Homeಅಂಕಣಗಳುಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಉತ್ತರ ಭಾರತ ನಿಜವಾಗಿಯೂ ಹಿಂದಿ ಭಾಷಿಕ ಸೀಮೆಯೇ ಆಗಿದ್ದಲ್ಲಿ ಪ್ರತಿವರ್ಷ ಅಲ್ಲಿ ಲಕ್ಷಾಂತರ ಶಾಲಾಮಕ್ಕಳು ಹಿಂದಿ ಭಾಷೆಯ ಪರೀಕ್ಷೆಯಲ್ಲಿ ಫೇಲಾಗುತ್ತಿರುವುದು ಯಾಕೆ?

- Advertisement -
- Advertisement -

‘ನನ್ನ ತಾಯಿನುಡಿಯು ನಿನ್ನ ಪ್ರಭುತ್ವದ ಅಡಿಪಾಯಗಳನ್ನು ಅಲ್ಲಾಡಿಸತೊಡಗಿದ್ದರೆ, ನೀನು ನಿನ್ನ ರಾಜ್ಯವನ್ನು ನನ್ನ ನೆಲದ ಮೇಲೆ ಕಟ್ಟಿದ್ದೀಯಾ ಎಂದೇ ಅರ್ಥ’- ತುರ್ಕಿ ಸರ್ಕಾರ 1992ರಲ್ಲಿ ಹತ್ಯೆ ಮಾಡಿದ ಕುರ್ಡಿಶ್ ಬರೆಹಗಾರ ಮೂಸಾ ಅ್ಯಂಟರ್‌ನ ಈ ನುಡಿಗಳಲ್ಲಿ ಸಾರ್ವತ್ರಿಕ ಸತ್ಯವೊಂದು ನಿಹಿತವಾಗಿದೆ.

ರಾಜಕೀಯ ಜನತಾಂತ್ರಿಕ ವ್ಯವಸ್ಥೆಯನ್ನು ಒಂದೆಡೆ ಗೌರವಿಸುತ್ತ, ಮತ್ತೊಂದೆಡೆ ಭಾಷಾ ಜನತಂತ್ರವನ್ನು ತುಳಿಯುವುದು ಆಷಾಡಭೂತಿತನ ಅಲ್ಲವೇ? ‘ಒಂದು ದೇಶ, ಒಂದು ಧರ್ಮ, ಒಂದು ಭಾಷೆ, ಒಂದು ಪಕ್ಷ, ಒಬ್ಬ ನಾಯಕ’ ಎಂಬುದು ಪರಿಶುದ್ಧ ಫ್ಯಾಸಿಸಮ್ಮೇ ವಿನಾ ಜನತಂತ್ರ ಅಲ್ಲ. ಹಿಂದಿ-ಹಿಂದು-ಹಿಂದುಸ್ತಾನ ಎಂಬ ಸಾಂಸ್ಕೃತಿಕ ರಾಷ್ಟ್ರವಾದದ ಘೋಷಣೆ ಕೋಮುವಾದ- ಬಹುಸಂಖ್ಯಾತವಾದದ ಹೆಗ್ಗುರುತು.

ನರೇಂದ್ರ ಮೋದಿ ಸರ್ಕಾರದ ಸೈದ್ಧಾಂತಿಕ ಬೇರುಗಳು ಹಿಂದೀ-ಹಿಂದು-ಹಿಂದುತ್ವವಾದಿ ಚಿಂತನೆಯ ಮೂಲದವು. ಹೀಗಾಗಿ ಅವರು ಅಧಿಕಾರ ಹಿಡಿದೊಡನೆ ಹಿಂದೀ ಭಾಷೆಗೆ ದೊರೆಯತೊಡಗಿರುವ ಅಗ್ರಪ್ರಾಶಸ್ತ್ಯವು ಕಳೆದ ಐದಾರು ವರ್ಷಗಳಲ್ಲಿ ‘ಹಿಂದೀ ಸಾಮ್ರಾಜ್ಯಶಾಹಿ’ಯ ಆತಂಕವನ್ನು ಹುಟ್ಟಿಹಾಕಿದೆ.

2011ರ ಜನಗಣತಿಯ ಪ್ರಕಾರ ಭಾರತದಲ್ಲಿ ದಾಖಲಿಸಿರುವ ಆಡು ಭಾಷೆಗಳು 19,569. ಹತ್ತು ಲಕ್ಷಕ್ಕಿಂತ ಹೆಚ್ಚು ಮಂದಿ ಮಾತಾಡುವ ಭಾಷೆಗಳು 40. ಒಂದು ಲಕ್ಷಕ್ಕಿಂತ ಹೆಚ್ಚು ಮಂದಿ ಮಾತಾಡುವ ಭಾಷೆಗಳು 60. ಹತ್ತು ಸಾವಿರಕ್ಕಿಂತ ಹೆಚ್ಚು ಮಂದಿ ಆಡುವ ಭಾಷೆಗಳ ಸಂಖ್ಯೆ 122. ಸಂಸ್ಕೃತವನ್ನು ತಮ್ಮ ತಾಯಿನುಡಿ ಎಂದು ಈ ಜನಗಣತಿಯಲ್ಲಿ ಬರೆಯಿಸಿರುವವರ ಸಂಖ್ಯೆ 24,821. ಕೇಂದ್ರ ಸರ್ಕಾರದ ಭಾಷಾ ಅಭಿವೃದ್ಧಿ ಯೋಜನೆಗಳ ಸಿಂಹಪಾಲು ಸಲ್ಲುತ್ತಿರುವುದು ಸಂಸ್ಕೃತಕ್ಕೇ.

19ನೆಯ ಶತಮಾನದಲ್ಲಿ ಮುಸಲ್ಮಾನರ ಭಾಷೆಯೆಂದು ಹಣೆಪಟ್ಟಿ ಹಚ್ಚಲಾದ ಉರ್ದುವನ್ನು (ಪರ್ಷಿಯನೀಕೃತ ಹಿಂದುಸ್ತಾನಿ) ತೊಲಗಿಸಿ ಅದರ ಜಾಗದಲ್ಲಿ ಸಂಸ್ಕೃತೀಕೃತ ಹಿಂದುಸ್ತಾನಿಯಾದ ಹಿಂದಿಗೆ ಪಟ್ಟ ಕಟ್ಟುವ ಮೇಲಾಟ ಜರುಗಿತು. ಉರ್ದು ಮುಸ್ಲಿಮ್ ಆದರೆ ಹಿಂದೀ ಹಿಂದೂ ಆಯಿತು. ಹಿಂದೀ ಭಾಷಿಕರ ಸಂಖ್ಯೆಯನ್ನು ಉಬ್ಬಿಸಿ ಸತ್ಯದೂರ ಕಥನ ಕಟ್ಟಲಾಯಿತು. ಅಂದಿನ ಬ್ರಿಟಿಷ್ ಆಡಳಿತವನ್ನು ನಂಬಿಸುವ ಈ ತಂತ್ರ ಫಲ ನೀಡಿತು. ಉರ್ದು ಅದಾಗಲೇ ಆಡಳಿತ ಭಾಷೆಯಾಗಿತ್ತು. ಅದರೊಂದಿಗೆ ಹಿಂದಿಗೂ ಆಡಳಿತ ಭಾಷೆಯ ಸ್ಥಾನ ಗಿಟ್ಟಿತು. ಅಲ್ಲಿಯತನಕ ನ್ಯಾಯಾಲಯದ ದಾಖಲೆ ದಸ್ತಾವೇಜುಗಳು ಕೇವಲ ಉರ್ದುವಿನಲ್ಲೇ ಇರುತ್ತಿದ್ದ ಕಾರಣ, ಆ ಭಾಷೆಯನ್ನು ಅರಿಯದ ಜನಕ್ಕೆ ದಾಖಲೆಗಳಲ್ಲಿ ಏನು ಬರೆದಿದೆಯೆಂದೇ ಅರ್ಥವಾಗುತ್ತಿರಲಿಲ್ಲ. ದೇಶವಿಭಜನೆಯ ನಂತರ ಇದೇ ಪರಿಸ್ಥಿತಿಯನ್ನು ಹಿಂದೀ ಭಾಷಿಕರಲ್ಲದವರು ಎದುರಿಸಬೇಕಾಯಿತು. ಉದಾಹರಣೆಗೆ ಐಎಎಸ್-ಐಪಿಎಸ್ ಮುಂತಾದ ಸಿವಿಲ್ ಸರ್ವೀಸಸ್ ಪ್ರವೇಶ ಪರೀಕ್ಷೆಗಳು, ಐಐಟಿ ಮತ್ತು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗಳ ಪ್ರವೇಶ ಪರೀಕ್ಷೆಗಳನ್ನು ಹಿಂದಿಯ ವಿನಾ ಉಳಿದ ಯಾವುದೇ ಮಾತೃಭಾಷಾ ಮಾಧ್ಯಮಗಳಲ್ಲಿ ಬರೆಯುವಂತಿಲ್ಲ. ಅಲಹಾಬಾದ್ ಹೈಕೋರ್ಟ್ ತನ್ನ ವ್ಯವಹಾರಗಳನ್ನು ಹಿಂದಿಯಲ್ಲಿ ನಡೆಸಲು ಅವಕಾಶ ನೀಡಲಾಗಿದೆ. ಆದರೆ ದಕ್ಷಿಣ ರಾಜ್ಯಗಳ ಹೈಕೋರ್ಟುಗಳು ಪ್ರಾದೇಶಿಕ ಭಾಷೆಗಳಲ್ಲಿ ವ್ಯವಹರಿಸಲು ಅವಕಾಶ ನಿರಾಕರಿಸಲಾಗಿದೆ. ಕಡೆಗೆ ಸಂವಿಧಾನದ ಪಠ್ಯದ ವಿಷಯದಲ್ಲೂ ಅಷ್ಟೇ. ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಪಠ್ಯಗಳು ಮಾತ್ರವೇ ಸರ್ಕಾರದಿಂದ ಮಾನ್ಯತೆ ಪಡೆದ ಪಠ್ಯಗಳು.

ಹಿಂದಿಯ ದೈತ್ಯ ರಥಚಕ್ರಗಳಡಿ ದಕ್ಷಿಣದ ಭಾಷೆಗಳಿರಲಿ, ಉತ್ತರ ಭಾರತದ ತಾಯಿನುಡಿಗಳೂ ನುಗ್ಗಾಗತೊಡಗಿವೆ. ಉತ್ತರ ಮತ್ತು ಮಧ್ಯಭಾರತದ 50ಕ್ಕೂ ಹೆಚ್ಚು ಭಾಷೆಗಳು ತಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಂಡು ಅಳಿವಿನ ಅಂಚು ತಲುಪಿವೆ. ಭೋಜಪುರಿ, ಅವಧಿ, ಹರಿಯಾಣ್ವಿ, ಆದಿವಾಸಿ ಭಾರತದ ಗೊಂಡಿ, ಒರಾನಿ, ಸಂತಾಲ್, ಮುಂದಾರಿ ಇತ್ಯಾದಿ ಭಾಷೆಗಳು, ಬಿಹಾರ, ಝಾಖರ್ಂಡ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಾತಾಡುವ ಮಗಧಿ, ಮೈಥಿಲಿ, ಬಿಹಾರಿ, ಚಾದ್ರಿ, ಪಹಾಡಿ, ಗಢವಾಲಿ, ಡೋಗ್ರಿ, ಆಂಗಿಕ, ಬುಂದೇಲಿ, ರಾಜಸ್ತಾನಿ, ಛತ್ತೀಸಗಢೀ, ಬ್ರಜಭಾಷಾ ಹಾಗೂ ಖಡೀಬೋಲಿ ಹಿಂದೀ ಹೇರಿಕೆ- ದಬ್ಬಾಳಿಕೆಯ ಕಾರಣ ತಮ್ಮ ಸ್ಥಾನಮಾನ ಕಳೆದುಕೊಂಡಿವೆ. ಅವಧಿ ಮಾತಾಡುವವರ ಸಂಖ್ಯೆ 3.80 ಕೋಟಿ ಮಂದಿ. ವಿಶ್ವದ 29ನೆಯ ಅತಿಹೆಚ್ಚು ಜನಸಂಖ್ಯೆ ಮಾತಾಡುವ ಭಾಷೆಯಿದು. ಫಿಜಿ ಹಿಂದೀ ಎಂಬ ಹೆಸರು ಪಡೆದು ಆ ದೇಶದಲ್ಲಿ ಈ ನುಡಿಗಟ್ಟು ಬದುಕಿರುವುದು ವಿಡಂಬನೆಯೇ ಸರಿ. ಹಾಗೆಯೇ ಭೋಜಪುರಿ ಭಾಷಿಕರ ಸಂಖ್ಯೆ ನಾಲ್ಕು ಕೋಟಿ. ಇದನ್ನೂ ಹಿಂದಿಯ ಲೆಕ್ಕಕ್ಕೆ ಸೇರಿಸಿ ಎಣಿಸಿಕೊಳ್ಳಲಾಗಿದೆ. ಈ ಎಲ್ಲವೂ ಹಿಂದಿ ಭಾಷೆಯ ಭಿನ್ನ ನುಡಿಗಟ್ಟುಗಳು ಎಂಬ ಸುಳ್ಳನ್ನು ಪ್ರಚಾರ ಮಾಡಿಕೊಂಡು ಬರಲಾಗಿದೆ. ಈ ಭಾಷಿಕರನ್ನೂ ಹಿಂದಿ ಮಾತೃಭಾಷಿಕರೆಂಬ ಲೆಕ್ಕಕ್ಕೆ ಸೇರಿಸಿಕೊಂಡಿರುವುದು ಜನಗಣತಿಗಳ ಮಹಾಮೋಸ. ಮುತ್ತಿಗೆ ಹಾಕಿರುವ ಹಿಂದಿ ದಬ್ಬಾಳಿಕೆಯನ್ನು ಈ ನುಡಿಗಟ್ಟುಗಳು ಒಪ್ಪಿಕೊಳ್ಳತೊಡಗಿವೆ. ತಮ್ಮ ಭಾಷೆ ಹಿಂದಿ ಎಂದೇ ಬರೆಯಿಸತೊಡಗಿವೆ. ಈ ವಂಚನೆಯ ಲೆಕ್ಕ ಹಿಡಿದರೆ ಅಸಲಿ ಹಿಂದಿ ಸಮುದ್ರದ ಪುಟ್ಟ ದ್ವೀಪಗಳಾಗಿರುವ ಅವುಗಳಿಗೆ ಕನ್ನಡ, ತೆಲುಗು, ತಮಿಳು ಮಲೆಯಾಳದಂತಹ ರಕ್ಷಣೆ, ಮೂಲಸೌಲಭ್ಯಗಳು ಇಲ್ಲ. ಹೀಗಾಗಿ ಶರಣಾಗದೆ ವಿಧಿಯಿಲ್ಲ. ಹೀಗಾಗಿ ಹೊಸ್ತಿಲೊಳಗಣ ಭಾಷೆಗಳಾಗಿಯೂ, ಅಡಿಗೆ ಮನೆ, ಹಿತ್ತಿಲ ಭಾಷೆಗಳಾಗಿಯೂ ಮೂಲೆಗುಂಪಾಗತೊಡಗಿವೆ. ಹಿಂದಿ ಭಾಷಿಕರ ಪ್ರಮಾಣ ಶೇ.43.63 ರಿಂದ ಶೇ.20ಕ್ಕೆ ಕುಸಿಯುತ್ತದೆ.

ಹಿಂದಿ
Courtesy: Facebook

ಉತ್ತರ ಭಾರತ ನಿಜವಾಗಿಯೂ ಹಿಂದಿ ಭಾಷಿಕ ಸೀಮೆಯೇ ಆಗಿದ್ದಲ್ಲಿ ಪ್ರತಿವರ್ಷ ಅಲ್ಲಿ ಲಕ್ಷಾಂತರ ಶಾಲಾಮಕ್ಕಳು ಹಿಂದಿ ಭಾಷೆಯ ಪರೀಕ್ಷೆಯಲ್ಲಿ ಫೇಲಾಗುತ್ತಿರುವುದು ಯಾಕೆ? ಉದಾಹರಣೆಗೆ 2019ರಲ್ಲಿ ಹತ್ತು ಮತ್ತು ಹನ್ನೆರಡನೆಯ ತರಗತಿಗಳ ಹಿಂದಿ ಪರೀಕ್ಷೆಗಳಲ್ಲಿ ಹತ್ತು ಲಕ್ಷ ವಿದ್ಯಾರ್ಥಿಗಳು ಫೇಲಾದರು. ಈ ಬೆಳವಣಿಗೆಯ ಹಿಂದಿನ ಕಟುಸತ್ಯವೆಂದರೆ ಉತ್ತರ ಭಾರತದ ಬಹುತೇಕರ ಮಾತೃಭಾಷೆ ಹಿಂದಿ ಅಲ್ಲ. ಅವರ ಮಾತೃಭಾಷೆಗಳು ನೂರಾರು ಇಲ್ಲವೇ ಸಾವಿರಾರು ವರ್ಷಗಳಿಂದ ವಿಕಾಸಗೊಂಡು ಭಾಷಿಕರ ಬಾಯಲ್ಲಿ ನಲಿಯುವಂತಹವು. ಅವರ ಬದುಕುಗಳೊಂದಿಗೆ ಬೆಸೆದುಕೊಂಡಂತಹವು. ಸಂಸ್ಕೃತ ಭೂಯಿಷ್ಟ ಹಿಂದಿ ಭಾಷೆಗೆ ಹೋಲಿಸಿದರೆ ಸುಲಿದ ಬಾಳೆ ಅಥವಾ ತಣಿದ ಉಷ್ಣದ ಹಾಲಿನಂತಹವು.

ಭಾಷೆಯೊಂದು ಸಾಯುವುದೆಂದರೆ ಸಂವಹನದ ಮಾಧ್ಯಮವೊಂದು ಸತ್ತಂತೆ. ಆ ಭಾಷೆಯನ್ನು ಆಡುವ ಜನರ ಇತಿಹಾಸ, ಪರಂಪರೆ, ನಂಬಿಕೆಗಳು, ಪದ್ಧತಿಗಳು, ಸಂಸ್ಕೃತಿಯ ಮುಂದುವರಿಕೆ ಮುರಿದುಬಿದ್ದಂತೆ. ರಾಜಸ್ತಾನಿ ಭಾಷೆಯಲ್ಲಿ ಒಂಟೆಗೆ 45 ಭಿನ್ನ ಹೆಸರುಗಳಿವೆಯಂತೆ. ಅಂತೆಯೇ ತಿಂಗಳು ತಿಂಗಳಿಗೂ ಬದಲಾಗುವ ಮೋಡಗಳಿಗೂ ಅಷ್ಟೇ ಸಂಖ್ಯೆಯ ಹೆಸರುಗಳಿವೆಯಂತೆ. ಈಗ ಅಳಿದುಹೋಗಿರುವ ಭಾಷೆಗಳಲ್ಲೂ ಇಂತಹ ಸಿರಿವಂತಿಕೆ ಇದ್ದಿರಬಹುದು. ಕಳೆದ ಐವತ್ತು ವರ್ಷಗಳಲ್ಲಿ 220 ಭಾರತೀಯ ಭಾಷೆಗಳನ್ನು ಕೊಂದು ಹುಗಿಯಲಾಗಿದೆ.

ಹಿಂದಿ ಭಾಷಿಕರ ಪ್ರಮಾಣ ಶೇ.43 ಎಂದು ವಾದಕ್ಕಾಗಿ ಒಂದು ಗಳಿಗೆ ಒಪ್ಪಿಕೊಂಡರೂ, ಹಿಂದಿ ಮಾತೃಭಾಷೆ ಅಲ್ಲದವರ ಪ್ರಮಾಣ ಶೇ.57ರಷ್ಟಿದೆ ಎಂದಾಯಿತು. ಶೇ. 20 ಮಂದಿ ಆಡುವ ಭಾಷೆಯನ್ನು ಶೇ.80 ಮಂದಿಯ ಮೇಲೆ ಹೇರುವುದು ಸಾಂಸ್ಕೃತಿಕ ಸರ್ವಾಧಿಕಾರ.


ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...