Homeರಾಷ್ಟ್ರೀಯ‘CSpace’-ತನ್ನದೇ ಆದ OTT ಪ್ಲಾಟ್‌ಫಾರ್ಮ್‌ ಪ್ರಾರಂಭಿಸಲಿರುವ ಕೇರಳ; ನವೆಂಬರ್ 1 ರಿಂದ ಪ್ರಾರಂಭ

‘CSpace’-ತನ್ನದೇ ಆದ OTT ಪ್ಲಾಟ್‌ಫಾರ್ಮ್‌ ಪ್ರಾರಂಭಿಸಲಿರುವ ಕೇರಳ; ನವೆಂಬರ್ 1 ರಿಂದ ಪ್ರಾರಂಭ

- Advertisement -
- Advertisement -

ಈ ವರ್ಷದ ನವೆಂಬರ್ 1 ರಂದು ಕೇರಳವು ‘CSpace’ ಎಂಬ OTT ಪ್ರಾರಂಭಿಸುವುದರೊಂದಿಗೆ ದೇಶದ ಮೊದಲ ಸರ್ಕಾರಿ ಒಟಿಟಿ ವೇದಿಕೆ ಪ್ರಾರಂಭಿಸಿದ ರಾಜ್ಯವಾಗಿ ಹೊರಹೊಮ್ಮಲಿದೆ. ರಾಜ್ಯ ರಾಜಧಾನಿಯ ಕಲಾಭವನ ರಂಗಮಂದಿರದಲ್ಲಿ ಬುಧವಾರ ನಡೆದ ಒಟಿಟಿ ವೇದಿಕೆಯ ನಾಮಕರಣ ಸಮಾರಂಭದಲ್ಲಿ ಸಂಸ್ಕೃತಿ ಮತ್ತು ಸಿನಿಮಾ ಸಚಿವ ಸಾಜಿ ಚೆರಿಯನ್ ಈ ಯೋಜನೆಯ ಬಗ್ಗೆ ಹೇಳಿದ್ದಾರೆ.

“ನಮ್ಮ OTT ಪ್ಲಾಟ್‌ಫಾರ್ಮ್ ಅನ್ನು CSpace ಎಂದು ಕರೆಯಲಾಗುತ್ತದೆ. ಇದು ಸಾಂಸ್ಕೃತಿಕ ವ್ಯವಹಾರಗಳ ಇಲಾಖೆಯ ಅಡಿಯಲ್ಲಿರುತ್ತದೆ. ರಾಜ್ಯ ಸರ್ಕಾರದಿಂದ ಇಂತಹ ಉಪಕ್ರಮ ಇದು ಮೊದಲ ಬಾರಿಯಾಗಿದೆ” ಎಂದು ಚೆರಿಯನ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಸೌಲಭ್ಯವನ್ನು ಕೇರಳ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮ (KSFDC) ನಿರ್ವಹಿಸುತ್ತದೆ. ಚಲನಚಿತ್ರ ರಸಿಕರು ಇದರಲ್ಲಿ ಸ್ಥಳೀಯ ಚಲನಚಿತ್ರಗಳನ್ನು ಮಾತ್ರವಲ್ಲದೆ ವಿಶ್ವದರ್ಜೆಯ ಚಲನಚಿತ್ರಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

OTT ವೇದಿಕೆಯು ಚಿತ್ರಗಳನ್ನು ಥಿಯೇಟರ್ ಅಲ್ಲಿ ಬಿಡುಗಡೆ ಆದ ನಂತರ ಮಾತ್ರ ಪ್ರದರ್ಶಿಸುತ್ತದೆ. ಹೀಗಾಗಿ ಥಿಯೇಟರ್ ಮಾಲೀಕರು ಮತ್ತು ನಿರ್ಮಾಪಕರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಚೆರಿಯನ್ ಹೇಳಿದ್ದಾರೆ. ಈ OTT ವೇದಿಕೆಯು ಸಿನಿಮಾಗಳು ಮಾತ್ರವಲ್ಲದೆ ಕಿರುಚಿತ್ರಗಳು ಮತ್ತು ಸಾಕ್ಷ್ಯಚಿತ್ರಗಳನ್ನು ಸಹ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗವು ಮಲಯಾಳಂ ಚಲನಚಿತ್ರೋದ್ಯಮದ ಮೇಲೆ ಭಾರಿ ಹಾನಿಯನ್ನುಂಟುಮಾಡಿತು. 2021 ರಲ್ಲಿ ಸುಮಾರು 70 ಚಲನಚಿತ್ರಗಳು ಮಾತ್ರ ಥಿಯೇಟರ್‌ಗಳಿಗೆ ಬಂದಿದ್ದವು. ಸುಮಾರು 85 ಚಲನಚಿತ್ರಗಳಿಗೆ ಯಾವುದೇ OTT ವೇದಿಕೆ ಸಿಕ್ಕಿರಲಿಲ್ಲ.

OTT ಪ್ಲಾಟ್‌ಫಾರ್ಮ್ ನವೆಂಬರ್ 1 ರಂದು ಲೈವ್ ಆಗಲಿದೆ ಎಂದು ಚೆರಿಯನ್ ಘೋಷಿಸುವುದರೊಂದಿಗೆ, ಕೇರಳ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮ OTT ಪ್ಲಾಟ್‌ಫಾರ್ಮ್‌ಗಾಗಿ ಆಸಕ್ತ ಬಿಡ್ಡರ್‌ಗಳೊಂದಿಗೆ ಮಾತನಾಡಲು ನಿರತವಾಗಿದೆ.

ಇದನ್ನೂ ಓದಿ:  ಕೇರಳ ಬಜೆಟ್‌: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಮೀಸಲಿಟ್ಟ ಸರ್ಕಾರ

ಆಸಕ್ತ ನಿರ್ಮಾಪಕರು ತಮ್ಮ ಚಲನಚಿತ್ರಗಳೊಂದಿಗೆ ಜೂನ್ 1 ರಿಂದ ಕೇರಳ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಚೆರಿಯನ್ ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...