾಗರಿಕರ ವಾಟ್ಸ್ಯಾಪ್ ಸಂದೇಶಗಳಿಗೆ ಕನ್ನ ಹಾಕಿದ ಪ್ರಕರಣ ನಡೆದಿತ್ತು. ಹೀಗಾಗಿ ಈಗಿನದು ಪೆಗಸಸ್ ಬೇಹುಗಾರಿಕೆಯ ಎರಡನೆಯ ಸುತ್ತು. 35 ದೇಶಗಳ 17 ಮೀಡಿಯಾ ಸಂಸ್ಥೆಗಳ 180 ಪತ್ರಕರ್ತರು ಈ ದಾಳಿಗೆ ಒಳಗಾಗಿದ್ದಾರೆ. ಈ ಪೈಕಿ ಭಾರತದ ಪತ್ರಕರ್ತರು 40 ಮಂದಿ. ಭಯೋತ್ಪಾದಕರು ಮತ್ತು ಪಾತಕಿಗಳ ವಿರುದ್ಧ ಬಳಸುವ ಸೈಬರ್ ಅಸ್ತ್ರವಿದು ಎಂದು ಪೆಗಸಸ್‌ಅನ್ನು ತಯಾರಿಸಿದ ಎನ್.ಎಸ್.ಒ.ಸಂಸ್ಥೆ ಹೇಳಿದೆ. ಹಾಗಿದ್ದರೆ ಪತ್ರಕರ್ತರು, ನ್ಯಾಯಮೂರ್ತಿಗಳು, ಮಾನವ ಹಕ್ಕುಗಳ ಹೋರಾಟಗಾರರು ಭಯೋತ್ಪಾದಕರೇ?

2019ರಲ್ಲಿ ಪೆಗಸಸ್ ಬಳಸಿದ್ದು ತಾನೆಂದು ಸರ್ಕಾರ ಒಪ್ಪಿಕೊಂಡೂ ಇರಲಿಲ್ಲ, ಅಲ್ಲಗಳೆದೂ ಇರಲಿಲ್ಲ. ಈಗಲೂ ಹಾಗೆಯೇ ನಡೆದುಕೊಂಡಿದೆ.

ಪೆಗಸಸ್ ಬೇಹುಗಾರಿಕೆ ಬೆಳವಣಿಗೆಗಳನ್ನು ಶೂನ್ಯದಲ್ಲಿ ನೋಡಲು ಬರುವುದಿಲ್ಲ. ಕಳೆದ ಆರೇಳು ವರ್ಷಗಳ ಕಾಲ ದೇಶದ ಸಾಮಾಜಿಕ-ರಾಜಕೀಯ ವಲಯದ ಆತಂಕಕಾರಿ ವಿದ್ಯಮಾನಗಳ ಬೆಳಕಿನಲ್ಲಿಟ್ಟು ನೋಡಬೇಕಿದೆ.

ತನ್ನ ಸೈದ್ಧಾಂತಿಕ ವಿರೋಧಿಗಳನ್ನ ಬೆನ್ನು ಹತ್ತಿ ಬೇಟೆ ಆಡತೊಡಗಿದೆ ಮೋದಿ ಪ್ರಭುತ್ವ. ಈ ದಿಕ್ಕಿನಲ್ಲಿ ತಾನು ಯಾವ ಹಂತಕ್ಕೆ ಬೇಕಾದರೂ ಹೋಗಲು ತಯಾರು ಎಂದು ಅದು ಯಾವುದೇ ಸಂಶಯಕ್ಕೆ ಎಡೆಯಿಲ್ಲದಂತೆ ತೋರಿಸಿಕೊಟ್ಟಿದೆ. ನ್ಯಾಯ- ಅನ್ಯಾಯದ ಮಾತು ಒತ್ತಟ್ಟಿಗಿರಲಿ, ಮೂಲಭೂತ ಮಾನವೀಯ ಮೌಲ್ಯವನ್ನು ಕೂಡ ಅದು ಗಾಳಿಗೆ ತೂರಿದೆ. ಈ ಅಮಾನುಷತೆ ಕಳೆದ ಆರೇಳು ವರ್ಷಗಳಿಂದ ಬಿಟ್ಟೂ ಬಿಡದಂತೆ ನಡೆದುಕೊಂಡು ಬಂದಿದೆ. ಈ ದೇಶದಲ್ಲಿ ತಬ್ಬಲಿಗಳೇ ಆಗಿ ಹೋಗಿರುವ ಈ ನೆಲದ ಮೂಲ ಮಕ್ಕಳಾದ ಆದಿವಾಸಿಗಳ ಕಷ್ಟ ಕಣ್ಣೀರುಗಳನ್ನು ತೊಡೆಯಲು ಬದುಕು ಸವೆಸಿದವರು ಫಾದರ್ ಸ್ಟ್ಯಾನ್ ಸ್ವಾಮಿ. ಅವರನ್ನು ಜೀವಂತ ಇರುವ ತನಕ ಅಮಾನವೀಯವಾಗಿ ನಡೆಸಿಕೊಂಡು ಕೈಯಾರೆ ಸಾವಿಗೆ ನೂಕಿದ್ದು ಪ್ರಭುತ್ವವೇ. ತನ್ನ ವಿರೋಧಿಗಳನ್ನು ಗೋರಿಗೆ ಕಳಿಸುವ ತನಕ ಬೆನ್ನು ಬಿಡದಿರುವ ಅದರ ಕ್ರೌರ್ಯಕ್ಕೆ ಸ್ಟ್ಯಾನ್ ಸ್ವಾಮಿ ಇತ್ತೀಚಿನ ಉದಾಹರಣೆ.

ಪೆಗಸಸ್ ಗೂಢಚಾರ ತಂತ್ರಾಂಶವನ್ನು ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿಯೂ ಖಾಸಗಿ ಸಂಸ್ಥೆಗಳಿಗೆ ಅಥವಾ ವ್ಯಕ್ತಿಗಳಿಗೆ ಮಾರಾಟ ಮಾಡುವುದಿಲ್ಲ ಅಂತ ಎನ್.ಎಸ್.ಓ ಸಂಸ್ಥೆ ಈ ಹಿಂದೆ ಹೇಳಿತ್ತು. ಮತ್ತು ಈ ತಂತ್ರಾಂಶವನ್ನು ಸರ್ಕಾರಗಳು ತಮ್ಮ ರಾಷ್ಟ್ರೀಯ ಭದ್ರತೆ ಅಥವಾ ಸುರಕ್ಷತೆಯನ್ನು ಕಾಪಾಡಲು ಬಳಸುತ್ತವೆ ಎಂದೂ ಹೇಳಿತ್ತು. ಆದರೆ ಈ ಮಾತು ಸುಳ್ಳಾಗಿದೆ. ನಾಗರಿಕರ ಖಾಸಗಿತನದ ಮೇಲೆ ದಾಳಿ ನಡೆದಿದೆ.

ಮಾನವ ಹಕ್ಕುಗಳ ಹೋರಾಟಗಾರರು, ಪತ್ರಕರ್ತರು, ವಕೀಲರು, ಉದ್ಯಮಿಗಳು, ಇಬ್ಬರು ಹಾಲಿ ಮಂತ್ರಿಗಳು, ಮೂವರು ಪ್ರತಿಪಕ್ಷಗಳ ನಾಯಕರು, ಒಬ್ಬರು ನ್ಯಾಯಾಧೀಶರ ಡೇಟಾದ ಫಲಾನುಭವಿ ಯಾರು ಎಂಬ ಪ್ರಶ್ನೆಯನ್ನು ನಾವು ಕೇಳಿಕೊಳ್ಳಬೇಕಿದೆ.

ತಾನು ಅನಧಿಕೃತವಾಗಿ ಏನನ್ನೂ ಮಾಡಿಲ್ಲ ಎಂದು ಸರ್ಕಾರ ಹೇಳಿಕೆ ನೀಡಿದೆ. ಹಾಗಿದ್ದರೆ ಅಧಿಕೃತವಾಗಿ ಮಾಡಿದೆಯೇ, ಮಾಡಿದ್ದರೆ ಹೇಳಲು ಹಿಂಜರಿಕೆ ಯಾಕೆ?

ಈ ಕೃತ್ಯವನ್ನು ತಾನು ಎಸಗಿಲ್ಲವಾದರೆ ಯಾರು ಮಾಡಿಸಿದ್ದಾರೆ ಎಂದು ತನಿಖೆ ಮಾಡಿಸುವುದು ಸರ್ಕಾರದ ಆದ್ಯ ಕರ್ತವ್ಯ. ದೇಶದ ಜನತಂತ್ರ ಮತ್ತು ಸಮಗ್ರತೆ ಸಾರ್ವಭೌಮತೆಯ ಪ್ರಶ್ನೆಯಿದು. ಒಂದು ವೇಳೆ ಇದು ವಿದೇಶೀ ಸೈಬರ್ ದಾಳಿಯಾಗಿದ್ದರೆ ತೀರಾ ಕಳವಳಕಾರಿ ಸಂಗತಿ. ನಮ್ಮ ಸರ್ಕಾರವೇ ಮಾಡಿದ್ದರೆ ಭಾರತದ ಸಾಂವಿಧಾನಿಕ ಜನತಂತ್ರದ ಬುಡಮೇಲು ಕೃತ್ಯ. ವಿದೇಶೀ ಶಕ್ತಿಗಳು ಮಾಡಿದ್ದರೆ ಭಾರತ ಮತ್ತು ಭಾರತದ ನಾಗರಿಕರ ಮೇಲೆ ನಡೆದ ಕರಾಳ ಸೈಬರ್ ದಾಳಿ. ಎರಡರ ಪೈಕಿ ಯಾವುದೆಂದು ಕಂಡುಹಿಡಿಯಲು ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಲೇಬೇಕು.


ಇದನ್ನೂ ಓದಿ: ಫೋನ್ ಟ್ಯಾಪ್ ಮಾಡಲಿ, ಜೈಲಿಗೆ ಹಾಕಲಿ, ನನ್ನ ಕೊನೆಯ ಉಸಿರಿರುವ ತನಕ ಬರೆಯುತ್ತಲೇ ಇರುವೆ

ಇದನ್ನೂ ಓದಿ: ಪ್ರಜಾಪ್ರಭುತ್ವವನ್ನೇ ಪಣಕ್ಕಿಟ್ಟು ರಾಜಕೀಯ ವಿರೋಧಿಗಳನ್ನು ಮಣಿಸುವುದಕ್ಕೆ ಹಾರುವ ಕುದುರೆಯನೇರಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...