Homeಮುಖಪುಟಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಇದು ಸರಿಯಲ್ಲ ಎಂದು ಸಚಿವ ಸುಧಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

- Advertisement -
- Advertisement -

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿರುವ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದಾರೆ.

ಮುಂದುವರಿದು ಸಣ್ಣ ಕುಟುಂಬಗಳು ಮತ್ತು ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾದ ಕಾರಣಕ್ಕೆ ಹೀಗಾಗಿದೆ. ಆದರೆ ಎಲ್ಲ ಮಹಿಳೆಯರು ಹಾಗಿಲ್ಲ. ಇಂದಿಗೂ ಹೆಚ್ಚು ಭಾರತೀಯ ಮಹಿಳೆಯರು ಕುಟುಂಬದ ಮೇಲೆ ನಂಬಿಕೆಯಿಟ್ಟಿದ್ದಾರೆ. ನಮ್ಮ ದೇಶ ಅಮೆರಿಕ ಅಥವಾ ಇಂಗ್ಲೆಂಡ್‌ ರೀತಿಯದ್ದಲ್ಲ… ಇದರ ಬಗ್ಗೆ ನಾವು ಆಲೋಚಿಸಬೇಕಾಗಿದೆ ಎಂದಿದ್ದಾರೆ.

ಅಕ್ಟೋಬರ್ 10 ರಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ. ಭಾರತೀಯ ಸಮಾಜದ ಮೇಲೆ ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾಗಿದೆ. ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದಾರೆ.’’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

ಸುಧಾಕರ್‌ರವರ ಹೇಳಿಕೆಗೆ ಸಮಾಜದ ಎಲ್ಲಾ ವಿಭಾಗಗಳಿಂದ ವ್ಯಾಪಕ ಟೀಕೆ ಕೇಳಿಬಂದಿತ್ತು. ಮಹಿಳೆಯರು ಹೀಗೆ ಇರಬೇಕೆಂದು ನಿರ್ಧರಿಸುವ ಹಕ್ಕು ನಿಮಗೆ ಕೊಟ್ಟವರ್ಯಾರು ಎಂದು ಕಿಡಿಕಾರಿದ್ದರು. ತದನಂತರ ಸ್ಪಷ್ಟೀಕರಣ ನೀಡಿದ್ದ ಸಚಿವರು, “ನಾವು ಇಂದು ಎದುರಿಸುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಮ್ಮ ಭಾರತೀಯ ಕುಟುಂಬ ಮೌಲ್ಯ ವ್ಯವಸ್ಥೆಯು ಹೇಗೆ ಪರಿಹರಿಸಬಹುದು ಎಂಬುದರ ಬಗೆ ಮಾತನಾಡಲು ಬಯಸಿದ್ದೆ. ಮಹಿಳೆಯರನ್ನು ಪ್ರತ್ಯೇಕಗೊಳಿಸುವ ಉದ್ದೇಶ ಹೊಂದಿರಲಿಲ್ಲ” ಎಂದಿದ್ದರು.

ಸಚಿವರು ತಮ್ಮ ಸ್ತ್ರೀದ್ವೇ‍ಷದ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಬೇಕೆಂದು ಸ್ವರಾಜ್ಯ ಇಂಡಿಯಾ ಪಕ್ಷ ಒತ್ತಾಯಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಸ್ವರಾಜ್ ಇಂಡಿಯಾ ಬೆಂಗಳೂರು ಅಧ್ಯಕ್ಷೆ ನಿಶಾ ಗೂಳೂರು, “ಸಚಿವರ ಹೇಳಿಕೆ ಸತ್ಯದಿಂದ ಕೂಡಿಲ್ಲ. ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸುವಂತಿದೆ. ಅವರು ಮಹಿಳೆಯರನ್ನು ಮತ್ತು ಅವರ ಸಂತಾನೋತ್ಪತ್ತಿಯ ಹಕ್ಕುಗಳನ್ನು ಹೇಗೆ ನೋಡುತ್ತಾರೆ ಎಂಬುದರ ಪ್ರತಿಬಿಂಬ ಆ ಹೇಳಿಕೆ” ಎಂದು ವಿ‍‍ಷಾಧ ವ್ಯಕ್ತಪಡಿಸಿದ್ದಾರೆ.

ರಾಜಕಾರಣಿಗಳ ಅತ್ಯಂತ ಅಸಹ್ಯಕರವಾದ ಸ್ತ್ರೀದ್ವೇಷ, ಲೈಂಗಿಕತೆಯ ಹೇಳಿಕೆಗಳನ್ನು ನೀಡಿದಾಗ ಅದರ ವಿರುದ್ಧ ಹೋರಾಡುವುದು ಬಹಳ ಮುಖ್ಯ, ಇದರಿಂದ ಮಹಿಳೆಯರ ದನಿ ಅಡಗಿಸಲು ಸಾಧ್ಯವಿಲ್ಲ. ಸ್ವರಾಜ್ ಇಂಡಿಯಾ ಮಹಿಳಾ ವಿರೋಧಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಈ ಸಚಿವರು ತಕ್ಷಣ ಸಾರ್ವಜನಿಕ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಸಚಿವರ ಹೇಳಿಕೆಗೆ ತೀವ್ರ ವಿರೋಧಗಳು ದಾಖಲಾಗಿವೆ.


ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...