Homeಮುಖಪುಟಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

ಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

- Advertisement -
- Advertisement -

ಬಿಟ್‌ ಕಾಯಿನ್‌ ಥರದ ಕ್ರಿಪ್ಟೋ ಕರೆನ್ಸಿಗಳನ್ನು ಲೀಗಲ್ ಟೆಂಡರ್‌‌ ಮಾಡುತ್ತಾರೆಯೇ ಎಂಬ ಚರ್ಚೆಗಳು ದೇಶದಲ್ಲಿ ನಡೆಯುತ್ತಿವೆ. ಕ್ರಿಫ್ಟೋ ಕರೆನ್ಸಿಯನ್ನು ವರ್ಚ್ಯೂಯಲ್‌ ಹಣವಾಗಿ ಬಳಸಬೇಕೆ, ವಸ್ತುವಾಗಿ ಪರಿಗಣಿಸಬೇಕೆ ಅಥವಾ ಆಸ್ತಿಯಾಗಿ ಪರಿಗಣಿಸಬೇಕೆ ಎಂಬ ಕುರಿತು ಸರ್ಕಾರ ನಿರ್ಧರಿಸಲು ಮುಂದಾಗಿದೆ.

ಅನಿಯಂತ್ರಿತ ಕ್ರಿಫ್ಟೋ ಕರೆನ್ಸಿ ಮನಿ ಲ್ಯಾಂಡರಿಂಗ್‌ ಹಾಗೂ ಭಯೋತ್ಪಾದನೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳುತ್ತಿರುವ ಸರ್ಕಾರವು, ಕ್ರಿಫ್ಟೋ ಕರೆನ್ಸಿ ಸಂಬಂಧ ಒಂದು ನಿಲುವನ್ನು ತಾಳಲು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಚರ್ಚೆಗಳು ನಡೆದಿವೆ.

ವಹಿವಾಟುಗಳಿಗೆ ಅಥವಾ ಪಾವತಿಗಳನ್ನು ಮಾಡಲು ಕ್ರಿಪ್ಟೋಕರೆನ್ಸಿಗಳ ಬಳಕೆಯನ್ನು ಕೇಂದ್ರ ಸರ್ಕಾರ ನಿರ್ಬಂಧಿಸಬಹುದು. ಆದರೆ ಅವುಗಳನ್ನು ಚಿನ್ನ, ಷೇರುಗಳು ಅಥವಾ ಬಾಂಡ್‌ಗಳಂತಹ ಸ್ವತ್ತುಗಳಾಗಿ ಇರಿಸಿಕೊಳ್ಳಲು ಅವಕಾಶ ನೀಡುತ್ತದೆ ಎಂದು ಎಕನಾಮಿಕ್ ಟೈಮ್ಸ್ ಬುಧವಾರ ವರದಿ ಮಾಡಿದೆ.

ಹೊಸ ಹೂಡಿಕೆದಾರರನ್ನು ಆಕರ್ಷಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿರುವ ಎಕ್ಸ್‌ಚೆಂಜ್‌ಗಳು ಮತ್ತು ಫ್ಲಾಟ್‌ಫಾರ್ಮ್‌‌ಗಳನ್ನ ಒಳಗೊಂಡಂತೆ ಕ್ರಿಪ್ಟೋ ಕಂಪನಿಗಳನ್ನು ನಿಯಂತ್ರಿಸಲು ಸರ್ಕಾರವು ಉತ್ಸುಕವಾಗಿದ್ದು, ಈಗ ಕೈಗೊಂಡಿರುವ  ನಿರ್ಧಾರವು ಸಂಪೂರ್ಣ ನಿಷೇಧವನ್ನು ತಪ್ಪಿಸುತ್ತದೆ ಎಂದು ಮೂಲಗಳು ಹೇಳಿವೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್‌ ಬೋರ್ಡ್ ಆಫ್ ಇಂಡಿಯಾ (SEBI)ವನ್ನು ನಿಯಂತ್ರಕ ಸಂಸ್ಥೆ ಎಂದು ಗೊತ್ತುಪಡಿಸಬಹುದು. ಆದರೂ ಅದನ್ನು ಅಂತಿಮಗೊಳಿಸಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರೆನ್ಸಿಗಿಂತ ಹೆಚ್ಚಾಗಿ ಸ್ವತ್ತು ಎಂದು ವರ್ಗೀಕರಿಸಲು, ಸ್ವೀಕಾರವನ್ನು ಪಡೆಯಲು ಮತ್ತು ನಿಷೇಧವನ್ನು ತಪ್ಪಿಸಲು ಹಲವಾರು ಪ್ರಯತ್ನಗಳನ್ನು ಕ್ರಿಪ್ಟೋ ಸಮುದಾಯ ಮಾಡಿದೆ.

ಭಾರತ ಮತ್ತು ಕ್ರಿಪ್ಟೋ: ಕಳೆದ ಕೆಲವು ವರ್ಷಗಳಲ್ಲಿ ಭಾರತವು ಡಿಜಿಟಲ್ ಕರೆನ್ಸಿಗಳೊಂದಿಗೆ ಸಂಬಂಧವನ್ನು ಹೊಂದಿದೆ. 2018ರಲ್ಲಿ ಕ್ರಿಪ್ಟೋ ವಹಿವಾಟುಗಳನ್ನು ಪರಿಣಾಮಕಾರಿಯಾಗಿ ನಿಷೇಧಿಸಲಾಯಿತು. ಆದರೆ ಸುಪ್ರೀಂ ಕೋರ್ಟ್ ಮಾರ್ಚ್ 2020ರಲ್ಲಿ ನಿರ್ಬಂಧವನ್ನು ರದ್ದುಗೊಳಿಸಿತು.

ಭಾರತೀಯ ರಿಸರ್ವ್ ಬ್ಯಾಂಕ್ ಇದುವರೆಗೆ ಕ್ರಿಪ್ಟೋ ಕರೆನ್ಸಿಗಳನ್ನು ಸ್ವೀಕರಿಸಲು ಸಿದ್ಧವಿರಲಿಲ್ಲ. ಆರ್ಥಿಕ ಸ್ಥಿರತೆ ಮತ್ತು ಬಂಡವಾಳ ನಿಯಂತ್ರಣಗಳ ಸಂಭವನೀಯ ಅಪಾಯಗಳ ಬಗ್ಗೆ ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ಕ್ರಿಪ್ಟೋಕರೆನ್ಸಿಗಳ ವಿಷಯದ ಬಗ್ಗೆ ಭಾರತಕ್ಕೆ ಹೆಚ್ಚು ಆಳವಾದ ಚರ್ಚೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಂಪುಟದ ಅನುಮೋದನೆಗಾಗಿ ಸರ್ಕಾರವು ಕ್ರಿಪ್ಟೋ ಮಸೂದೆಯನ್ನು ತರಬಹುದು. ನವೆಂಬರ್ 29ರಂದು ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹೊಸ ಮಸೂದೆಯನ್ನು ಮಂಡಿಸಬಹುದು ಎಂದು ವರದಿ ಹೇಳಿದೆ.

‘ಕ್ರಿಪ್ಟೋಕರೆನ್ಸಿಗಳ ಮೇಲೆ ಕಟ್ಟುನಿಟ್ಟಾದ ನಿಯಮಗಳನ್ನು ಹೇರಿ’: ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೂಪದಲ್ಲಾದರೂ ಅವಕಾಶ ನೀಡಿದರೆ, ಅದು ಸಂಪತ್ತು ಬಂಡವಾಳಶಾಹಿಗಳಲ್ಲಿ ಶೇಖರವಾಗಬಹುದು ಎಂಬ ಆತಂಕಗಳು ವ್ಯಕ್ತವಾಗಿವೆ.


ಇದನ್ನೂ ಓದಿರಿ: ಮಧ್ಯಪ್ರದೇಶ: ದೇವಸ್ಥಾನಕ್ಕೆ ಸಂಪೂರ್ಣ ಭೂಮಿ ನೀಡಿದ ಕುಟುಂಬಕ್ಕೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...