Homeಅಂತರಾಷ್ಟ್ರೀಯಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

"ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು"

- Advertisement -
- Advertisement -

ಕೊರೊನ ವೈರಸ್‌ ಸೋಕಿನಿಂದಾಗಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಪ್ರಾಣ ತೆತ್ತಿರುವ ಇಟಲಿಯ ನೆರವಿಗೆ ದ್ವೀಪ ರಾಷ್ಟ್ರವಾದ ಕ್ಯೂಬಾವು ಬಲಿಷ್ಠ ವೈದ್ಯರು ಮತ್ತು ದಾದಿಯರ ತಂಡವನ್ನು ಕಳುಹಿಸಿ ಕೊಟ್ಟಿದೆ.

ವೈರಸಿನಿಂದಾಗಿ ಅತ್ಯಂತ ಹಾನಿಗೊಳಗಾದ ಇಟಲಿಯ ಲೊಂಬಾರ್ಡಿಗೆ ಕೊರೊನ ವೈರಸ್‌ ವಿರುದ್ದ ಹೋರಾಡಲು ವೈದ್ಯರು ಮತ್ತು ದಾದಿಯರ ತಂಡವನ್ನು ತಕ್ಷಣ ಕಳಿಸಿಕೊಟ್ಟು ಸಹಾಯ ಮಾಡುವಂತೆ ಕೇಳಿದೆ ಎಂದು ಕ್ಯೂಬಾ ಭಾನುವಾರ ಪ್ರಕಟಿಸಿದೆ.

“ನಮಗೆಲ್ಲರಿಗೂ ಹೆದರಿಕೆಯಿದೆ. ಆದರೆ ನಮಗೆ ಒಂದು ಕ್ರಾಂತಿಕಾರಿ ಕರ್ತವ್ಯವಿದೆ, ಆದ್ದರಿಂದ ನಾವು ಭಯವನ್ನು ಬದಿಗೆ ಇಡುತ್ತೇವೆ” ಎಂದು 68 ವರ್ಷದ ತೀವ್ರ ನಿಗಾ ತಜ್ಞ ಲಿಯೊನಾರ್ಡೊ ಫರ್ನಾಂಡೀಸ್ ತಿಳಿಸಿದ್ದಾರೆ. 52 ವೈದ್ಯರ ಬಲಿಷ್ಠ ತಂಡದೊಂದಿಗೆ, ಕ್ಯೂಬಾ ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಇಟಲಿಗೆ ತುರ್ತು ದಳವನ್ನು ಕಳುಹಿಸಿದ್ದು ಇದೇ ಮೊದಲು.

ಕ್ಯೂಬಾ ತನ್ನ “ಬಿಳಿ ನಿಲುವಂಗಿಗಳ ಸೈನ್ಯವನ್ನು” 1959 ರ ಕ್ರಾಂತಿಯ ನಂತರ ಪ್ರಪಂಚದಾದ್ಯಂತದ ಹೆಚ್ಚಾಗಿ ಬಡ ದೇಶಗಳಲ್ಲಿ ವಿಪತ್ತು ಸ್ಥಳಗಳಿಗೆ ಕಳುಹಿಸಿದೆ. ಹೈಟಿಯಲ್ಲಿ ಕಾಲರಾ ವಿರುದ್ಧ ಮತ್ತು 2010 ರಲ್ಲಿ ಪಶ್ಚಿಮ ಆಫ್ರಿಕಾದ ಎಬೋಲಾ ವಿರುದ್ಧದ ಹೋರಾಟದಲ್ಲಿ ಕ್ಯೂಬಾದ ವೈದ್ಯರು ಮುಂಚೂಣಿಯಲ್ಲಿದ್ದರು.

ವಿದೇಶದಲ್ಲಿ ಹೊಸ ರೋಗ ಹರಡುವುದನ್ನು ಎದುರಿಸಲು ಕ್ಯೂಬಾ ಇತ್ತೀಚಿನ ದಿನಗಳಲ್ಲಿ ಕಳುಹಿಸಿದ ಆರನೇ ವೈದ್ಯಕೀಯ ತಂಡ ಇದಾಗಿದೆ. ಇದು ಸಮಾಜವಾದಿ ಮಿತ್ರರಾಷ್ಟ್ರಗಳಾದ ವೆನೆಜುವೆಲಾ, ನಿಕರಾಗುವಾ, ಜಮೈಕಾ, ಸುರಿನಾಮ್ ಮತ್ತು ಗ್ರೆನಡಾಗಳಿಗೆ ತನ್ನ ತುಕಡಿಗಳನ್ನು ಕಳುಹಿಸಿದೆ.

ತಂಡದ ಮುಖ್ಯಸ್ತರಾದ ಲಿಯೊನಾರ್ಡೊ ಫರ್ನಾಂಡೀಸ್ ತನ್ನ ತನ್ನ ತಂಡದ ನಿರ್ಗಮನಕ್ಕೆ ಮೊದಲು “ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು” ಎಂದು ಹೇಳಿದ್ದಾರೆ. ಎಬೊಲಾ ವಿರುದ್ಧದ ಹೋರಾಟದ ಸಮಯದಲ್ಲಿ ಲೈಬೀರಿಯಾ ಸೇರಿದಂತೆ ಇದು ಅವರ ಎಂಟನೇ ಅಂತರರಾಷ್ಟ್ರೀಯ ಮಿಷನ್ ಎಂದು ಫರ್ನಾಂಡೀಸ್ ಹೇಳಿದ್ದಾರೆ.

ಚೀನಾದಲ್ಲಿ ಹುಟ್ಟಿದ ಸಾಂಕ್ರಾಮಿಕ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶ ಇಟಲಿಯಗಿದೆ. ಅಲ್ಲಿ ಸಾವಿನ ಸಂಖ್ಯೆ ಶನಿವಾರ 546 ರಿಂದ 3,095 ಕ್ಕೆ ಏರಿದೆ ಎಂದು ತಿಳಿದುಬಂದಿದೆ.

ಬ್ರಿಟಿಷ್ ಕ್ರೂಸ್ ಹಡಗನ್ನು ದ್ವೀಪದಲ್ಲಿ ಕಟ್ಟಲು ಅನುಮತಿಸಿದ್ದಕ್ಕಾಗಿ ಮತ್ತು ವಿಮಾನದಲ್ಲಿ 600 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳಾಂತರಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಬ್ರಿಟನ್ ಕಳೆದ ವಾರ ಕ್ಯೂಬಾಗೆ ಧನ್ಯವಾದ ಅರ್ಪಿಸಿತ್ತು.

ವಿಪತ್ತು ಸನ್ನದ್ಧತೆಗೆ ಹೆಸರುವಾಸಿಯಾದ ಕ್ಯೂಬಾ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ತನ್ನ ದೇಶದಲ್ಲಿಯೂ ಅಗತ್ಯ ಕ್ರಮಗಳನ್ನು ಹೆಚ್ಚಿಸುತ್ತಿದೆ. ಈವರೆಗೆ ಅಲ್ಲಿ ಇಪ್ಪತ್ತೈದು ಪ್ರಕರಣಗಳು ದೃಡಪಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...