Homeಅಂತರಾಷ್ಟ್ರೀಯಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

"ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು"

- Advertisement -
- Advertisement -

ಕೊರೊನ ವೈರಸ್‌ ಸೋಕಿನಿಂದಾಗಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಪ್ರಾಣ ತೆತ್ತಿರುವ ಇಟಲಿಯ ನೆರವಿಗೆ ದ್ವೀಪ ರಾಷ್ಟ್ರವಾದ ಕ್ಯೂಬಾವು ಬಲಿಷ್ಠ ವೈದ್ಯರು ಮತ್ತು ದಾದಿಯರ ತಂಡವನ್ನು ಕಳುಹಿಸಿ ಕೊಟ್ಟಿದೆ.

ವೈರಸಿನಿಂದಾಗಿ ಅತ್ಯಂತ ಹಾನಿಗೊಳಗಾದ ಇಟಲಿಯ ಲೊಂಬಾರ್ಡಿಗೆ ಕೊರೊನ ವೈರಸ್‌ ವಿರುದ್ದ ಹೋರಾಡಲು ವೈದ್ಯರು ಮತ್ತು ದಾದಿಯರ ತಂಡವನ್ನು ತಕ್ಷಣ ಕಳಿಸಿಕೊಟ್ಟು ಸಹಾಯ ಮಾಡುವಂತೆ ಕೇಳಿದೆ ಎಂದು ಕ್ಯೂಬಾ ಭಾನುವಾರ ಪ್ರಕಟಿಸಿದೆ.

“ನಮಗೆಲ್ಲರಿಗೂ ಹೆದರಿಕೆಯಿದೆ. ಆದರೆ ನಮಗೆ ಒಂದು ಕ್ರಾಂತಿಕಾರಿ ಕರ್ತವ್ಯವಿದೆ, ಆದ್ದರಿಂದ ನಾವು ಭಯವನ್ನು ಬದಿಗೆ ಇಡುತ್ತೇವೆ” ಎಂದು 68 ವರ್ಷದ ತೀವ್ರ ನಿಗಾ ತಜ್ಞ ಲಿಯೊನಾರ್ಡೊ ಫರ್ನಾಂಡೀಸ್ ತಿಳಿಸಿದ್ದಾರೆ. 52 ವೈದ್ಯರ ಬಲಿಷ್ಠ ತಂಡದೊಂದಿಗೆ, ಕ್ಯೂಬಾ ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಇಟಲಿಗೆ ತುರ್ತು ದಳವನ್ನು ಕಳುಹಿಸಿದ್ದು ಇದೇ ಮೊದಲು.

ಕ್ಯೂಬಾ ತನ್ನ “ಬಿಳಿ ನಿಲುವಂಗಿಗಳ ಸೈನ್ಯವನ್ನು” 1959 ರ ಕ್ರಾಂತಿಯ ನಂತರ ಪ್ರಪಂಚದಾದ್ಯಂತದ ಹೆಚ್ಚಾಗಿ ಬಡ ದೇಶಗಳಲ್ಲಿ ವಿಪತ್ತು ಸ್ಥಳಗಳಿಗೆ ಕಳುಹಿಸಿದೆ. ಹೈಟಿಯಲ್ಲಿ ಕಾಲರಾ ವಿರುದ್ಧ ಮತ್ತು 2010 ರಲ್ಲಿ ಪಶ್ಚಿಮ ಆಫ್ರಿಕಾದ ಎಬೋಲಾ ವಿರುದ್ಧದ ಹೋರಾಟದಲ್ಲಿ ಕ್ಯೂಬಾದ ವೈದ್ಯರು ಮುಂಚೂಣಿಯಲ್ಲಿದ್ದರು.

ವಿದೇಶದಲ್ಲಿ ಹೊಸ ರೋಗ ಹರಡುವುದನ್ನು ಎದುರಿಸಲು ಕ್ಯೂಬಾ ಇತ್ತೀಚಿನ ದಿನಗಳಲ್ಲಿ ಕಳುಹಿಸಿದ ಆರನೇ ವೈದ್ಯಕೀಯ ತಂಡ ಇದಾಗಿದೆ. ಇದು ಸಮಾಜವಾದಿ ಮಿತ್ರರಾಷ್ಟ್ರಗಳಾದ ವೆನೆಜುವೆಲಾ, ನಿಕರಾಗುವಾ, ಜಮೈಕಾ, ಸುರಿನಾಮ್ ಮತ್ತು ಗ್ರೆನಡಾಗಳಿಗೆ ತನ್ನ ತುಕಡಿಗಳನ್ನು ಕಳುಹಿಸಿದೆ.

ತಂಡದ ಮುಖ್ಯಸ್ತರಾದ ಲಿಯೊನಾರ್ಡೊ ಫರ್ನಾಂಡೀಸ್ ತನ್ನ ತನ್ನ ತಂಡದ ನಿರ್ಗಮನಕ್ಕೆ ಮೊದಲು “ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು” ಎಂದು ಹೇಳಿದ್ದಾರೆ. ಎಬೊಲಾ ವಿರುದ್ಧದ ಹೋರಾಟದ ಸಮಯದಲ್ಲಿ ಲೈಬೀರಿಯಾ ಸೇರಿದಂತೆ ಇದು ಅವರ ಎಂಟನೇ ಅಂತರರಾಷ್ಟ್ರೀಯ ಮಿಷನ್ ಎಂದು ಫರ್ನಾಂಡೀಸ್ ಹೇಳಿದ್ದಾರೆ.

ಚೀನಾದಲ್ಲಿ ಹುಟ್ಟಿದ ಸಾಂಕ್ರಾಮಿಕ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶ ಇಟಲಿಯಗಿದೆ. ಅಲ್ಲಿ ಸಾವಿನ ಸಂಖ್ಯೆ ಶನಿವಾರ 546 ರಿಂದ 3,095 ಕ್ಕೆ ಏರಿದೆ ಎಂದು ತಿಳಿದುಬಂದಿದೆ.

ಬ್ರಿಟಿಷ್ ಕ್ರೂಸ್ ಹಡಗನ್ನು ದ್ವೀಪದಲ್ಲಿ ಕಟ್ಟಲು ಅನುಮತಿಸಿದ್ದಕ್ಕಾಗಿ ಮತ್ತು ವಿಮಾನದಲ್ಲಿ 600 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳಾಂತರಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಬ್ರಿಟನ್ ಕಳೆದ ವಾರ ಕ್ಯೂಬಾಗೆ ಧನ್ಯವಾದ ಅರ್ಪಿಸಿತ್ತು.

ವಿಪತ್ತು ಸನ್ನದ್ಧತೆಗೆ ಹೆಸರುವಾಸಿಯಾದ ಕ್ಯೂಬಾ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ತನ್ನ ದೇಶದಲ್ಲಿಯೂ ಅಗತ್ಯ ಕ್ರಮಗಳನ್ನು ಹೆಚ್ಚಿಸುತ್ತಿದೆ. ಈವರೆಗೆ ಅಲ್ಲಿ ಇಪ್ಪತ್ತೈದು ಪ್ರಕರಣಗಳು ದೃಡಪಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...