Homeಮುಖಪುಟಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕರ್ನಾಟಕವು ಮೇಕೆದಾಟು ಬಳಿ ಸಮನಾಂತರ ಜಲಾಶಯ ನಿರ್ಮಿಸುವ ಯೋಜನೆಯನ್ನು ತಮಿಳುನಾಡಿನ ಹಲವರು ವಿರೋಧಿಸಿರುವುದು ನಮಗೆಲ್ಲಾ ಗೊತ್ತಿದೆ. ಆದರೆ ಈ ಯೋಜನೆಗೆ ಕರ್ನಾಟಕದ ಶಾಸಕ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ!

ಆಗಸ್ಟ್ 5 ರಂದು ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಆ ಚಿತ್ರಗಳನ್ನು ಟ್ವೀಟ್ ಮಾಡಿ ಕರ್ನಾಟಕದ ಸಹೋದರ, ಸಹೋದರಿಯರು ಈ ಯೋಜನೆಗೆ ಒತ್ತಡ ಹೇರದಂತೆ ಮನವಿ ಮಾಡುತ್ತೇನೆ ಎಂದು ಬರೆದಿದ್ದರು. ಅದನ್ನು ಸಿ.ಟಿ ರವಿ ಮರುಟ್ವೀಟ್ ಮಾಡುವ ಮೂಲಕ ಅಣ್ಣಾಮಲೈಗೆ ಬೆಂಬಲ ಸೂಚಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಅಣ್ಣಾಮಲೈಗೆ ಅವರ “ರಾಜ್ಯ ಮೊದಲು”, ಇದನ್ನು ರಿಟ್ವೀಟ್ ಮಾಡಿದ ಸಿ.ಟಿ ರವಿಗೆ “ದೇಶ ಮೊದಲು”.. ಈ ‘ದೇಮೋ’ಗಳು ಮನೆಗೆ ಮಗಾನೂ ಆಗೋದಿಲ್ಲ, ಊರಿಗೆ ಆಳೂ ಆಗೋದಿಲ್ಲ. ಒಟ್ಟಿನಲ್ಲಿ ಟೋಟಲ್ ಕುಲಘಾತಕರು.. ಎಂದು ಗುರು ಕುಲಕರ್ಣಿ ಕಿಡಿಕಾರಿದ್ದಾರೆ.

ಇದನ್ನ ರೀಟ್ವಿಟ್ ಮಾಡಿ ಸಪೋರ್ಟ್ ಮಾಡ್ತಿದ್ದಿರೇನ್ರಿ ಸಿಟಿ ರವಿ ಅವ್ರೇ, ಮೊದಲು ನಮ್ಮ‌ ಜನ ಸರಿಯಿಲ್ಲ, ನಾಡು, ನುಡಿ, ನೆಲ, ಜಲದ ವಿಷಯದಲ್ಲಿ ಬದ್ಧತೆ ಇಲ್ಲದವರನ್ನು ಆಯ್ಕೆ ಮಾಡ್ತಾರೆ. ನೋಡಿ ನಮ್ಮದೆ ತಪ್ಪು, ಅವಯ್ಯನಿಗೆ ತನ್ನ ನಾಡೇ ಮೊದಲಾಯಿತು, ಇವಯ್ಯನಿಗೆ?? ಎಂದು ಶಿವಸೂರ್ಯ ಎಂಬುವವರು ಪ್ರತಿಕ್ರಿಯೆ ನೀಡಿದ್ದಾರೆ.

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ಕನ್ನಡಿಗರ ಹಿತಾಸಕ್ತಿ ವಿರುದ್ಧ ಬೆಂಬಲ ಕೊಡಲು? ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಆಮ್ ಆದ್ಮಿ ಪಕ್ಷದ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಮಾತನಾಡಿ, “ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಕನ್ನಡ ವಿರೋಧಿ ಧೋರಣೆ ಅನುಸರಿಸುವುದು ಚಟವಾಗಿಬಿಟ್ಟಿದೆ. ಇದರಲ್ಲಿ ಅವರು ವಿಕೃತ ಆನಂದ ಅನುಭವಿಸುತ್ತಿದ್ದಾರೆ. ಈ ಹಿಂದೆ ಕೂಡ ಶ್ರೀಲಂಕಾ ಪಾಸ್‌ಪೋರ್ಟ್ ವಿವಾದಯೆದ್ದಾಗ 5-6 ಭಾಷೆಗಳಲ್ಲಿ ಪಾಸ್‌ಪೋರ್ಟ್ ಮಾಹಿತಿ ಸಿಗುತ್ತಿರುವಾಗ ಕನ್ನಡದಲ್ಲಿ ಏಕಿಲ್ಲ? ಎಂದು ಒಬ್ಬರು ಪ್ರಶ್ನಿಸಿದ್ದರು. ಆಗ ಲೋಕಲ್ ಭಾಷೆಯಲ್ಲಿ ಪ್ರಿಂಟ್ ಹಾಕಲು ಇದೇನು ನಿಮ್ಮ ರೇಷನ್ ಕಾರ್ಡ್ ಅಂದುಕೊಂಡಿದ್ದೀರಾ? ಎಂದು ಸಿ.ಟಿ ರವಿ ವ್ಯಂಗ್ಯವಾಡಿದ್ದರು. ಆಗಲೂ ಜನ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಸಿ.ಟಿ ರವಿಯವರು ಹಿಂದೆ ನಾನು ನನ್ನ ಮಕ್ಕಳೊಡನೆ ಇಂಗ್ಲಿಷ್‌ನಲ್ಲಿ ಮಾತನಾಡಿಸುತ್ತೇನೆ, ಅವರನ್ನು ಇಂಗ್ಲಿಷ್ ಶಾಲೆಗೆ ಕಳಿಸುತ್ತೇನೆ ಎಂದು ಹೇಳಿಕೆ ನೀಡುವ ಮೂಲಕ ಕನ್ನಡಕ್ಕಿಂತ ಇಂಗ್ಲಿಷ್ ಮೇಲು ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಅವರಿಗೆ ಕನ್ನಡದ ಭಾವನೆಗಳಿಗೆ ಬೆಲೆ ಕೊಡಬೇಕೆನ್ನುವ ಕನಿಷ್ಟ ಸೌಜನ್ಯವಿಲ್ಲ. ಅವರಿಗೆ ಅಧಿಕಾರದ ಮದ ಏರಿದ್ದು ನಾವು ಏನು ಜನಪರ ಕೆಲಸ ಮಾಡದಿದ್ದರೂ ಸಹ ನಾವು ಗೆಲ್ಲುತ್ತೇವೆ ಎನ್ನುವ ಅಹಂ ಅವರದು. ಬಿಜೆಪಿ ಪ್ರಾದೇಶಿಕ ಭಾವನೆಗಳಿಗೆ ಯಾವತ್ತೂ ಬೆಲೆ ಕೊಡುವುದಿಲ್ಲ. ಇದನ್ನು ಜನ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಮತ್ತು ಬಿಸಿ ಮುಟ್ಟಿಸಬೇಕು ಎಂದು ದರ್ಶನ್ ಜೈನ್ ಅಭಿಪ್ರಾಯಪಟ್ಟಿರು.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...