Homeಮುಖಪುಟಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

ಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

- Advertisement -
- Advertisement -

ಬಿಟ್‌ ಕಾಯಿನ್‌ ಥರದ ಕ್ರಿಪ್ಟೋ ಕರೆನ್ಸಿಗಳನ್ನು ಲೀಗಲ್ ಟೆಂಡರ್‌‌ ಮಾಡುತ್ತಾರೆಯೇ ಎಂಬ ಚರ್ಚೆಗಳು ದೇಶದಲ್ಲಿ ನಡೆಯುತ್ತಿವೆ. ಕ್ರಿಫ್ಟೋ ಕರೆನ್ಸಿಯನ್ನು ವರ್ಚ್ಯೂಯಲ್‌ ಹಣವಾಗಿ ಬಳಸಬೇಕೆ, ವಸ್ತುವಾಗಿ ಪರಿಗಣಿಸಬೇಕೆ ಅಥವಾ ಆಸ್ತಿಯಾಗಿ ಪರಿಗಣಿಸಬೇಕೆ ಎಂಬ ಕುರಿತು ಸರ್ಕಾರ ನಿರ್ಧರಿಸಲು ಮುಂದಾಗಿದೆ.

ಅನಿಯಂತ್ರಿತ ಕ್ರಿಫ್ಟೋ ಕರೆನ್ಸಿ ಮನಿ ಲ್ಯಾಂಡರಿಂಗ್‌ ಹಾಗೂ ಭಯೋತ್ಪಾದನೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳುತ್ತಿರುವ ಸರ್ಕಾರವು, ಕ್ರಿಫ್ಟೋ ಕರೆನ್ಸಿ ಸಂಬಂಧ ಒಂದು ನಿಲುವನ್ನು ತಾಳಲು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಚರ್ಚೆಗಳು ನಡೆದಿವೆ.

ವಹಿವಾಟುಗಳಿಗೆ ಅಥವಾ ಪಾವತಿಗಳನ್ನು ಮಾಡಲು ಕ್ರಿಪ್ಟೋಕರೆನ್ಸಿಗಳ ಬಳಕೆಯನ್ನು ಕೇಂದ್ರ ಸರ್ಕಾರ ನಿರ್ಬಂಧಿಸಬಹುದು. ಆದರೆ ಅವುಗಳನ್ನು ಚಿನ್ನ, ಷೇರುಗಳು ಅಥವಾ ಬಾಂಡ್‌ಗಳಂತಹ ಸ್ವತ್ತುಗಳಾಗಿ ಇರಿಸಿಕೊಳ್ಳಲು ಅವಕಾಶ ನೀಡುತ್ತದೆ ಎಂದು ಎಕನಾಮಿಕ್ ಟೈಮ್ಸ್ ಬುಧವಾರ ವರದಿ ಮಾಡಿದೆ.

ಹೊಸ ಹೂಡಿಕೆದಾರರನ್ನು ಆಕರ್ಷಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿರುವ ಎಕ್ಸ್‌ಚೆಂಜ್‌ಗಳು ಮತ್ತು ಫ್ಲಾಟ್‌ಫಾರ್ಮ್‌‌ಗಳನ್ನ ಒಳಗೊಂಡಂತೆ ಕ್ರಿಪ್ಟೋ ಕಂಪನಿಗಳನ್ನು ನಿಯಂತ್ರಿಸಲು ಸರ್ಕಾರವು ಉತ್ಸುಕವಾಗಿದ್ದು, ಈಗ ಕೈಗೊಂಡಿರುವ  ನಿರ್ಧಾರವು ಸಂಪೂರ್ಣ ನಿಷೇಧವನ್ನು ತಪ್ಪಿಸುತ್ತದೆ ಎಂದು ಮೂಲಗಳು ಹೇಳಿವೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್‌ ಬೋರ್ಡ್ ಆಫ್ ಇಂಡಿಯಾ (SEBI)ವನ್ನು ನಿಯಂತ್ರಕ ಸಂಸ್ಥೆ ಎಂದು ಗೊತ್ತುಪಡಿಸಬಹುದು. ಆದರೂ ಅದನ್ನು ಅಂತಿಮಗೊಳಿಸಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರೆನ್ಸಿಗಿಂತ ಹೆಚ್ಚಾಗಿ ಸ್ವತ್ತು ಎಂದು ವರ್ಗೀಕರಿಸಲು, ಸ್ವೀಕಾರವನ್ನು ಪಡೆಯಲು ಮತ್ತು ನಿಷೇಧವನ್ನು ತಪ್ಪಿಸಲು ಹಲವಾರು ಪ್ರಯತ್ನಗಳನ್ನು ಕ್ರಿಪ್ಟೋ ಸಮುದಾಯ ಮಾಡಿದೆ.

ಭಾರತ ಮತ್ತು ಕ್ರಿಪ್ಟೋ: ಕಳೆದ ಕೆಲವು ವರ್ಷಗಳಲ್ಲಿ ಭಾರತವು ಡಿಜಿಟಲ್ ಕರೆನ್ಸಿಗಳೊಂದಿಗೆ ಸಂಬಂಧವನ್ನು ಹೊಂದಿದೆ. 2018ರಲ್ಲಿ ಕ್ರಿಪ್ಟೋ ವಹಿವಾಟುಗಳನ್ನು ಪರಿಣಾಮಕಾರಿಯಾಗಿ ನಿಷೇಧಿಸಲಾಯಿತು. ಆದರೆ ಸುಪ್ರೀಂ ಕೋರ್ಟ್ ಮಾರ್ಚ್ 2020ರಲ್ಲಿ ನಿರ್ಬಂಧವನ್ನು ರದ್ದುಗೊಳಿಸಿತು.

ಭಾರತೀಯ ರಿಸರ್ವ್ ಬ್ಯಾಂಕ್ ಇದುವರೆಗೆ ಕ್ರಿಪ್ಟೋ ಕರೆನ್ಸಿಗಳನ್ನು ಸ್ವೀಕರಿಸಲು ಸಿದ್ಧವಿರಲಿಲ್ಲ. ಆರ್ಥಿಕ ಸ್ಥಿರತೆ ಮತ್ತು ಬಂಡವಾಳ ನಿಯಂತ್ರಣಗಳ ಸಂಭವನೀಯ ಅಪಾಯಗಳ ಬಗ್ಗೆ ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ಕ್ರಿಪ್ಟೋಕರೆನ್ಸಿಗಳ ವಿಷಯದ ಬಗ್ಗೆ ಭಾರತಕ್ಕೆ ಹೆಚ್ಚು ಆಳವಾದ ಚರ್ಚೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಂಪುಟದ ಅನುಮೋದನೆಗಾಗಿ ಸರ್ಕಾರವು ಕ್ರಿಪ್ಟೋ ಮಸೂದೆಯನ್ನು ತರಬಹುದು. ನವೆಂಬರ್ 29ರಂದು ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹೊಸ ಮಸೂದೆಯನ್ನು ಮಂಡಿಸಬಹುದು ಎಂದು ವರದಿ ಹೇಳಿದೆ.

‘ಕ್ರಿಪ್ಟೋಕರೆನ್ಸಿಗಳ ಮೇಲೆ ಕಟ್ಟುನಿಟ್ಟಾದ ನಿಯಮಗಳನ್ನು ಹೇರಿ’: ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೂಪದಲ್ಲಾದರೂ ಅವಕಾಶ ನೀಡಿದರೆ, ಅದು ಸಂಪತ್ತು ಬಂಡವಾಳಶಾಹಿಗಳಲ್ಲಿ ಶೇಖರವಾಗಬಹುದು ಎಂಬ ಆತಂಕಗಳು ವ್ಯಕ್ತವಾಗಿವೆ.


ಇದನ್ನೂ ಓದಿರಿ: ಮಧ್ಯಪ್ರದೇಶ: ದೇವಸ್ಥಾನಕ್ಕೆ ಸಂಪೂರ್ಣ ಭೂಮಿ ನೀಡಿದ ಕುಟುಂಬಕ್ಕೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...