Homeಅಂಕಣಗಳುಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

ಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

- Advertisement -
- Advertisement -

ಭೀಮಾ ಕೋರೆಗಾಂವ್ ಆಪಾದಿತರ ಪೈಕಿ ಒಬ್ಬರಾದ ರೋನಾ ವಿಲ್ಸನ್ ಅವರ ಕಂಪ್ಯೂಟರಿನಲ್ಲಿ ಅಜ್ಞಾತ ಹ್ಯಾಕರ್ ಒಬ್ಬನು ಮೂವತ್ತು ದಸ್ತಾವೇಜುಗಳನ್ನು ’ನೆಟ್ಟಿದ್ದ’ನೆಂದು ವಾಷಿಂಗ್ಟನ್ ಪೋಸ್ಟ್ ಈ ವರ್ಷದ ಶುರುವಿನಲ್ಲಿ ವರದಿ ಮಾಡಿತ್ತು. ಆರ್ಸೆನಾಲ್ ಕನ್ಸಲ್ಟಿಂಗ್ ಎಂಬ ವಿಧಿವಿಜ್ಞಾನ ಸಂಸ್ಥೆಯ ತನಿಖೆಯನ್ನು ಈ ವರದಿ ಆಧರಿಸಿತ್ತು. ಕಳೆದ ತಿಂಗಳು ಇದೇ ವಿಧಿವಿಜ್ಞಾನ ಸಂಸ್ಥೆ ಆಪಾದಿತರಲ್ಲಿ ಒಬ್ಬರಾದ ಸುರೇಂದ್ರ ಗಾಡ್ಲಿಂಗ್ ಎಂಬ ದಲಿತ ಹಕ್ಕುಗಳ ಹೋರಾಟಗಾರರ ಕಂಪ್ಯೂಟರಿನ ಹಾರ್ಡ್ ಡ್ರೈವ್‌ನ್ನು ವಿಶ್ಲೇಷಿಸಿತ್ತು. ಹ್ಯಾಕಿಂಗ್ ಮಾಡಿ ಅವರ ಕಂಪ್ಯೂಟರಿಗೆ ಸುಳ್ಳು ಸಾಕ್ಷ್ಯಗಳನ್ನು ಹುದುಗಿಸಿದ ಕುರಿತು ಈ ಸಲ ಆರ್ಸೆನಾಲ್ ಕನ್ಸಲ್ಟಿಂಗ್ ಸಂಸ್ಥೆಗೆ ಇನ್ನಷ್ಟು ಆಳವಾದ ಪುರಾವೆ ದೊರೆತಿದೆ. ಬಾಸ್ಟನ್ ಮ್ಯಾರಥಾನ್ ಬಾಂಬಿಂಗ್ ಮುಂತಾದ ತೀರಾ ಗಂಭೀರ ಪ್ರಕರಣಗಳ ಸಾಕ್ಷ್ಯಗಳನ್ನು ಈ ಸಂಸ್ಥೆ ವಿಶ್ಲೇಷಿಸಿದೆ.

ಆದರೆ ಸುರೇಂದ್ರ ಗಾಡ್ಲಿಂಗ್ ಕಂಪ್ಯೂಟರಿನಲ್ಲಿ ಹ್ಯಾಕಿಂಗ್ ಮೂಲಕ ಸುಳ್ಳು ಸಾಕ್ಷ್ಯ ನೆಟ್ಟು, ಆಪಾದಿತರ ವಿರುದ್ಧ ಸಾಕ್ಷ್ಯ ಸೃಷ್ಟಿಸಿರುವ ಪ್ರಕರಣದಂತಹ ಮತ್ತೊಂದು ಗಂಭೀರ ಪ್ರಕರಣವನ್ನು ತಾನು ಕಂಡಿಲ್ಲವೆಂದು ಈ ಸಂಸ್ಥೆ ಹೇಳಿದೆ. 2016ರ ಫೆಬ್ರವರಿಯಿಂದ 2017ರ ನವೆಂಬರ್ ತನಕ 20 ತಿಂಗಳ ಕಾಲ ಗಾಡ್ಲಿಂಗ್ ಅವರ ಕಂಪ್ಯೂಟರನ್ನು ಹ್ಯಾಕಿಂಗ್ ಮೂಲಕ ಸುಳ್ಳು ಸಾಕ್ಷ್ಯ ನೆಡಲು ಗುರಿಯಾಗಿಸಲಾಗಿತ್ತು. ರೋನಾ ವಿಲ್ಸನ್ ಅವರ ಕಂಪ್ಯೂಟರಿನಲ್ಲಿ 30 ದಸ್ತಾವೇಜುಗಳನ್ನು ನೆಟ್ಟಿದ್ದ ಅದೇ ಹ್ಯಾಕರ್, ಗಾಡ್ಲಿಂಗ್ ಅವರ ಕಂಪ್ಯೂಟರಿನಲ್ಲಿ 14 ಸುಳ್ಳು ಸಾಕ್ಷ್ಯದ ದಸ್ತಾವೇಜುಗಳನ್ನು ನೆಟ್ಟಿದ್ದಾನೆ ಎಂದು ಆಸೆನಾಲ್ ಹೇಳಿದೆ

ಸುರೇಂದ್ರ ಗಾಡ್ಲಿಂಗ್ ಮತ್ತು ರೋನಾ ವಿಲ್ಸನ್ ಅವರಂತೆ ಸ್ಟ್ಯಾನ್ ಸ್ವಾಮಿ ಮತ್ತು ಎಲ್ಗರ್ ಪರಿಷತ್- ಭೀಮಾ ಕೋರೆಗಾಂವ್ ಪ್ರಕರಣದ ಇತರೆ 13 ಮಂದಿ ಬಂಧಿತರೂ ಹ್ಯಾಕಿಂಗ್ ಸಂಚಿನ ಬಲಿಪಶುಗಳಾಗಿದ್ದರೆ ಆಶ್ಚರ್ಯವಿಲ್ಲ ಎಂದೂ ಆರ್ಸೆನಾಲ್- ವಾಷಿಂಗ್ಟನ್ ಪೋಸ್ಟ್ ವರದಿ ಹೇಳಿದೆ.

ಇದೀಗ ಇಸ್ರೇಲಿ ಮೂಲದ ಬೇಹುಗಾರಿಕೆ ತಂತ್ರಾಂಶವನ್ನು ಮೊಬೈಲು ಫೋನುಗಳಲ್ಲಿ ಹೊಗಿಸಿ ನಮ್ಮ ದೇಶದ ಪತ್ರಕರ್ತರು, ಮಾನವ ಹಕ್ಕುಗಳ ಹೋರಾಟಗಾರರು, ರಾಜಕಾರಣಿಗಳು, ನ್ಯಾಯಮೂರ್ತಿಗಳ ಬೇಹುಗಾರಿಕೆ ಮಾಡಲಾಗಿದೆ ಎಂಬುದಾಗಿ ವರದಿಯಾಗಿದೆ. ಪ್ಯಾರಿಸ್‌ನಲ್ಲಿರುವ Forbidden Stories ಎಂಬ ಲಾಭದ ಉದ್ದೇಶವಿಲ್ಲದ ಮೀಡಿಯಾ ಸಂಸ್ಥೆ ಮತ್ತು ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯನ್ನು ಒಳಗೊಂಡ ಅಂತಾರಾಷ್ಟ್ರೀಯ ಸಹಕಾರಿ ತನಿಖೆಯ ಭಾಗವಾಗಿ ಈ ಬೇಹುಗಾರಿಕೆ ಪ್ರಕರಣ ಹೊರಬಿದ್ದಿದೆ. ಜಗತ್ತಿನ 16 ಮೀಡಿಯಾ ಸಂಸ್ಥೆಗಳು ಈ ಪ್ರಕರಣಗಳನ್ನು ಪರಿಶೀಲಿಸಿವೆ. ಟೊರಾಂಟೋ ವಿಶ್ವವಿದ್ಯಾಲಯದ ಪ್ರತಿಷ್ಠಿತ ಸಿಟಜನ್ ಲ್ಯಾಬ್ ಈ ಡೇಟಾವನ್ನು ವಿಶ್ಲೇಷಿಸಿ ಪೆಗಸಸ್ ಬೇಹುಗಾರಿಕೆ ತಂತ್ರಾಂಶದ ಪ್ರಯೋಗವನ್ನು ಪುಷ್ಟೀಕರಿಸಿದೆ. ಹೀಗಾಗಿ ಇದನ್ನು ಗಾಳಿಸುದ್ದಿಯೆಂದು ತಳ್ಳಿ ಹಾಕಲು ಬರುವುದಿಲ್ಲ.

2019ರಲ್ಲಿ ಪೆಗಸಸ್ ಬೇಹುಗಾರಿಕೆ ತಂತ್ರಾಂಶ ಪ್ರಯೋಗಿಸಿ ಭಾರತದ 121 ಮಂದಿ ನಾಗರಿಕರ ವಾಟ್ಸ್ಯಾಪ್ ಸಂದೇಶಗಳಿಗೆ ಕನ್ನ ಹಾಕಿದ ಪ್ರಕರಣ ನಡೆದಿತ್ತು. ಹೀಗಾಗಿ ಈಗಿನದು ಪೆಗಸಸ್ ಬೇಹುಗಾರಿಕೆಯ ಎರಡನೆಯ ಸುತ್ತು. 35 ದೇಶಗಳ 17 ಮೀಡಿಯಾ ಸಂಸ್ಥೆಗಳ 180 ಪತ್ರಕರ್ತರು ಈ ದಾಳಿಗೆ ಒಳಗಾಗಿದ್ದಾರೆ. ಈ ಪೈಕಿ ಭಾರತದ ಪತ್ರಕರ್ತರು 40 ಮಂದಿ. ಭಯೋತ್ಪಾದಕರು ಮತ್ತು ಪಾತಕಿಗಳ ವಿರುದ್ಧ ಬಳಸುವ ಸೈಬರ್ ಅಸ್ತ್ರವಿದು ಎಂದು ಪೆಗಸಸ್‌ಅನ್ನು ತಯಾರಿಸಿದ ಎನ್.ಎಸ್.ಒ.ಸಂಸ್ಥೆ ಹೇಳಿದೆ. ಹಾಗಿದ್ದರೆ ಪತ್ರಕರ್ತರು, ನ್ಯಾಯಮೂರ್ತಿಗಳು, ಮಾನವ ಹಕ್ಕುಗಳ ಹೋರಾಟಗಾರರು ಭಯೋತ್ಪಾದಕರೇ?

2019ರಲ್ಲಿ ಪೆಗಸಸ್ ಬಳಸಿದ್ದು ತಾನೆಂದು ಸರ್ಕಾರ ಒಪ್ಪಿಕೊಂಡೂ ಇರಲಿಲ್ಲ, ಅಲ್ಲಗಳೆದೂ ಇರಲಿಲ್ಲ. ಈಗಲೂ ಹಾಗೆಯೇ ನಡೆದುಕೊಂಡಿದೆ.

ಪೆಗಸಸ್ ಬೇಹುಗಾರಿಕೆ ಬೆಳವಣಿಗೆಗಳನ್ನು ಶೂನ್ಯದಲ್ಲಿ ನೋಡಲು ಬರುವುದಿಲ್ಲ. ಕಳೆದ ಆರೇಳು ವರ್ಷಗಳ ಕಾಲ ದೇಶದ ಸಾಮಾಜಿಕ-ರಾಜಕೀಯ ವಲಯದ ಆತಂಕಕಾರಿ ವಿದ್ಯಮಾನಗಳ ಬೆಳಕಿನಲ್ಲಿಟ್ಟು ನೋಡಬೇಕಿದೆ.

ತನ್ನ ಸೈದ್ಧಾಂತಿಕ ವಿರೋಧಿಗಳನ್ನ ಬೆನ್ನು ಹತ್ತಿ ಬೇಟೆ ಆಡತೊಡಗಿದೆ ಮೋದಿ ಪ್ರಭುತ್ವ. ಈ ದಿಕ್ಕಿನಲ್ಲಿ ತಾನು ಯಾವ ಹಂತಕ್ಕೆ ಬೇಕಾದರೂ ಹೋಗಲು ತಯಾರು ಎಂದು ಅದು ಯಾವುದೇ ಸಂಶಯಕ್ಕೆ ಎಡೆಯಿಲ್ಲದಂತೆ ತೋರಿಸಿಕೊಟ್ಟಿದೆ. ನ್ಯಾಯ- ಅನ್ಯಾಯದ ಮಾತು ಒತ್ತಟ್ಟಿಗಿರಲಿ, ಮೂಲಭೂತ ಮಾನವೀಯ ಮೌಲ್ಯವನ್ನು ಕೂಡ ಅದು ಗಾಳಿಗೆ ತೂರಿದೆ. ಈ ಅಮಾನುಷತೆ ಕಳೆದ ಆರೇಳು ವರ್ಷಗಳಿಂದ ಬಿಟ್ಟೂ ಬಿಡದಂತೆ ನಡೆದುಕೊಂಡು ಬಂದಿದೆ. ಈ ದೇಶದಲ್ಲಿ ತಬ್ಬಲಿಗಳೇ ಆಗಿ ಹೋಗಿರುವ ಈ ನೆಲದ ಮೂಲ ಮಕ್ಕಳಾದ ಆದಿವಾಸಿಗಳ ಕಷ್ಟ ಕಣ್ಣೀರುಗಳನ್ನು ತೊಡೆಯಲು ಬದುಕು ಸವೆಸಿದವರು ಫಾದರ್ ಸ್ಟ್ಯಾನ್ ಸ್ವಾಮಿ. ಅವರನ್ನು ಜೀವಂತ ಇರುವ ತನಕ ಅಮಾನವೀಯವಾಗಿ ನಡೆಸಿಕೊಂಡು ಕೈಯಾರೆ ಸಾವಿಗೆ ನೂಕಿದ್ದು ಪ್ರಭುತ್ವವೇ. ತನ್ನ ವಿರೋಧಿಗಳನ್ನು ಗೋರಿಗೆ ಕಳಿಸುವ ತನಕ ಬೆನ್ನು ಬಿಡದಿರುವ ಅದರ ಕ್ರೌರ್ಯಕ್ಕೆ ಸ್ಟ್ಯಾನ್ ಸ್ವಾಮಿ ಇತ್ತೀಚಿನ ಉದಾಹರಣೆ.

ಪೆಗಸಸ್ ಗೂಢಚಾರ ತಂತ್ರಾಂಶವನ್ನು ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿಯೂ ಖಾಸಗಿ ಸಂಸ್ಥೆಗಳಿಗೆ ಅಥವಾ ವ್ಯಕ್ತಿಗಳಿಗೆ ಮಾರಾಟ ಮಾಡುವುದಿಲ್ಲ ಅಂತ ಎನ್.ಎಸ್.ಓ ಸಂಸ್ಥೆ ಈ ಹಿಂದೆ ಹೇಳಿತ್ತು. ಮತ್ತು ಈ ತಂತ್ರಾಂಶವನ್ನು ಸರ್ಕಾರಗಳು ತಮ್ಮ ರಾಷ್ಟ್ರೀಯ ಭದ್ರತೆ ಅಥವಾ ಸುರಕ್ಷತೆಯನ್ನು ಕಾಪಾಡಲು ಬಳಸುತ್ತವೆ ಎಂದೂ ಹೇಳಿತ್ತು. ಆದರೆ ಈ ಮಾತು ಸುಳ್ಳಾಗಿದೆ. ನಾಗರಿಕರ ಖಾಸಗಿತನದ ಮೇಲೆ ದಾಳಿ ನಡೆದಿದೆ.

ಮಾನವ ಹಕ್ಕುಗಳ ಹೋರಾಟಗಾರರು, ಪತ್ರಕರ್ತರು, ವಕೀಲರು, ಉದ್ಯಮಿಗಳು, ಇಬ್ಬರು ಹಾಲಿ ಮಂತ್ರಿಗಳು, ಮೂವರು ಪ್ರತಿಪಕ್ಷಗಳ ನಾಯಕರು, ಒಬ್ಬರು ನ್ಯಾಯಾಧೀಶರ ಡೇಟಾದ ಫಲಾನುಭವಿ ಯಾರು ಎಂಬ ಪ್ರಶ್ನೆಯನ್ನು ನಾವು ಕೇಳಿಕೊಳ್ಳಬೇಕಿದೆ.

ತಾನು ಅನಧಿಕೃತವಾಗಿ ಏನನ್ನೂ ಮಾಡಿಲ್ಲ ಎಂದು ಸರ್ಕಾರ ಹೇಳಿಕೆ ನೀಡಿದೆ. ಹಾಗಿದ್ದರೆ ಅಧಿಕೃತವಾಗಿ ಮಾಡಿದೆಯೇ, ಮಾಡಿದ್ದರೆ ಹೇಳಲು ಹಿಂಜರಿಕೆ ಯಾಕೆ?

ಈ ಕೃತ್ಯವನ್ನು ತಾನು ಎಸಗಿಲ್ಲವಾದರೆ ಯಾರು ಮಾಡಿಸಿದ್ದಾರೆ ಎಂದು ತನಿಖೆ ಮಾಡಿಸುವುದು ಸರ್ಕಾರದ ಆದ್ಯ ಕರ್ತವ್ಯ. ದೇಶದ ಜನತಂತ್ರ ಮತ್ತು ಸಮಗ್ರತೆ ಸಾರ್ವಭೌಮತೆಯ ಪ್ರಶ್ನೆಯಿದು. ಒಂದು ವೇಳೆ ಇದು ವಿದೇಶೀ ಸೈಬರ್ ದಾಳಿಯಾಗಿದ್ದರೆ ತೀರಾ ಕಳವಳಕಾರಿ ಸಂಗತಿ. ನಮ್ಮ ಸರ್ಕಾರವೇ ಮಾಡಿದ್ದರೆ ಭಾರತದ ಸಾಂವಿಧಾನಿಕ ಜನತಂತ್ರದ ಬುಡಮೇಲು ಕೃತ್ಯ. ವಿದೇಶೀ ಶಕ್ತಿಗಳು ಮಾಡಿದ್ದರೆ ಭಾರತ ಮತ್ತು ಭಾರತದ ನಾಗರಿಕರ ಮೇಲೆ ನಡೆದ ಕರಾಳ ಸೈಬರ್ ದಾಳಿ. ಎರಡರ ಪೈಕಿ ಯಾವುದೆಂದು ಕಂಡುಹಿಡಿಯಲು ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಲೇಬೇಕು.


ಇದನ್ನೂ ಓದಿ: ಫೋನ್ ಟ್ಯಾಪ್ ಮಾಡಲಿ, ಜೈಲಿಗೆ ಹಾಕಲಿ, ನನ್ನ ಕೊನೆಯ ಉಸಿರಿರುವ ತನಕ ಬರೆಯುತ್ತಲೇ ಇರುವೆ

ಇದನ್ನೂ ಓದಿ: ಪ್ರಜಾಪ್ರಭುತ್ವವನ್ನೇ ಪಣಕ್ಕಿಟ್ಟು ರಾಜಕೀಯ ವಿರೋಧಿಗಳನ್ನು ಮಣಿಸುವುದಕ್ಕೆ ಹಾರುವ ಕುದುರೆಯನೇರಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...