Homeಮುಖಪುಟಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಇದು ಸರಿಯಲ್ಲ ಎಂದು ಸಚಿವ ಸುಧಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

- Advertisement -
- Advertisement -

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿರುವ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದಾರೆ.

ಮುಂದುವರಿದು ಸಣ್ಣ ಕುಟುಂಬಗಳು ಮತ್ತು ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾದ ಕಾರಣಕ್ಕೆ ಹೀಗಾಗಿದೆ. ಆದರೆ ಎಲ್ಲ ಮಹಿಳೆಯರು ಹಾಗಿಲ್ಲ. ಇಂದಿಗೂ ಹೆಚ್ಚು ಭಾರತೀಯ ಮಹಿಳೆಯರು ಕುಟುಂಬದ ಮೇಲೆ ನಂಬಿಕೆಯಿಟ್ಟಿದ್ದಾರೆ. ನಮ್ಮ ದೇಶ ಅಮೆರಿಕ ಅಥವಾ ಇಂಗ್ಲೆಂಡ್‌ ರೀತಿಯದ್ದಲ್ಲ… ಇದರ ಬಗ್ಗೆ ನಾವು ಆಲೋಚಿಸಬೇಕಾಗಿದೆ ಎಂದಿದ್ದಾರೆ.

ಅಕ್ಟೋಬರ್ 10 ರಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ. ಭಾರತೀಯ ಸಮಾಜದ ಮೇಲೆ ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾಗಿದೆ. ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದಾರೆ.’’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

ಸುಧಾಕರ್‌ರವರ ಹೇಳಿಕೆಗೆ ಸಮಾಜದ ಎಲ್ಲಾ ವಿಭಾಗಗಳಿಂದ ವ್ಯಾಪಕ ಟೀಕೆ ಕೇಳಿಬಂದಿತ್ತು. ಮಹಿಳೆಯರು ಹೀಗೆ ಇರಬೇಕೆಂದು ನಿರ್ಧರಿಸುವ ಹಕ್ಕು ನಿಮಗೆ ಕೊಟ್ಟವರ್ಯಾರು ಎಂದು ಕಿಡಿಕಾರಿದ್ದರು. ತದನಂತರ ಸ್ಪಷ್ಟೀಕರಣ ನೀಡಿದ್ದ ಸಚಿವರು, “ನಾವು ಇಂದು ಎದುರಿಸುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಮ್ಮ ಭಾರತೀಯ ಕುಟುಂಬ ಮೌಲ್ಯ ವ್ಯವಸ್ಥೆಯು ಹೇಗೆ ಪರಿಹರಿಸಬಹುದು ಎಂಬುದರ ಬಗೆ ಮಾತನಾಡಲು ಬಯಸಿದ್ದೆ. ಮಹಿಳೆಯರನ್ನು ಪ್ರತ್ಯೇಕಗೊಳಿಸುವ ಉದ್ದೇಶ ಹೊಂದಿರಲಿಲ್ಲ” ಎಂದಿದ್ದರು.

ಸಚಿವರು ತಮ್ಮ ಸ್ತ್ರೀದ್ವೇ‍ಷದ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಬೇಕೆಂದು ಸ್ವರಾಜ್ಯ ಇಂಡಿಯಾ ಪಕ್ಷ ಒತ್ತಾಯಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಸ್ವರಾಜ್ ಇಂಡಿಯಾ ಬೆಂಗಳೂರು ಅಧ್ಯಕ್ಷೆ ನಿಶಾ ಗೂಳೂರು, “ಸಚಿವರ ಹೇಳಿಕೆ ಸತ್ಯದಿಂದ ಕೂಡಿಲ್ಲ. ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸುವಂತಿದೆ. ಅವರು ಮಹಿಳೆಯರನ್ನು ಮತ್ತು ಅವರ ಸಂತಾನೋತ್ಪತ್ತಿಯ ಹಕ್ಕುಗಳನ್ನು ಹೇಗೆ ನೋಡುತ್ತಾರೆ ಎಂಬುದರ ಪ್ರತಿಬಿಂಬ ಆ ಹೇಳಿಕೆ” ಎಂದು ವಿ‍‍ಷಾಧ ವ್ಯಕ್ತಪಡಿಸಿದ್ದಾರೆ.

ರಾಜಕಾರಣಿಗಳ ಅತ್ಯಂತ ಅಸಹ್ಯಕರವಾದ ಸ್ತ್ರೀದ್ವೇಷ, ಲೈಂಗಿಕತೆಯ ಹೇಳಿಕೆಗಳನ್ನು ನೀಡಿದಾಗ ಅದರ ವಿರುದ್ಧ ಹೋರಾಡುವುದು ಬಹಳ ಮುಖ್ಯ, ಇದರಿಂದ ಮಹಿಳೆಯರ ದನಿ ಅಡಗಿಸಲು ಸಾಧ್ಯವಿಲ್ಲ. ಸ್ವರಾಜ್ ಇಂಡಿಯಾ ಮಹಿಳಾ ವಿರೋಧಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಈ ಸಚಿವರು ತಕ್ಷಣ ಸಾರ್ವಜನಿಕ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಸಚಿವರ ಹೇಳಿಕೆಗೆ ತೀವ್ರ ವಿರೋಧಗಳು ದಾಖಲಾಗಿವೆ.


ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ...

0
ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು...