Homeಕರ್ನಾಟಕಕಾವಲುಗಾರನಿಲ್ಲದ ಕೋಟೆ!

ಕಾವಲುಗಾರನಿಲ್ಲದ ಕೋಟೆ!

- Advertisement -
- Advertisement -

ಫೆಡರಿಕ್ ನೀಷ್ಹೆ ಎಂಬ ಜರ್ಮನ್ ತತ್ತ್ವಶಾಸ್ತ್ರಜ್ಞ ತನ್ನ ’ಎಟರ್‍ನಲ್ ರಿಟರ್ನ್’ ಅಥವಾ ’ನಿರಂತರ ಪುನರಾವರ್ತನೆ’ ಅನ್ನೊ ತತ್ತ್ವದ ಮೂಲಕ ಮನುಕುಲಕ್ಕೆ ಸವಾಲು ಹಾಕಿದ. ಎಂದರೆ ನಾವು ಸತ್ತಮೇಲೆ ಮತ್ತೆಮತ್ತೆ ಮರಳಿ ಹುಟ್ಟಿ ಬಂದರೂ ಈಗ ನಾವು ಬದುಕಿ ಬಿಟ್ಟ ಬದುಕನ್ನೇ ಯಥಾವತ್ ಹಾಗೆ ಬದುಕುತ್ತೇವೆ. ಯಾವ ರೀತಿಯ ಮಾರ್ಪಾಟೂ, ಯಾವ ರೀತಿಯ ಬದಲಾವಣೆಯೂ ಇಲ್ಲದೆ; ಹಾಗೊಂದು ವೇಳೆ ಆದರೆ ಅದೆಂತಹ ದುಃಸ್ವಪ್ನ-ಮತ್ತೆ ಅದೇ ದುರಂತ ಬದುಕನ್ನು ಬದುಕುತ್ತಾ ಇರುವುದೆಂದರೆ? ಅವನ ಕಳಕಳಿ ಆಶಯ ಇಷ್ಟೆ: ಪುನಃ ಬದುಕಿದರೂ ಹೊಸಹೊಸ ಅರ್ಥ ಕೊಡುವ ಹಾಗೆ ನಿಮ್ಮ ವ್ಯಕ್ತಿತ್ವವನ್ನು, ನಿಮ್ಮ ಜೀವನವನ್ನು ನೀವೇ ಕಟ್ಟಿಕೊಳ್ಳಿ; ಸೃಜನಶೀಲರಾಗಿ ಬದುಕಿ ಎಂಬುದು.

ಮಾನವ ಇತಿಹಾಸವನ್ನು ಅವಲೋಕಿಸಿದರೆ ನೀಷ್ಹೆಯ ಸಿದ್ಧಾಂತವನ್ನೇ ನಿಜಮಾಡುವತ್ತ ಸಾಗಿ ಬರುತ್ತಿರುವುದು ಕಂಡುಬರುತ್ತಿದೆ. ಉದಾಹರಣೆಗೆ ನಮ್ಮ ಕಣ್ಮುಂದಿನ ಇಂದಿನ ಬದುಕನ್ನೇ ನೋಡಬಹುದು. ಕಳೆದೆರಡು ವರ್ಷಗಳಿಂದ ಕೊರೊನಾ ವೈರಾಣು ಸೋಂಕಿನಿಂದ ಮನುಕುಲ ಸತ್ತಂತಾಗಿತ್ತು. ಒಂದಾದ ಮೇಲೊಂದು ಕೊರೊನಾ ಅಲೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು, ನಿಜ. ಆದರೆ ನೆಲ ಜಲ ಗಾಳಿ ನಿರ್ಮಲವಾಗುತ್ತಿತ್ತು. ಈಗಿನ್ನೂ ಆ ವೈರಾಣು ಸಂಪೂರ್ಣ ನಾಶವಾಗಿಲ್ಲ. ನಿಯಂತ್ರಣಕ್ಕೆ ಬರುವ ಸೂಚನೆ ಇದೆ ಅಷ್ಟೆ. ಆದರೆ ಮನುಷ್ಯಕುಲ ಮಾತ್ರ ಪುನಃ ನಿಯಂತ್ರಣ ತಪ್ಪುತ್ತಿದೆ. ತನ್ನ ಮೊದಲಿನ ಚಾಳಿಗೇ ಹಿಂತಿರುಗುತ್ತಿದೆ. ಅತ್ತ ಉಕ್ರೇನ್-ರಷ್ಯಾ ಸಂಘರ್ಷದ ಸಾವು ನೋವು, ಆಸ್ತಿ ಪಾಸ್ತಿ ನಾಶವಾಗುತ್ತಿದ್ದರೆ ಇತ್ತ ಭಾರತದಲ್ಲಿ ರಾಜಕೀಯ ಹಿತಾಸಕ್ತಿಯ ಕೋಮು ಗಲಭೆಗಳು ಶಾಂತಿಯನ್ನು ಕದಡುತ್ತಿವೆ.

ಫೆಡರಿಕ್ ನೀಷ್ಹೆ

ಭಾರತ ಜನನಿಯ ತನುಜಾತೆಯಾದ ಕರ್ನಾಟಕವೂ ಅದಕ್ಕೆ ಹೊರತಲ್ಲ. ಕರುನಾಡು ಕೋಮು ಸಂಘರ್ಷ ಆಡುಬಲವಾಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಬೀಳುತ್ತಿದೆ. ಇದೆಲ್ಲ ಯಾಕಾಗಿ? ಯಾರಿಗಾಗಿ? ಈ ಕೇಡಿಗೆ ಕೊನೆಯುಂಟೆ? ಎಂಬ ಆತಂಕ ಕಾಡುತ್ತಿದೆ. ದಿನಬೆಳಗಾದರೆ ಕೇಡುಗಳ ಕೆಂಡದ ಮಳೆ ಧಾರಾಕಾರ ಸುರಿಯುತ್ತಿದೆ. ಅದನ್ನೇ ಮಾಧ್ಯಮಗಳು ತಿರುತಿರುಗಿ ಅಪ್ಪಳಿಸುತ್ತಿವೆ.

ಕಳೆದೆರಡು ತಿಂಗಳುಗಳಿಂದ ಹಲವು ಹಿಂದೂಪರ ಸಂಘಟನೆ ಕಾರ್ಯಕರ್ತರು ಮುಸ್ಲಿಮರ ಮೇಲೆ ಒಂದಲ್ಲ ಒಂದು ಕಿತಾಪತಿ ಜಗಳ ಝೂಟ್ ತೆಗೆಯುತ್ತಲೆ ಇದ್ದಾರೆ. ಅವರಿಗೆ ಗದರಿ ಕಿವಿಮಾತು ಹೇಳುವ ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ. ರಾಜ್ಯ ಕಾವಲುಗಾರರಿಲ್ಲದ ಕೋಟೆಯಂತಾಗುತ್ತಿದೆ. ಮುಸ್ಲಿಂ ಜನಾಂಗದ ವಿರುದ್ಧ ಅಜೆಂಡಾಗಳು ಅದೆಲ್ಲಿಂದ ಸೃಷ್ಟಿಯಾಗುತ್ತವೋ ಯಾರು ಸೃಷ್ಟಿ ಮಾಡುತ್ತಾರೋ? ಆ ಮರ್‍ಯಾದಾ ಪುರುಷೋತ್ತಮ ಶ್ರೀರಾಮನೇ ಬಲ್ಲ.

ಹಿಜಾಬ್-ಕೇಸರಿ ಶಾಲು ವಿವಾದದಿಂದ ಆರಂಭಗೊಂಡ ಈ ಘರ್ಷಣೆಗೆಳು ಹಲಾಲ್ ಕಟ್-ಜಟಕಾ ಕಟ್‌ವರೆಗೆ, ಆಜಾನ್ ನಿಷೇಧ, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಇತ್ಯಾದಿ ಕಿಡಿ ಹಾರುತ್ತಲೇ ಇವೆ. ಆದರೆ ಕರುನಾಡ ಜನ ಕಿವಿಗೊಡದೆ ಆ ಕಿಡಿಗಳಿಗೆ ಭಾವೈಕ್ಯದ ತಣ್ಣೀರು ಸುರಿದು ತಮ್ಮ ದೈನಂದಿನ ಬದುಕನ್ನು ಸಾಗಿಸುತ್ತಿರುವುದು ಸ್ವಾಗತಾರ್ಹ. ಆದರೆ ಬಿಸಿಬಿಸಿ ಸುದ್ದಿಗಾಗಿ ಹಾತೊರೆಯುವ ದೃಶ್ಯ ಮಾಧ್ಯಮಗಳ ಬೇಟೆಗಾರರು ಸುಮ್ಮನೆ ಇರಬೇಕಲ್ಲ! ಅಲ್ಲಿ ಇಲ್ಲಿ ಹಾರುವ ಕೊಳ್ಳಿ ಕಿಡಿಗಳಿಗೇ ಭೂತಗನ್ನಡಿ ಹಿಡಿದು ಬಹುಸಂಖ್ಯಾತ ಹಿಂದೂಗಳ ಹಾಲಿನಂತ ಮನಸ್ಸುಗಳಿಗೆ ಹುಳಿ ಹಿಂಡುವುದೂ ಅಲ್ಪಸಂಖ್ಯಾತರಿಗೆ ಅತಂಕ-ಕೀಳರಿಮೆ ಹುಟ್ಟಿಸುವುದೂ ಸತತ ನಡೆಯುತ್ತಲೇ ಇದೆ.

ಇತ್ತ ಒಳ ಜಗಳಗಳಿಂದ ಸತ್ತಂತಿರುವ ವಿರೋಧ ಪಕ್ಷಗಳನ್ನು ಬಡಿದೆಬ್ಬಿಸುವ ನವ ನಿರ್ಮಾಣ ವ್ಯಕ್ತಿ ಇಲ್ಲದೆ ಅವು ಗೊಂದಲದ ಗೂಡಾಗಿವೆ. ಒಟ್ಟಾರೆ ಮುಸ್ಲಿಮರ ಕೈಯಿಂದ ಅನ್ನಕ್ಕೆ ಮಾರ್ಗವಾದ ವ್ಯಾಪಾರ-ಸಾಪಾರ ಎಲ್ಲವನ್ನು ಕಿತ್ತುಕೊಳ್ಳುವ ’ಅನ್ನೇಕಾರರು’ ವಿಜೃಂಭಿಸುತ್ತಿದ್ದಾರೆ. ಬೇಟೆ ನಾಯಿಗೇನು ಗೊತ್ತು ಒಡೆಯನ ಕರಾಮತ್ತು? ಅವರೀಗ, ಸಂಗೀತ, ಸಾಹಿತ್ಯ, ಕ್ರೀಡೆ ಮುಂತಾದ ಸಕಲೆಂಟು ಕ್ಷೇತ್ರಗಳಿಗೂ ನುಗ್ಗಿ ದಾಂಧಲೆ ಎಬ್ಬಿಸುತ್ತಿದ್ದಾರೆ. ಅವುಗಳ ಪಾವಿತ್ರ್ಯತೆಯನ್ನು ಹಾಳುಮಾಡುವ ಮುನ್ಸೂಚನೆಗಳು ಕಂಡುಬರುತ್ತಿವೆ.

ತೆರೆಮರೆಯಲ್ಲಿ ಕುಮ್ಮಕ್ಕು ಇಲ್ಲದಿದ್ದರೆ ಇದೆಲ್ಲ ಸಂಭವಿಸುವುದಾದರೂ ಹೇಗೆ? ಇಡೀ ಮುಸ್ಲಿಮ್ ಜನಾಂಗ ಕೀಳರಿಮೆ ತೊರೆದು ಸ್ವಾಭಿಮಾನ ಸರ್ವೋತ್ಕೃಷ್ಟವೆಂದು ಬಗೆದು ಒಟ್ಟಾಗಿ ಬೀದಿಗಿಳಿದು ಭಾರತೀಯರು ನಾವು, ನಾವೇನು ವಲಸೆ ಬಂದವರಲ್ಲ. ಈ ಮಣ್ಣಿನ ಮಕ್ಕಳು, ಇಲ್ಲಿ ಬದುಕುವುದು ನಮ್ಮ ಹಕ್ಕು; ಸಂವಿಧಾನ ನಮ್ಮ ಪವಿತ್ರ ದೇವರಿದ್ದಂತೆ. ಎಂದು ಗಲಭೆಕೋರರ ಮುಖಕ್ಕೆ ರಾಚಿ ತೂರುವ ಸಾತ್ವಿಕ ಸಿಟ್ಟು ರೂಢಿಸಿಕೊಳ್ಳಬೇಕು ಮತ್ತು ನ್ಯಾಯಾಲಯದ ಮೆಟ್ಟಿಲು ಹತ್ತುವ ಒಗ್ಗಟ್ಟು ಗಳಿಸಿಕೊಳ್ಳಬೇಕು. ’ಸಹಿಷ್ಣು ಹಿಂದೂಗಳಿಗೆ ಇದೇನು ಸಭ್ಯತೆ, ಇದೇನು ಸಂಸ್ಕೃತಿ?’ ಎಂದು ಕೇಳುವ ನೈತಿಕತೆಯನ್ನು ಗಳಿಸಿಕೊಳ್ಳಬೇಕು.

ಕೊನೆಯದಾಗಿ ’ಪರಮಾತ್ಮ ನಮ್ಮನ್ನು ಕಾಪಾಡಲಿ, ನಾವು ಜೊತೆಗೂಡಿ ಒಟ್ಟಾಗಿ ಕೆಲಸ ಮಾಡೋಣ. ನಮ್ಮ ಶಕ್ತಿ ಬೆಳೆಯಲಿ, ಸಾಮರ್ಥ್ಯ ಬೆಳೆಯಲಿ. ನಾವು ಓದಿದ್ದು ತೇಜಸ್ಸು ಆಗಲಿ. ನಾವು ಯಾರನ್ನು ದ್ವೇಷಿಸುವುದು ಬೇಡ, ನಮಗೆ ಹಗೆತನ ಬೇಡ’ ಎಂದ ಉಪನಿಷತ್ ಋಷಿ – ಅವನ ’ಓಂ ಸಹನಾ ಭವತು’ ಎಂಬ ಶಾಂತಿಮಂತ್ರಕ್ಕೆ ನಾವು ವಾರಸುದಾರರಲ್ಲವೆ? ’ಸಹಿಷ್ಣು ಹಿಂದೂ’ ವಾದಿಗಳು ಈ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ದುರಿತಕಾಲ ಕೊನೆಗೊಳ್ಳಲಿ. ಶಾಂತಿ ನೆಲೆಸಲಿ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...