Homeಮುಖಪುಟಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

ಕ್ರಿಪ್ಟೋ ಕರೆನ್ಸಿ ಚಿನ್ನದಂತೆ ಬಳಸಬಹುದು; ಕೇಂದ್ರ ಸರ್ಕಾರ ನಿರ್ಧಾರ?

- Advertisement -
- Advertisement -

ಬಿಟ್‌ ಕಾಯಿನ್‌ ಥರದ ಕ್ರಿಪ್ಟೋ ಕರೆನ್ಸಿಗಳನ್ನು ಲೀಗಲ್ ಟೆಂಡರ್‌‌ ಮಾಡುತ್ತಾರೆಯೇ ಎಂಬ ಚರ್ಚೆಗಳು ದೇಶದಲ್ಲಿ ನಡೆಯುತ್ತಿವೆ. ಕ್ರಿಫ್ಟೋ ಕರೆನ್ಸಿಯನ್ನು ವರ್ಚ್ಯೂಯಲ್‌ ಹಣವಾಗಿ ಬಳಸಬೇಕೆ, ವಸ್ತುವಾಗಿ ಪರಿಗಣಿಸಬೇಕೆ ಅಥವಾ ಆಸ್ತಿಯಾಗಿ ಪರಿಗಣಿಸಬೇಕೆ ಎಂಬ ಕುರಿತು ಸರ್ಕಾರ ನಿರ್ಧರಿಸಲು ಮುಂದಾಗಿದೆ.

ಅನಿಯಂತ್ರಿತ ಕ್ರಿಫ್ಟೋ ಕರೆನ್ಸಿ ಮನಿ ಲ್ಯಾಂಡರಿಂಗ್‌ ಹಾಗೂ ಭಯೋತ್ಪಾದನೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳುತ್ತಿರುವ ಸರ್ಕಾರವು, ಕ್ರಿಫ್ಟೋ ಕರೆನ್ಸಿ ಸಂಬಂಧ ಒಂದು ನಿಲುವನ್ನು ತಾಳಲು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಚರ್ಚೆಗಳು ನಡೆದಿವೆ.

ವಹಿವಾಟುಗಳಿಗೆ ಅಥವಾ ಪಾವತಿಗಳನ್ನು ಮಾಡಲು ಕ್ರಿಪ್ಟೋಕರೆನ್ಸಿಗಳ ಬಳಕೆಯನ್ನು ಕೇಂದ್ರ ಸರ್ಕಾರ ನಿರ್ಬಂಧಿಸಬಹುದು. ಆದರೆ ಅವುಗಳನ್ನು ಚಿನ್ನ, ಷೇರುಗಳು ಅಥವಾ ಬಾಂಡ್‌ಗಳಂತಹ ಸ್ವತ್ತುಗಳಾಗಿ ಇರಿಸಿಕೊಳ್ಳಲು ಅವಕಾಶ ನೀಡುತ್ತದೆ ಎಂದು ಎಕನಾಮಿಕ್ ಟೈಮ್ಸ್ ಬುಧವಾರ ವರದಿ ಮಾಡಿದೆ.

ಹೊಸ ಹೂಡಿಕೆದಾರರನ್ನು ಆಕರ್ಷಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿರುವ ಎಕ್ಸ್‌ಚೆಂಜ್‌ಗಳು ಮತ್ತು ಫ್ಲಾಟ್‌ಫಾರ್ಮ್‌‌ಗಳನ್ನ ಒಳಗೊಂಡಂತೆ ಕ್ರಿಪ್ಟೋ ಕಂಪನಿಗಳನ್ನು ನಿಯಂತ್ರಿಸಲು ಸರ್ಕಾರವು ಉತ್ಸುಕವಾಗಿದ್ದು, ಈಗ ಕೈಗೊಂಡಿರುವ  ನಿರ್ಧಾರವು ಸಂಪೂರ್ಣ ನಿಷೇಧವನ್ನು ತಪ್ಪಿಸುತ್ತದೆ ಎಂದು ಮೂಲಗಳು ಹೇಳಿವೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್‌ ಬೋರ್ಡ್ ಆಫ್ ಇಂಡಿಯಾ (SEBI)ವನ್ನು ನಿಯಂತ್ರಕ ಸಂಸ್ಥೆ ಎಂದು ಗೊತ್ತುಪಡಿಸಬಹುದು. ಆದರೂ ಅದನ್ನು ಅಂತಿಮಗೊಳಿಸಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರೆನ್ಸಿಗಿಂತ ಹೆಚ್ಚಾಗಿ ಸ್ವತ್ತು ಎಂದು ವರ್ಗೀಕರಿಸಲು, ಸ್ವೀಕಾರವನ್ನು ಪಡೆಯಲು ಮತ್ತು ನಿಷೇಧವನ್ನು ತಪ್ಪಿಸಲು ಹಲವಾರು ಪ್ರಯತ್ನಗಳನ್ನು ಕ್ರಿಪ್ಟೋ ಸಮುದಾಯ ಮಾಡಿದೆ.

ಭಾರತ ಮತ್ತು ಕ್ರಿಪ್ಟೋ: ಕಳೆದ ಕೆಲವು ವರ್ಷಗಳಲ್ಲಿ ಭಾರತವು ಡಿಜಿಟಲ್ ಕರೆನ್ಸಿಗಳೊಂದಿಗೆ ಸಂಬಂಧವನ್ನು ಹೊಂದಿದೆ. 2018ರಲ್ಲಿ ಕ್ರಿಪ್ಟೋ ವಹಿವಾಟುಗಳನ್ನು ಪರಿಣಾಮಕಾರಿಯಾಗಿ ನಿಷೇಧಿಸಲಾಯಿತು. ಆದರೆ ಸುಪ್ರೀಂ ಕೋರ್ಟ್ ಮಾರ್ಚ್ 2020ರಲ್ಲಿ ನಿರ್ಬಂಧವನ್ನು ರದ್ದುಗೊಳಿಸಿತು.

ಭಾರತೀಯ ರಿಸರ್ವ್ ಬ್ಯಾಂಕ್ ಇದುವರೆಗೆ ಕ್ರಿಪ್ಟೋ ಕರೆನ್ಸಿಗಳನ್ನು ಸ್ವೀಕರಿಸಲು ಸಿದ್ಧವಿರಲಿಲ್ಲ. ಆರ್ಥಿಕ ಸ್ಥಿರತೆ ಮತ್ತು ಬಂಡವಾಳ ನಿಯಂತ್ರಣಗಳ ಸಂಭವನೀಯ ಅಪಾಯಗಳ ಬಗ್ಗೆ ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ಕ್ರಿಪ್ಟೋಕರೆನ್ಸಿಗಳ ವಿಷಯದ ಬಗ್ಗೆ ಭಾರತಕ್ಕೆ ಹೆಚ್ಚು ಆಳವಾದ ಚರ್ಚೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಂಪುಟದ ಅನುಮೋದನೆಗಾಗಿ ಸರ್ಕಾರವು ಕ್ರಿಪ್ಟೋ ಮಸೂದೆಯನ್ನು ತರಬಹುದು. ನವೆಂಬರ್ 29ರಂದು ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹೊಸ ಮಸೂದೆಯನ್ನು ಮಂಡಿಸಬಹುದು ಎಂದು ವರದಿ ಹೇಳಿದೆ.

‘ಕ್ರಿಪ್ಟೋಕರೆನ್ಸಿಗಳ ಮೇಲೆ ಕಟ್ಟುನಿಟ್ಟಾದ ನಿಯಮಗಳನ್ನು ಹೇರಿ’: ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೂಪದಲ್ಲಾದರೂ ಅವಕಾಶ ನೀಡಿದರೆ, ಅದು ಸಂಪತ್ತು ಬಂಡವಾಳಶಾಹಿಗಳಲ್ಲಿ ಶೇಖರವಾಗಬಹುದು ಎಂಬ ಆತಂಕಗಳು ವ್ಯಕ್ತವಾಗಿವೆ.


ಇದನ್ನೂ ಓದಿರಿ: ಮಧ್ಯಪ್ರದೇಶ: ದೇವಸ್ಥಾನಕ್ಕೆ ಸಂಪೂರ್ಣ ಭೂಮಿ ನೀಡಿದ ಕುಟುಂಬಕ್ಕೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...