Homeಕರ್ನಾಟಕಮಾಂಸಾಹಾರದ ಪರ ಸಿ.ಟಿ.ರವಿ ಬ್ಯಾಟಿಂಗ್; ಕಾಂಗ್ರೆಸ್‌, ಸಿದ್ದರಾಮಯ್ಯ ಪ್ರತಿಕ್ರಿಯೆ

ಮಾಂಸಾಹಾರದ ಪರ ಸಿ.ಟಿ.ರವಿ ಬ್ಯಾಟಿಂಗ್; ಕಾಂಗ್ರೆಸ್‌, ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿ.ಟಿ.ರವಿಯವರು ಮಾಂಸ ತಿಂದು ದೇವಾಲಯಕ್ಕೆ ಭೇಟಿ ನೀಡಿದ್ದಾರೆಂಬುದು ಚರ್ಚೆಗೆ ಗ್ರಾಸವಾಗಿದೆ

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿಯವರು ಮಾಂಸ ತಿಂದು ದೇವಾಲಯಕ್ಕೆ ಭೇಟಿ ನೀಡಿದ್ದಾರೆಂಬುದು ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಸಿದ್ದರಾಮಯ್ಯನವರು ಮಾಂಸಾಹಾರ ತಿಂದು ದೇವಾಲಯ ಪ್ರವೇಶಿಸಿದರೆಂದು ಬಿಜೆಪಿ ಟೀಕಿಸಿತ್ತು. ಇದು ಮಹಾಪರಾಧವೆಂಬಂತೆ ಬಿಂಬಿಸುವ ಪ್ರಯತ್ನಗಳು ಮಾಧ್ಯಮಗಳಲ್ಲಿ ಆಗಿದ್ದವು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿಯವರು ಮಾಂಸಾಹಾರದ ಪರ ಬ್ಯಾಟಿಂಗ್ ಮಾಡಿದ್ದಾರೆ. “ನಾನು ತಿನ್ನೋ ಜಾತಿಯಲ್ಲಿ ಹುಟ್ಟಿದ್ದೀನಿ. ಸಂಕೋಚ ಏನ್ರೀ? ಹೊರಗಡೆ ಹೋಗಿ ಕೈಮುಗಿದು ಬಂದಿದ್ದೇನೆ. ತಪ್ಪೇನಿಲ್ಲ. ಇಷ್ಟು ಆದ ಮೇಲೂ ದಾಷ್ಟ್ಯವನ್ನು ತೋರಿಸಿಲ್ಲ. ನಾನ್‌ವೆಜ್ ದೇವರುಗಳು ಇದ್ದಾವೆ. ಅವರದ್ದು ದಾಷ್ಟ್ಯ, ನನ್ನದು ನಿವೇದನೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಫೆಬ್ರವರಿ 19ರಂದು ಭಾನುವಾರ ಉತ್ತರ ಕನ್ನಡ ಜಿಲ್ಲೆಗೆ ಸಿ.ಟಿ.ರವಿ ಆಗಮಿಸಿದ್ದರು. ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ಭಟ್ಕಳಕ್ಕೆ ಸಿ.ಟಿ.ರವಿ ಆಗಮಿಸಿದ್ದರು. ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಹರಿದಾಡುತ್ತಿದೆ.

CT Ravi photo viral

ಬಾಡೂಟ ಸವಿದು ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.

‘ಕಾಂಗ್ರೆಸ್‌ನವರು ತಿಂದರೆ ಮಾಂಸ, ಬಿಜೆಪಿಯವರು ತಿಂದರೆ ಕ್ಯಾರೆಟ್ ಹಲ್ವಾನಾ?’

ಈ ಕುರಿತು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, “ಕಾಂಗ್ರೆಸ್‌ನವರು ತಿಂದರೆ ಮಾಂಸ, ಬಿಜೆಪಿಗರು ತಿಂದರೆ ಮಾಂಸವೂ ಕ್ಯಾರೆಟ್ ಹಲ್ವಾದಂತಾಗುತ್ತದೆಯೇ? ಮಾಂಸದೂಟ ಸೇವಿಸಿ ಹನುಮನ ದೇವಸ್ಥಾನಕ್ಕೆ ಹೋಗಿದ್ದ ಸಿ.ಟಿ.ರವಿಯವರು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಬಾಯಿ ಬಡಿದುಕೊಳ್ಳುತ್ತಿಲ್ಲವೇಕೆ? ಈಗ ದೇವಾಲಯ ಮೈಲಿಗೆಯಾಗಿಲ್ಲವೇ? ಗೋಮೂತ್ರ ಎರಚುವುದಿಲ್ಲವೇ?” ಎಂದು ಕೇಳಿದೆ.

ಇದನ್ನೂ ಓದಿರಿ: ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

“ದ್ವೇಷ ಕಾರುವುದನ್ನೇ ಧರ್ಮ ಎಂದುಕೊಂಡಿರುವ ಬಾಯಿಹರುಕ ಸಿ.ಟಿ.ರವಿಯವರು, ದೇವಸ್ಥಾನಕ್ಕೆ ಹೋಗುವ ಮುನ್ನ ತಿಂದ ಮಾಂಸದ ಮೆನು ಏನು ಬಿಜೆಪಿ ಕರ್ನಾಟಕ? ಫಿಶ್ ಫ್ರೈ? ಚಿಕನ್ ಕಬಾಬ್? ಲೆಗ್ ಪೀಸ್? ಮಟನ್ ಕುರ್ಮಾ? ಚಿಕನ್ ಟಿಕ್ಕಾ? ನಾಟಿಕೋಳಿ ಸಾಂಬಾರ್? ಫೋರ್ಕ್ ಫ್ರೈ? ಬೀಫ್ ಬಿರಿಯಾನಿ? ಸಿಟಿ ರವಿ ತಟ್ಟೆಯನ್ನು ಬಿಜೆಪಿಗರು ಇಣುಕಿ ನೋಡಿಲ್ಲವೇ?” ಎಂದು ಸರಣಿ ಪ್ರಶ್ನೆಗಳನ್ನು ಎಸೆದಿದೆ.

ಇದು ವಿವಾದವೇ ಅಲ್ಲ: ಸಿದ್ದರಾಮಯ್ಯ

ಈ ವಿಚಾರವಾಗಿ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, “ದೇವಸ್ಥಾನಕ್ಕೆ ಹೋಗೋದು, ಹೋಗದೇ ಇರುವುದು, ಮಾಂಸ ತಿನ್ನೊದು ತಿನ್ನದೇ ಇರುವದು ವಿವಾದವೇ ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಜನರ ಸಮಸ್ಯೆಗಳು, ನಾಡಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ನಾನು ಈಗಾಗಲೇ ಬಿಜೆಪಿಗರಿಗೆ ನಾವು ಚರ್ಚೆ ಮಾಡಲು ತಯಾರಿದ್ದೇವೆ. ನೀವು ತಯಾರಿದ್ದೀರಾ ಎಂದು ಕೇಳಿದ್ದೇನೆ” ಎಂದಿದ್ದಾರೆ.

“ಈ ನಾಡಿನ ರೈತರಿಗೆ, ಬಡವರಿಗೆ ಏನು ಮಾಡಿದ್ದಾರೆ ಅಂತ ಬಿಜೆಪಿಯವರು ಹೇಳಬೇಕು. ಜನರ ಸಮಸ್ಯೆಗಳನ್ನು ಬಗೆ ಹರಿಸುವದನ್ನು ಬಿಟ್ಟು, ನಾಮ(ತಿಲಕ) ಹಾಕಿಕೊಳ್ಳುವದು, ದೇವಸ್ಥಾನಕ್ಕೆ ಹೋಗುವದು, ಟಿಪ್ಪು ಸುಲ್ತಾನ್, ಗಾಂಧಿ, ಗೋಡೆ, ಸಾವರ್ಕಕರ್‌ ಬಗ್ಗೆ ಮಾತನಾಡುವದು- ಇವೆಲ್ಲ ರಿಲೆವೆಂಟ್ ವಿಷಯಗಳಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...