Homeಕರ್ನಾಟಕಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ - ಪ್ರಜಾಪ್ರಭುತ್ವದ ಮರಣ : ಡಾ.ಬಿ.ಪಿ.ಮಹೇಶ ಚಂದ್ರಗುರು

ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ – ಪ್ರಜಾಪ್ರಭುತ್ವದ ಮರಣ : ಡಾ.ಬಿ.ಪಿ.ಮಹೇಶ ಚಂದ್ರಗುರು

ಬೇರೆ ದೇಶಕ್ಕೆ ಹೋದಾಗ ನಾವು ಬುದ್ಧನ ಭೂಮಿಯಿಂದ ಬಂದವರು ಎಂದು ಹೇಳುತ್ತಾ ಬುದ್ಧನ ಆಶಯಗಳಿಗೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಮೋದಿ ಬಳಗದ ನಡೆಯನ್ನು ಪ್ರಜ್ಞಾವಂತ ಭಾರತೀಯರು ಖಂಡಿಸಲೇ ಬೇಕು.

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ 2014ರಲ್ಲಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದ ನಂತರ ಭಾರತದ ಪ್ರಜಾಪ್ರಭುತ್ವಕ್ಕೆ ಹಲವಾರು ತೊಡಕುಗಳು ಸೃಷ್ಟಿಯಾಗಿವೆ. ಭಾರತದ ಆರ್ಥಿಕತೆ ನಿರಂತರವಾಗಿ ಕುಸಿಯುತ್ತಿದೆ. ಯುವಭಾರತ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯಿಂದಾಗಿ ನರಳುತ್ತಿದೆ. ಕಾರ್ಮಿಕರು ಉದ್ಯೋಗಾವಕಾಶಗಳ ಕುಸಿತದಿಂದಾಗಿ ಅತಂತ್ರರಾಗಿದ್ದಾರೆ. ರೈತರು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆತ್ಮಹತ್ಯೆಯೆಡೆಗೆ ಸಾಗುತ್ತಿದ್ದಾರೆ. ಭಾರತದ ಮೂಲನಿವಾಸಿಗಳು ಪೌರತ್ವ ಕಾಯ್ದೆ ತಿದ್ದುಪಡಿಯಿಂದಾಗಿ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದಾರೆ. ಆದಿವಾಸಿಗಳು ಪ್ರಭುತ್ವದ ದಮನಕಾರಿ ನೀತಿಯಿಂದಾಗಿ ತಮ್ಮ ನೆಲೆಯಿಂದ ವಂಚಿತರಾಗುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಪ್ರಜಾಸತ್ತಾತ್ಮಕ ಹೋರಾಟ ನಡೆಸುವ ಪ್ರಗತಿಪರರು ವ್ಯವಸ್ಥೆಯ ಕೆಂಗಣ್ಣಿಗೆ ಗುರಿಯಾಗಿ ನಗರದ ನಕ್ಸಲಿಯರು ಮತ್ತು ದೇಶದ್ರೋಹಿಗಳೆಂಬ ಆರೋಪಕ್ಕೆ ಗುರಿಯಾಗಿ ಹಲವಾರು ಮೊಕದ್ದಮೆಗಳಡಿಯಲ್ಲಿ ಜೈಲು ಸೇರುತ್ತಿದ್ದಾರೆ. ಮಹಿಳೆಯರು ನಿರ್ಭೀತಿಯಿಂದ ಬದುಕಲಾರದೇ ಅತ್ಯಾಚಾರ ಮತ್ತು ಕೊಲೆಗಳಿಗೆ ಈಡಾಗುತ್ತಿದ್ದಾರೆ. ಅಸಂಖ್ಯಾತ ಮಕ್ಕಳು ಅಪೌಷ್ಟಿಕತೆ ಮತ್ತು ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಅಸಹಾಯಕರಾಗಿ ಸಾಯುತ್ತಿದ್ದಾರೆ. ಇವು ಮೋದಿ ಸರ್ಕಾರ ಭಾರತೀಯರಿಗೆ ನೀಡುತ್ತಿರುವ ಬಳುವಳಿಗಳು.

ಹಲವಾರು ಆಮಿಷಗಳನ್ನು ಒಡ್ಡಿ ಪ್ರಭುತ್ವನಿಷ್ಟ ಮಾಧ್ಯಮಗಳು ಮತ್ತು ಸಂವಿಧಾನ ವಿರೋಧಿ ಮನುವಾದಿಗಳ ಬೆಂಬಲದಿಂದ ಶ್ರೀಸಾಮಾನ್ಯರನ್ನು ದಾರಿ ತಪ್ಪಿಸಿ ಅಧಿಕಾರ ಗದ್ದುಗೆಗೇರಿದ ಮೋದಿಯವರು ಮತ ನೀಡಿದ ಜನರನ್ನು ಪೌರತ್ವ ಸಾಬೀತುಪಡಿಸಿ ಎಂದು ಹೇಳುತ್ತಿರುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಮೋದಿಯವರ ದುರಾಡಳಿತದಿಂದ ಕಂಗೆಟ್ಟ ಜನ ದೇಶದಾದ್ಯಂತ ಪ್ರತಿಭಟನೆಯಲ್ಲಿ ದಿನನಿತ್ಯ ತೊಡಗಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪ್ರಿಯತೆ ಮತ್ತು ವಿಶ್ವಾಸಾರ್ಹತೆಗಳು ದಿನನಿತ್ಯ ಕುಸಿಯುತ್ತಿವೆ. ಆದರೂ ಸಹ ಮೋದಿಯವರ ಸರ್ಕಾರಕ್ಕೆ ನಿಷ್ಟರಾಗಿರುವ ಮೂಲಭೂತವಾದಿಗಳು ದೇಶದ ಎಲ್ಲೆಡೆ ಸಾರ್ವಜನಿಕ ಸಭೆಗಳನ್ನು ನಡೆಸಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಮೊದಲಾದ ಸಂವಿಧಾನ ವಿರೋಧಿ ಕಾಯ್ದೆಗಳನ್ನು ಲಜ್ಜೆಗೆಟ್ಟು ಸಮರ್ಥಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಕೇಂದ್ರ ಸರ್ಕಾರದ ಆಮಿಷಗಳಿಗೆ ಗುರಿಯಾಗಿ ಕೆಲವು ಸಾಹಿತಿಗಳು ಮತ್ತು ಸಮಾಜಸೇವಕರು ಮಾನ ಮರ್ಯಾದೆ ಬಿಟ್ಟು ನೂತನ ಮಸೂದೆಗಳನ್ನು ಸಮರ್ಥಿಸುತ್ತಿರುವುದನ್ನು ನೋಡಿ ಸಂವಿಧಾನ ನಿಷ್ಟರು ಕಂಗೆಟ್ಟಿದ್ದಾರೆ.

ಕಳೆದ 5 ವರ್ಷಗಳಿಂದ ಮೋದಿ ಸರ್ಕಾರ ಭಾರತೀಯ ಸಂವಿಧಾನಕ್ಕೆ ನಿರಂತರವಾಗಿ ಗುಂಡು ಹೊಡೆಯುತ್ತಿರುವುದು ಪ್ರಭುತ್ವದ ದಮನಕಾರಿ ಧೋರಣೆಗೆ ಸಾಕ್ಷಿಯಾಗಿದೆ. ಮೋದಿಯವರು ತಮ್ಮ ತಪ್ಪು ನಿರ್ಧಾರಗಳು ಮತ್ತು ಕ್ರಮಗಳ ಮೂಲಕ ಗಾಂಧಿವಾದಕ್ಕೆ ತಿಲಾಂಜಲಿ ನೀಡಿ ಗೋಡ್ಸೆಯ ತತ್ವಗಳನ್ನು ಅಕ್ಷರಷಃ ಪಾಲಿಸುತ್ತಿದ್ದಾರೆ. ಮೋದಿ ಸರ್ಕಾರದ ಮಂತ್ರಿಗಳು ಮತ್ತು ಸಂಸದರು ಎನ್‌ಡಿಎ ಸರ್ಕಾರ ಬಂದಿರುವುದೇ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ, ಸಾಮಾಜಿಕ ನ್ಯಾಯ, ಸರ್ವೋದಯ ಮೊದಲಾದ ಮೂಲ ಆಶಯಗಳನ್ನು ಪ್ರತಿಪಾದಿಸುವ ಸಂವಿಧಾನವನ್ನು ಬದಲಾಯಿಸುವುದಕ್ಕೆ ಎಂದು ಆಗಿಂದಾಗ್ಗೆ ಪ್ರತಿಪಾದಿಸುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ನಮ್ಮ ರಾಷ್ಟ್ರ ನಾಯಕರು ಬಹುತ್ವಕ್ಕೆ ಶರಣಾಗಿ ಜಾತ್ಯಾತೀತತೆಗೆ ಬದ್ಧರಾಗಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟರೆ, ಸಾವರ್ಕರ್, ಗೊಲ್ವಾಲ್ಕರ್, ಹೆಗಡೆವಾರ್, ಶ್ಯಾಮ್‌ಪ್ರಕಾಶ್ ಮುಖರ್ಜಿ ಎಂಬ ಸ್ವಾತಂತ್ರ್ಯ ಚಳುವಳಿಯ ವಿರೋಧಿಗಳು ಮತ್ತು ಬ್ರಿಟಿಷರ ಅನುಯಾಯಿಗಳ ಸಂತಾನ ಇಂದು ಮೋದಿ ನೇತೃತ್ವದಲ್ಲಿ ಭಾರತವನ್ನು ಆಳುವ ಅವಕಾಶ ಪಡೆದು ಹಿಂದಿ ಭಾಷೆ, ಹಿಂದೂ ಧರ್ಮ ಮತ್ತು ಹಿಂದೂ ದೇಶ ಪ್ರತಿಪಾದನೆಗೆ ಮುಂದಾಗಿರುವುದು ಭಾರತೀಯ ಪ್ರಜಾಪ್ರಭುತ್ವಕ್ಕೆ ಬಹುದೊಡ್ಡ ಗಂಡಾಂತರ ಉಂಟುಮಾಡಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಉಸಿರೆಂದು ರಾಷ್ಟ್ರ ನಾಯಕರು ಮತ್ತು ಸಂವಿಧಾನ ಶಿಲ್ಪಿಗಳು ಸ್ಪಷ್ಟವಾಗಿ ಪ್ರತಿಪಾದಿಸಿದ್ದಾರೆ. ಇತ್ತೀಚೆಗೆ ಭಾರತದ ಸರ್ವೋಚ್ಛ ನ್ಯಾಯಾಲಯ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಸಿಆರ್‌ಪಿಸಿ ಸೆಕ್ಷನ್-144ನ್ನು ಪ್ರಭುತ್ವ ದುರ್ಬಳಕೆ ಮಾಡಿಕೊಂಡು ಪ್ರಜಾಸತ್ತಾತ್ಮಕ ಪ್ರತಿಭಟನೆಗಳನ್ನು ನಿರ್ಬಂಧಿಸಬಾರದೆಂದು ತೀರ್ಪು ನೀಡಿದೆ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಮುಖಂಡರ ಗೃಹಬಂಧನ, ಸಾಮಾಜಿಕ ಹೋರಾಟಗಾರರ ಮೇಲಿನ ನಿರ್ಬಂಧ, ಅಂತರ್ಜಾಲ ಸೇವೆಯ ಸ್ಥಗಿತ ಮೊದಲಾದ ಸಂವಿಧಾನ ವಿರೋಧಿ ಕ್ರಮಗಳಿಗೆ ಪ್ರಭುತ್ವ ಮುಂದಾಗಿರುವುದನ್ನು ಸರ್ವೋಚ್ಛ ನ್ಯಾಯಾಲಯ ವಿರೋಧಿಸಿದೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಹೆಸರಿನಲ್ಲಿ ಪ್ರಜೆಗಳ ಮೂಲಭೂತ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಗೊಳಿಸಬಾರದೆಂದು ನ್ಯಾಯಾಲಯ ಸ್ಪಷ್ಟವಾಗಿ ತೀರ್ಪು ನೀಡಿದೆ.

ಈ ತೀರ್ಪಿನ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾಧ್ಯಮ ವಿದ್ಯಾರ್ಥಿನಿ ಕುಮಾರಿ ನಳಿನಿ ಬಾಲಕುಮಾರ್ ಇತ್ತೀಚೆಗೆ ಮೈಸೂರು ವಿವಿ ಆವರಣದಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಸಂವಿಧಾನ ನಿಷ್ಟ ವಿದ್ಯಾರ್ಥಿ ಮುಖಂಡರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ್’ (ಉಸಿರುಗಟ್ಟಿದ ವಾತಾವರಣದಲ್ಲಿ ನರಳಿ ಸಾಯುತ್ತಿರುವ ಕಾಶ್ಮೀರಿ ದೇಶ ಬಾಂಧವರನ್ನು ಬಿಡುಗಡೆಗೊಳಿಸಿ) ಎಂಬ ಸಂದರ್ಭೋಚಿತ ಭಿತ್ತಿಪತ್ರ ಪ್ರದರ್ಶಿಸಿದ ಕಾರಣ ಅವರ ಮೇಲೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಸುಮಾರು 8ಗಂಟೆ ಕಾಲ ವಿಚಾರಣೆಗೊಳಪಡಿಸಿರುವ ಕೃತ್ಯ ನಿಜಕ್ಕೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಡಲಿ ಪೆಟ್ಟು ನೀಡಿದೆ. ನ್ಯಾಯಾಲಯದಲ್ಲಿ ಈ ಪ್ರಕರಣ ವಿಚಾರಣೆಯ ಹಂತದಲ್ಲಿದ್ದು ನಿರೀಕ್ಷಣಾ ಜಾಮೀನು ಪಡೆದಿರುವ ನಳಿನಿ ಬಾಲಕುಮಾರ್ ಅಪ್ಪಟ ಸಂವಿಧಾನ ನಿಷ್ಟೆ ಮತ್ತು ದೇಶಭಕ್ತಿಗಳನ್ನು ಆಧರಿಸಿದ ನ್ಯಾಯ ಪಡೆಯಬೇಕೆಂಬುದು ಪ್ರಜ್ಞಾವಂತರ ಆಶಯವಾಗಿದೆ.

ಮೈಸೂರು ವಿಶ್ವವಿದ್ಯಾಲಯ ನಾಡಿನ ಹಲವಾರು ಪ್ರಗತಿಪರ ಚಳುವಳಿಗಳಿಗೆ ಜ್ಞಾನ ದಾಸೋಹವನ್ನು ಒದಗಿಸಿ ಸಹಸ್ರಾರು ಪ್ರಬುದ್ಧ ಚಿಂತಕರು ಮತ್ತು ಹೋರಾಟಗಾರರನ್ನು ಸೃಷ್ಟಿಸಿರುವ ಹೆಗ್ಗಳಿಕೆ ಹೊಂದಿದೆ. ಮೌಢ್ಯದ ಎದೆಗೆ ಗುಂಡು ಹೊಡೆಯಿರಿ, ವೈಜ್ಞಾನಿಕತೆಯನ್ನು ಉತ್ತೇಜಿಸಿ ಮತ್ತು ಮಾನವೀಯತೆಯನ್ನು ಬೆಳೆಸಿ ಎಂದು ಕರೆ ನೀಡಿದ ಯುಗದ ಕವಿ ಕುವೆಂಪುರವರ ಆಶಯಗಳಿಗೆ ಅನುಸಾರವಾಗಿ ಮೈಸೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಅನ್ಯಾಯಗಳ ವಿರುದ್ಧ ಸಿಡಿದೆದ್ದು ತಮ್ಮ ಅಹಿಂಸಾತ್ಮಕ ಹಾಗೂ ಪ್ರಗತಿಪರ ಹೋರಾಟಗಳ ಮೂಲಕ ವಿಶ್ವವಿದ್ಯಾಲಯದ ಘನತೆಯನ್ನು ಹೆಚ್ಚಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಮೈಸೂರು ವಿಶ್ವವಿದ್ಯಾಲಯದ ಪ್ರಗತಿಪರ ಯುವ ಮುಖಂಡರು ಜೆಎನ್‌ಯು ವಿಶ್ವವಿದ್ಯಾಲಯದ ಹೋರಾಟಗಾರರ ಮೇಲೆ ಪಟ್ಟಭದ್ರ ಹಿತಾಸಕ್ತಿಗಳು ನಡೆಸಿರುವ ಹೋರಾಟವನ್ನು ಹೃದಯ ಪೂರ್ವಕವಾಗಿ ಬೆಂಬಲಿಸುವುದರ ಬದಲಿಗೆ ಸ್ಥಳೀಯ ಸಂಸದ ಮನುವಿನ ಮೊಮ್ಮಗ ಹೋರಾಟಗಾರರ ವಿರುದ್ಧ ಮೊಕದ್ದಮೆ ದಾಖಲಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿರುವುದು ಖಂಡನೀಯ. ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಜಾತೀಯತೆ ಮತ್ತು ಗುಂಪು ರಾಜಕಾರಣ ಹೆಚ್ಚುತ್ತಿರುವುದಾಗಿ ನೀಡಿರುವ ಹೇಳಿಕೆ ಪೂರ್ವಾಗ್ರಹ ಪೀಡಿತವಾಗಿದೆ.

ಪರೀಕ್ಷೆಯಲ್ಲಿ ಕಾಪಿ ಹೊಡೆದು ಪಾಸಾಗಿರುವ ವ್ಯಕ್ತಿಯೊಬ್ಬನಿಗೆ ಮೈಸೂರು ವಿಶ್ವವಿದ್ಯಾಲಯ ಶೈಕ್ಷಣಿಕ ಗುಣಮಟ್ಟ ಮತ್ತು ಸಂಶೋಧನೆಯ ಉಪಯುಕ್ತತೆಗಳನ್ನು ಪ್ರಶ್ನಿಸುವ ನೈತಿಕತೆ ಖಂಡಿತ ಇಲ್ಲ. ತಮ್ಮ ಕುಲಬಾಂಧವರೇ ಆದ ಮಾಜಿ ಕುಲಪತಿಗಳು ನಡೆಸಿರುವ ಅಕ್ರಮ ನೇಮಕಾತಿ ಮತ್ತು ಕೋಟ್ಯಾಂತರ ರೂಪಾಯಿ ಅವ್ಯವಹಾರಗಳನ್ನು ಪ್ರಶ್ನಿಸದೇ ಸುಮ್ಮನಿರುವ ಮುಖಂಡನಿಗೆ ಮೈಸೂರು ವಿಶ್ವವಿದ್ಯಾಲಯದ ಪ್ರಜ್ಞಾವಂತ ವಿದ್ಯಾರ್ಥಿ ಹೋರಾಟಗಾರರನ್ನು ಅವಮಾನಿಸುವ ಅಧಿಕಾರವಿಲ್ಲ. ಸಂವಿಧಾನದ ಆಶಯಗಳಿಗೆ ನಿಷ್ಟರಾಗಿ ಪ್ರಜಾಸತ್ತೆಯ ಚೌಕಟ್ಟಿನಲ್ಲಿ ಅನ್ಯಾಯದ ವಿರುದ್ಧ ಹೋರಾಟ ನಡೆಸುವ ಪ್ರಜ್ಞಾವಂತರನ್ನು ಮನುವಾದದ ಹಿನ್ನೆಲೆಯಲ್ಲಿ ‘ವಿಕೃತ ಮನಸ್ಸುಗಳು’ ಎಂದು ಜರಿಯುವ ಹಕ್ಕನ್ನು ಇವರಿಗೆ ಕೊಟ್ಟವರು ಯಾರು ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ. ಮಹಿಷ ದಸರಾ ಆಚರಣೆ ಈ ಭಾಗದ ಮೂಲನಿವಾಸಿಗಳ ಮೂಲಭೂತ ಹಕ್ಕು. ಇದನ್ನು ಪ್ರಶ್ನಿಸುವ ಮತ್ತು ನಿಲ್ಲಿಸುವ ಕೆಲಸವನ್ನು ಮಾಡಲು ಮೂಲನಿವಾಸಿಗಳು ಖಂಡಿತ ಬಿಡುವುದಿಲ್ಲ. ಈ ವರ್ಷವೂ ಮಹಾಬಲ ಬೆಟ್ಟದ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ತದನಂತರ ಮಹಿಷನ ಕರ್ಮಭೂಮಿ ಅಶೋಕಪುರಂನಲ್ಲಿ ಸಾವಿರಾರು ಜನ ಹೆಮ್ಮೆಯಿಂದ ಮಹಿಷ ದಸರಾ ಆಚರಿಸಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ.

ವಿದೇಶದಿಂದ ಭಾರತಕ್ಕೆ ವಲಸೆ ಬಂದ ಆರ್ಯರು ತಮ್ಮ ಅನಧಿಕೃತ ವಾಸವನ್ನು ದೃಢೀಕರಿಸಲು ಮತ್ತು ನೆಲದ ಮೂಲನಿವಾಸಿಗಳನ್ನು ದೇಶದಿಂದ ಎತ್ತಂಗಡಿ ಮಾಡಲು ಜಾರಿಗೊಳಿಸಲು ಹೊರಟಿರುವ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಮಸೂದೆಗಳನ್ನು ಪ್ರಜ್ಞಾವಂತ ಭಾರತೀಯರು ದೇಶದ ಎಲ್ಲೆಡೆ ವಿರೋಧಿಸಿ ಪ್ರತಿಭಟನೆ ನಡೆಸಿರುವುದು ಜಗತ್ತಿನ ಗಮನ ಸೆಳೆದಿದೆ. ಇಂತಹ ಬಹುಜನ ಭಾರತೀಯರ ಮೂಲಭೂತ ಹಕ್ಕುಗಳನ್ನು ಅತ್ಯಲ್ಪ ಸಂಖ್ಯೆಯ ವಲಸೆ ಬಂದ ಮೂಲಭೂತ ವಾದಿಗಳು ಕಸಿದುಕೊಳ್ಳಲು ಹೊರಟಿರುವುದು ತರವಲ್ಲ. ದೇಶದ ನೈಜ ಸಮಸ್ಯೆಗಳು ಮತ್ತು ಸರ್ಕಾರದ ವೈಫಲ್ಯತೆಗಳನ್ನು ಮರೆಮಾಚಲು ಇತ್ತೀಚೆಗೆ ಹಲವಾರು ಹೊಸ ಸಮಸ್ಯೆಗಳನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೃಷ್ಟಿಸಿರುವುದು ಭಾರತೀಯರ ಗಮನಕ್ಕೆ ಬಂದಿದೆ. ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಿಸಿ ಲಾಭ ಪಡೆಯಲು ಯತ್ನಿಸುವ ಕೋಮುವಾದಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಶಿಕ್ಷಿಸುವ ಬದಲಿಗೆ ಪ್ರಜ್ಞಾವಂತ ನಾಗರೀಕರು ಮತ್ತು ಹೋರಾಟಗಾರರ ಮೇಲೆ ರಾಜ್ಯಾಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಇಲ್ಲಸಲ್ಲದ ಪ್ರಕರಣಗಳನ್ನು ದಾಖಲಿಸುವುದು ಸರಿಯಲ್ಲ.

ಕಾಶ್ಮೀರವನ್ನು ಬಿಡುಗಡೆಗೊಳಿಸಿ ಎಂದರೆ ಪಾಕಿಸ್ತಾನಕ್ಕೆ ಸೇರಿಸಿ ಎಂಬರ್ಥವಲ್ಲ. ಅಪ್ಪಟ ಭಾರತೀಯರೇ ಆದ ಕಾಶ್ಮೀರಿ ಜನರನ್ನು ಪ್ರಕ್ಷುಬ್ಧ ಸ್ಥಿತಿಯಿಂದ ಪಾರು ಮಾಡಿ ಎಂದು ಪ್ರಭುತ್ವಕ್ಕೆ ಮನವರಿಕೆ ಮಾಡಿಕೊಡುವ ಸಾಮಾಜಿಕ ಜವಾಬ್ದಾರಿ ಎಲ್ಲ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ಸಮಾಜದ ಹಿತಚಿಂತಕರಿಗೆ ಖಂಡಿತ ಇದೆ. ಇಂತಹ ಸಂದರ್ಭದಲ್ಲಿ ಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ‘ವಿಕೃತ ಮನಸ್ಸುಗಳು’ ಪ್ರಗತಿಪರ ಹೋರಾಟಗಾರರನ್ನು ಸುಳ್ಳು ಮೊಕದ್ದಮೆಗಳ ಹೆಸರಿನಲ್ಲಿ ದಮನಗೊಳಿಸುವ ಪ್ರಯತ್ನದಲ್ಲಿ ನಿರತರಾಗಿರುವುದು ಖಂಡನೀಯ. ಈ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಮೈಸೂರು ನಗರದಲ್ಲಿ ಜರುಗಿದ ಪತ್ರಿಕಾಗೋಷ್ಟಿಯಲ್ಲಿ ಕಾಂಗ್ರೆಸ್ ನಂತರ ಬಿಜೆಪಿಗೆ ಧರ್ಮ ರೋಗ ಅಂಟಿದೆಯೆಂದು ಹೇಳಿರುವುದು ಸೂಕ್ತವಾಗಿದೆ. ವಾಸ್ತವವಾಗಿ ಲಾಲಾ ಲಜಪತರಾಯ್, ಬಾಲಗಂಗಾಧರ ತಿಲಕ್, ಬಿಪಿನ್ ಚಂದ್ರಪಾಲ್, ಗೋಪಾಲಕೃಷ್ಣ ಗೋಖಲೆ, ಮೋತಿಲಾಲ್ ನೆಹರು, ಮಹಾತ್ಮಗಾಂಧಿ, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಭೋಸ್, ಸರ್ಧಾರ್ ವಲ್ಲಭಬಾಯ್ ಪಟೇಲ್ ಮೊದಲಾದ ಕಾಂಗ್ರೆಸ್ ಪಕ್ಷದ ರಾಷ್ಟ್ರ ನಾಯಕರು ಹಿಂದೂ ಧರ್ಮದ ರಕ್ಷಕರಾಗಿ ಉಳಿಯದೇ ಅಖಂಡ ಭಾರತದ ಸ್ವಾತಂತ್ರ್ಯ ಮತ್ತು ಪ್ರಗತಿಗಳಿಗೆ ಬದ್ಧರಾಗಿದ್ದರು. ಕಾಂಗ್ರೆಸ್ ಚಳುವಳಿಗೆ ಧರ್ಮದ ರೋಗ ಅಂಟಲು ಅಂದಿನ ರಾಷ್ಟ್ರ ನಾಯಕರು ಅನುವು ಮಾಡಿಕೊಡಲಿಲ್ಲವೆಂಬ ಸತ್ಯವನ್ನು ಭೈರಪ್ಪನವರು ಗ್ರಹಿಸಬೇಕು.

ಮಾನಸಗಂಗೋತ್ರಿಯಲ್ಲಿ ಜರುಗಿದ ಪ್ರತಿಭಟನೆ ಸಂಘಟಕರಿಗೆ ನಗರ ಪೊಲೀಸರು ನೋಟೀಸ್ ಜಾರಿಗೊಳಿಸಿ ವಿಚಾರಣೆಗೊಳಪಡಿಸಿ ಅವರ ಆತ್ಮಸ್ಥೈರ್ಯವನ್ನು ಕುಂದಿಸುವ ಪ್ರಯತ್ನ ನಡೆಸಿರುವುದು ಅಧಿಕಾರದ ದುರುಪಯೋಗವೇ ಹೊರತು ಯಾವುದೇ ರೀತಿಯ ಸಾರ್ವಜನಿಕ ಹಿತಾರಕ್ಷಣೆಗೆ ಪೂರಕವಾದ ಕ್ರಮವಲ್ಲ. ಫಲಕದ ಘೋಷಣೆ ಮತ್ತು ಪ್ರತಿಭಟನೆಯ ಪ್ರಯತ್ನವನ್ನು ತಮಗಿಷ್ಟ ಬಂದಂತೆ ವ್ಯಾಖ್ಯಾನಿಸಿ ಪ್ರತಿಭಟನಾಕಾರರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ಹೀನಕೃತ್ಯವನ್ನು ಸಮಸ್ತ ಭಾರತೀಯರು ಖಂಡಿಸಬೇಕು. ದೇಶದ ಸ್ವಾತಂತ್ರ್ಯ, ಸಂಸ್ಕೃತಿ, ಸಾರ್ವಭೌಮತ್ವ ಮತ್ತು ಸಂವಿಧಾನಗಳ ವಾರಸುದಾರರು ದೇಶದ ಮೂಲನಿವಾಸಿಗಳೇ ಹೊರತು ಆರ್‌ಎಸ್‌ಎಸ್, ಭಜರಂಗದಳ, ಎಬಿವಿಪಿ ಮೊದಲಾದ ಉಗ್ರ ಹಿಂದುತ್ವ ಸಂಘಟನೆಗಳ ಅಲ್ಪಸಂಖ್ಯಾತ ಹಿಂದುತ್ವವಾದಿಗಳಲ್ಲ. ಇಂತಹ ಸವಾಲಿನ ಸಂದರ್ಭದಲ್ಲಿ ಕುಬೇರರು, ಮನುವಾದಿಗಳು, ಜಾತಿವಾದಿಗಳು ಮತ್ತು ಸಂವಿಧಾನ ವಿರೋಧಿಗಳಿಂದ ಕೂಡಿರುವ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡ ಶಾಸಕಾಂಗದಿಂದ ದೇಶವನ್ನು ರಕ್ಷಿಸಿ ಎಂದು ಅಪೇಕ್ಷಿಸುವುದು ಸಾಧುವಲ್ಲ.

ಜಗತ್ತನ್ನೇ ತೋಳ್ಬಲದಿಂದ ಆಳಲು ಹೊರಟಿದ್ದ ಮಹಾರಾಕ್ಷಸ ಹಿಟ್ಲರ್ ತನ್ನ ಆಟ ಭೂಮಿಯ ಮೇಲೆ ನಡೆಯುವುದಿಲ್ಲವೆಂದು ಖಚಿತಪಡಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ದೃಷ್ಟಾಂತ ಜಗತ್ತಿನ ಇತಿಹಾಸದಲ್ಲಿದೆ. ಭಾರತದ ಪೌರತ್ವ ಮತ್ತು ಬಹುತ್ವಗಳಿಗೆ ಸಂಬಂಧಿಸಿದಂತೆ ಮತ್ತೊಂದು ಸ್ವಾತಂತ್ರ್ಯ ಸಮರಕ್ಕೆ ಭೂಮಿಕೆ ಸಿದ್ಧವಾಗುತ್ತಿದೆ. ಸರ್ವಾಧಿಕಾರ ಮನೋಭಾವದಿಂದ ಪೌರತ್ವ ಮಸೂದೆಗಳನ್ನು ಜಾರಿಗೆ ತಂದು ಹಿಂದೂ ಸಾಮ್ರಾಜ್ಯ ಕಟ್ಟುವ ಮೋದಿ ಪ್ರಭುತ್ವಕ್ಕೆ ದೇಶದ ಒಳಗೆ ಮತ್ತು ಹೊರಗೆ ತೀವ್ರ ಮುಖಭಂಗವಾಗಿದೆ. ಬೇರೆ ದೇಶಕ್ಕೆ ಹೋದಾಗ ನಾವು ಬುದ್ಧನ ಭೂಮಿಯಿಂದ ಬಂದವರು ಎಂದು ಹೇಳುತ್ತಾ ಬುದ್ಧನ ಆಶಯಗಳಿಗೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಮೋದಿ ಬಳಗದ ನಡೆಯನ್ನು ಪ್ರಜ್ಞಾವಂತ ಭಾರತೀಯರು ಖಂಡಿಸಲೇ ಬೇಕು. ನಮ್ಮಲ್ಲಿ ಕೊನೆಯ ಹನಿ ರಕ್ತ ಇರುವವರೆಗೆ ನಮ್ಮ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ದೃಢಸಂಕಲ್ಪ ಮಾಡಬೇಕೆಂಬ ವಿಶ್ವಮಾನವ ಅಂಬೇಡ್ಕರ್ ವಿಚಾರಧಾರೆ ಇಂದು ಪ್ರಸ್ತುತವಾಗಿದೆ. ‘ಕ್ವಿಟ್ ಎನ್‌ಡಿಎ – ಸೇವ್ ಇಂಡಿಯಾ’ ಘೋಷಣೆ ಭಾರತದ ಎಲ್ಲೆಡೆ ಮೊಳಗಬೇಕಿದೆ. ಸಮಸ್ತ ಭಾರತೀಯರನ್ನು ಸಾಮ್ರಾಜ್ಯಶಾಹಿಯಿಂದ ಬಿಡುಗಡೆಗೊಳಿಸುವ ಧರ್ಮಯುದ್ಧದಲ್ಲಿ ಎಲ್ಲ ರಾಷ್ಟ್ರ ನಿಷ್ಟ ಹಾಗೂ ಸಂವಿಧಾನ ನಿಷ್ಟ ಭಾರತೀಯರು ಅತ್ಯಂತ ಪ್ರೀತಿಯಿಂದ ತೊಡಗಿಸಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...