Homeಅಂಕಣಗಳುಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

ಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

- Advertisement -
- Advertisement -

ಭೀಮಾ ಕೋರೆಗಾಂವ್ ಆಪಾದಿತರ ಪೈಕಿ ಒಬ್ಬರಾದ ರೋನಾ ವಿಲ್ಸನ್ ಅವರ ಕಂಪ್ಯೂಟರಿನಲ್ಲಿ ಅಜ್ಞಾತ ಹ್ಯಾಕರ್ ಒಬ್ಬನು ಮೂವತ್ತು ದಸ್ತಾವೇಜುಗಳನ್ನು ’ನೆಟ್ಟಿದ್ದ’ನೆಂದು ವಾಷಿಂಗ್ಟನ್ ಪೋಸ್ಟ್ ಈ ವರ್ಷದ ಶುರುವಿನಲ್ಲಿ ವರದಿ ಮಾಡಿತ್ತು. ಆರ್ಸೆನಾಲ್ ಕನ್ಸಲ್ಟಿಂಗ್ ಎಂಬ ವಿಧಿವಿಜ್ಞಾನ ಸಂಸ್ಥೆಯ ತನಿಖೆಯನ್ನು ಈ ವರದಿ ಆಧರಿಸಿತ್ತು. ಕಳೆದ ತಿಂಗಳು ಇದೇ ವಿಧಿವಿಜ್ಞಾನ ಸಂಸ್ಥೆ ಆಪಾದಿತರಲ್ಲಿ ಒಬ್ಬರಾದ ಸುರೇಂದ್ರ ಗಾಡ್ಲಿಂಗ್ ಎಂಬ ದಲಿತ ಹಕ್ಕುಗಳ ಹೋರಾಟಗಾರರ ಕಂಪ್ಯೂಟರಿನ ಹಾರ್ಡ್ ಡ್ರೈವ್‌ನ್ನು ವಿಶ್ಲೇಷಿಸಿತ್ತು. ಹ್ಯಾಕಿಂಗ್ ಮಾಡಿ ಅವರ ಕಂಪ್ಯೂಟರಿಗೆ ಸುಳ್ಳು ಸಾಕ್ಷ್ಯಗಳನ್ನು ಹುದುಗಿಸಿದ ಕುರಿತು ಈ ಸಲ ಆರ್ಸೆನಾಲ್ ಕನ್ಸಲ್ಟಿಂಗ್ ಸಂಸ್ಥೆಗೆ ಇನ್ನಷ್ಟು ಆಳವಾದ ಪುರಾವೆ ದೊರೆತಿದೆ. ಬಾಸ್ಟನ್ ಮ್ಯಾರಥಾನ್ ಬಾಂಬಿಂಗ್ ಮುಂತಾದ ತೀರಾ ಗಂಭೀರ ಪ್ರಕರಣಗಳ ಸಾಕ್ಷ್ಯಗಳನ್ನು ಈ ಸಂಸ್ಥೆ ವಿಶ್ಲೇಷಿಸಿದೆ.

ಆದರೆ ಸುರೇಂದ್ರ ಗಾಡ್ಲಿಂಗ್ ಕಂಪ್ಯೂಟರಿನಲ್ಲಿ ಹ್ಯಾಕಿಂಗ್ ಮೂಲಕ ಸುಳ್ಳು ಸಾಕ್ಷ್ಯ ನೆಟ್ಟು, ಆಪಾದಿತರ ವಿರುದ್ಧ ಸಾಕ್ಷ್ಯ ಸೃಷ್ಟಿಸಿರುವ ಪ್ರಕರಣದಂತಹ ಮತ್ತೊಂದು ಗಂಭೀರ ಪ್ರಕರಣವನ್ನು ತಾನು ಕಂಡಿಲ್ಲವೆಂದು ಈ ಸಂಸ್ಥೆ ಹೇಳಿದೆ. 2016ರ ಫೆಬ್ರವರಿಯಿಂದ 2017ರ ನವೆಂಬರ್ ತನಕ 20 ತಿಂಗಳ ಕಾಲ ಗಾಡ್ಲಿಂಗ್ ಅವರ ಕಂಪ್ಯೂಟರನ್ನು ಹ್ಯಾಕಿಂಗ್ ಮೂಲಕ ಸುಳ್ಳು ಸಾಕ್ಷ್ಯ ನೆಡಲು ಗುರಿಯಾಗಿಸಲಾಗಿತ್ತು. ರೋನಾ ವಿಲ್ಸನ್ ಅವರ ಕಂಪ್ಯೂಟರಿನಲ್ಲಿ 30 ದಸ್ತಾವೇಜುಗಳನ್ನು ನೆಟ್ಟಿದ್ದ ಅದೇ ಹ್ಯಾಕರ್, ಗಾಡ್ಲಿಂಗ್ ಅವರ ಕಂಪ್ಯೂಟರಿನಲ್ಲಿ 14 ಸುಳ್ಳು ಸಾಕ್ಷ್ಯದ ದಸ್ತಾವೇಜುಗಳನ್ನು ನೆಟ್ಟಿದ್ದಾನೆ ಎಂದು ಆಸೆನಾಲ್ ಹೇಳಿದೆ

ಸುರೇಂದ್ರ ಗಾಡ್ಲಿಂಗ್ ಮತ್ತು ರೋನಾ ವಿಲ್ಸನ್ ಅವರಂತೆ ಸ್ಟ್ಯಾನ್ ಸ್ವಾಮಿ ಮತ್ತು ಎಲ್ಗರ್ ಪರಿಷತ್- ಭೀಮಾ ಕೋರೆಗಾಂವ್ ಪ್ರಕರಣದ ಇತರೆ 13 ಮಂದಿ ಬಂಧಿತರೂ ಹ್ಯಾಕಿಂಗ್ ಸಂಚಿನ ಬಲಿಪಶುಗಳಾಗಿದ್ದರೆ ಆಶ್ಚರ್ಯವಿಲ್ಲ ಎಂದೂ ಆರ್ಸೆನಾಲ್- ವಾಷಿಂಗ್ಟನ್ ಪೋಸ್ಟ್ ವರದಿ ಹೇಳಿದೆ.

ಇದೀಗ ಇಸ್ರೇಲಿ ಮೂಲದ ಬೇಹುಗಾರಿಕೆ ತಂತ್ರಾಂಶವನ್ನು ಮೊಬೈಲು ಫೋನುಗಳಲ್ಲಿ ಹೊಗಿಸಿ ನಮ್ಮ ದೇಶದ ಪತ್ರಕರ್ತರು, ಮಾನವ ಹಕ್ಕುಗಳ ಹೋರಾಟಗಾರರು, ರಾಜಕಾರಣಿಗಳು, ನ್ಯಾಯಮೂರ್ತಿಗಳ ಬೇಹುಗಾರಿಕೆ ಮಾಡಲಾಗಿದೆ ಎಂಬುದಾಗಿ ವರದಿಯಾಗಿದೆ. ಪ್ಯಾರಿಸ್‌ನಲ್ಲಿರುವ Forbidden Stories ಎಂಬ ಲಾಭದ ಉದ್ದೇಶವಿಲ್ಲದ ಮೀಡಿಯಾ ಸಂಸ್ಥೆ ಮತ್ತು ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯನ್ನು ಒಳಗೊಂಡ ಅಂತಾರಾಷ್ಟ್ರೀಯ ಸಹಕಾರಿ ತನಿಖೆಯ ಭಾಗವಾಗಿ ಈ ಬೇಹುಗಾರಿಕೆ ಪ್ರಕರಣ ಹೊರಬಿದ್ದಿದೆ. ಜಗತ್ತಿನ 16 ಮೀಡಿಯಾ ಸಂಸ್ಥೆಗಳು ಈ ಪ್ರಕರಣಗಳನ್ನು ಪರಿಶೀಲಿಸಿವೆ. ಟೊರಾಂಟೋ ವಿಶ್ವವಿದ್ಯಾಲಯದ ಪ್ರತಿಷ್ಠಿತ ಸಿಟಜನ್ ಲ್ಯಾಬ್ ಈ ಡೇಟಾವನ್ನು ವಿಶ್ಲೇಷಿಸಿ ಪೆಗಸಸ್ ಬೇಹುಗಾರಿಕೆ ತಂತ್ರಾಂಶದ ಪ್ರಯೋಗವನ್ನು ಪುಷ್ಟೀಕರಿಸಿದೆ. ಹೀಗಾಗಿ ಇದನ್ನು ಗಾಳಿಸುದ್ದಿಯೆಂದು ತಳ್ಳಿ ಹಾಕಲು ಬರುವುದಿಲ್ಲ.

2019ರಲ್ಲಿ ಪೆಗಸಸ್ ಬೇಹುಗಾರಿಕೆ ತಂತ್ರಾಂಶ ಪ್ರಯೋಗಿಸಿ ಭಾರತದ 121 ಮಂದಿ ನಾಗರಿಕರ ವಾಟ್ಸ್ಯಾಪ್ ಸಂದೇಶಗಳಿಗೆ ಕನ್ನ ಹಾಕಿದ ಪ್ರಕರಣ ನಡೆದಿತ್ತು. ಹೀಗಾಗಿ ಈಗಿನದು ಪೆಗಸಸ್ ಬೇಹುಗಾರಿಕೆಯ ಎರಡನೆಯ ಸುತ್ತು. 35 ದೇಶಗಳ 17 ಮೀಡಿಯಾ ಸಂಸ್ಥೆಗಳ 180 ಪತ್ರಕರ್ತರು ಈ ದಾಳಿಗೆ ಒಳಗಾಗಿದ್ದಾರೆ. ಈ ಪೈಕಿ ಭಾರತದ ಪತ್ರಕರ್ತರು 40 ಮಂದಿ. ಭಯೋತ್ಪಾದಕರು ಮತ್ತು ಪಾತಕಿಗಳ ವಿರುದ್ಧ ಬಳಸುವ ಸೈಬರ್ ಅಸ್ತ್ರವಿದು ಎಂದು ಪೆಗಸಸ್‌ಅನ್ನು ತಯಾರಿಸಿದ ಎನ್.ಎಸ್.ಒ.ಸಂಸ್ಥೆ ಹೇಳಿದೆ. ಹಾಗಿದ್ದರೆ ಪತ್ರಕರ್ತರು, ನ್ಯಾಯಮೂರ್ತಿಗಳು, ಮಾನವ ಹಕ್ಕುಗಳ ಹೋರಾಟಗಾರರು ಭಯೋತ್ಪಾದಕರೇ?

2019ರಲ್ಲಿ ಪೆಗಸಸ್ ಬಳಸಿದ್ದು ತಾನೆಂದು ಸರ್ಕಾರ ಒಪ್ಪಿಕೊಂಡೂ ಇರಲಿಲ್ಲ, ಅಲ್ಲಗಳೆದೂ ಇರಲಿಲ್ಲ. ಈಗಲೂ ಹಾಗೆಯೇ ನಡೆದುಕೊಂಡಿದೆ.

ಪೆಗಸಸ್ ಬೇಹುಗಾರಿಕೆ ಬೆಳವಣಿಗೆಗಳನ್ನು ಶೂನ್ಯದಲ್ಲಿ ನೋಡಲು ಬರುವುದಿಲ್ಲ. ಕಳೆದ ಆರೇಳು ವರ್ಷಗಳ ಕಾಲ ದೇಶದ ಸಾಮಾಜಿಕ-ರಾಜಕೀಯ ವಲಯದ ಆತಂಕಕಾರಿ ವಿದ್ಯಮಾನಗಳ ಬೆಳಕಿನಲ್ಲಿಟ್ಟು ನೋಡಬೇಕಿದೆ.

ತನ್ನ ಸೈದ್ಧಾಂತಿಕ ವಿರೋಧಿಗಳನ್ನ ಬೆನ್ನು ಹತ್ತಿ ಬೇಟೆ ಆಡತೊಡಗಿದೆ ಮೋದಿ ಪ್ರಭುತ್ವ. ಈ ದಿಕ್ಕಿನಲ್ಲಿ ತಾನು ಯಾವ ಹಂತಕ್ಕೆ ಬೇಕಾದರೂ ಹೋಗಲು ತಯಾರು ಎಂದು ಅದು ಯಾವುದೇ ಸಂಶಯಕ್ಕೆ ಎಡೆಯಿಲ್ಲದಂತೆ ತೋರಿಸಿಕೊಟ್ಟಿದೆ. ನ್ಯಾಯ- ಅನ್ಯಾಯದ ಮಾತು ಒತ್ತಟ್ಟಿಗಿರಲಿ, ಮೂಲಭೂತ ಮಾನವೀಯ ಮೌಲ್ಯವನ್ನು ಕೂಡ ಅದು ಗಾಳಿಗೆ ತೂರಿದೆ. ಈ ಅಮಾನುಷತೆ ಕಳೆದ ಆರೇಳು ವರ್ಷಗಳಿಂದ ಬಿಟ್ಟೂ ಬಿಡದಂತೆ ನಡೆದುಕೊಂಡು ಬಂದಿದೆ. ಈ ದೇಶದಲ್ಲಿ ತಬ್ಬಲಿಗಳೇ ಆಗಿ ಹೋಗಿರುವ ಈ ನೆಲದ ಮೂಲ ಮಕ್ಕಳಾದ ಆದಿವಾಸಿಗಳ ಕಷ್ಟ ಕಣ್ಣೀರುಗಳನ್ನು ತೊಡೆಯಲು ಬದುಕು ಸವೆಸಿದವರು ಫಾದರ್ ಸ್ಟ್ಯಾನ್ ಸ್ವಾಮಿ. ಅವರನ್ನು ಜೀವಂತ ಇರುವ ತನಕ ಅಮಾನವೀಯವಾಗಿ ನಡೆಸಿಕೊಂಡು ಕೈಯಾರೆ ಸಾವಿಗೆ ನೂಕಿದ್ದು ಪ್ರಭುತ್ವವೇ. ತನ್ನ ವಿರೋಧಿಗಳನ್ನು ಗೋರಿಗೆ ಕಳಿಸುವ ತನಕ ಬೆನ್ನು ಬಿಡದಿರುವ ಅದರ ಕ್ರೌರ್ಯಕ್ಕೆ ಸ್ಟ್ಯಾನ್ ಸ್ವಾಮಿ ಇತ್ತೀಚಿನ ಉದಾಹರಣೆ.

ಪೆಗಸಸ್ ಗೂಢಚಾರ ತಂತ್ರಾಂಶವನ್ನು ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿಯೂ ಖಾಸಗಿ ಸಂಸ್ಥೆಗಳಿಗೆ ಅಥವಾ ವ್ಯಕ್ತಿಗಳಿಗೆ ಮಾರಾಟ ಮಾಡುವುದಿಲ್ಲ ಅಂತ ಎನ್.ಎಸ್.ಓ ಸಂಸ್ಥೆ ಈ ಹಿಂದೆ ಹೇಳಿತ್ತು. ಮತ್ತು ಈ ತಂತ್ರಾಂಶವನ್ನು ಸರ್ಕಾರಗಳು ತಮ್ಮ ರಾಷ್ಟ್ರೀಯ ಭದ್ರತೆ ಅಥವಾ ಸುರಕ್ಷತೆಯನ್ನು ಕಾಪಾಡಲು ಬಳಸುತ್ತವೆ ಎಂದೂ ಹೇಳಿತ್ತು. ಆದರೆ ಈ ಮಾತು ಸುಳ್ಳಾಗಿದೆ. ನಾಗರಿಕರ ಖಾಸಗಿತನದ ಮೇಲೆ ದಾಳಿ ನಡೆದಿದೆ.

ಮಾನವ ಹಕ್ಕುಗಳ ಹೋರಾಟಗಾರರು, ಪತ್ರಕರ್ತರು, ವಕೀಲರು, ಉದ್ಯಮಿಗಳು, ಇಬ್ಬರು ಹಾಲಿ ಮಂತ್ರಿಗಳು, ಮೂವರು ಪ್ರತಿಪಕ್ಷಗಳ ನಾಯಕರು, ಒಬ್ಬರು ನ್ಯಾಯಾಧೀಶರ ಡೇಟಾದ ಫಲಾನುಭವಿ ಯಾರು ಎಂಬ ಪ್ರಶ್ನೆಯನ್ನು ನಾವು ಕೇಳಿಕೊಳ್ಳಬೇಕಿದೆ.

ತಾನು ಅನಧಿಕೃತವಾಗಿ ಏನನ್ನೂ ಮಾಡಿಲ್ಲ ಎಂದು ಸರ್ಕಾರ ಹೇಳಿಕೆ ನೀಡಿದೆ. ಹಾಗಿದ್ದರೆ ಅಧಿಕೃತವಾಗಿ ಮಾಡಿದೆಯೇ, ಮಾಡಿದ್ದರೆ ಹೇಳಲು ಹಿಂಜರಿಕೆ ಯಾಕೆ?

ಈ ಕೃತ್ಯವನ್ನು ತಾನು ಎಸಗಿಲ್ಲವಾದರೆ ಯಾರು ಮಾಡಿಸಿದ್ದಾರೆ ಎಂದು ತನಿಖೆ ಮಾಡಿಸುವುದು ಸರ್ಕಾರದ ಆದ್ಯ ಕರ್ತವ್ಯ. ದೇಶದ ಜನತಂತ್ರ ಮತ್ತು ಸಮಗ್ರತೆ ಸಾರ್ವಭೌಮತೆಯ ಪ್ರಶ್ನೆಯಿದು. ಒಂದು ವೇಳೆ ಇದು ವಿದೇಶೀ ಸೈಬರ್ ದಾಳಿಯಾಗಿದ್ದರೆ ತೀರಾ ಕಳವಳಕಾರಿ ಸಂಗತಿ. ನಮ್ಮ ಸರ್ಕಾರವೇ ಮಾಡಿದ್ದರೆ ಭಾರತದ ಸಾಂವಿಧಾನಿಕ ಜನತಂತ್ರದ ಬುಡಮೇಲು ಕೃತ್ಯ. ವಿದೇಶೀ ಶಕ್ತಿಗಳು ಮಾಡಿದ್ದರೆ ಭಾರತ ಮತ್ತು ಭಾರತದ ನಾಗರಿಕರ ಮೇಲೆ ನಡೆದ ಕರಾಳ ಸೈಬರ್ ದಾಳಿ. ಎರಡರ ಪೈಕಿ ಯಾವುದೆಂದು ಕಂಡುಹಿಡಿಯಲು ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಲೇಬೇಕು.


ಇದನ್ನೂ ಓದಿ: ಫೋನ್ ಟ್ಯಾಪ್ ಮಾಡಲಿ, ಜೈಲಿಗೆ ಹಾಕಲಿ, ನನ್ನ ಕೊನೆಯ ಉಸಿರಿರುವ ತನಕ ಬರೆಯುತ್ತಲೇ ಇರುವೆ

ಇದನ್ನೂ ಓದಿ: ಪ್ರಜಾಪ್ರಭುತ್ವವನ್ನೇ ಪಣಕ್ಕಿಟ್ಟು ರಾಜಕೀಯ ವಿರೋಧಿಗಳನ್ನು ಮಣಿಸುವುದಕ್ಕೆ ಹಾರುವ ಕುದುರೆಯನೇರಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...