Homeಮುಖಪುಟಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಇದು ಸರಿಯಲ್ಲ ಎಂದು ಸಚಿವ ಸುಧಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

- Advertisement -
- Advertisement -

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿರುವ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದಾರೆ.

ಮುಂದುವರಿದು ಸಣ್ಣ ಕುಟುಂಬಗಳು ಮತ್ತು ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾದ ಕಾರಣಕ್ಕೆ ಹೀಗಾಗಿದೆ. ಆದರೆ ಎಲ್ಲ ಮಹಿಳೆಯರು ಹಾಗಿಲ್ಲ. ಇಂದಿಗೂ ಹೆಚ್ಚು ಭಾರತೀಯ ಮಹಿಳೆಯರು ಕುಟುಂಬದ ಮೇಲೆ ನಂಬಿಕೆಯಿಟ್ಟಿದ್ದಾರೆ. ನಮ್ಮ ದೇಶ ಅಮೆರಿಕ ಅಥವಾ ಇಂಗ್ಲೆಂಡ್‌ ರೀತಿಯದ್ದಲ್ಲ… ಇದರ ಬಗ್ಗೆ ನಾವು ಆಲೋಚಿಸಬೇಕಾಗಿದೆ ಎಂದಿದ್ದಾರೆ.

ಅಕ್ಟೋಬರ್ 10 ರಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ. ಭಾರತೀಯ ಸಮಾಜದ ಮೇಲೆ ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾಗಿದೆ. ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದಾರೆ.’’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

ಸುಧಾಕರ್‌ರವರ ಹೇಳಿಕೆಗೆ ಸಮಾಜದ ಎಲ್ಲಾ ವಿಭಾಗಗಳಿಂದ ವ್ಯಾಪಕ ಟೀಕೆ ಕೇಳಿಬಂದಿತ್ತು. ಮಹಿಳೆಯರು ಹೀಗೆ ಇರಬೇಕೆಂದು ನಿರ್ಧರಿಸುವ ಹಕ್ಕು ನಿಮಗೆ ಕೊಟ್ಟವರ್ಯಾರು ಎಂದು ಕಿಡಿಕಾರಿದ್ದರು. ತದನಂತರ ಸ್ಪಷ್ಟೀಕರಣ ನೀಡಿದ್ದ ಸಚಿವರು, “ನಾವು ಇಂದು ಎದುರಿಸುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಮ್ಮ ಭಾರತೀಯ ಕುಟುಂಬ ಮೌಲ್ಯ ವ್ಯವಸ್ಥೆಯು ಹೇಗೆ ಪರಿಹರಿಸಬಹುದು ಎಂಬುದರ ಬಗೆ ಮಾತನಾಡಲು ಬಯಸಿದ್ದೆ. ಮಹಿಳೆಯರನ್ನು ಪ್ರತ್ಯೇಕಗೊಳಿಸುವ ಉದ್ದೇಶ ಹೊಂದಿರಲಿಲ್ಲ” ಎಂದಿದ್ದರು.

ಸಚಿವರು ತಮ್ಮ ಸ್ತ್ರೀದ್ವೇ‍ಷದ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಬೇಕೆಂದು ಸ್ವರಾಜ್ಯ ಇಂಡಿಯಾ ಪಕ್ಷ ಒತ್ತಾಯಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಸ್ವರಾಜ್ ಇಂಡಿಯಾ ಬೆಂಗಳೂರು ಅಧ್ಯಕ್ಷೆ ನಿಶಾ ಗೂಳೂರು, “ಸಚಿವರ ಹೇಳಿಕೆ ಸತ್ಯದಿಂದ ಕೂಡಿಲ್ಲ. ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸುವಂತಿದೆ. ಅವರು ಮಹಿಳೆಯರನ್ನು ಮತ್ತು ಅವರ ಸಂತಾನೋತ್ಪತ್ತಿಯ ಹಕ್ಕುಗಳನ್ನು ಹೇಗೆ ನೋಡುತ್ತಾರೆ ಎಂಬುದರ ಪ್ರತಿಬಿಂಬ ಆ ಹೇಳಿಕೆ” ಎಂದು ವಿ‍‍ಷಾಧ ವ್ಯಕ್ತಪಡಿಸಿದ್ದಾರೆ.

ರಾಜಕಾರಣಿಗಳ ಅತ್ಯಂತ ಅಸಹ್ಯಕರವಾದ ಸ್ತ್ರೀದ್ವೇಷ, ಲೈಂಗಿಕತೆಯ ಹೇಳಿಕೆಗಳನ್ನು ನೀಡಿದಾಗ ಅದರ ವಿರುದ್ಧ ಹೋರಾಡುವುದು ಬಹಳ ಮುಖ್ಯ, ಇದರಿಂದ ಮಹಿಳೆಯರ ದನಿ ಅಡಗಿಸಲು ಸಾಧ್ಯವಿಲ್ಲ. ಸ್ವರಾಜ್ ಇಂಡಿಯಾ ಮಹಿಳಾ ವಿರೋಧಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಈ ಸಚಿವರು ತಕ್ಷಣ ಸಾರ್ವಜನಿಕ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಸಚಿವರ ಹೇಳಿಕೆಗೆ ತೀವ್ರ ವಿರೋಧಗಳು ದಾಖಲಾಗಿವೆ.


ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...