Homeಮುಖಪುಟಶರದ್ ಪವಾರ್ 'OBC': ವೈರಲ್‌ ಆದ ಪ್ರಮಾಣಪತ್ರ

ಶರದ್ ಪವಾರ್ ‘OBC’: ವೈರಲ್‌ ಆದ ಪ್ರಮಾಣಪತ್ರ

- Advertisement -
- Advertisement -

ಶರದ್ ಪವಾರ್ ಅವರನ್ನು ಒಬಿಸಿ ಎಂದು ತೋರಿಸುವ ಶಾಲಾ ಪ್ರಮಾಣಪತ್ರದ ಪ್ರತಿ ಸಾಮಾಜಿಕ ಮಾದ್ಯಮಗಳಲ್ಲಿ ವೈರಲ್ ಆಗಿದ್ದು, ಎನ್‌ಸಿಪಿ ಇದನ್ನು ನಕಲಿ ಮತ್ತು ಬಾಲಿಶ ಕೃತ್ಯ ಎಂದು ಹೇಳಿದೆ.

ಪವಾರ್ ಅವರ ಪುತ್ರಿ ಮತ್ತು ಎನ್‌ಸಿಪಿ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಮತ್ತು ಜಮಖೇಡ್‌ನ ಶಾಸಕರಾಗಿರುವ ರೋಹಿತ್ ಪವಾರ್ ಅವರು ಕೃತ್ಯವನ್ನು ಖಂಡಿಸಿದ್ದಾರೆ.

ಪವಾರ್‌ಗಳು ಮರಾಠ ಸಮುದಾಯದಿಂದ ಬಂದವರು ಮತ್ತು ಶರದ್ ಪವಾರ್ ಅವರು ಹಿರಿಯ ರಾಜಕಾರಣಿ. ಅವರು 4 ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು ಮತ್ತು ಮೂರು ಬಾರಿ ಕೇಂದ್ರ ಸಚಿವರಾಗಿದ್ದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವುದರ ಜೊತೆಗೆ ರಕ್ಷಣೆ ಇಲಾಖೆ, ಕೃಷಿಯಂತಹ ಖಾತೆಗಳನ್ನು ನಿರ್ವಹಿಸಿದ್ದಾರೆ. ರಾಜಕೀಯ ವಲಯದಲ್ಲಿ ಮರಾಠಾ ಸಮುದಾಯದ ಪ್ರಬಲ ವ್ಯಕ್ತಿ ಎಂಬ ಹೆಸರನ್ನು ಪಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರಿಯಾ ಸುಳೆ, ವೈರಲ್‌ ಆದ ಪ್ರಮಾಣಪತ್ರ ನಕಲಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಇಂತಹ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸುವುದು ದೊಡ್ಡ ವಿಷಯವಾಗಿದೆ. ಅಂತಹ ದಾಖಲೆಗಳನ್ನು ಪ್ರಸಾರ ಮಾಡುವುದು ಮತ್ತು ಆರೋಪಗಳನ್ನು ಮಾಡುವುದು ನಿಜವಾಗಿಯೂ ಬಾಲಿಶವಾಗಿದೆ ಎಂದು ಹೇಳಿದ್ದಾರೆ.

ಪ್ರಮಾಣಪತ್ರವು ಇಂಗ್ಲಿಷ್‌ನಲ್ಲಿದೆ, ಪವಾರ್ ಅವರು 10ನೇ ತರಗತಿಯಲ್ಲಿ ಓದುತ್ತಿದ್ದಾಗ ಅಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಗಳು ಇದ್ದವೇ? ಎಂದು ಸುಪ್ರಿಯಾ ಸುಳೆ ಪ್ರಶ್ನಿಸಿದ್ದಾರೆ.

ಶಾಸಕ ರೋಹಿತ್ ಪವಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಂತಹ ನಕಲಿ ದಾಖಲೆಗಳ ಚಲಾವಣೆಯ ಹಿಂದೆ ಬಿಜೆಪಿ ಕೈವಾಡವಿದೆ. ಇದು ಬಿಜೆಪಿಯ ಸಂಸ್ಕೃತಿ, ಅವರಿಗೆ ಸತ್ಯ ಗೊತ್ತಿಲ್ಲ, ಅವರು ನಕಲಿ ವಿಷಯಗಳನ್ನು ಹರಿಬಿಡುತ್ತಾರೆ. ಇದನ್ನು ಹರಡುವುದರ ಹಿಂದೆ ಕೆಲವು ಸಾಮಾಜಿಕ ಮಾದ್ಯಮದವರು ಮತ್ತು ಬಿಜೆಪಿಯ ಟ್ರೋಲ್ ಪಡೆ ಇದ್ದಾರೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಮೀಸಲಾತಿ ಪರ ಹೋರಾಟಗಾರ ಮನೋಜ್‌ ಜಾರಂಗೆ ಇತ್ತೀಚೆಗೆ ಉಪವಾಸ ಸತ್ಯಾಗ್ರಹವನ್ನು ಹಿಂತೆಗೆದುಕೊಂಡಿದ್ದರು. ಸರಕಾರ ಮರಾಠರಿಗೆ ಮೀಸಲಾತಿ ನೀಡುವ ಭರವಸೆ ನೀಡಿದೆ. ಆದರೆ ಸರಕಾರದ ನಿಲುವಿಗೆ ಒಬಿಸಿ ಸಮುದಾಯ ವ್ಯಾಪಕವಾದಂತಹ ವಿರೋಧವನ್ನು ವ್ಯಕ್ತಪಡಿಸಿದೆ. ಮರಾಠರಿಗೆ ಒಬಿಸಿಯಡಿ ಮೀಸಲಾತಿ ನೀಡಿದರೆ ರಾಜ್ಯದಲ್ಲಿ ವ್ಯಾಪಕವಾಗಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದೆ.

ಇದನ್ನು ಓದಿ: ಮಹಿಳಾ ಪತ್ರಕರ್ತೆ ಜೊತೆ ಅನುಚಿತ ವರ್ತನೆ: ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಸಮನ್ಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...