Homeಮುಖಪುಟಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

ಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

- Advertisement -
- Advertisement -

ಬಿಟ್‌ ಕಾಯಿನ್‌ ಥರದ ಕ್ರಿಪ್ಟೋ ಕರೆನ್ಸಿಗಳನ್ನು ಲೀಗಲ್ ಟೆಂಡರ್‌‌ ಮಾಡುತ್ತಾರೆಯೇ ಎಂಬ ಚರ್ಚೆಗಳು ದೇಶದಲ್ಲಿ ನಡೆಯುತ್ತಿವೆ. ಕ್ರಿಫ್ಟೋ ಕರೆನ್ಸಿಯನ್ನು ವರ್ಚ್ಯೂಯಲ್‌ ಹಣವಾಗಿ ಬಳಸಬೇಕೆ, ವಸ್ತುವಾಗಿ ಪರಿಗಣಿಸಬೇಕೆ ಅಥವಾ ಆಸ್ತಿಯಾಗಿ ಪರಿಗಣಿಸಬೇಕೆ ಎಂಬ ಕುರಿತು ಸರ್ಕಾರ ನಿರ್ಧರಿಸಲು ಮುಂದಾಗಿದೆ.

ಅನಿಯಂತ್ರಿತ ಕ್ರಿಫ್ಟೋ ಕರೆನ್ಸಿ ಮನಿ ಲ್ಯಾಂಡರಿಂಗ್‌ ಹಾಗೂ ಭಯೋತ್ಪಾದನೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳುತ್ತಿರುವ ಸರ್ಕಾರವು, ಕ್ರಿಫ್ಟೋ ಕರೆನ್ಸಿ ಸಂಬಂಧ ಒಂದು ನಿಲುವನ್ನು ತಾಳಲು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಚರ್ಚೆಗಳು ನಡೆದಿವೆ.

ವಹಿವಾಟುಗಳಿಗೆ ಅಥವಾ ಪಾವತಿಗಳನ್ನು ಮಾಡಲು ಕ್ರಿಪ್ಟೋಕರೆನ್ಸಿಗಳ ಬಳಕೆಯನ್ನು ಕೇಂದ್ರ ಸರ್ಕಾರ ನಿರ್ಬಂಧಿಸಬಹುದು. ಆದರೆ ಅವುಗಳನ್ನು ಚಿನ್ನ, ಷೇರುಗಳು ಅಥವಾ ಬಾಂಡ್‌ಗಳಂತಹ ಸ್ವತ್ತುಗಳಾಗಿ ಇರಿಸಿಕೊಳ್ಳಲು ಅವಕಾಶ ನೀಡುತ್ತದೆ ಎಂದು ಎಕನಾಮಿಕ್ ಟೈಮ್ಸ್ ಬುಧವಾರ ವರದಿ ಮಾಡಿದೆ.

ಹೊಸ ಹೂಡಿಕೆದಾರರನ್ನು ಆಕರ್ಷಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿರುವ ಎಕ್ಸ್‌ಚೆಂಜ್‌ಗಳು ಮತ್ತು ಫ್ಲಾಟ್‌ಫಾರ್ಮ್‌‌ಗಳನ್ನ ಒಳಗೊಂಡಂತೆ ಕ್ರಿಪ್ಟೋ ಕಂಪನಿಗಳನ್ನು ನಿಯಂತ್ರಿಸಲು ಸರ್ಕಾರವು ಉತ್ಸುಕವಾಗಿದ್ದು, ಈಗ ಕೈಗೊಂಡಿರುವ  ನಿರ್ಧಾರವು ಸಂಪೂರ್ಣ ನಿಷೇಧವನ್ನು ತಪ್ಪಿಸುತ್ತದೆ ಎಂದು ಮೂಲಗಳು ಹೇಳಿವೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್‌ ಬೋರ್ಡ್ ಆಫ್ ಇಂಡಿಯಾ (SEBI)ವನ್ನು ನಿಯಂತ್ರಕ ಸಂಸ್ಥೆ ಎಂದು ಗೊತ್ತುಪಡಿಸಬಹುದು. ಆದರೂ ಅದನ್ನು ಅಂತಿಮಗೊಳಿಸಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರೆನ್ಸಿಗಿಂತ ಹೆಚ್ಚಾಗಿ ಸ್ವತ್ತು ಎಂದು ವರ್ಗೀಕರಿಸಲು, ಸ್ವೀಕಾರವನ್ನು ಪಡೆಯಲು ಮತ್ತು ನಿಷೇಧವನ್ನು ತಪ್ಪಿಸಲು ಹಲವಾರು ಪ್ರಯತ್ನಗಳನ್ನು ಕ್ರಿಪ್ಟೋ ಸಮುದಾಯ ಮಾಡಿದೆ.

ಭಾರತ ಮತ್ತು ಕ್ರಿಪ್ಟೋ: ಕಳೆದ ಕೆಲವು ವರ್ಷಗಳಲ್ಲಿ ಭಾರತವು ಡಿಜಿಟಲ್ ಕರೆನ್ಸಿಗಳೊಂದಿಗೆ ಸಂಬಂಧವನ್ನು ಹೊಂದಿದೆ. 2018ರಲ್ಲಿ ಕ್ರಿಪ್ಟೋ ವಹಿವಾಟುಗಳನ್ನು ಪರಿಣಾಮಕಾರಿಯಾಗಿ ನಿಷೇಧಿಸಲಾಯಿತು. ಆದರೆ ಸುಪ್ರೀಂ ಕೋರ್ಟ್ ಮಾರ್ಚ್ 2020ರಲ್ಲಿ ನಿರ್ಬಂಧವನ್ನು ರದ್ದುಗೊಳಿಸಿತು.

ಭಾರತೀಯ ರಿಸರ್ವ್ ಬ್ಯಾಂಕ್ ಇದುವರೆಗೆ ಕ್ರಿಪ್ಟೋ ಕರೆನ್ಸಿಗಳನ್ನು ಸ್ವೀಕರಿಸಲು ಸಿದ್ಧವಿರಲಿಲ್ಲ. ಆರ್ಥಿಕ ಸ್ಥಿರತೆ ಮತ್ತು ಬಂಡವಾಳ ನಿಯಂತ್ರಣಗಳ ಸಂಭವನೀಯ ಅಪಾಯಗಳ ಬಗ್ಗೆ ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ಕ್ರಿಪ್ಟೋಕರೆನ್ಸಿಗಳ ವಿಷಯದ ಬಗ್ಗೆ ಭಾರತಕ್ಕೆ ಹೆಚ್ಚು ಆಳವಾದ ಚರ್ಚೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಂಪುಟದ ಅನುಮೋದನೆಗಾಗಿ ಸರ್ಕಾರವು ಕ್ರಿಪ್ಟೋ ಮಸೂದೆಯನ್ನು ತರಬಹುದು. ನವೆಂಬರ್ 29ರಂದು ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹೊಸ ಮಸೂದೆಯನ್ನು ಮಂಡಿಸಬಹುದು ಎಂದು ವರದಿ ಹೇಳಿದೆ.

‘ಕ್ರಿಪ್ಟೋಕರೆನ್ಸಿಗಳ ಮೇಲೆ ಕಟ್ಟುನಿಟ್ಟಾದ ನಿಯಮಗಳನ್ನು ಹೇರಿ’: ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೂಪದಲ್ಲಾದರೂ ಅವಕಾಶ ನೀಡಿದರೆ, ಅದು ಸಂಪತ್ತು ಬಂಡವಾಳಶಾಹಿಗಳಲ್ಲಿ ಶೇಖರವಾಗಬಹುದು ಎಂಬ ಆತಂಕಗಳು ವ್ಯಕ್ತವಾಗಿವೆ.


ಇದನ್ನೂ ಓದಿರಿ: ಮಧ್ಯಪ್ರದೇಶ: ದೇವಸ್ಥಾನಕ್ಕೆ ಸಂಪೂರ್ಣ ಭೂಮಿ ನೀಡಿದ ಕುಟುಂಬಕ್ಕೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...