Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು 'ದ್ವೇಷದ ಸಂಸ್ಕೃತಿ': ಪ್ರತಿಪಕ್ಷಗಳಿಂದ ವಾಗ್ದಾಳಿ

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು ‘ದ್ವೇಷದ ಸಂಸ್ಕೃತಿ’: ಪ್ರತಿಪಕ್ಷಗಳಿಂದ ವಾಗ್ದಾಳಿ

- Advertisement -
- Advertisement -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದ್ದು, ಇದೀಗ ವಿರೋಧ ಪಕ್ಷಗಳು ಮತ್ತು ಮುಸ್ಲಿಂ ಸಂಘಟನೆಗಳು ಈ ಘಟನೆಯನ್ನು ”ದ್ವೇಷದ ಸಂಸ್ಕೃತಿ” ಎಂದು ಕರೆದಿವೆ.

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿರುವ ವೀಡಿಯೊದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.

ಮಗು ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಶುವಿಹಾರದಲ್ಲಿ ಓದುತ್ತಿದೆ ಎಂದು ಆತನ ಪೋಷಕರು ತಿಳಿಸಿದ್ದಾರೆ. ಮಗುವಿನ ತಂದೆ ಹೆಸರು ಇರ್ಷಾದ್ ತ್ಯಾಗಿ, ಅವರು ವೃತ್ತಿಯಲ್ಲಿ ರೈತರಾಗಿದ್ದಾರೆ. ಇನ್ನು ಶಿಕ್ಷಕಿಯನ್ನು ತ್ರಿಪ್ತಾ ತ್ಯಾಗಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದ ಯುಪಿ ಶಿಕ್ಷಕಿ: ವಿಡಿಯೋ ವೈರಲ್

ಪ್ರತಿಪಕ್ಷಗಳಿಂದ ಖಂಡನೆ:

”ದ್ವೇಷದ ಸಂಸ್ಕೃತಿ: ನೇಹಾ ಪಬ್ಲಿಕ್ ಸ್ಕೂಲ್‌ನ ತ್ರಿಪ್ತ ತ್ಯಾಗಿ ಎನ್ನುವ ಶಿಕ್ಷಕಿ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂದೂ ವಿದ್ಯಾರ್ಥಿಗಳಿಂದ ಥಳಿಸಲು ಒತ್ತಾಯಿಸಸಿದ್ದಾರೆ. ಇದು ನಿಜವಾಗಿದ್ದರೆ, ಯೋಗಿ ಜೀ ಮಾತನಾಡುತ್ತಾರೆಯೇ? ಮೋದಿಜಿ ಇದನ್ನು ಸಾರ್ವಜನಿಕವಾಗಿ ಖಂಡಿಸುವರೇ?
ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದೇ? ಅಥವಾ “ದ್ವೇಷ”ದ ಸಂಸ್ಕೃತಿಯು ಪ್ರವರ್ಧಮಾನಕ್ಕೆ ಬರಲು ಬಿಡುವುದೇ? ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

 

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ”ಮುಗ್ಧ ಮಕ್ಕಳ ಮನಸ್ಸಿನಲ್ಲಿ ತಾರತಮ್ಯದ ವಿಷಬೀಜವನ್ನು ಬಿತ್ತುವುದು, ಶಾಲೆಯಂತಹ ಪವಿತ್ರ ಸ್ಥಳವನ್ನು ದ್ವೇಷದ ಮಾರುಕಟ್ಟೆಯಾಗಿ ಪರಿವರ್ತಿಸುವುದು – ಒಬ್ಬ ಶಿಕ್ಷಕನು ದೇಶಕ್ಕಾಗಿ ಏನನ್ನೂ ಮಾಡಲಾರನು” ಎಂದಿದ್ದಾರೆ.

”ಬಿಜೆಪಿಯವರು ಇದೇ ಸೀಮೆಎಣ್ಣೆಯನ್ನು ಭಾರತದ ಮೂಲೆ ಮೂಲೆಗೆ ಹರಡಿ ಬೆಂಕಿ ಹಚ್ಚಿದ್ದಾರೆ” ಎಂದು ರಾಹುಲ್ ಕಿಡಿಕಾರಿದ್ದಾರೆ.

”ಮಕ್ಕಳು ಭಾರತದ ಭವಿಷ್ಯ – ಅವರನ್ನು ದ್ವೇಷಿಸಬೇಡಿ, ನಾವೆಲ್ಲರೂ ಒಟ್ಟಾಗಿ ಪ್ರೀತಿಯನ್ನು ಕಲಿಸಬೇಕು” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಕೂಡ ಈ ಘಟನೆಯನ್ನು ”ಅತಿರೇಕದ ಹಿಂದೂ ಮೂಲಭೂತೀಕರಣದ ಫಲಿತಾಂಶ” ಎಂದು ಹೇಳಿದೆ.

”ಮುಸ್ಲಿಂ ಹುಡುಗನಿಗೆ ಈ ರೀತಿ ಅವಮಾನ ಮಾಡಿದ ಬಳಿಕ ಅವನ ಮನಸ್ಥಿತಿಯನ್ನು ಬದಲಾಯಿಸಲು ಸಾಧ್ಯವೇ?” ಎಂದು ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರಿನಾಟೆ ಪ್ರಶ್ನೆ ಮಾಡಿದ್ದಾರೆ.

”ಮಗುವಿನ ತಂದೆ ನ್ಯಾಯಾಲಯಕ್ಕೆ ಅಲೆದಾಡಲು ನಾವು ಶಕ್ತರಲ್ಲ ಹಾಗಾಗಿ ನಾವು ಎಫ್‌ಐಆರ್ [ಪ್ರಥಮ ಮಾಹಿತಿ ವರದಿ] ದಾಖಲಿಸುವುದಿಲ್ಲ” ಎಂದು ಹೇಳುತ್ತಾರೆ. ಆದರೆ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಎಫ್‌ಐಆರ್ ದಾಖಲಿಸಬೇಕು ಶ್ರೀನೇಟ್ ವೀಡಿಯೊದಲ್ಲಿ ಹೇಳಿದ್ದಾರೆ.

ವೀಡಿಯೋ ನೋಡಿದ ನಂತರ ಮಗು ಮತ್ತು ಆತನ ಪೋಷಕರ ಹೇಳಿಕೆಗಳನ್ನು ಮರುಪಡೆದುಕೊಂಡು ಪ್ರಕರಣ ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹುಡುಗನ ತಂದೆ ಇರ್ಷಾದ್ ಮಾತನಾಡಿ, ”ಶಿಕ್ಷಕರು ನನ್ನ ಮಗನನ್ನು ಏಕೆ ಈ ರೀತಿ ನಡೆಸಿಕೊಂಡರು ಎಂದು ನಮಗೆ ತಿಳಿದಿಲ್ಲ. ಅವರು ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದು ದುಃಖಕರ ಸಂಗತಿ” ಎಂದು ಹೇಳಿದರು.

”ಸಮಾಜ ಧ್ರುವೀಕರಣಗೊಂಡಿದೆ, ಈ ಹಿಂದೂ-ಮುಸ್ಲಿಂ ವಿಷಯ ಶಾಲೆಗಳಿಗೂ ತಲುಪಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಶುಕ್ರವಾರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮೂಲ ಶಿಕ್ಷಾ ಇಲಾಖೆಯ ಅಧಿಕಾರಿ ಶುಭಂ ಶುಕ್ಲಾ, ”ಶಿಕ್ಷಕಿ ಹಾಗೂ ಆ ಶಾಲೆಯ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...