Homeಮುಖಪುಟಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಇದು ಸರಿಯಲ್ಲ ಎಂದು ಸಚಿವ ಸುಧಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

- Advertisement -
- Advertisement -

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿರುವ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದಾರೆ.

ಮುಂದುವರಿದು ಸಣ್ಣ ಕುಟುಂಬಗಳು ಮತ್ತು ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾದ ಕಾರಣಕ್ಕೆ ಹೀಗಾಗಿದೆ. ಆದರೆ ಎಲ್ಲ ಮಹಿಳೆಯರು ಹಾಗಿಲ್ಲ. ಇಂದಿಗೂ ಹೆಚ್ಚು ಭಾರತೀಯ ಮಹಿಳೆಯರು ಕುಟುಂಬದ ಮೇಲೆ ನಂಬಿಕೆಯಿಟ್ಟಿದ್ದಾರೆ. ನಮ್ಮ ದೇಶ ಅಮೆರಿಕ ಅಥವಾ ಇಂಗ್ಲೆಂಡ್‌ ರೀತಿಯದ್ದಲ್ಲ… ಇದರ ಬಗ್ಗೆ ನಾವು ಆಲೋಚಿಸಬೇಕಾಗಿದೆ ಎಂದಿದ್ದಾರೆ.

ಅಕ್ಟೋಬರ್ 10 ರಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ. ಭಾರತೀಯ ಸಮಾಜದ ಮೇಲೆ ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾಗಿದೆ. ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದಾರೆ.’’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

ಸುಧಾಕರ್‌ರವರ ಹೇಳಿಕೆಗೆ ಸಮಾಜದ ಎಲ್ಲಾ ವಿಭಾಗಗಳಿಂದ ವ್ಯಾಪಕ ಟೀಕೆ ಕೇಳಿಬಂದಿತ್ತು. ಮಹಿಳೆಯರು ಹೀಗೆ ಇರಬೇಕೆಂದು ನಿರ್ಧರಿಸುವ ಹಕ್ಕು ನಿಮಗೆ ಕೊಟ್ಟವರ್ಯಾರು ಎಂದು ಕಿಡಿಕಾರಿದ್ದರು. ತದನಂತರ ಸ್ಪಷ್ಟೀಕರಣ ನೀಡಿದ್ದ ಸಚಿವರು, “ನಾವು ಇಂದು ಎದುರಿಸುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಮ್ಮ ಭಾರತೀಯ ಕುಟುಂಬ ಮೌಲ್ಯ ವ್ಯವಸ್ಥೆಯು ಹೇಗೆ ಪರಿಹರಿಸಬಹುದು ಎಂಬುದರ ಬಗೆ ಮಾತನಾಡಲು ಬಯಸಿದ್ದೆ. ಮಹಿಳೆಯರನ್ನು ಪ್ರತ್ಯೇಕಗೊಳಿಸುವ ಉದ್ದೇಶ ಹೊಂದಿರಲಿಲ್ಲ” ಎಂದಿದ್ದರು.

ಸಚಿವರು ತಮ್ಮ ಸ್ತ್ರೀದ್ವೇ‍ಷದ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಬೇಕೆಂದು ಸ್ವರಾಜ್ಯ ಇಂಡಿಯಾ ಪಕ್ಷ ಒತ್ತಾಯಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಸ್ವರಾಜ್ ಇಂಡಿಯಾ ಬೆಂಗಳೂರು ಅಧ್ಯಕ್ಷೆ ನಿಶಾ ಗೂಳೂರು, “ಸಚಿವರ ಹೇಳಿಕೆ ಸತ್ಯದಿಂದ ಕೂಡಿಲ್ಲ. ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸುವಂತಿದೆ. ಅವರು ಮಹಿಳೆಯರನ್ನು ಮತ್ತು ಅವರ ಸಂತಾನೋತ್ಪತ್ತಿಯ ಹಕ್ಕುಗಳನ್ನು ಹೇಗೆ ನೋಡುತ್ತಾರೆ ಎಂಬುದರ ಪ್ರತಿಬಿಂಬ ಆ ಹೇಳಿಕೆ” ಎಂದು ವಿ‍‍ಷಾಧ ವ್ಯಕ್ತಪಡಿಸಿದ್ದಾರೆ.

ರಾಜಕಾರಣಿಗಳ ಅತ್ಯಂತ ಅಸಹ್ಯಕರವಾದ ಸ್ತ್ರೀದ್ವೇಷ, ಲೈಂಗಿಕತೆಯ ಹೇಳಿಕೆಗಳನ್ನು ನೀಡಿದಾಗ ಅದರ ವಿರುದ್ಧ ಹೋರಾಡುವುದು ಬಹಳ ಮುಖ್ಯ, ಇದರಿಂದ ಮಹಿಳೆಯರ ದನಿ ಅಡಗಿಸಲು ಸಾಧ್ಯವಿಲ್ಲ. ಸ್ವರಾಜ್ ಇಂಡಿಯಾ ಮಹಿಳಾ ವಿರೋಧಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಈ ಸಚಿವರು ತಕ್ಷಣ ಸಾರ್ವಜನಿಕ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಸಚಿವರ ಹೇಳಿಕೆಗೆ ತೀವ್ರ ವಿರೋಧಗಳು ದಾಖಲಾಗಿವೆ.


ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...