Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು 'ದ್ವೇಷದ ಸಂಸ್ಕೃತಿ': ಪ್ರತಿಪಕ್ಷಗಳಿಂದ ವಾಗ್ದಾಳಿ

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು ‘ದ್ವೇಷದ ಸಂಸ್ಕೃತಿ’: ಪ್ರತಿಪಕ್ಷಗಳಿಂದ ವಾಗ್ದಾಳಿ

- Advertisement -
- Advertisement -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದ್ದು, ಇದೀಗ ವಿರೋಧ ಪಕ್ಷಗಳು ಮತ್ತು ಮುಸ್ಲಿಂ ಸಂಘಟನೆಗಳು ಈ ಘಟನೆಯನ್ನು ”ದ್ವೇಷದ ಸಂಸ್ಕೃತಿ” ಎಂದು ಕರೆದಿವೆ.

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿರುವ ವೀಡಿಯೊದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.

ಮಗು ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಶುವಿಹಾರದಲ್ಲಿ ಓದುತ್ತಿದೆ ಎಂದು ಆತನ ಪೋಷಕರು ತಿಳಿಸಿದ್ದಾರೆ. ಮಗುವಿನ ತಂದೆ ಹೆಸರು ಇರ್ಷಾದ್ ತ್ಯಾಗಿ, ಅವರು ವೃತ್ತಿಯಲ್ಲಿ ರೈತರಾಗಿದ್ದಾರೆ. ಇನ್ನು ಶಿಕ್ಷಕಿಯನ್ನು ತ್ರಿಪ್ತಾ ತ್ಯಾಗಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದ ಯುಪಿ ಶಿಕ್ಷಕಿ: ವಿಡಿಯೋ ವೈರಲ್

ಪ್ರತಿಪಕ್ಷಗಳಿಂದ ಖಂಡನೆ:

”ದ್ವೇಷದ ಸಂಸ್ಕೃತಿ: ನೇಹಾ ಪಬ್ಲಿಕ್ ಸ್ಕೂಲ್‌ನ ತ್ರಿಪ್ತ ತ್ಯಾಗಿ ಎನ್ನುವ ಶಿಕ್ಷಕಿ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂದೂ ವಿದ್ಯಾರ್ಥಿಗಳಿಂದ ಥಳಿಸಲು ಒತ್ತಾಯಿಸಸಿದ್ದಾರೆ. ಇದು ನಿಜವಾಗಿದ್ದರೆ, ಯೋಗಿ ಜೀ ಮಾತನಾಡುತ್ತಾರೆಯೇ? ಮೋದಿಜಿ ಇದನ್ನು ಸಾರ್ವಜನಿಕವಾಗಿ ಖಂಡಿಸುವರೇ?
ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದೇ? ಅಥವಾ “ದ್ವೇಷ”ದ ಸಂಸ್ಕೃತಿಯು ಪ್ರವರ್ಧಮಾನಕ್ಕೆ ಬರಲು ಬಿಡುವುದೇ? ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

 

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ”ಮುಗ್ಧ ಮಕ್ಕಳ ಮನಸ್ಸಿನಲ್ಲಿ ತಾರತಮ್ಯದ ವಿಷಬೀಜವನ್ನು ಬಿತ್ತುವುದು, ಶಾಲೆಯಂತಹ ಪವಿತ್ರ ಸ್ಥಳವನ್ನು ದ್ವೇಷದ ಮಾರುಕಟ್ಟೆಯಾಗಿ ಪರಿವರ್ತಿಸುವುದು – ಒಬ್ಬ ಶಿಕ್ಷಕನು ದೇಶಕ್ಕಾಗಿ ಏನನ್ನೂ ಮಾಡಲಾರನು” ಎಂದಿದ್ದಾರೆ.

”ಬಿಜೆಪಿಯವರು ಇದೇ ಸೀಮೆಎಣ್ಣೆಯನ್ನು ಭಾರತದ ಮೂಲೆ ಮೂಲೆಗೆ ಹರಡಿ ಬೆಂಕಿ ಹಚ್ಚಿದ್ದಾರೆ” ಎಂದು ರಾಹುಲ್ ಕಿಡಿಕಾರಿದ್ದಾರೆ.

”ಮಕ್ಕಳು ಭಾರತದ ಭವಿಷ್ಯ – ಅವರನ್ನು ದ್ವೇಷಿಸಬೇಡಿ, ನಾವೆಲ್ಲರೂ ಒಟ್ಟಾಗಿ ಪ್ರೀತಿಯನ್ನು ಕಲಿಸಬೇಕು” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಕೂಡ ಈ ಘಟನೆಯನ್ನು ”ಅತಿರೇಕದ ಹಿಂದೂ ಮೂಲಭೂತೀಕರಣದ ಫಲಿತಾಂಶ” ಎಂದು ಹೇಳಿದೆ.

”ಮುಸ್ಲಿಂ ಹುಡುಗನಿಗೆ ಈ ರೀತಿ ಅವಮಾನ ಮಾಡಿದ ಬಳಿಕ ಅವನ ಮನಸ್ಥಿತಿಯನ್ನು ಬದಲಾಯಿಸಲು ಸಾಧ್ಯವೇ?” ಎಂದು ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರಿನಾಟೆ ಪ್ರಶ್ನೆ ಮಾಡಿದ್ದಾರೆ.

”ಮಗುವಿನ ತಂದೆ ನ್ಯಾಯಾಲಯಕ್ಕೆ ಅಲೆದಾಡಲು ನಾವು ಶಕ್ತರಲ್ಲ ಹಾಗಾಗಿ ನಾವು ಎಫ್‌ಐಆರ್ [ಪ್ರಥಮ ಮಾಹಿತಿ ವರದಿ] ದಾಖಲಿಸುವುದಿಲ್ಲ” ಎಂದು ಹೇಳುತ್ತಾರೆ. ಆದರೆ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಎಫ್‌ಐಆರ್ ದಾಖಲಿಸಬೇಕು ಶ್ರೀನೇಟ್ ವೀಡಿಯೊದಲ್ಲಿ ಹೇಳಿದ್ದಾರೆ.

ವೀಡಿಯೋ ನೋಡಿದ ನಂತರ ಮಗು ಮತ್ತು ಆತನ ಪೋಷಕರ ಹೇಳಿಕೆಗಳನ್ನು ಮರುಪಡೆದುಕೊಂಡು ಪ್ರಕರಣ ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹುಡುಗನ ತಂದೆ ಇರ್ಷಾದ್ ಮಾತನಾಡಿ, ”ಶಿಕ್ಷಕರು ನನ್ನ ಮಗನನ್ನು ಏಕೆ ಈ ರೀತಿ ನಡೆಸಿಕೊಂಡರು ಎಂದು ನಮಗೆ ತಿಳಿದಿಲ್ಲ. ಅವರು ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದು ದುಃಖಕರ ಸಂಗತಿ” ಎಂದು ಹೇಳಿದರು.

”ಸಮಾಜ ಧ್ರುವೀಕರಣಗೊಂಡಿದೆ, ಈ ಹಿಂದೂ-ಮುಸ್ಲಿಂ ವಿಷಯ ಶಾಲೆಗಳಿಗೂ ತಲುಪಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಶುಕ್ರವಾರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮೂಲ ಶಿಕ್ಷಾ ಇಲಾಖೆಯ ಅಧಿಕಾರಿ ಶುಭಂ ಶುಕ್ಲಾ, ”ಶಿಕ್ಷಕಿ ಹಾಗೂ ಆ ಶಾಲೆಯ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...