ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದ್ದು, ಇದೀಗ ವಿರೋಧ ಪಕ್ಷಗಳು ಮತ್ತು ಮುಸ್ಲಿಂ ಸಂಘಟನೆಗಳು ಈ ಘಟನೆಯನ್ನು ”ದ್ವೇಷದ ಸಂಸ್ಕೃತಿ” ಎಂದು ಕರೆದಿವೆ.
ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್ನಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿರುವ ವೀಡಿಯೊದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.
ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.
ಮಗು ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್ನಲ್ಲಿ ಶಿಶುವಿಹಾರದಲ್ಲಿ ಓದುತ್ತಿದೆ ಎಂದು ಆತನ ಪೋಷಕರು ತಿಳಿಸಿದ್ದಾರೆ. ಮಗುವಿನ ತಂದೆ ಹೆಸರು ಇರ್ಷಾದ್ ತ್ಯಾಗಿ, ಅವರು ವೃತ್ತಿಯಲ್ಲಿ ರೈತರಾಗಿದ್ದಾರೆ. ಇನ್ನು ಶಿಕ್ಷಕಿಯನ್ನು ತ್ರಿಪ್ತಾ ತ್ಯಾಗಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದ ಯುಪಿ ಶಿಕ್ಷಕಿ: ವಿಡಿಯೋ ವೈರಲ್
ಪ್ರತಿಪಕ್ಷಗಳಿಂದ ಖಂಡನೆ:
”ದ್ವೇಷದ ಸಂಸ್ಕೃತಿ: ನೇಹಾ ಪಬ್ಲಿಕ್ ಸ್ಕೂಲ್ನ ತ್ರಿಪ್ತ ತ್ಯಾಗಿ ಎನ್ನುವ ಶಿಕ್ಷಕಿ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂದೂ ವಿದ್ಯಾರ್ಥಿಗಳಿಂದ ಥಳಿಸಲು ಒತ್ತಾಯಿಸಸಿದ್ದಾರೆ. ಇದು ನಿಜವಾಗಿದ್ದರೆ, ಯೋಗಿ ಜೀ ಮಾತನಾಡುತ್ತಾರೆಯೇ? ಮೋದಿಜಿ ಇದನ್ನು ಸಾರ್ವಜನಿಕವಾಗಿ ಖಂಡಿಸುವರೇ?
ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದೇ? ಅಥವಾ “ದ್ವೇಷ”ದ ಸಂಸ್ಕೃತಿಯು ಪ್ರವರ್ಧಮಾನಕ್ಕೆ ಬರಲು ಬಿಡುವುದೇ? ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.
Culture of Hate :
Tripta Tyagi of Neha Public School asks Hindu students to beat up a Muslim student in the classroom
If true, will Yogi ji speak up ?
Will Modi ji condemn this publicly ?
Will the teacher be prosecuted ?Or will the culture of “hate” be allowed to flourish ?
— Kapil Sibal (@KapilSibal) August 26, 2023
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ”ಮುಗ್ಧ ಮಕ್ಕಳ ಮನಸ್ಸಿನಲ್ಲಿ ತಾರತಮ್ಯದ ವಿಷಬೀಜವನ್ನು ಬಿತ್ತುವುದು, ಶಾಲೆಯಂತಹ ಪವಿತ್ರ ಸ್ಥಳವನ್ನು ದ್ವೇಷದ ಮಾರುಕಟ್ಟೆಯಾಗಿ ಪರಿವರ್ತಿಸುವುದು – ಒಬ್ಬ ಶಿಕ್ಷಕನು ದೇಶಕ್ಕಾಗಿ ಏನನ್ನೂ ಮಾಡಲಾರನು” ಎಂದಿದ್ದಾರೆ.
”ಬಿಜೆಪಿಯವರು ಇದೇ ಸೀಮೆಎಣ್ಣೆಯನ್ನು ಭಾರತದ ಮೂಲೆ ಮೂಲೆಗೆ ಹರಡಿ ಬೆಂಕಿ ಹಚ್ಚಿದ್ದಾರೆ” ಎಂದು ರಾಹುಲ್ ಕಿಡಿಕಾರಿದ್ದಾರೆ.
”ಮಕ್ಕಳು ಭಾರತದ ಭವಿಷ್ಯ – ಅವರನ್ನು ದ್ವೇಷಿಸಬೇಡಿ, ನಾವೆಲ್ಲರೂ ಒಟ್ಟಾಗಿ ಪ್ರೀತಿಯನ್ನು ಕಲಿಸಬೇಕು” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
मासूम बच्चों के मन में भेदभाव का ज़हर घोलना, स्कूल जैसे पवित्र स्थान को नफ़रत का बाज़ार बनाना – एक शिक्षक देश के लिए इससे बुरा कुछ नहीं कर सकता।
ये भाजपा का फैलाया वही केरोसिन है जिसने भारत के कोने-कोने में आग लगा रखी है।
बच्चे भारत का भविष्य हैं – उनको नफ़रत नहीं, हम सबको मिल…
— Rahul Gandhi (@RahulGandhi) August 25, 2023
ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಕೂಡ ಈ ಘಟನೆಯನ್ನು ”ಅತಿರೇಕದ ಹಿಂದೂ ಮೂಲಭೂತೀಕರಣದ ಫಲಿತಾಂಶ” ಎಂದು ಹೇಳಿದೆ.
”ಮುಸ್ಲಿಂ ಹುಡುಗನಿಗೆ ಈ ರೀತಿ ಅವಮಾನ ಮಾಡಿದ ಬಳಿಕ ಅವನ ಮನಸ್ಥಿತಿಯನ್ನು ಬದಲಾಯಿಸಲು ಸಾಧ್ಯವೇ?” ಎಂದು ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರಿನಾಟೆ ಪ್ರಶ್ನೆ ಮಾಡಿದ್ದಾರೆ.
”ಮಗುವಿನ ತಂದೆ ನ್ಯಾಯಾಲಯಕ್ಕೆ ಅಲೆದಾಡಲು ನಾವು ಶಕ್ತರಲ್ಲ ಹಾಗಾಗಿ ನಾವು ಎಫ್ಐಆರ್ [ಪ್ರಥಮ ಮಾಹಿತಿ ವರದಿ] ದಾಖಲಿಸುವುದಿಲ್ಲ” ಎಂದು ಹೇಳುತ್ತಾರೆ. ಆದರೆ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಎಫ್ಐಆರ್ ದಾಖಲಿಸಬೇಕು ಶ್ರೀನೇಟ್ ವೀಡಿಯೊದಲ್ಲಿ ಹೇಳಿದ್ದಾರೆ.
"How deep the hatred and poison of bigotry has spread?"
Congress SM Chairperson Smt. @SupriyaShrinate attacks Yogi & Modi govt regarding beating up the 8 year old Muslim boy by Hindu boys in the classroom..#ArrestTriptaTyagi pic.twitter.com/bWThgugyT7
— Gautam Nautiyal (@Gnukpcc) August 25, 2023
ವೀಡಿಯೋ ನೋಡಿದ ನಂತರ ಮಗು ಮತ್ತು ಆತನ ಪೋಷಕರ ಹೇಳಿಕೆಗಳನ್ನು ಮರುಪಡೆದುಕೊಂಡು ಪ್ರಕರಣ ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹುಡುಗನ ತಂದೆ ಇರ್ಷಾದ್ ಮಾತನಾಡಿ, ”ಶಿಕ್ಷಕರು ನನ್ನ ಮಗನನ್ನು ಏಕೆ ಈ ರೀತಿ ನಡೆಸಿಕೊಂಡರು ಎಂದು ನಮಗೆ ತಿಳಿದಿಲ್ಲ. ಅವರು ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದು ದುಃಖಕರ ಸಂಗತಿ” ಎಂದು ಹೇಳಿದರು.
”ಸಮಾಜ ಧ್ರುವೀಕರಣಗೊಂಡಿದೆ, ಈ ಹಿಂದೂ-ಮುಸ್ಲಿಂ ವಿಷಯ ಶಾಲೆಗಳಿಗೂ ತಲುಪಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಶುಕ್ರವಾರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮೂಲ ಶಿಕ್ಷಾ ಇಲಾಖೆಯ ಅಧಿಕಾರಿ ಶುಭಂ ಶುಕ್ಲಾ, ”ಶಿಕ್ಷಕಿ ಹಾಗೂ ಆ ಶಾಲೆಯ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.