Homeಕರ್ನಾಟಕಮಾಂಸಾಹಾರದ ಪರ ಸಿ.ಟಿ.ರವಿ ಬ್ಯಾಟಿಂಗ್; ಕಾಂಗ್ರೆಸ್‌, ಸಿದ್ದರಾಮಯ್ಯ ಪ್ರತಿಕ್ರಿಯೆ

ಮಾಂಸಾಹಾರದ ಪರ ಸಿ.ಟಿ.ರವಿ ಬ್ಯಾಟಿಂಗ್; ಕಾಂಗ್ರೆಸ್‌, ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿ.ಟಿ.ರವಿಯವರು ಮಾಂಸ ತಿಂದು ದೇವಾಲಯಕ್ಕೆ ಭೇಟಿ ನೀಡಿದ್ದಾರೆಂಬುದು ಚರ್ಚೆಗೆ ಗ್ರಾಸವಾಗಿದೆ

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿಯವರು ಮಾಂಸ ತಿಂದು ದೇವಾಲಯಕ್ಕೆ ಭೇಟಿ ನೀಡಿದ್ದಾರೆಂಬುದು ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಸಿದ್ದರಾಮಯ್ಯನವರು ಮಾಂಸಾಹಾರ ತಿಂದು ದೇವಾಲಯ ಪ್ರವೇಶಿಸಿದರೆಂದು ಬಿಜೆಪಿ ಟೀಕಿಸಿತ್ತು. ಇದು ಮಹಾಪರಾಧವೆಂಬಂತೆ ಬಿಂಬಿಸುವ ಪ್ರಯತ್ನಗಳು ಮಾಧ್ಯಮಗಳಲ್ಲಿ ಆಗಿದ್ದವು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿಯವರು ಮಾಂಸಾಹಾರದ ಪರ ಬ್ಯಾಟಿಂಗ್ ಮಾಡಿದ್ದಾರೆ. “ನಾನು ತಿನ್ನೋ ಜಾತಿಯಲ್ಲಿ ಹುಟ್ಟಿದ್ದೀನಿ. ಸಂಕೋಚ ಏನ್ರೀ? ಹೊರಗಡೆ ಹೋಗಿ ಕೈಮುಗಿದು ಬಂದಿದ್ದೇನೆ. ತಪ್ಪೇನಿಲ್ಲ. ಇಷ್ಟು ಆದ ಮೇಲೂ ದಾಷ್ಟ್ಯವನ್ನು ತೋರಿಸಿಲ್ಲ. ನಾನ್‌ವೆಜ್ ದೇವರುಗಳು ಇದ್ದಾವೆ. ಅವರದ್ದು ದಾಷ್ಟ್ಯ, ನನ್ನದು ನಿವೇದನೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಫೆಬ್ರವರಿ 19ರಂದು ಭಾನುವಾರ ಉತ್ತರ ಕನ್ನಡ ಜಿಲ್ಲೆಗೆ ಸಿ.ಟಿ.ರವಿ ಆಗಮಿಸಿದ್ದರು. ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ಭಟ್ಕಳಕ್ಕೆ ಸಿ.ಟಿ.ರವಿ ಆಗಮಿಸಿದ್ದರು. ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಹರಿದಾಡುತ್ತಿದೆ.

CT Ravi photo viral

ಬಾಡೂಟ ಸವಿದು ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.

‘ಕಾಂಗ್ರೆಸ್‌ನವರು ತಿಂದರೆ ಮಾಂಸ, ಬಿಜೆಪಿಯವರು ತಿಂದರೆ ಕ್ಯಾರೆಟ್ ಹಲ್ವಾನಾ?’

ಈ ಕುರಿತು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, “ಕಾಂಗ್ರೆಸ್‌ನವರು ತಿಂದರೆ ಮಾಂಸ, ಬಿಜೆಪಿಗರು ತಿಂದರೆ ಮಾಂಸವೂ ಕ್ಯಾರೆಟ್ ಹಲ್ವಾದಂತಾಗುತ್ತದೆಯೇ? ಮಾಂಸದೂಟ ಸೇವಿಸಿ ಹನುಮನ ದೇವಸ್ಥಾನಕ್ಕೆ ಹೋಗಿದ್ದ ಸಿ.ಟಿ.ರವಿಯವರು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಬಾಯಿ ಬಡಿದುಕೊಳ್ಳುತ್ತಿಲ್ಲವೇಕೆ? ಈಗ ದೇವಾಲಯ ಮೈಲಿಗೆಯಾಗಿಲ್ಲವೇ? ಗೋಮೂತ್ರ ಎರಚುವುದಿಲ್ಲವೇ?” ಎಂದು ಕೇಳಿದೆ.

ಇದನ್ನೂ ಓದಿರಿ: ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

“ದ್ವೇಷ ಕಾರುವುದನ್ನೇ ಧರ್ಮ ಎಂದುಕೊಂಡಿರುವ ಬಾಯಿಹರುಕ ಸಿ.ಟಿ.ರವಿಯವರು, ದೇವಸ್ಥಾನಕ್ಕೆ ಹೋಗುವ ಮುನ್ನ ತಿಂದ ಮಾಂಸದ ಮೆನು ಏನು ಬಿಜೆಪಿ ಕರ್ನಾಟಕ? ಫಿಶ್ ಫ್ರೈ? ಚಿಕನ್ ಕಬಾಬ್? ಲೆಗ್ ಪೀಸ್? ಮಟನ್ ಕುರ್ಮಾ? ಚಿಕನ್ ಟಿಕ್ಕಾ? ನಾಟಿಕೋಳಿ ಸಾಂಬಾರ್? ಫೋರ್ಕ್ ಫ್ರೈ? ಬೀಫ್ ಬಿರಿಯಾನಿ? ಸಿಟಿ ರವಿ ತಟ್ಟೆಯನ್ನು ಬಿಜೆಪಿಗರು ಇಣುಕಿ ನೋಡಿಲ್ಲವೇ?” ಎಂದು ಸರಣಿ ಪ್ರಶ್ನೆಗಳನ್ನು ಎಸೆದಿದೆ.

ಇದು ವಿವಾದವೇ ಅಲ್ಲ: ಸಿದ್ದರಾಮಯ್ಯ

ಈ ವಿಚಾರವಾಗಿ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, “ದೇವಸ್ಥಾನಕ್ಕೆ ಹೋಗೋದು, ಹೋಗದೇ ಇರುವುದು, ಮಾಂಸ ತಿನ್ನೊದು ತಿನ್ನದೇ ಇರುವದು ವಿವಾದವೇ ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಜನರ ಸಮಸ್ಯೆಗಳು, ನಾಡಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ನಾನು ಈಗಾಗಲೇ ಬಿಜೆಪಿಗರಿಗೆ ನಾವು ಚರ್ಚೆ ಮಾಡಲು ತಯಾರಿದ್ದೇವೆ. ನೀವು ತಯಾರಿದ್ದೀರಾ ಎಂದು ಕೇಳಿದ್ದೇನೆ” ಎಂದಿದ್ದಾರೆ.

“ಈ ನಾಡಿನ ರೈತರಿಗೆ, ಬಡವರಿಗೆ ಏನು ಮಾಡಿದ್ದಾರೆ ಅಂತ ಬಿಜೆಪಿಯವರು ಹೇಳಬೇಕು. ಜನರ ಸಮಸ್ಯೆಗಳನ್ನು ಬಗೆ ಹರಿಸುವದನ್ನು ಬಿಟ್ಟು, ನಾಮ(ತಿಲಕ) ಹಾಕಿಕೊಳ್ಳುವದು, ದೇವಸ್ಥಾನಕ್ಕೆ ಹೋಗುವದು, ಟಿಪ್ಪು ಸುಲ್ತಾನ್, ಗಾಂಧಿ, ಗೋಡೆ, ಸಾವರ್ಕಕರ್‌ ಬಗ್ಗೆ ಮಾತನಾಡುವದು- ಇವೆಲ್ಲ ರಿಲೆವೆಂಟ್ ವಿಷಯಗಳಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...