Homeಅಂತರಾಷ್ಟ್ರೀಯಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

"ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು"

- Advertisement -
- Advertisement -

ಕೊರೊನ ವೈರಸ್‌ ಸೋಕಿನಿಂದಾಗಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಪ್ರಾಣ ತೆತ್ತಿರುವ ಇಟಲಿಯ ನೆರವಿಗೆ ದ್ವೀಪ ರಾಷ್ಟ್ರವಾದ ಕ್ಯೂಬಾವು ಬಲಿಷ್ಠ ವೈದ್ಯರು ಮತ್ತು ದಾದಿಯರ ತಂಡವನ್ನು ಕಳುಹಿಸಿ ಕೊಟ್ಟಿದೆ.

ವೈರಸಿನಿಂದಾಗಿ ಅತ್ಯಂತ ಹಾನಿಗೊಳಗಾದ ಇಟಲಿಯ ಲೊಂಬಾರ್ಡಿಗೆ ಕೊರೊನ ವೈರಸ್‌ ವಿರುದ್ದ ಹೋರಾಡಲು ವೈದ್ಯರು ಮತ್ತು ದಾದಿಯರ ತಂಡವನ್ನು ತಕ್ಷಣ ಕಳಿಸಿಕೊಟ್ಟು ಸಹಾಯ ಮಾಡುವಂತೆ ಕೇಳಿದೆ ಎಂದು ಕ್ಯೂಬಾ ಭಾನುವಾರ ಪ್ರಕಟಿಸಿದೆ.

“ನಮಗೆಲ್ಲರಿಗೂ ಹೆದರಿಕೆಯಿದೆ. ಆದರೆ ನಮಗೆ ಒಂದು ಕ್ರಾಂತಿಕಾರಿ ಕರ್ತವ್ಯವಿದೆ, ಆದ್ದರಿಂದ ನಾವು ಭಯವನ್ನು ಬದಿಗೆ ಇಡುತ್ತೇವೆ” ಎಂದು 68 ವರ್ಷದ ತೀವ್ರ ನಿಗಾ ತಜ್ಞ ಲಿಯೊನಾರ್ಡೊ ಫರ್ನಾಂಡೀಸ್ ತಿಳಿಸಿದ್ದಾರೆ. 52 ವೈದ್ಯರ ಬಲಿಷ್ಠ ತಂಡದೊಂದಿಗೆ, ಕ್ಯೂಬಾ ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಇಟಲಿಗೆ ತುರ್ತು ದಳವನ್ನು ಕಳುಹಿಸಿದ್ದು ಇದೇ ಮೊದಲು.

ಕ್ಯೂಬಾ ತನ್ನ “ಬಿಳಿ ನಿಲುವಂಗಿಗಳ ಸೈನ್ಯವನ್ನು” 1959 ರ ಕ್ರಾಂತಿಯ ನಂತರ ಪ್ರಪಂಚದಾದ್ಯಂತದ ಹೆಚ್ಚಾಗಿ ಬಡ ದೇಶಗಳಲ್ಲಿ ವಿಪತ್ತು ಸ್ಥಳಗಳಿಗೆ ಕಳುಹಿಸಿದೆ. ಹೈಟಿಯಲ್ಲಿ ಕಾಲರಾ ವಿರುದ್ಧ ಮತ್ತು 2010 ರಲ್ಲಿ ಪಶ್ಚಿಮ ಆಫ್ರಿಕಾದ ಎಬೋಲಾ ವಿರುದ್ಧದ ಹೋರಾಟದಲ್ಲಿ ಕ್ಯೂಬಾದ ವೈದ್ಯರು ಮುಂಚೂಣಿಯಲ್ಲಿದ್ದರು.

ವಿದೇಶದಲ್ಲಿ ಹೊಸ ರೋಗ ಹರಡುವುದನ್ನು ಎದುರಿಸಲು ಕ್ಯೂಬಾ ಇತ್ತೀಚಿನ ದಿನಗಳಲ್ಲಿ ಕಳುಹಿಸಿದ ಆರನೇ ವೈದ್ಯಕೀಯ ತಂಡ ಇದಾಗಿದೆ. ಇದು ಸಮಾಜವಾದಿ ಮಿತ್ರರಾಷ್ಟ್ರಗಳಾದ ವೆನೆಜುವೆಲಾ, ನಿಕರಾಗುವಾ, ಜಮೈಕಾ, ಸುರಿನಾಮ್ ಮತ್ತು ಗ್ರೆನಡಾಗಳಿಗೆ ತನ್ನ ತುಕಡಿಗಳನ್ನು ಕಳುಹಿಸಿದೆ.

ತಂಡದ ಮುಖ್ಯಸ್ತರಾದ ಲಿಯೊನಾರ್ಡೊ ಫರ್ನಾಂಡೀಸ್ ತನ್ನ ತನ್ನ ತಂಡದ ನಿರ್ಗಮನಕ್ಕೆ ಮೊದಲು “ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು” ಎಂದು ಹೇಳಿದ್ದಾರೆ. ಎಬೊಲಾ ವಿರುದ್ಧದ ಹೋರಾಟದ ಸಮಯದಲ್ಲಿ ಲೈಬೀರಿಯಾ ಸೇರಿದಂತೆ ಇದು ಅವರ ಎಂಟನೇ ಅಂತರರಾಷ್ಟ್ರೀಯ ಮಿಷನ್ ಎಂದು ಫರ್ನಾಂಡೀಸ್ ಹೇಳಿದ್ದಾರೆ.

ಚೀನಾದಲ್ಲಿ ಹುಟ್ಟಿದ ಸಾಂಕ್ರಾಮಿಕ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶ ಇಟಲಿಯಗಿದೆ. ಅಲ್ಲಿ ಸಾವಿನ ಸಂಖ್ಯೆ ಶನಿವಾರ 546 ರಿಂದ 3,095 ಕ್ಕೆ ಏರಿದೆ ಎಂದು ತಿಳಿದುಬಂದಿದೆ.

ಬ್ರಿಟಿಷ್ ಕ್ರೂಸ್ ಹಡಗನ್ನು ದ್ವೀಪದಲ್ಲಿ ಕಟ್ಟಲು ಅನುಮತಿಸಿದ್ದಕ್ಕಾಗಿ ಮತ್ತು ವಿಮಾನದಲ್ಲಿ 600 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳಾಂತರಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಬ್ರಿಟನ್ ಕಳೆದ ವಾರ ಕ್ಯೂಬಾಗೆ ಧನ್ಯವಾದ ಅರ್ಪಿಸಿತ್ತು.

ವಿಪತ್ತು ಸನ್ನದ್ಧತೆಗೆ ಹೆಸರುವಾಸಿಯಾದ ಕ್ಯೂಬಾ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ತನ್ನ ದೇಶದಲ್ಲಿಯೂ ಅಗತ್ಯ ಕ್ರಮಗಳನ್ನು ಹೆಚ್ಚಿಸುತ್ತಿದೆ. ಈವರೆಗೆ ಅಲ್ಲಿ ಇಪ್ಪತ್ತೈದು ಪ್ರಕರಣಗಳು ದೃಡಪಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...