Homeಕರ್ನಾಟಕಕಾವಲುಗಾರನಿಲ್ಲದ ಕೋಟೆ!

ಕಾವಲುಗಾರನಿಲ್ಲದ ಕೋಟೆ!

- Advertisement -
- Advertisement -

ಫೆಡರಿಕ್ ನೀಷ್ಹೆ ಎಂಬ ಜರ್ಮನ್ ತತ್ತ್ವಶಾಸ್ತ್ರಜ್ಞ ತನ್ನ ’ಎಟರ್‍ನಲ್ ರಿಟರ್ನ್’ ಅಥವಾ ’ನಿರಂತರ ಪುನರಾವರ್ತನೆ’ ಅನ್ನೊ ತತ್ತ್ವದ ಮೂಲಕ ಮನುಕುಲಕ್ಕೆ ಸವಾಲು ಹಾಕಿದ. ಎಂದರೆ ನಾವು ಸತ್ತಮೇಲೆ ಮತ್ತೆಮತ್ತೆ ಮರಳಿ ಹುಟ್ಟಿ ಬಂದರೂ ಈಗ ನಾವು ಬದುಕಿ ಬಿಟ್ಟ ಬದುಕನ್ನೇ ಯಥಾವತ್ ಹಾಗೆ ಬದುಕುತ್ತೇವೆ. ಯಾವ ರೀತಿಯ ಮಾರ್ಪಾಟೂ, ಯಾವ ರೀತಿಯ ಬದಲಾವಣೆಯೂ ಇಲ್ಲದೆ; ಹಾಗೊಂದು ವೇಳೆ ಆದರೆ ಅದೆಂತಹ ದುಃಸ್ವಪ್ನ-ಮತ್ತೆ ಅದೇ ದುರಂತ ಬದುಕನ್ನು ಬದುಕುತ್ತಾ ಇರುವುದೆಂದರೆ? ಅವನ ಕಳಕಳಿ ಆಶಯ ಇಷ್ಟೆ: ಪುನಃ ಬದುಕಿದರೂ ಹೊಸಹೊಸ ಅರ್ಥ ಕೊಡುವ ಹಾಗೆ ನಿಮ್ಮ ವ್ಯಕ್ತಿತ್ವವನ್ನು, ನಿಮ್ಮ ಜೀವನವನ್ನು ನೀವೇ ಕಟ್ಟಿಕೊಳ್ಳಿ; ಸೃಜನಶೀಲರಾಗಿ ಬದುಕಿ ಎಂಬುದು.

ಮಾನವ ಇತಿಹಾಸವನ್ನು ಅವಲೋಕಿಸಿದರೆ ನೀಷ್ಹೆಯ ಸಿದ್ಧಾಂತವನ್ನೇ ನಿಜಮಾಡುವತ್ತ ಸಾಗಿ ಬರುತ್ತಿರುವುದು ಕಂಡುಬರುತ್ತಿದೆ. ಉದಾಹರಣೆಗೆ ನಮ್ಮ ಕಣ್ಮುಂದಿನ ಇಂದಿನ ಬದುಕನ್ನೇ ನೋಡಬಹುದು. ಕಳೆದೆರಡು ವರ್ಷಗಳಿಂದ ಕೊರೊನಾ ವೈರಾಣು ಸೋಂಕಿನಿಂದ ಮನುಕುಲ ಸತ್ತಂತಾಗಿತ್ತು. ಒಂದಾದ ಮೇಲೊಂದು ಕೊರೊನಾ ಅಲೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು, ನಿಜ. ಆದರೆ ನೆಲ ಜಲ ಗಾಳಿ ನಿರ್ಮಲವಾಗುತ್ತಿತ್ತು. ಈಗಿನ್ನೂ ಆ ವೈರಾಣು ಸಂಪೂರ್ಣ ನಾಶವಾಗಿಲ್ಲ. ನಿಯಂತ್ರಣಕ್ಕೆ ಬರುವ ಸೂಚನೆ ಇದೆ ಅಷ್ಟೆ. ಆದರೆ ಮನುಷ್ಯಕುಲ ಮಾತ್ರ ಪುನಃ ನಿಯಂತ್ರಣ ತಪ್ಪುತ್ತಿದೆ. ತನ್ನ ಮೊದಲಿನ ಚಾಳಿಗೇ ಹಿಂತಿರುಗುತ್ತಿದೆ. ಅತ್ತ ಉಕ್ರೇನ್-ರಷ್ಯಾ ಸಂಘರ್ಷದ ಸಾವು ನೋವು, ಆಸ್ತಿ ಪಾಸ್ತಿ ನಾಶವಾಗುತ್ತಿದ್ದರೆ ಇತ್ತ ಭಾರತದಲ್ಲಿ ರಾಜಕೀಯ ಹಿತಾಸಕ್ತಿಯ ಕೋಮು ಗಲಭೆಗಳು ಶಾಂತಿಯನ್ನು ಕದಡುತ್ತಿವೆ.

ಫೆಡರಿಕ್ ನೀಷ್ಹೆ

ಭಾರತ ಜನನಿಯ ತನುಜಾತೆಯಾದ ಕರ್ನಾಟಕವೂ ಅದಕ್ಕೆ ಹೊರತಲ್ಲ. ಕರುನಾಡು ಕೋಮು ಸಂಘರ್ಷ ಆಡುಬಲವಾಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಬೀಳುತ್ತಿದೆ. ಇದೆಲ್ಲ ಯಾಕಾಗಿ? ಯಾರಿಗಾಗಿ? ಈ ಕೇಡಿಗೆ ಕೊನೆಯುಂಟೆ? ಎಂಬ ಆತಂಕ ಕಾಡುತ್ತಿದೆ. ದಿನಬೆಳಗಾದರೆ ಕೇಡುಗಳ ಕೆಂಡದ ಮಳೆ ಧಾರಾಕಾರ ಸುರಿಯುತ್ತಿದೆ. ಅದನ್ನೇ ಮಾಧ್ಯಮಗಳು ತಿರುತಿರುಗಿ ಅಪ್ಪಳಿಸುತ್ತಿವೆ.

ಕಳೆದೆರಡು ತಿಂಗಳುಗಳಿಂದ ಹಲವು ಹಿಂದೂಪರ ಸಂಘಟನೆ ಕಾರ್ಯಕರ್ತರು ಮುಸ್ಲಿಮರ ಮೇಲೆ ಒಂದಲ್ಲ ಒಂದು ಕಿತಾಪತಿ ಜಗಳ ಝೂಟ್ ತೆಗೆಯುತ್ತಲೆ ಇದ್ದಾರೆ. ಅವರಿಗೆ ಗದರಿ ಕಿವಿಮಾತು ಹೇಳುವ ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ. ರಾಜ್ಯ ಕಾವಲುಗಾರರಿಲ್ಲದ ಕೋಟೆಯಂತಾಗುತ್ತಿದೆ. ಮುಸ್ಲಿಂ ಜನಾಂಗದ ವಿರುದ್ಧ ಅಜೆಂಡಾಗಳು ಅದೆಲ್ಲಿಂದ ಸೃಷ್ಟಿಯಾಗುತ್ತವೋ ಯಾರು ಸೃಷ್ಟಿ ಮಾಡುತ್ತಾರೋ? ಆ ಮರ್‍ಯಾದಾ ಪುರುಷೋತ್ತಮ ಶ್ರೀರಾಮನೇ ಬಲ್ಲ.

ಹಿಜಾಬ್-ಕೇಸರಿ ಶಾಲು ವಿವಾದದಿಂದ ಆರಂಭಗೊಂಡ ಈ ಘರ್ಷಣೆಗೆಳು ಹಲಾಲ್ ಕಟ್-ಜಟಕಾ ಕಟ್‌ವರೆಗೆ, ಆಜಾನ್ ನಿಷೇಧ, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಇತ್ಯಾದಿ ಕಿಡಿ ಹಾರುತ್ತಲೇ ಇವೆ. ಆದರೆ ಕರುನಾಡ ಜನ ಕಿವಿಗೊಡದೆ ಆ ಕಿಡಿಗಳಿಗೆ ಭಾವೈಕ್ಯದ ತಣ್ಣೀರು ಸುರಿದು ತಮ್ಮ ದೈನಂದಿನ ಬದುಕನ್ನು ಸಾಗಿಸುತ್ತಿರುವುದು ಸ್ವಾಗತಾರ್ಹ. ಆದರೆ ಬಿಸಿಬಿಸಿ ಸುದ್ದಿಗಾಗಿ ಹಾತೊರೆಯುವ ದೃಶ್ಯ ಮಾಧ್ಯಮಗಳ ಬೇಟೆಗಾರರು ಸುಮ್ಮನೆ ಇರಬೇಕಲ್ಲ! ಅಲ್ಲಿ ಇಲ್ಲಿ ಹಾರುವ ಕೊಳ್ಳಿ ಕಿಡಿಗಳಿಗೇ ಭೂತಗನ್ನಡಿ ಹಿಡಿದು ಬಹುಸಂಖ್ಯಾತ ಹಿಂದೂಗಳ ಹಾಲಿನಂತ ಮನಸ್ಸುಗಳಿಗೆ ಹುಳಿ ಹಿಂಡುವುದೂ ಅಲ್ಪಸಂಖ್ಯಾತರಿಗೆ ಅತಂಕ-ಕೀಳರಿಮೆ ಹುಟ್ಟಿಸುವುದೂ ಸತತ ನಡೆಯುತ್ತಲೇ ಇದೆ.

ಇತ್ತ ಒಳ ಜಗಳಗಳಿಂದ ಸತ್ತಂತಿರುವ ವಿರೋಧ ಪಕ್ಷಗಳನ್ನು ಬಡಿದೆಬ್ಬಿಸುವ ನವ ನಿರ್ಮಾಣ ವ್ಯಕ್ತಿ ಇಲ್ಲದೆ ಅವು ಗೊಂದಲದ ಗೂಡಾಗಿವೆ. ಒಟ್ಟಾರೆ ಮುಸ್ಲಿಮರ ಕೈಯಿಂದ ಅನ್ನಕ್ಕೆ ಮಾರ್ಗವಾದ ವ್ಯಾಪಾರ-ಸಾಪಾರ ಎಲ್ಲವನ್ನು ಕಿತ್ತುಕೊಳ್ಳುವ ’ಅನ್ನೇಕಾರರು’ ವಿಜೃಂಭಿಸುತ್ತಿದ್ದಾರೆ. ಬೇಟೆ ನಾಯಿಗೇನು ಗೊತ್ತು ಒಡೆಯನ ಕರಾಮತ್ತು? ಅವರೀಗ, ಸಂಗೀತ, ಸಾಹಿತ್ಯ, ಕ್ರೀಡೆ ಮುಂತಾದ ಸಕಲೆಂಟು ಕ್ಷೇತ್ರಗಳಿಗೂ ನುಗ್ಗಿ ದಾಂಧಲೆ ಎಬ್ಬಿಸುತ್ತಿದ್ದಾರೆ. ಅವುಗಳ ಪಾವಿತ್ರ್ಯತೆಯನ್ನು ಹಾಳುಮಾಡುವ ಮುನ್ಸೂಚನೆಗಳು ಕಂಡುಬರುತ್ತಿವೆ.

ತೆರೆಮರೆಯಲ್ಲಿ ಕುಮ್ಮಕ್ಕು ಇಲ್ಲದಿದ್ದರೆ ಇದೆಲ್ಲ ಸಂಭವಿಸುವುದಾದರೂ ಹೇಗೆ? ಇಡೀ ಮುಸ್ಲಿಮ್ ಜನಾಂಗ ಕೀಳರಿಮೆ ತೊರೆದು ಸ್ವಾಭಿಮಾನ ಸರ್ವೋತ್ಕೃಷ್ಟವೆಂದು ಬಗೆದು ಒಟ್ಟಾಗಿ ಬೀದಿಗಿಳಿದು ಭಾರತೀಯರು ನಾವು, ನಾವೇನು ವಲಸೆ ಬಂದವರಲ್ಲ. ಈ ಮಣ್ಣಿನ ಮಕ್ಕಳು, ಇಲ್ಲಿ ಬದುಕುವುದು ನಮ್ಮ ಹಕ್ಕು; ಸಂವಿಧಾನ ನಮ್ಮ ಪವಿತ್ರ ದೇವರಿದ್ದಂತೆ. ಎಂದು ಗಲಭೆಕೋರರ ಮುಖಕ್ಕೆ ರಾಚಿ ತೂರುವ ಸಾತ್ವಿಕ ಸಿಟ್ಟು ರೂಢಿಸಿಕೊಳ್ಳಬೇಕು ಮತ್ತು ನ್ಯಾಯಾಲಯದ ಮೆಟ್ಟಿಲು ಹತ್ತುವ ಒಗ್ಗಟ್ಟು ಗಳಿಸಿಕೊಳ್ಳಬೇಕು. ’ಸಹಿಷ್ಣು ಹಿಂದೂಗಳಿಗೆ ಇದೇನು ಸಭ್ಯತೆ, ಇದೇನು ಸಂಸ್ಕೃತಿ?’ ಎಂದು ಕೇಳುವ ನೈತಿಕತೆಯನ್ನು ಗಳಿಸಿಕೊಳ್ಳಬೇಕು.

ಕೊನೆಯದಾಗಿ ’ಪರಮಾತ್ಮ ನಮ್ಮನ್ನು ಕಾಪಾಡಲಿ, ನಾವು ಜೊತೆಗೂಡಿ ಒಟ್ಟಾಗಿ ಕೆಲಸ ಮಾಡೋಣ. ನಮ್ಮ ಶಕ್ತಿ ಬೆಳೆಯಲಿ, ಸಾಮರ್ಥ್ಯ ಬೆಳೆಯಲಿ. ನಾವು ಓದಿದ್ದು ತೇಜಸ್ಸು ಆಗಲಿ. ನಾವು ಯಾರನ್ನು ದ್ವೇಷಿಸುವುದು ಬೇಡ, ನಮಗೆ ಹಗೆತನ ಬೇಡ’ ಎಂದ ಉಪನಿಷತ್ ಋಷಿ – ಅವನ ’ಓಂ ಸಹನಾ ಭವತು’ ಎಂಬ ಶಾಂತಿಮಂತ್ರಕ್ಕೆ ನಾವು ವಾರಸುದಾರರಲ್ಲವೆ? ’ಸಹಿಷ್ಣು ಹಿಂದೂ’ ವಾದಿಗಳು ಈ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ದುರಿತಕಾಲ ಕೊನೆಗೊಳ್ಳಲಿ. ಶಾಂತಿ ನೆಲೆಸಲಿ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...