Homeಅಂತರಾಷ್ಟ್ರೀಯಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

"ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು"

- Advertisement -
- Advertisement -

ಕೊರೊನ ವೈರಸ್‌ ಸೋಕಿನಿಂದಾಗಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಪ್ರಾಣ ತೆತ್ತಿರುವ ಇಟಲಿಯ ನೆರವಿಗೆ ದ್ವೀಪ ರಾಷ್ಟ್ರವಾದ ಕ್ಯೂಬಾವು ಬಲಿಷ್ಠ ವೈದ್ಯರು ಮತ್ತು ದಾದಿಯರ ತಂಡವನ್ನು ಕಳುಹಿಸಿ ಕೊಟ್ಟಿದೆ.

ವೈರಸಿನಿಂದಾಗಿ ಅತ್ಯಂತ ಹಾನಿಗೊಳಗಾದ ಇಟಲಿಯ ಲೊಂಬಾರ್ಡಿಗೆ ಕೊರೊನ ವೈರಸ್‌ ವಿರುದ್ದ ಹೋರಾಡಲು ವೈದ್ಯರು ಮತ್ತು ದಾದಿಯರ ತಂಡವನ್ನು ತಕ್ಷಣ ಕಳಿಸಿಕೊಟ್ಟು ಸಹಾಯ ಮಾಡುವಂತೆ ಕೇಳಿದೆ ಎಂದು ಕ್ಯೂಬಾ ಭಾನುವಾರ ಪ್ರಕಟಿಸಿದೆ.

“ನಮಗೆಲ್ಲರಿಗೂ ಹೆದರಿಕೆಯಿದೆ. ಆದರೆ ನಮಗೆ ಒಂದು ಕ್ರಾಂತಿಕಾರಿ ಕರ್ತವ್ಯವಿದೆ, ಆದ್ದರಿಂದ ನಾವು ಭಯವನ್ನು ಬದಿಗೆ ಇಡುತ್ತೇವೆ” ಎಂದು 68 ವರ್ಷದ ತೀವ್ರ ನಿಗಾ ತಜ್ಞ ಲಿಯೊನಾರ್ಡೊ ಫರ್ನಾಂಡೀಸ್ ತಿಳಿಸಿದ್ದಾರೆ. 52 ವೈದ್ಯರ ಬಲಿಷ್ಠ ತಂಡದೊಂದಿಗೆ, ಕ್ಯೂಬಾ ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಇಟಲಿಗೆ ತುರ್ತು ದಳವನ್ನು ಕಳುಹಿಸಿದ್ದು ಇದೇ ಮೊದಲು.

ಕ್ಯೂಬಾ ತನ್ನ “ಬಿಳಿ ನಿಲುವಂಗಿಗಳ ಸೈನ್ಯವನ್ನು” 1959 ರ ಕ್ರಾಂತಿಯ ನಂತರ ಪ್ರಪಂಚದಾದ್ಯಂತದ ಹೆಚ್ಚಾಗಿ ಬಡ ದೇಶಗಳಲ್ಲಿ ವಿಪತ್ತು ಸ್ಥಳಗಳಿಗೆ ಕಳುಹಿಸಿದೆ. ಹೈಟಿಯಲ್ಲಿ ಕಾಲರಾ ವಿರುದ್ಧ ಮತ್ತು 2010 ರಲ್ಲಿ ಪಶ್ಚಿಮ ಆಫ್ರಿಕಾದ ಎಬೋಲಾ ವಿರುದ್ಧದ ಹೋರಾಟದಲ್ಲಿ ಕ್ಯೂಬಾದ ವೈದ್ಯರು ಮುಂಚೂಣಿಯಲ್ಲಿದ್ದರು.

ವಿದೇಶದಲ್ಲಿ ಹೊಸ ರೋಗ ಹರಡುವುದನ್ನು ಎದುರಿಸಲು ಕ್ಯೂಬಾ ಇತ್ತೀಚಿನ ದಿನಗಳಲ್ಲಿ ಕಳುಹಿಸಿದ ಆರನೇ ವೈದ್ಯಕೀಯ ತಂಡ ಇದಾಗಿದೆ. ಇದು ಸಮಾಜವಾದಿ ಮಿತ್ರರಾಷ್ಟ್ರಗಳಾದ ವೆನೆಜುವೆಲಾ, ನಿಕರಾಗುವಾ, ಜಮೈಕಾ, ಸುರಿನಾಮ್ ಮತ್ತು ಗ್ರೆನಡಾಗಳಿಗೆ ತನ್ನ ತುಕಡಿಗಳನ್ನು ಕಳುಹಿಸಿದೆ.

ತಂಡದ ಮುಖ್ಯಸ್ತರಾದ ಲಿಯೊನಾರ್ಡೊ ಫರ್ನಾಂಡೀಸ್ ತನ್ನ ತನ್ನ ತಂಡದ ನಿರ್ಗಮನಕ್ಕೆ ಮೊದಲು “ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು” ಎಂದು ಹೇಳಿದ್ದಾರೆ. ಎಬೊಲಾ ವಿರುದ್ಧದ ಹೋರಾಟದ ಸಮಯದಲ್ಲಿ ಲೈಬೀರಿಯಾ ಸೇರಿದಂತೆ ಇದು ಅವರ ಎಂಟನೇ ಅಂತರರಾಷ್ಟ್ರೀಯ ಮಿಷನ್ ಎಂದು ಫರ್ನಾಂಡೀಸ್ ಹೇಳಿದ್ದಾರೆ.

ಚೀನಾದಲ್ಲಿ ಹುಟ್ಟಿದ ಸಾಂಕ್ರಾಮಿಕ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶ ಇಟಲಿಯಗಿದೆ. ಅಲ್ಲಿ ಸಾವಿನ ಸಂಖ್ಯೆ ಶನಿವಾರ 546 ರಿಂದ 3,095 ಕ್ಕೆ ಏರಿದೆ ಎಂದು ತಿಳಿದುಬಂದಿದೆ.

ಬ್ರಿಟಿಷ್ ಕ್ರೂಸ್ ಹಡಗನ್ನು ದ್ವೀಪದಲ್ಲಿ ಕಟ್ಟಲು ಅನುಮತಿಸಿದ್ದಕ್ಕಾಗಿ ಮತ್ತು ವಿಮಾನದಲ್ಲಿ 600 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳಾಂತರಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಬ್ರಿಟನ್ ಕಳೆದ ವಾರ ಕ್ಯೂಬಾಗೆ ಧನ್ಯವಾದ ಅರ್ಪಿಸಿತ್ತು.

ವಿಪತ್ತು ಸನ್ನದ್ಧತೆಗೆ ಹೆಸರುವಾಸಿಯಾದ ಕ್ಯೂಬಾ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ತನ್ನ ದೇಶದಲ್ಲಿಯೂ ಅಗತ್ಯ ಕ್ರಮಗಳನ್ನು ಹೆಚ್ಚಿಸುತ್ತಿದೆ. ಈವರೆಗೆ ಅಲ್ಲಿ ಇಪ್ಪತ್ತೈದು ಪ್ರಕರಣಗಳು ದೃಡಪಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...