Homeಅಂಕಣಗಳುಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಉತ್ತರ ಭಾರತ ನಿಜವಾಗಿಯೂ ಹಿಂದಿ ಭಾಷಿಕ ಸೀಮೆಯೇ ಆಗಿದ್ದಲ್ಲಿ ಪ್ರತಿವರ್ಷ ಅಲ್ಲಿ ಲಕ್ಷಾಂತರ ಶಾಲಾಮಕ್ಕಳು ಹಿಂದಿ ಭಾಷೆಯ ಪರೀಕ್ಷೆಯಲ್ಲಿ ಫೇಲಾಗುತ್ತಿರುವುದು ಯಾಕೆ?

- Advertisement -
- Advertisement -

‘ನನ್ನ ತಾಯಿನುಡಿಯು ನಿನ್ನ ಪ್ರಭುತ್ವದ ಅಡಿಪಾಯಗಳನ್ನು ಅಲ್ಲಾಡಿಸತೊಡಗಿದ್ದರೆ, ನೀನು ನಿನ್ನ ರಾಜ್ಯವನ್ನು ನನ್ನ ನೆಲದ ಮೇಲೆ ಕಟ್ಟಿದ್ದೀಯಾ ಎಂದೇ ಅರ್ಥ’- ತುರ್ಕಿ ಸರ್ಕಾರ 1992ರಲ್ಲಿ ಹತ್ಯೆ ಮಾಡಿದ ಕುರ್ಡಿಶ್ ಬರೆಹಗಾರ ಮೂಸಾ ಅ್ಯಂಟರ್‌ನ ಈ ನುಡಿಗಳಲ್ಲಿ ಸಾರ್ವತ್ರಿಕ ಸತ್ಯವೊಂದು ನಿಹಿತವಾಗಿದೆ.

ರಾಜಕೀಯ ಜನತಾಂತ್ರಿಕ ವ್ಯವಸ್ಥೆಯನ್ನು ಒಂದೆಡೆ ಗೌರವಿಸುತ್ತ, ಮತ್ತೊಂದೆಡೆ ಭಾಷಾ ಜನತಂತ್ರವನ್ನು ತುಳಿಯುವುದು ಆಷಾಡಭೂತಿತನ ಅಲ್ಲವೇ? ‘ಒಂದು ದೇಶ, ಒಂದು ಧರ್ಮ, ಒಂದು ಭಾಷೆ, ಒಂದು ಪಕ್ಷ, ಒಬ್ಬ ನಾಯಕ’ ಎಂಬುದು ಪರಿಶುದ್ಧ ಫ್ಯಾಸಿಸಮ್ಮೇ ವಿನಾ ಜನತಂತ್ರ ಅಲ್ಲ. ಹಿಂದಿ-ಹಿಂದು-ಹಿಂದುಸ್ತಾನ ಎಂಬ ಸಾಂಸ್ಕೃತಿಕ ರಾಷ್ಟ್ರವಾದದ ಘೋಷಣೆ ಕೋಮುವಾದ- ಬಹುಸಂಖ್ಯಾತವಾದದ ಹೆಗ್ಗುರುತು.

ನರೇಂದ್ರ ಮೋದಿ ಸರ್ಕಾರದ ಸೈದ್ಧಾಂತಿಕ ಬೇರುಗಳು ಹಿಂದೀ-ಹಿಂದು-ಹಿಂದುತ್ವವಾದಿ ಚಿಂತನೆಯ ಮೂಲದವು. ಹೀಗಾಗಿ ಅವರು ಅಧಿಕಾರ ಹಿಡಿದೊಡನೆ ಹಿಂದೀ ಭಾಷೆಗೆ ದೊರೆಯತೊಡಗಿರುವ ಅಗ್ರಪ್ರಾಶಸ್ತ್ಯವು ಕಳೆದ ಐದಾರು ವರ್ಷಗಳಲ್ಲಿ ‘ಹಿಂದೀ ಸಾಮ್ರಾಜ್ಯಶಾಹಿ’ಯ ಆತಂಕವನ್ನು ಹುಟ್ಟಿಹಾಕಿದೆ.

2011ರ ಜನಗಣತಿಯ ಪ್ರಕಾರ ಭಾರತದಲ್ಲಿ ದಾಖಲಿಸಿರುವ ಆಡು ಭಾಷೆಗಳು 19,569. ಹತ್ತು ಲಕ್ಷಕ್ಕಿಂತ ಹೆಚ್ಚು ಮಂದಿ ಮಾತಾಡುವ ಭಾಷೆಗಳು 40. ಒಂದು ಲಕ್ಷಕ್ಕಿಂತ ಹೆಚ್ಚು ಮಂದಿ ಮಾತಾಡುವ ಭಾಷೆಗಳು 60. ಹತ್ತು ಸಾವಿರಕ್ಕಿಂತ ಹೆಚ್ಚು ಮಂದಿ ಆಡುವ ಭಾಷೆಗಳ ಸಂಖ್ಯೆ 122. ಸಂಸ್ಕೃತವನ್ನು ತಮ್ಮ ತಾಯಿನುಡಿ ಎಂದು ಈ ಜನಗಣತಿಯಲ್ಲಿ ಬರೆಯಿಸಿರುವವರ ಸಂಖ್ಯೆ 24,821. ಕೇಂದ್ರ ಸರ್ಕಾರದ ಭಾಷಾ ಅಭಿವೃದ್ಧಿ ಯೋಜನೆಗಳ ಸಿಂಹಪಾಲು ಸಲ್ಲುತ್ತಿರುವುದು ಸಂಸ್ಕೃತಕ್ಕೇ.

19ನೆಯ ಶತಮಾನದಲ್ಲಿ ಮುಸಲ್ಮಾನರ ಭಾಷೆಯೆಂದು ಹಣೆಪಟ್ಟಿ ಹಚ್ಚಲಾದ ಉರ್ದುವನ್ನು (ಪರ್ಷಿಯನೀಕೃತ ಹಿಂದುಸ್ತಾನಿ) ತೊಲಗಿಸಿ ಅದರ ಜಾಗದಲ್ಲಿ ಸಂಸ್ಕೃತೀಕೃತ ಹಿಂದುಸ್ತಾನಿಯಾದ ಹಿಂದಿಗೆ ಪಟ್ಟ ಕಟ್ಟುವ ಮೇಲಾಟ ಜರುಗಿತು. ಉರ್ದು ಮುಸ್ಲಿಮ್ ಆದರೆ ಹಿಂದೀ ಹಿಂದೂ ಆಯಿತು. ಹಿಂದೀ ಭಾಷಿಕರ ಸಂಖ್ಯೆಯನ್ನು ಉಬ್ಬಿಸಿ ಸತ್ಯದೂರ ಕಥನ ಕಟ್ಟಲಾಯಿತು. ಅಂದಿನ ಬ್ರಿಟಿಷ್ ಆಡಳಿತವನ್ನು ನಂಬಿಸುವ ಈ ತಂತ್ರ ಫಲ ನೀಡಿತು. ಉರ್ದು ಅದಾಗಲೇ ಆಡಳಿತ ಭಾಷೆಯಾಗಿತ್ತು. ಅದರೊಂದಿಗೆ ಹಿಂದಿಗೂ ಆಡಳಿತ ಭಾಷೆಯ ಸ್ಥಾನ ಗಿಟ್ಟಿತು. ಅಲ್ಲಿಯತನಕ ನ್ಯಾಯಾಲಯದ ದಾಖಲೆ ದಸ್ತಾವೇಜುಗಳು ಕೇವಲ ಉರ್ದುವಿನಲ್ಲೇ ಇರುತ್ತಿದ್ದ ಕಾರಣ, ಆ ಭಾಷೆಯನ್ನು ಅರಿಯದ ಜನಕ್ಕೆ ದಾಖಲೆಗಳಲ್ಲಿ ಏನು ಬರೆದಿದೆಯೆಂದೇ ಅರ್ಥವಾಗುತ್ತಿರಲಿಲ್ಲ. ದೇಶವಿಭಜನೆಯ ನಂತರ ಇದೇ ಪರಿಸ್ಥಿತಿಯನ್ನು ಹಿಂದೀ ಭಾಷಿಕರಲ್ಲದವರು ಎದುರಿಸಬೇಕಾಯಿತು. ಉದಾಹರಣೆಗೆ ಐಎಎಸ್-ಐಪಿಎಸ್ ಮುಂತಾದ ಸಿವಿಲ್ ಸರ್ವೀಸಸ್ ಪ್ರವೇಶ ಪರೀಕ್ಷೆಗಳು, ಐಐಟಿ ಮತ್ತು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗಳ ಪ್ರವೇಶ ಪರೀಕ್ಷೆಗಳನ್ನು ಹಿಂದಿಯ ವಿನಾ ಉಳಿದ ಯಾವುದೇ ಮಾತೃಭಾಷಾ ಮಾಧ್ಯಮಗಳಲ್ಲಿ ಬರೆಯುವಂತಿಲ್ಲ. ಅಲಹಾಬಾದ್ ಹೈಕೋರ್ಟ್ ತನ್ನ ವ್ಯವಹಾರಗಳನ್ನು ಹಿಂದಿಯಲ್ಲಿ ನಡೆಸಲು ಅವಕಾಶ ನೀಡಲಾಗಿದೆ. ಆದರೆ ದಕ್ಷಿಣ ರಾಜ್ಯಗಳ ಹೈಕೋರ್ಟುಗಳು ಪ್ರಾದೇಶಿಕ ಭಾಷೆಗಳಲ್ಲಿ ವ್ಯವಹರಿಸಲು ಅವಕಾಶ ನಿರಾಕರಿಸಲಾಗಿದೆ. ಕಡೆಗೆ ಸಂವಿಧಾನದ ಪಠ್ಯದ ವಿಷಯದಲ್ಲೂ ಅಷ್ಟೇ. ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಪಠ್ಯಗಳು ಮಾತ್ರವೇ ಸರ್ಕಾರದಿಂದ ಮಾನ್ಯತೆ ಪಡೆದ ಪಠ್ಯಗಳು.

ಹಿಂದಿಯ ದೈತ್ಯ ರಥಚಕ್ರಗಳಡಿ ದಕ್ಷಿಣದ ಭಾಷೆಗಳಿರಲಿ, ಉತ್ತರ ಭಾರತದ ತಾಯಿನುಡಿಗಳೂ ನುಗ್ಗಾಗತೊಡಗಿವೆ. ಉತ್ತರ ಮತ್ತು ಮಧ್ಯಭಾರತದ 50ಕ್ಕೂ ಹೆಚ್ಚು ಭಾಷೆಗಳು ತಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಂಡು ಅಳಿವಿನ ಅಂಚು ತಲುಪಿವೆ. ಭೋಜಪುರಿ, ಅವಧಿ, ಹರಿಯಾಣ್ವಿ, ಆದಿವಾಸಿ ಭಾರತದ ಗೊಂಡಿ, ಒರಾನಿ, ಸಂತಾಲ್, ಮುಂದಾರಿ ಇತ್ಯಾದಿ ಭಾಷೆಗಳು, ಬಿಹಾರ, ಝಾಖರ್ಂಡ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಾತಾಡುವ ಮಗಧಿ, ಮೈಥಿಲಿ, ಬಿಹಾರಿ, ಚಾದ್ರಿ, ಪಹಾಡಿ, ಗಢವಾಲಿ, ಡೋಗ್ರಿ, ಆಂಗಿಕ, ಬುಂದೇಲಿ, ರಾಜಸ್ತಾನಿ, ಛತ್ತೀಸಗಢೀ, ಬ್ರಜಭಾಷಾ ಹಾಗೂ ಖಡೀಬೋಲಿ ಹಿಂದೀ ಹೇರಿಕೆ- ದಬ್ಬಾಳಿಕೆಯ ಕಾರಣ ತಮ್ಮ ಸ್ಥಾನಮಾನ ಕಳೆದುಕೊಂಡಿವೆ. ಅವಧಿ ಮಾತಾಡುವವರ ಸಂಖ್ಯೆ 3.80 ಕೋಟಿ ಮಂದಿ. ವಿಶ್ವದ 29ನೆಯ ಅತಿಹೆಚ್ಚು ಜನಸಂಖ್ಯೆ ಮಾತಾಡುವ ಭಾಷೆಯಿದು. ಫಿಜಿ ಹಿಂದೀ ಎಂಬ ಹೆಸರು ಪಡೆದು ಆ ದೇಶದಲ್ಲಿ ಈ ನುಡಿಗಟ್ಟು ಬದುಕಿರುವುದು ವಿಡಂಬನೆಯೇ ಸರಿ. ಹಾಗೆಯೇ ಭೋಜಪುರಿ ಭಾಷಿಕರ ಸಂಖ್ಯೆ ನಾಲ್ಕು ಕೋಟಿ. ಇದನ್ನೂ ಹಿಂದಿಯ ಲೆಕ್ಕಕ್ಕೆ ಸೇರಿಸಿ ಎಣಿಸಿಕೊಳ್ಳಲಾಗಿದೆ. ಈ ಎಲ್ಲವೂ ಹಿಂದಿ ಭಾಷೆಯ ಭಿನ್ನ ನುಡಿಗಟ್ಟುಗಳು ಎಂಬ ಸುಳ್ಳನ್ನು ಪ್ರಚಾರ ಮಾಡಿಕೊಂಡು ಬರಲಾಗಿದೆ. ಈ ಭಾಷಿಕರನ್ನೂ ಹಿಂದಿ ಮಾತೃಭಾಷಿಕರೆಂಬ ಲೆಕ್ಕಕ್ಕೆ ಸೇರಿಸಿಕೊಂಡಿರುವುದು ಜನಗಣತಿಗಳ ಮಹಾಮೋಸ. ಮುತ್ತಿಗೆ ಹಾಕಿರುವ ಹಿಂದಿ ದಬ್ಬಾಳಿಕೆಯನ್ನು ಈ ನುಡಿಗಟ್ಟುಗಳು ಒಪ್ಪಿಕೊಳ್ಳತೊಡಗಿವೆ. ತಮ್ಮ ಭಾಷೆ ಹಿಂದಿ ಎಂದೇ ಬರೆಯಿಸತೊಡಗಿವೆ. ಈ ವಂಚನೆಯ ಲೆಕ್ಕ ಹಿಡಿದರೆ ಅಸಲಿ ಹಿಂದಿ ಸಮುದ್ರದ ಪುಟ್ಟ ದ್ವೀಪಗಳಾಗಿರುವ ಅವುಗಳಿಗೆ ಕನ್ನಡ, ತೆಲುಗು, ತಮಿಳು ಮಲೆಯಾಳದಂತಹ ರಕ್ಷಣೆ, ಮೂಲಸೌಲಭ್ಯಗಳು ಇಲ್ಲ. ಹೀಗಾಗಿ ಶರಣಾಗದೆ ವಿಧಿಯಿಲ್ಲ. ಹೀಗಾಗಿ ಹೊಸ್ತಿಲೊಳಗಣ ಭಾಷೆಗಳಾಗಿಯೂ, ಅಡಿಗೆ ಮನೆ, ಹಿತ್ತಿಲ ಭಾಷೆಗಳಾಗಿಯೂ ಮೂಲೆಗುಂಪಾಗತೊಡಗಿವೆ. ಹಿಂದಿ ಭಾಷಿಕರ ಪ್ರಮಾಣ ಶೇ.43.63 ರಿಂದ ಶೇ.20ಕ್ಕೆ ಕುಸಿಯುತ್ತದೆ.

ಹಿಂದಿ
Courtesy: Facebook

ಉತ್ತರ ಭಾರತ ನಿಜವಾಗಿಯೂ ಹಿಂದಿ ಭಾಷಿಕ ಸೀಮೆಯೇ ಆಗಿದ್ದಲ್ಲಿ ಪ್ರತಿವರ್ಷ ಅಲ್ಲಿ ಲಕ್ಷಾಂತರ ಶಾಲಾಮಕ್ಕಳು ಹಿಂದಿ ಭಾಷೆಯ ಪರೀಕ್ಷೆಯಲ್ಲಿ ಫೇಲಾಗುತ್ತಿರುವುದು ಯಾಕೆ? ಉದಾಹರಣೆಗೆ 2019ರಲ್ಲಿ ಹತ್ತು ಮತ್ತು ಹನ್ನೆರಡನೆಯ ತರಗತಿಗಳ ಹಿಂದಿ ಪರೀಕ್ಷೆಗಳಲ್ಲಿ ಹತ್ತು ಲಕ್ಷ ವಿದ್ಯಾರ್ಥಿಗಳು ಫೇಲಾದರು. ಈ ಬೆಳವಣಿಗೆಯ ಹಿಂದಿನ ಕಟುಸತ್ಯವೆಂದರೆ ಉತ್ತರ ಭಾರತದ ಬಹುತೇಕರ ಮಾತೃಭಾಷೆ ಹಿಂದಿ ಅಲ್ಲ. ಅವರ ಮಾತೃಭಾಷೆಗಳು ನೂರಾರು ಇಲ್ಲವೇ ಸಾವಿರಾರು ವರ್ಷಗಳಿಂದ ವಿಕಾಸಗೊಂಡು ಭಾಷಿಕರ ಬಾಯಲ್ಲಿ ನಲಿಯುವಂತಹವು. ಅವರ ಬದುಕುಗಳೊಂದಿಗೆ ಬೆಸೆದುಕೊಂಡಂತಹವು. ಸಂಸ್ಕೃತ ಭೂಯಿಷ್ಟ ಹಿಂದಿ ಭಾಷೆಗೆ ಹೋಲಿಸಿದರೆ ಸುಲಿದ ಬಾಳೆ ಅಥವಾ ತಣಿದ ಉಷ್ಣದ ಹಾಲಿನಂತಹವು.

ಭಾಷೆಯೊಂದು ಸಾಯುವುದೆಂದರೆ ಸಂವಹನದ ಮಾಧ್ಯಮವೊಂದು ಸತ್ತಂತೆ. ಆ ಭಾಷೆಯನ್ನು ಆಡುವ ಜನರ ಇತಿಹಾಸ, ಪರಂಪರೆ, ನಂಬಿಕೆಗಳು, ಪದ್ಧತಿಗಳು, ಸಂಸ್ಕೃತಿಯ ಮುಂದುವರಿಕೆ ಮುರಿದುಬಿದ್ದಂತೆ. ರಾಜಸ್ತಾನಿ ಭಾಷೆಯಲ್ಲಿ ಒಂಟೆಗೆ 45 ಭಿನ್ನ ಹೆಸರುಗಳಿವೆಯಂತೆ. ಅಂತೆಯೇ ತಿಂಗಳು ತಿಂಗಳಿಗೂ ಬದಲಾಗುವ ಮೋಡಗಳಿಗೂ ಅಷ್ಟೇ ಸಂಖ್ಯೆಯ ಹೆಸರುಗಳಿವೆಯಂತೆ. ಈಗ ಅಳಿದುಹೋಗಿರುವ ಭಾಷೆಗಳಲ್ಲೂ ಇಂತಹ ಸಿರಿವಂತಿಕೆ ಇದ್ದಿರಬಹುದು. ಕಳೆದ ಐವತ್ತು ವರ್ಷಗಳಲ್ಲಿ 220 ಭಾರತೀಯ ಭಾಷೆಗಳನ್ನು ಕೊಂದು ಹುಗಿಯಲಾಗಿದೆ.

ಹಿಂದಿ ಭಾಷಿಕರ ಪ್ರಮಾಣ ಶೇ.43 ಎಂದು ವಾದಕ್ಕಾಗಿ ಒಂದು ಗಳಿಗೆ ಒಪ್ಪಿಕೊಂಡರೂ, ಹಿಂದಿ ಮಾತೃಭಾಷೆ ಅಲ್ಲದವರ ಪ್ರಮಾಣ ಶೇ.57ರಷ್ಟಿದೆ ಎಂದಾಯಿತು. ಶೇ. 20 ಮಂದಿ ಆಡುವ ಭಾಷೆಯನ್ನು ಶೇ.80 ಮಂದಿಯ ಮೇಲೆ ಹೇರುವುದು ಸಾಂಸ್ಕೃತಿಕ ಸರ್ವಾಧಿಕಾರ.


ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...