Homeಮುಖಪುಟಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಇದು ಸರಿಯಲ್ಲ ಎಂದು ಸಚಿವ ಸುಧಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

- Advertisement -
- Advertisement -

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿರುವ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದಾರೆ.

ಮುಂದುವರಿದು ಸಣ್ಣ ಕುಟುಂಬಗಳು ಮತ್ತು ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾದ ಕಾರಣಕ್ಕೆ ಹೀಗಾಗಿದೆ. ಆದರೆ ಎಲ್ಲ ಮಹಿಳೆಯರು ಹಾಗಿಲ್ಲ. ಇಂದಿಗೂ ಹೆಚ್ಚು ಭಾರತೀಯ ಮಹಿಳೆಯರು ಕುಟುಂಬದ ಮೇಲೆ ನಂಬಿಕೆಯಿಟ್ಟಿದ್ದಾರೆ. ನಮ್ಮ ದೇಶ ಅಮೆರಿಕ ಅಥವಾ ಇಂಗ್ಲೆಂಡ್‌ ರೀತಿಯದ್ದಲ್ಲ… ಇದರ ಬಗ್ಗೆ ನಾವು ಆಲೋಚಿಸಬೇಕಾಗಿದೆ ಎಂದಿದ್ದಾರೆ.

ಅಕ್ಟೋಬರ್ 10 ರಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ. ಭಾರತೀಯ ಸಮಾಜದ ಮೇಲೆ ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾಗಿದೆ. ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದಾರೆ.’’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

ಸುಧಾಕರ್‌ರವರ ಹೇಳಿಕೆಗೆ ಸಮಾಜದ ಎಲ್ಲಾ ವಿಭಾಗಗಳಿಂದ ವ್ಯಾಪಕ ಟೀಕೆ ಕೇಳಿಬಂದಿತ್ತು. ಮಹಿಳೆಯರು ಹೀಗೆ ಇರಬೇಕೆಂದು ನಿರ್ಧರಿಸುವ ಹಕ್ಕು ನಿಮಗೆ ಕೊಟ್ಟವರ್ಯಾರು ಎಂದು ಕಿಡಿಕಾರಿದ್ದರು. ತದನಂತರ ಸ್ಪಷ್ಟೀಕರಣ ನೀಡಿದ್ದ ಸಚಿವರು, “ನಾವು ಇಂದು ಎದುರಿಸುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಮ್ಮ ಭಾರತೀಯ ಕುಟುಂಬ ಮೌಲ್ಯ ವ್ಯವಸ್ಥೆಯು ಹೇಗೆ ಪರಿಹರಿಸಬಹುದು ಎಂಬುದರ ಬಗೆ ಮಾತನಾಡಲು ಬಯಸಿದ್ದೆ. ಮಹಿಳೆಯರನ್ನು ಪ್ರತ್ಯೇಕಗೊಳಿಸುವ ಉದ್ದೇಶ ಹೊಂದಿರಲಿಲ್ಲ” ಎಂದಿದ್ದರು.

ಸಚಿವರು ತಮ್ಮ ಸ್ತ್ರೀದ್ವೇ‍ಷದ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಬೇಕೆಂದು ಸ್ವರಾಜ್ಯ ಇಂಡಿಯಾ ಪಕ್ಷ ಒತ್ತಾಯಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಸ್ವರಾಜ್ ಇಂಡಿಯಾ ಬೆಂಗಳೂರು ಅಧ್ಯಕ್ಷೆ ನಿಶಾ ಗೂಳೂರು, “ಸಚಿವರ ಹೇಳಿಕೆ ಸತ್ಯದಿಂದ ಕೂಡಿಲ್ಲ. ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸುವಂತಿದೆ. ಅವರು ಮಹಿಳೆಯರನ್ನು ಮತ್ತು ಅವರ ಸಂತಾನೋತ್ಪತ್ತಿಯ ಹಕ್ಕುಗಳನ್ನು ಹೇಗೆ ನೋಡುತ್ತಾರೆ ಎಂಬುದರ ಪ್ರತಿಬಿಂಬ ಆ ಹೇಳಿಕೆ” ಎಂದು ವಿ‍‍ಷಾಧ ವ್ಯಕ್ತಪಡಿಸಿದ್ದಾರೆ.

ರಾಜಕಾರಣಿಗಳ ಅತ್ಯಂತ ಅಸಹ್ಯಕರವಾದ ಸ್ತ್ರೀದ್ವೇಷ, ಲೈಂಗಿಕತೆಯ ಹೇಳಿಕೆಗಳನ್ನು ನೀಡಿದಾಗ ಅದರ ವಿರುದ್ಧ ಹೋರಾಡುವುದು ಬಹಳ ಮುಖ್ಯ, ಇದರಿಂದ ಮಹಿಳೆಯರ ದನಿ ಅಡಗಿಸಲು ಸಾಧ್ಯವಿಲ್ಲ. ಸ್ವರಾಜ್ ಇಂಡಿಯಾ ಮಹಿಳಾ ವಿರೋಧಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಈ ಸಚಿವರು ತಕ್ಷಣ ಸಾರ್ವಜನಿಕ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಸಚಿವರ ಹೇಳಿಕೆಗೆ ತೀವ್ರ ವಿರೋಧಗಳು ದಾಖಲಾಗಿವೆ.


ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...