Homeಅಂಕಣಗಳುಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಉತ್ತರ ಭಾರತ ನಿಜವಾಗಿಯೂ ಹಿಂದಿ ಭಾಷಿಕ ಸೀಮೆಯೇ ಆಗಿದ್ದಲ್ಲಿ ಪ್ರತಿವರ್ಷ ಅಲ್ಲಿ ಲಕ್ಷಾಂತರ ಶಾಲಾಮಕ್ಕಳು ಹಿಂದಿ ಭಾಷೆಯ ಪರೀಕ್ಷೆಯಲ್ಲಿ ಫೇಲಾಗುತ್ತಿರುವುದು ಯಾಕೆ?

- Advertisement -
- Advertisement -

‘ನನ್ನ ತಾಯಿನುಡಿಯು ನಿನ್ನ ಪ್ರಭುತ್ವದ ಅಡಿಪಾಯಗಳನ್ನು ಅಲ್ಲಾಡಿಸತೊಡಗಿದ್ದರೆ, ನೀನು ನಿನ್ನ ರಾಜ್ಯವನ್ನು ನನ್ನ ನೆಲದ ಮೇಲೆ ಕಟ್ಟಿದ್ದೀಯಾ ಎಂದೇ ಅರ್ಥ’- ತುರ್ಕಿ ಸರ್ಕಾರ 1992ರಲ್ಲಿ ಹತ್ಯೆ ಮಾಡಿದ ಕುರ್ಡಿಶ್ ಬರೆಹಗಾರ ಮೂಸಾ ಅ್ಯಂಟರ್‌ನ ಈ ನುಡಿಗಳಲ್ಲಿ ಸಾರ್ವತ್ರಿಕ ಸತ್ಯವೊಂದು ನಿಹಿತವಾಗಿದೆ.

ರಾಜಕೀಯ ಜನತಾಂತ್ರಿಕ ವ್ಯವಸ್ಥೆಯನ್ನು ಒಂದೆಡೆ ಗೌರವಿಸುತ್ತ, ಮತ್ತೊಂದೆಡೆ ಭಾಷಾ ಜನತಂತ್ರವನ್ನು ತುಳಿಯುವುದು ಆಷಾಡಭೂತಿತನ ಅಲ್ಲವೇ? ‘ಒಂದು ದೇಶ, ಒಂದು ಧರ್ಮ, ಒಂದು ಭಾಷೆ, ಒಂದು ಪಕ್ಷ, ಒಬ್ಬ ನಾಯಕ’ ಎಂಬುದು ಪರಿಶುದ್ಧ ಫ್ಯಾಸಿಸಮ್ಮೇ ವಿನಾ ಜನತಂತ್ರ ಅಲ್ಲ. ಹಿಂದಿ-ಹಿಂದು-ಹಿಂದುಸ್ತಾನ ಎಂಬ ಸಾಂಸ್ಕೃತಿಕ ರಾಷ್ಟ್ರವಾದದ ಘೋಷಣೆ ಕೋಮುವಾದ- ಬಹುಸಂಖ್ಯಾತವಾದದ ಹೆಗ್ಗುರುತು.

ನರೇಂದ್ರ ಮೋದಿ ಸರ್ಕಾರದ ಸೈದ್ಧಾಂತಿಕ ಬೇರುಗಳು ಹಿಂದೀ-ಹಿಂದು-ಹಿಂದುತ್ವವಾದಿ ಚಿಂತನೆಯ ಮೂಲದವು. ಹೀಗಾಗಿ ಅವರು ಅಧಿಕಾರ ಹಿಡಿದೊಡನೆ ಹಿಂದೀ ಭಾಷೆಗೆ ದೊರೆಯತೊಡಗಿರುವ ಅಗ್ರಪ್ರಾಶಸ್ತ್ಯವು ಕಳೆದ ಐದಾರು ವರ್ಷಗಳಲ್ಲಿ ‘ಹಿಂದೀ ಸಾಮ್ರಾಜ್ಯಶಾಹಿ’ಯ ಆತಂಕವನ್ನು ಹುಟ್ಟಿಹಾಕಿದೆ.

2011ರ ಜನಗಣತಿಯ ಪ್ರಕಾರ ಭಾರತದಲ್ಲಿ ದಾಖಲಿಸಿರುವ ಆಡು ಭಾಷೆಗಳು 19,569. ಹತ್ತು ಲಕ್ಷಕ್ಕಿಂತ ಹೆಚ್ಚು ಮಂದಿ ಮಾತಾಡುವ ಭಾಷೆಗಳು 40. ಒಂದು ಲಕ್ಷಕ್ಕಿಂತ ಹೆಚ್ಚು ಮಂದಿ ಮಾತಾಡುವ ಭಾಷೆಗಳು 60. ಹತ್ತು ಸಾವಿರಕ್ಕಿಂತ ಹೆಚ್ಚು ಮಂದಿ ಆಡುವ ಭಾಷೆಗಳ ಸಂಖ್ಯೆ 122. ಸಂಸ್ಕೃತವನ್ನು ತಮ್ಮ ತಾಯಿನುಡಿ ಎಂದು ಈ ಜನಗಣತಿಯಲ್ಲಿ ಬರೆಯಿಸಿರುವವರ ಸಂಖ್ಯೆ 24,821. ಕೇಂದ್ರ ಸರ್ಕಾರದ ಭಾಷಾ ಅಭಿವೃದ್ಧಿ ಯೋಜನೆಗಳ ಸಿಂಹಪಾಲು ಸಲ್ಲುತ್ತಿರುವುದು ಸಂಸ್ಕೃತಕ್ಕೇ.

19ನೆಯ ಶತಮಾನದಲ್ಲಿ ಮುಸಲ್ಮಾನರ ಭಾಷೆಯೆಂದು ಹಣೆಪಟ್ಟಿ ಹಚ್ಚಲಾದ ಉರ್ದುವನ್ನು (ಪರ್ಷಿಯನೀಕೃತ ಹಿಂದುಸ್ತಾನಿ) ತೊಲಗಿಸಿ ಅದರ ಜಾಗದಲ್ಲಿ ಸಂಸ್ಕೃತೀಕೃತ ಹಿಂದುಸ್ತಾನಿಯಾದ ಹಿಂದಿಗೆ ಪಟ್ಟ ಕಟ್ಟುವ ಮೇಲಾಟ ಜರುಗಿತು. ಉರ್ದು ಮುಸ್ಲಿಮ್ ಆದರೆ ಹಿಂದೀ ಹಿಂದೂ ಆಯಿತು. ಹಿಂದೀ ಭಾಷಿಕರ ಸಂಖ್ಯೆಯನ್ನು ಉಬ್ಬಿಸಿ ಸತ್ಯದೂರ ಕಥನ ಕಟ್ಟಲಾಯಿತು. ಅಂದಿನ ಬ್ರಿಟಿಷ್ ಆಡಳಿತವನ್ನು ನಂಬಿಸುವ ಈ ತಂತ್ರ ಫಲ ನೀಡಿತು. ಉರ್ದು ಅದಾಗಲೇ ಆಡಳಿತ ಭಾಷೆಯಾಗಿತ್ತು. ಅದರೊಂದಿಗೆ ಹಿಂದಿಗೂ ಆಡಳಿತ ಭಾಷೆಯ ಸ್ಥಾನ ಗಿಟ್ಟಿತು. ಅಲ್ಲಿಯತನಕ ನ್ಯಾಯಾಲಯದ ದಾಖಲೆ ದಸ್ತಾವೇಜುಗಳು ಕೇವಲ ಉರ್ದುವಿನಲ್ಲೇ ಇರುತ್ತಿದ್ದ ಕಾರಣ, ಆ ಭಾಷೆಯನ್ನು ಅರಿಯದ ಜನಕ್ಕೆ ದಾಖಲೆಗಳಲ್ಲಿ ಏನು ಬರೆದಿದೆಯೆಂದೇ ಅರ್ಥವಾಗುತ್ತಿರಲಿಲ್ಲ. ದೇಶವಿಭಜನೆಯ ನಂತರ ಇದೇ ಪರಿಸ್ಥಿತಿಯನ್ನು ಹಿಂದೀ ಭಾಷಿಕರಲ್ಲದವರು ಎದುರಿಸಬೇಕಾಯಿತು. ಉದಾಹರಣೆಗೆ ಐಎಎಸ್-ಐಪಿಎಸ್ ಮುಂತಾದ ಸಿವಿಲ್ ಸರ್ವೀಸಸ್ ಪ್ರವೇಶ ಪರೀಕ್ಷೆಗಳು, ಐಐಟಿ ಮತ್ತು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗಳ ಪ್ರವೇಶ ಪರೀಕ್ಷೆಗಳನ್ನು ಹಿಂದಿಯ ವಿನಾ ಉಳಿದ ಯಾವುದೇ ಮಾತೃಭಾಷಾ ಮಾಧ್ಯಮಗಳಲ್ಲಿ ಬರೆಯುವಂತಿಲ್ಲ. ಅಲಹಾಬಾದ್ ಹೈಕೋರ್ಟ್ ತನ್ನ ವ್ಯವಹಾರಗಳನ್ನು ಹಿಂದಿಯಲ್ಲಿ ನಡೆಸಲು ಅವಕಾಶ ನೀಡಲಾಗಿದೆ. ಆದರೆ ದಕ್ಷಿಣ ರಾಜ್ಯಗಳ ಹೈಕೋರ್ಟುಗಳು ಪ್ರಾದೇಶಿಕ ಭಾಷೆಗಳಲ್ಲಿ ವ್ಯವಹರಿಸಲು ಅವಕಾಶ ನಿರಾಕರಿಸಲಾಗಿದೆ. ಕಡೆಗೆ ಸಂವಿಧಾನದ ಪಠ್ಯದ ವಿಷಯದಲ್ಲೂ ಅಷ್ಟೇ. ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಪಠ್ಯಗಳು ಮಾತ್ರವೇ ಸರ್ಕಾರದಿಂದ ಮಾನ್ಯತೆ ಪಡೆದ ಪಠ್ಯಗಳು.

ಹಿಂದಿಯ ದೈತ್ಯ ರಥಚಕ್ರಗಳಡಿ ದಕ್ಷಿಣದ ಭಾಷೆಗಳಿರಲಿ, ಉತ್ತರ ಭಾರತದ ತಾಯಿನುಡಿಗಳೂ ನುಗ್ಗಾಗತೊಡಗಿವೆ. ಉತ್ತರ ಮತ್ತು ಮಧ್ಯಭಾರತದ 50ಕ್ಕೂ ಹೆಚ್ಚು ಭಾಷೆಗಳು ತಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಂಡು ಅಳಿವಿನ ಅಂಚು ತಲುಪಿವೆ. ಭೋಜಪುರಿ, ಅವಧಿ, ಹರಿಯಾಣ್ವಿ, ಆದಿವಾಸಿ ಭಾರತದ ಗೊಂಡಿ, ಒರಾನಿ, ಸಂತಾಲ್, ಮುಂದಾರಿ ಇತ್ಯಾದಿ ಭಾಷೆಗಳು, ಬಿಹಾರ, ಝಾಖರ್ಂಡ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಾತಾಡುವ ಮಗಧಿ, ಮೈಥಿಲಿ, ಬಿಹಾರಿ, ಚಾದ್ರಿ, ಪಹಾಡಿ, ಗಢವಾಲಿ, ಡೋಗ್ರಿ, ಆಂಗಿಕ, ಬುಂದೇಲಿ, ರಾಜಸ್ತಾನಿ, ಛತ್ತೀಸಗಢೀ, ಬ್ರಜಭಾಷಾ ಹಾಗೂ ಖಡೀಬೋಲಿ ಹಿಂದೀ ಹೇರಿಕೆ- ದಬ್ಬಾಳಿಕೆಯ ಕಾರಣ ತಮ್ಮ ಸ್ಥಾನಮಾನ ಕಳೆದುಕೊಂಡಿವೆ. ಅವಧಿ ಮಾತಾಡುವವರ ಸಂಖ್ಯೆ 3.80 ಕೋಟಿ ಮಂದಿ. ವಿಶ್ವದ 29ನೆಯ ಅತಿಹೆಚ್ಚು ಜನಸಂಖ್ಯೆ ಮಾತಾಡುವ ಭಾಷೆಯಿದು. ಫಿಜಿ ಹಿಂದೀ ಎಂಬ ಹೆಸರು ಪಡೆದು ಆ ದೇಶದಲ್ಲಿ ಈ ನುಡಿಗಟ್ಟು ಬದುಕಿರುವುದು ವಿಡಂಬನೆಯೇ ಸರಿ. ಹಾಗೆಯೇ ಭೋಜಪುರಿ ಭಾಷಿಕರ ಸಂಖ್ಯೆ ನಾಲ್ಕು ಕೋಟಿ. ಇದನ್ನೂ ಹಿಂದಿಯ ಲೆಕ್ಕಕ್ಕೆ ಸೇರಿಸಿ ಎಣಿಸಿಕೊಳ್ಳಲಾಗಿದೆ. ಈ ಎಲ್ಲವೂ ಹಿಂದಿ ಭಾಷೆಯ ಭಿನ್ನ ನುಡಿಗಟ್ಟುಗಳು ಎಂಬ ಸುಳ್ಳನ್ನು ಪ್ರಚಾರ ಮಾಡಿಕೊಂಡು ಬರಲಾಗಿದೆ. ಈ ಭಾಷಿಕರನ್ನೂ ಹಿಂದಿ ಮಾತೃಭಾಷಿಕರೆಂಬ ಲೆಕ್ಕಕ್ಕೆ ಸೇರಿಸಿಕೊಂಡಿರುವುದು ಜನಗಣತಿಗಳ ಮಹಾಮೋಸ. ಮುತ್ತಿಗೆ ಹಾಕಿರುವ ಹಿಂದಿ ದಬ್ಬಾಳಿಕೆಯನ್ನು ಈ ನುಡಿಗಟ್ಟುಗಳು ಒಪ್ಪಿಕೊಳ್ಳತೊಡಗಿವೆ. ತಮ್ಮ ಭಾಷೆ ಹಿಂದಿ ಎಂದೇ ಬರೆಯಿಸತೊಡಗಿವೆ. ಈ ವಂಚನೆಯ ಲೆಕ್ಕ ಹಿಡಿದರೆ ಅಸಲಿ ಹಿಂದಿ ಸಮುದ್ರದ ಪುಟ್ಟ ದ್ವೀಪಗಳಾಗಿರುವ ಅವುಗಳಿಗೆ ಕನ್ನಡ, ತೆಲುಗು, ತಮಿಳು ಮಲೆಯಾಳದಂತಹ ರಕ್ಷಣೆ, ಮೂಲಸೌಲಭ್ಯಗಳು ಇಲ್ಲ. ಹೀಗಾಗಿ ಶರಣಾಗದೆ ವಿಧಿಯಿಲ್ಲ. ಹೀಗಾಗಿ ಹೊಸ್ತಿಲೊಳಗಣ ಭಾಷೆಗಳಾಗಿಯೂ, ಅಡಿಗೆ ಮನೆ, ಹಿತ್ತಿಲ ಭಾಷೆಗಳಾಗಿಯೂ ಮೂಲೆಗುಂಪಾಗತೊಡಗಿವೆ. ಹಿಂದಿ ಭಾಷಿಕರ ಪ್ರಮಾಣ ಶೇ.43.63 ರಿಂದ ಶೇ.20ಕ್ಕೆ ಕುಸಿಯುತ್ತದೆ.

ಹಿಂದಿ
Courtesy: Facebook

ಉತ್ತರ ಭಾರತ ನಿಜವಾಗಿಯೂ ಹಿಂದಿ ಭಾಷಿಕ ಸೀಮೆಯೇ ಆಗಿದ್ದಲ್ಲಿ ಪ್ರತಿವರ್ಷ ಅಲ್ಲಿ ಲಕ್ಷಾಂತರ ಶಾಲಾಮಕ್ಕಳು ಹಿಂದಿ ಭಾಷೆಯ ಪರೀಕ್ಷೆಯಲ್ಲಿ ಫೇಲಾಗುತ್ತಿರುವುದು ಯಾಕೆ? ಉದಾಹರಣೆಗೆ 2019ರಲ್ಲಿ ಹತ್ತು ಮತ್ತು ಹನ್ನೆರಡನೆಯ ತರಗತಿಗಳ ಹಿಂದಿ ಪರೀಕ್ಷೆಗಳಲ್ಲಿ ಹತ್ತು ಲಕ್ಷ ವಿದ್ಯಾರ್ಥಿಗಳು ಫೇಲಾದರು. ಈ ಬೆಳವಣಿಗೆಯ ಹಿಂದಿನ ಕಟುಸತ್ಯವೆಂದರೆ ಉತ್ತರ ಭಾರತದ ಬಹುತೇಕರ ಮಾತೃಭಾಷೆ ಹಿಂದಿ ಅಲ್ಲ. ಅವರ ಮಾತೃಭಾಷೆಗಳು ನೂರಾರು ಇಲ್ಲವೇ ಸಾವಿರಾರು ವರ್ಷಗಳಿಂದ ವಿಕಾಸಗೊಂಡು ಭಾಷಿಕರ ಬಾಯಲ್ಲಿ ನಲಿಯುವಂತಹವು. ಅವರ ಬದುಕುಗಳೊಂದಿಗೆ ಬೆಸೆದುಕೊಂಡಂತಹವು. ಸಂಸ್ಕೃತ ಭೂಯಿಷ್ಟ ಹಿಂದಿ ಭಾಷೆಗೆ ಹೋಲಿಸಿದರೆ ಸುಲಿದ ಬಾಳೆ ಅಥವಾ ತಣಿದ ಉಷ್ಣದ ಹಾಲಿನಂತಹವು.

ಭಾಷೆಯೊಂದು ಸಾಯುವುದೆಂದರೆ ಸಂವಹನದ ಮಾಧ್ಯಮವೊಂದು ಸತ್ತಂತೆ. ಆ ಭಾಷೆಯನ್ನು ಆಡುವ ಜನರ ಇತಿಹಾಸ, ಪರಂಪರೆ, ನಂಬಿಕೆಗಳು, ಪದ್ಧತಿಗಳು, ಸಂಸ್ಕೃತಿಯ ಮುಂದುವರಿಕೆ ಮುರಿದುಬಿದ್ದಂತೆ. ರಾಜಸ್ತಾನಿ ಭಾಷೆಯಲ್ಲಿ ಒಂಟೆಗೆ 45 ಭಿನ್ನ ಹೆಸರುಗಳಿವೆಯಂತೆ. ಅಂತೆಯೇ ತಿಂಗಳು ತಿಂಗಳಿಗೂ ಬದಲಾಗುವ ಮೋಡಗಳಿಗೂ ಅಷ್ಟೇ ಸಂಖ್ಯೆಯ ಹೆಸರುಗಳಿವೆಯಂತೆ. ಈಗ ಅಳಿದುಹೋಗಿರುವ ಭಾಷೆಗಳಲ್ಲೂ ಇಂತಹ ಸಿರಿವಂತಿಕೆ ಇದ್ದಿರಬಹುದು. ಕಳೆದ ಐವತ್ತು ವರ್ಷಗಳಲ್ಲಿ 220 ಭಾರತೀಯ ಭಾಷೆಗಳನ್ನು ಕೊಂದು ಹುಗಿಯಲಾಗಿದೆ.

ಹಿಂದಿ ಭಾಷಿಕರ ಪ್ರಮಾಣ ಶೇ.43 ಎಂದು ವಾದಕ್ಕಾಗಿ ಒಂದು ಗಳಿಗೆ ಒಪ್ಪಿಕೊಂಡರೂ, ಹಿಂದಿ ಮಾತೃಭಾಷೆ ಅಲ್ಲದವರ ಪ್ರಮಾಣ ಶೇ.57ರಷ್ಟಿದೆ ಎಂದಾಯಿತು. ಶೇ. 20 ಮಂದಿ ಆಡುವ ಭಾಷೆಯನ್ನು ಶೇ.80 ಮಂದಿಯ ಮೇಲೆ ಹೇರುವುದು ಸಾಂಸ್ಕೃತಿಕ ಸರ್ವಾಧಿಕಾರ.


ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...