Homeಕರ್ನಾಟಕಕಾವಲುಗಾರನಿಲ್ಲದ ಕೋಟೆ!

ಕಾವಲುಗಾರನಿಲ್ಲದ ಕೋಟೆ!

- Advertisement -
- Advertisement -

ಫೆಡರಿಕ್ ನೀಷ್ಹೆ ಎಂಬ ಜರ್ಮನ್ ತತ್ತ್ವಶಾಸ್ತ್ರಜ್ಞ ತನ್ನ ’ಎಟರ್‍ನಲ್ ರಿಟರ್ನ್’ ಅಥವಾ ’ನಿರಂತರ ಪುನರಾವರ್ತನೆ’ ಅನ್ನೊ ತತ್ತ್ವದ ಮೂಲಕ ಮನುಕುಲಕ್ಕೆ ಸವಾಲು ಹಾಕಿದ. ಎಂದರೆ ನಾವು ಸತ್ತಮೇಲೆ ಮತ್ತೆಮತ್ತೆ ಮರಳಿ ಹುಟ್ಟಿ ಬಂದರೂ ಈಗ ನಾವು ಬದುಕಿ ಬಿಟ್ಟ ಬದುಕನ್ನೇ ಯಥಾವತ್ ಹಾಗೆ ಬದುಕುತ್ತೇವೆ. ಯಾವ ರೀತಿಯ ಮಾರ್ಪಾಟೂ, ಯಾವ ರೀತಿಯ ಬದಲಾವಣೆಯೂ ಇಲ್ಲದೆ; ಹಾಗೊಂದು ವೇಳೆ ಆದರೆ ಅದೆಂತಹ ದುಃಸ್ವಪ್ನ-ಮತ್ತೆ ಅದೇ ದುರಂತ ಬದುಕನ್ನು ಬದುಕುತ್ತಾ ಇರುವುದೆಂದರೆ? ಅವನ ಕಳಕಳಿ ಆಶಯ ಇಷ್ಟೆ: ಪುನಃ ಬದುಕಿದರೂ ಹೊಸಹೊಸ ಅರ್ಥ ಕೊಡುವ ಹಾಗೆ ನಿಮ್ಮ ವ್ಯಕ್ತಿತ್ವವನ್ನು, ನಿಮ್ಮ ಜೀವನವನ್ನು ನೀವೇ ಕಟ್ಟಿಕೊಳ್ಳಿ; ಸೃಜನಶೀಲರಾಗಿ ಬದುಕಿ ಎಂಬುದು.

ಮಾನವ ಇತಿಹಾಸವನ್ನು ಅವಲೋಕಿಸಿದರೆ ನೀಷ್ಹೆಯ ಸಿದ್ಧಾಂತವನ್ನೇ ನಿಜಮಾಡುವತ್ತ ಸಾಗಿ ಬರುತ್ತಿರುವುದು ಕಂಡುಬರುತ್ತಿದೆ. ಉದಾಹರಣೆಗೆ ನಮ್ಮ ಕಣ್ಮುಂದಿನ ಇಂದಿನ ಬದುಕನ್ನೇ ನೋಡಬಹುದು. ಕಳೆದೆರಡು ವರ್ಷಗಳಿಂದ ಕೊರೊನಾ ವೈರಾಣು ಸೋಂಕಿನಿಂದ ಮನುಕುಲ ಸತ್ತಂತಾಗಿತ್ತು. ಒಂದಾದ ಮೇಲೊಂದು ಕೊರೊನಾ ಅಲೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು, ನಿಜ. ಆದರೆ ನೆಲ ಜಲ ಗಾಳಿ ನಿರ್ಮಲವಾಗುತ್ತಿತ್ತು. ಈಗಿನ್ನೂ ಆ ವೈರಾಣು ಸಂಪೂರ್ಣ ನಾಶವಾಗಿಲ್ಲ. ನಿಯಂತ್ರಣಕ್ಕೆ ಬರುವ ಸೂಚನೆ ಇದೆ ಅಷ್ಟೆ. ಆದರೆ ಮನುಷ್ಯಕುಲ ಮಾತ್ರ ಪುನಃ ನಿಯಂತ್ರಣ ತಪ್ಪುತ್ತಿದೆ. ತನ್ನ ಮೊದಲಿನ ಚಾಳಿಗೇ ಹಿಂತಿರುಗುತ್ತಿದೆ. ಅತ್ತ ಉಕ್ರೇನ್-ರಷ್ಯಾ ಸಂಘರ್ಷದ ಸಾವು ನೋವು, ಆಸ್ತಿ ಪಾಸ್ತಿ ನಾಶವಾಗುತ್ತಿದ್ದರೆ ಇತ್ತ ಭಾರತದಲ್ಲಿ ರಾಜಕೀಯ ಹಿತಾಸಕ್ತಿಯ ಕೋಮು ಗಲಭೆಗಳು ಶಾಂತಿಯನ್ನು ಕದಡುತ್ತಿವೆ.

ಫೆಡರಿಕ್ ನೀಷ್ಹೆ

ಭಾರತ ಜನನಿಯ ತನುಜಾತೆಯಾದ ಕರ್ನಾಟಕವೂ ಅದಕ್ಕೆ ಹೊರತಲ್ಲ. ಕರುನಾಡು ಕೋಮು ಸಂಘರ್ಷ ಆಡುಬಲವಾಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಬೀಳುತ್ತಿದೆ. ಇದೆಲ್ಲ ಯಾಕಾಗಿ? ಯಾರಿಗಾಗಿ? ಈ ಕೇಡಿಗೆ ಕೊನೆಯುಂಟೆ? ಎಂಬ ಆತಂಕ ಕಾಡುತ್ತಿದೆ. ದಿನಬೆಳಗಾದರೆ ಕೇಡುಗಳ ಕೆಂಡದ ಮಳೆ ಧಾರಾಕಾರ ಸುರಿಯುತ್ತಿದೆ. ಅದನ್ನೇ ಮಾಧ್ಯಮಗಳು ತಿರುತಿರುಗಿ ಅಪ್ಪಳಿಸುತ್ತಿವೆ.

ಕಳೆದೆರಡು ತಿಂಗಳುಗಳಿಂದ ಹಲವು ಹಿಂದೂಪರ ಸಂಘಟನೆ ಕಾರ್ಯಕರ್ತರು ಮುಸ್ಲಿಮರ ಮೇಲೆ ಒಂದಲ್ಲ ಒಂದು ಕಿತಾಪತಿ ಜಗಳ ಝೂಟ್ ತೆಗೆಯುತ್ತಲೆ ಇದ್ದಾರೆ. ಅವರಿಗೆ ಗದರಿ ಕಿವಿಮಾತು ಹೇಳುವ ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ. ರಾಜ್ಯ ಕಾವಲುಗಾರರಿಲ್ಲದ ಕೋಟೆಯಂತಾಗುತ್ತಿದೆ. ಮುಸ್ಲಿಂ ಜನಾಂಗದ ವಿರುದ್ಧ ಅಜೆಂಡಾಗಳು ಅದೆಲ್ಲಿಂದ ಸೃಷ್ಟಿಯಾಗುತ್ತವೋ ಯಾರು ಸೃಷ್ಟಿ ಮಾಡುತ್ತಾರೋ? ಆ ಮರ್‍ಯಾದಾ ಪುರುಷೋತ್ತಮ ಶ್ರೀರಾಮನೇ ಬಲ್ಲ.

ಹಿಜಾಬ್-ಕೇಸರಿ ಶಾಲು ವಿವಾದದಿಂದ ಆರಂಭಗೊಂಡ ಈ ಘರ್ಷಣೆಗೆಳು ಹಲಾಲ್ ಕಟ್-ಜಟಕಾ ಕಟ್‌ವರೆಗೆ, ಆಜಾನ್ ನಿಷೇಧ, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಇತ್ಯಾದಿ ಕಿಡಿ ಹಾರುತ್ತಲೇ ಇವೆ. ಆದರೆ ಕರುನಾಡ ಜನ ಕಿವಿಗೊಡದೆ ಆ ಕಿಡಿಗಳಿಗೆ ಭಾವೈಕ್ಯದ ತಣ್ಣೀರು ಸುರಿದು ತಮ್ಮ ದೈನಂದಿನ ಬದುಕನ್ನು ಸಾಗಿಸುತ್ತಿರುವುದು ಸ್ವಾಗತಾರ್ಹ. ಆದರೆ ಬಿಸಿಬಿಸಿ ಸುದ್ದಿಗಾಗಿ ಹಾತೊರೆಯುವ ದೃಶ್ಯ ಮಾಧ್ಯಮಗಳ ಬೇಟೆಗಾರರು ಸುಮ್ಮನೆ ಇರಬೇಕಲ್ಲ! ಅಲ್ಲಿ ಇಲ್ಲಿ ಹಾರುವ ಕೊಳ್ಳಿ ಕಿಡಿಗಳಿಗೇ ಭೂತಗನ್ನಡಿ ಹಿಡಿದು ಬಹುಸಂಖ್ಯಾತ ಹಿಂದೂಗಳ ಹಾಲಿನಂತ ಮನಸ್ಸುಗಳಿಗೆ ಹುಳಿ ಹಿಂಡುವುದೂ ಅಲ್ಪಸಂಖ್ಯಾತರಿಗೆ ಅತಂಕ-ಕೀಳರಿಮೆ ಹುಟ್ಟಿಸುವುದೂ ಸತತ ನಡೆಯುತ್ತಲೇ ಇದೆ.

ಇತ್ತ ಒಳ ಜಗಳಗಳಿಂದ ಸತ್ತಂತಿರುವ ವಿರೋಧ ಪಕ್ಷಗಳನ್ನು ಬಡಿದೆಬ್ಬಿಸುವ ನವ ನಿರ್ಮಾಣ ವ್ಯಕ್ತಿ ಇಲ್ಲದೆ ಅವು ಗೊಂದಲದ ಗೂಡಾಗಿವೆ. ಒಟ್ಟಾರೆ ಮುಸ್ಲಿಮರ ಕೈಯಿಂದ ಅನ್ನಕ್ಕೆ ಮಾರ್ಗವಾದ ವ್ಯಾಪಾರ-ಸಾಪಾರ ಎಲ್ಲವನ್ನು ಕಿತ್ತುಕೊಳ್ಳುವ ’ಅನ್ನೇಕಾರರು’ ವಿಜೃಂಭಿಸುತ್ತಿದ್ದಾರೆ. ಬೇಟೆ ನಾಯಿಗೇನು ಗೊತ್ತು ಒಡೆಯನ ಕರಾಮತ್ತು? ಅವರೀಗ, ಸಂಗೀತ, ಸಾಹಿತ್ಯ, ಕ್ರೀಡೆ ಮುಂತಾದ ಸಕಲೆಂಟು ಕ್ಷೇತ್ರಗಳಿಗೂ ನುಗ್ಗಿ ದಾಂಧಲೆ ಎಬ್ಬಿಸುತ್ತಿದ್ದಾರೆ. ಅವುಗಳ ಪಾವಿತ್ರ್ಯತೆಯನ್ನು ಹಾಳುಮಾಡುವ ಮುನ್ಸೂಚನೆಗಳು ಕಂಡುಬರುತ್ತಿವೆ.

ತೆರೆಮರೆಯಲ್ಲಿ ಕುಮ್ಮಕ್ಕು ಇಲ್ಲದಿದ್ದರೆ ಇದೆಲ್ಲ ಸಂಭವಿಸುವುದಾದರೂ ಹೇಗೆ? ಇಡೀ ಮುಸ್ಲಿಮ್ ಜನಾಂಗ ಕೀಳರಿಮೆ ತೊರೆದು ಸ್ವಾಭಿಮಾನ ಸರ್ವೋತ್ಕೃಷ್ಟವೆಂದು ಬಗೆದು ಒಟ್ಟಾಗಿ ಬೀದಿಗಿಳಿದು ಭಾರತೀಯರು ನಾವು, ನಾವೇನು ವಲಸೆ ಬಂದವರಲ್ಲ. ಈ ಮಣ್ಣಿನ ಮಕ್ಕಳು, ಇಲ್ಲಿ ಬದುಕುವುದು ನಮ್ಮ ಹಕ್ಕು; ಸಂವಿಧಾನ ನಮ್ಮ ಪವಿತ್ರ ದೇವರಿದ್ದಂತೆ. ಎಂದು ಗಲಭೆಕೋರರ ಮುಖಕ್ಕೆ ರಾಚಿ ತೂರುವ ಸಾತ್ವಿಕ ಸಿಟ್ಟು ರೂಢಿಸಿಕೊಳ್ಳಬೇಕು ಮತ್ತು ನ್ಯಾಯಾಲಯದ ಮೆಟ್ಟಿಲು ಹತ್ತುವ ಒಗ್ಗಟ್ಟು ಗಳಿಸಿಕೊಳ್ಳಬೇಕು. ’ಸಹಿಷ್ಣು ಹಿಂದೂಗಳಿಗೆ ಇದೇನು ಸಭ್ಯತೆ, ಇದೇನು ಸಂಸ್ಕೃತಿ?’ ಎಂದು ಕೇಳುವ ನೈತಿಕತೆಯನ್ನು ಗಳಿಸಿಕೊಳ್ಳಬೇಕು.

ಕೊನೆಯದಾಗಿ ’ಪರಮಾತ್ಮ ನಮ್ಮನ್ನು ಕಾಪಾಡಲಿ, ನಾವು ಜೊತೆಗೂಡಿ ಒಟ್ಟಾಗಿ ಕೆಲಸ ಮಾಡೋಣ. ನಮ್ಮ ಶಕ್ತಿ ಬೆಳೆಯಲಿ, ಸಾಮರ್ಥ್ಯ ಬೆಳೆಯಲಿ. ನಾವು ಓದಿದ್ದು ತೇಜಸ್ಸು ಆಗಲಿ. ನಾವು ಯಾರನ್ನು ದ್ವೇಷಿಸುವುದು ಬೇಡ, ನಮಗೆ ಹಗೆತನ ಬೇಡ’ ಎಂದ ಉಪನಿಷತ್ ಋಷಿ – ಅವನ ’ಓಂ ಸಹನಾ ಭವತು’ ಎಂಬ ಶಾಂತಿಮಂತ್ರಕ್ಕೆ ನಾವು ವಾರಸುದಾರರಲ್ಲವೆ? ’ಸಹಿಷ್ಣು ಹಿಂದೂ’ ವಾದಿಗಳು ಈ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ದುರಿತಕಾಲ ಕೊನೆಗೊಳ್ಳಲಿ. ಶಾಂತಿ ನೆಲೆಸಲಿ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...