Homeಮುಖಪುಟಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಇದು ಸರಿಯಲ್ಲ ಎಂದು ಸಚಿವ ಸುಧಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

- Advertisement -
- Advertisement -

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿರುವ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದಾರೆ.

ಮುಂದುವರಿದು ಸಣ್ಣ ಕುಟುಂಬಗಳು ಮತ್ತು ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾದ ಕಾರಣಕ್ಕೆ ಹೀಗಾಗಿದೆ. ಆದರೆ ಎಲ್ಲ ಮಹಿಳೆಯರು ಹಾಗಿಲ್ಲ. ಇಂದಿಗೂ ಹೆಚ್ಚು ಭಾರತೀಯ ಮಹಿಳೆಯರು ಕುಟುಂಬದ ಮೇಲೆ ನಂಬಿಕೆಯಿಟ್ಟಿದ್ದಾರೆ. ನಮ್ಮ ದೇಶ ಅಮೆರಿಕ ಅಥವಾ ಇಂಗ್ಲೆಂಡ್‌ ರೀತಿಯದ್ದಲ್ಲ… ಇದರ ಬಗ್ಗೆ ನಾವು ಆಲೋಚಿಸಬೇಕಾಗಿದೆ ಎಂದಿದ್ದಾರೆ.

ಅಕ್ಟೋಬರ್ 10 ರಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ. ಭಾರತೀಯ ಸಮಾಜದ ಮೇಲೆ ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾಗಿದೆ. ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದಾರೆ.’’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

ಸುಧಾಕರ್‌ರವರ ಹೇಳಿಕೆಗೆ ಸಮಾಜದ ಎಲ್ಲಾ ವಿಭಾಗಗಳಿಂದ ವ್ಯಾಪಕ ಟೀಕೆ ಕೇಳಿಬಂದಿತ್ತು. ಮಹಿಳೆಯರು ಹೀಗೆ ಇರಬೇಕೆಂದು ನಿರ್ಧರಿಸುವ ಹಕ್ಕು ನಿಮಗೆ ಕೊಟ್ಟವರ್ಯಾರು ಎಂದು ಕಿಡಿಕಾರಿದ್ದರು. ತದನಂತರ ಸ್ಪಷ್ಟೀಕರಣ ನೀಡಿದ್ದ ಸಚಿವರು, “ನಾವು ಇಂದು ಎದುರಿಸುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಮ್ಮ ಭಾರತೀಯ ಕುಟುಂಬ ಮೌಲ್ಯ ವ್ಯವಸ್ಥೆಯು ಹೇಗೆ ಪರಿಹರಿಸಬಹುದು ಎಂಬುದರ ಬಗೆ ಮಾತನಾಡಲು ಬಯಸಿದ್ದೆ. ಮಹಿಳೆಯರನ್ನು ಪ್ರತ್ಯೇಕಗೊಳಿಸುವ ಉದ್ದೇಶ ಹೊಂದಿರಲಿಲ್ಲ” ಎಂದಿದ್ದರು.

ಸಚಿವರು ತಮ್ಮ ಸ್ತ್ರೀದ್ವೇ‍ಷದ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಬೇಕೆಂದು ಸ್ವರಾಜ್ಯ ಇಂಡಿಯಾ ಪಕ್ಷ ಒತ್ತಾಯಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಸ್ವರಾಜ್ ಇಂಡಿಯಾ ಬೆಂಗಳೂರು ಅಧ್ಯಕ್ಷೆ ನಿಶಾ ಗೂಳೂರು, “ಸಚಿವರ ಹೇಳಿಕೆ ಸತ್ಯದಿಂದ ಕೂಡಿಲ್ಲ. ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸುವಂತಿದೆ. ಅವರು ಮಹಿಳೆಯರನ್ನು ಮತ್ತು ಅವರ ಸಂತಾನೋತ್ಪತ್ತಿಯ ಹಕ್ಕುಗಳನ್ನು ಹೇಗೆ ನೋಡುತ್ತಾರೆ ಎಂಬುದರ ಪ್ರತಿಬಿಂಬ ಆ ಹೇಳಿಕೆ” ಎಂದು ವಿ‍‍ಷಾಧ ವ್ಯಕ್ತಪಡಿಸಿದ್ದಾರೆ.

ರಾಜಕಾರಣಿಗಳ ಅತ್ಯಂತ ಅಸಹ್ಯಕರವಾದ ಸ್ತ್ರೀದ್ವೇಷ, ಲೈಂಗಿಕತೆಯ ಹೇಳಿಕೆಗಳನ್ನು ನೀಡಿದಾಗ ಅದರ ವಿರುದ್ಧ ಹೋರಾಡುವುದು ಬಹಳ ಮುಖ್ಯ, ಇದರಿಂದ ಮಹಿಳೆಯರ ದನಿ ಅಡಗಿಸಲು ಸಾಧ್ಯವಿಲ್ಲ. ಸ್ವರಾಜ್ ಇಂಡಿಯಾ ಮಹಿಳಾ ವಿರೋಧಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಈ ಸಚಿವರು ತಕ್ಷಣ ಸಾರ್ವಜನಿಕ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಸಚಿವರ ಹೇಳಿಕೆಗೆ ತೀವ್ರ ವಿರೋಧಗಳು ದಾಖಲಾಗಿವೆ.


ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....