Homeಮುಖಪುಟಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕರ್ನಾಟಕವು ಮೇಕೆದಾಟು ಬಳಿ ಸಮನಾಂತರ ಜಲಾಶಯ ನಿರ್ಮಿಸುವ ಯೋಜನೆಯನ್ನು ತಮಿಳುನಾಡಿನ ಹಲವರು ವಿರೋಧಿಸಿರುವುದು ನಮಗೆಲ್ಲಾ ಗೊತ್ತಿದೆ. ಆದರೆ ಈ ಯೋಜನೆಗೆ ಕರ್ನಾಟಕದ ಶಾಸಕ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ!

ಆಗಸ್ಟ್ 5 ರಂದು ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಆ ಚಿತ್ರಗಳನ್ನು ಟ್ವೀಟ್ ಮಾಡಿ ಕರ್ನಾಟಕದ ಸಹೋದರ, ಸಹೋದರಿಯರು ಈ ಯೋಜನೆಗೆ ಒತ್ತಡ ಹೇರದಂತೆ ಮನವಿ ಮಾಡುತ್ತೇನೆ ಎಂದು ಬರೆದಿದ್ದರು. ಅದನ್ನು ಸಿ.ಟಿ ರವಿ ಮರುಟ್ವೀಟ್ ಮಾಡುವ ಮೂಲಕ ಅಣ್ಣಾಮಲೈಗೆ ಬೆಂಬಲ ಸೂಚಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಅಣ್ಣಾಮಲೈಗೆ ಅವರ “ರಾಜ್ಯ ಮೊದಲು”, ಇದನ್ನು ರಿಟ್ವೀಟ್ ಮಾಡಿದ ಸಿ.ಟಿ ರವಿಗೆ “ದೇಶ ಮೊದಲು”.. ಈ ‘ದೇಮೋ’ಗಳು ಮನೆಗೆ ಮಗಾನೂ ಆಗೋದಿಲ್ಲ, ಊರಿಗೆ ಆಳೂ ಆಗೋದಿಲ್ಲ. ಒಟ್ಟಿನಲ್ಲಿ ಟೋಟಲ್ ಕುಲಘಾತಕರು.. ಎಂದು ಗುರು ಕುಲಕರ್ಣಿ ಕಿಡಿಕಾರಿದ್ದಾರೆ.

ಇದನ್ನ ರೀಟ್ವಿಟ್ ಮಾಡಿ ಸಪೋರ್ಟ್ ಮಾಡ್ತಿದ್ದಿರೇನ್ರಿ ಸಿಟಿ ರವಿ ಅವ್ರೇ, ಮೊದಲು ನಮ್ಮ‌ ಜನ ಸರಿಯಿಲ್ಲ, ನಾಡು, ನುಡಿ, ನೆಲ, ಜಲದ ವಿಷಯದಲ್ಲಿ ಬದ್ಧತೆ ಇಲ್ಲದವರನ್ನು ಆಯ್ಕೆ ಮಾಡ್ತಾರೆ. ನೋಡಿ ನಮ್ಮದೆ ತಪ್ಪು, ಅವಯ್ಯನಿಗೆ ತನ್ನ ನಾಡೇ ಮೊದಲಾಯಿತು, ಇವಯ್ಯನಿಗೆ?? ಎಂದು ಶಿವಸೂರ್ಯ ಎಂಬುವವರು ಪ್ರತಿಕ್ರಿಯೆ ನೀಡಿದ್ದಾರೆ.

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ಕನ್ನಡಿಗರ ಹಿತಾಸಕ್ತಿ ವಿರುದ್ಧ ಬೆಂಬಲ ಕೊಡಲು? ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಆಮ್ ಆದ್ಮಿ ಪಕ್ಷದ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಮಾತನಾಡಿ, “ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಕನ್ನಡ ವಿರೋಧಿ ಧೋರಣೆ ಅನುಸರಿಸುವುದು ಚಟವಾಗಿಬಿಟ್ಟಿದೆ. ಇದರಲ್ಲಿ ಅವರು ವಿಕೃತ ಆನಂದ ಅನುಭವಿಸುತ್ತಿದ್ದಾರೆ. ಈ ಹಿಂದೆ ಕೂಡ ಶ್ರೀಲಂಕಾ ಪಾಸ್‌ಪೋರ್ಟ್ ವಿವಾದಯೆದ್ದಾಗ 5-6 ಭಾಷೆಗಳಲ್ಲಿ ಪಾಸ್‌ಪೋರ್ಟ್ ಮಾಹಿತಿ ಸಿಗುತ್ತಿರುವಾಗ ಕನ್ನಡದಲ್ಲಿ ಏಕಿಲ್ಲ? ಎಂದು ಒಬ್ಬರು ಪ್ರಶ್ನಿಸಿದ್ದರು. ಆಗ ಲೋಕಲ್ ಭಾಷೆಯಲ್ಲಿ ಪ್ರಿಂಟ್ ಹಾಕಲು ಇದೇನು ನಿಮ್ಮ ರೇಷನ್ ಕಾರ್ಡ್ ಅಂದುಕೊಂಡಿದ್ದೀರಾ? ಎಂದು ಸಿ.ಟಿ ರವಿ ವ್ಯಂಗ್ಯವಾಡಿದ್ದರು. ಆಗಲೂ ಜನ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಸಿ.ಟಿ ರವಿಯವರು ಹಿಂದೆ ನಾನು ನನ್ನ ಮಕ್ಕಳೊಡನೆ ಇಂಗ್ಲಿಷ್‌ನಲ್ಲಿ ಮಾತನಾಡಿಸುತ್ತೇನೆ, ಅವರನ್ನು ಇಂಗ್ಲಿಷ್ ಶಾಲೆಗೆ ಕಳಿಸುತ್ತೇನೆ ಎಂದು ಹೇಳಿಕೆ ನೀಡುವ ಮೂಲಕ ಕನ್ನಡಕ್ಕಿಂತ ಇಂಗ್ಲಿಷ್ ಮೇಲು ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಅವರಿಗೆ ಕನ್ನಡದ ಭಾವನೆಗಳಿಗೆ ಬೆಲೆ ಕೊಡಬೇಕೆನ್ನುವ ಕನಿಷ್ಟ ಸೌಜನ್ಯವಿಲ್ಲ. ಅವರಿಗೆ ಅಧಿಕಾರದ ಮದ ಏರಿದ್ದು ನಾವು ಏನು ಜನಪರ ಕೆಲಸ ಮಾಡದಿದ್ದರೂ ಸಹ ನಾವು ಗೆಲ್ಲುತ್ತೇವೆ ಎನ್ನುವ ಅಹಂ ಅವರದು. ಬಿಜೆಪಿ ಪ್ರಾದೇಶಿಕ ಭಾವನೆಗಳಿಗೆ ಯಾವತ್ತೂ ಬೆಲೆ ಕೊಡುವುದಿಲ್ಲ. ಇದನ್ನು ಜನ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಮತ್ತು ಬಿಸಿ ಮುಟ್ಟಿಸಬೇಕು ಎಂದು ದರ್ಶನ್ ಜೈನ್ ಅಭಿಪ್ರಾಯಪಟ್ಟಿರು.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...