Homeಕರ್ನಾಟಕಕಾವಲುಗಾರನಿಲ್ಲದ ಕೋಟೆ!

ಕಾವಲುಗಾರನಿಲ್ಲದ ಕೋಟೆ!

- Advertisement -
- Advertisement -

ಫೆಡರಿಕ್ ನೀಷ್ಹೆ ಎಂಬ ಜರ್ಮನ್ ತತ್ತ್ವಶಾಸ್ತ್ರಜ್ಞ ತನ್ನ ’ಎಟರ್‍ನಲ್ ರಿಟರ್ನ್’ ಅಥವಾ ’ನಿರಂತರ ಪುನರಾವರ್ತನೆ’ ಅನ್ನೊ ತತ್ತ್ವದ ಮೂಲಕ ಮನುಕುಲಕ್ಕೆ ಸವಾಲು ಹಾಕಿದ. ಎಂದರೆ ನಾವು ಸತ್ತಮೇಲೆ ಮತ್ತೆಮತ್ತೆ ಮರಳಿ ಹುಟ್ಟಿ ಬಂದರೂ ಈಗ ನಾವು ಬದುಕಿ ಬಿಟ್ಟ ಬದುಕನ್ನೇ ಯಥಾವತ್ ಹಾಗೆ ಬದುಕುತ್ತೇವೆ. ಯಾವ ರೀತಿಯ ಮಾರ್ಪಾಟೂ, ಯಾವ ರೀತಿಯ ಬದಲಾವಣೆಯೂ ಇಲ್ಲದೆ; ಹಾಗೊಂದು ವೇಳೆ ಆದರೆ ಅದೆಂತಹ ದುಃಸ್ವಪ್ನ-ಮತ್ತೆ ಅದೇ ದುರಂತ ಬದುಕನ್ನು ಬದುಕುತ್ತಾ ಇರುವುದೆಂದರೆ? ಅವನ ಕಳಕಳಿ ಆಶಯ ಇಷ್ಟೆ: ಪುನಃ ಬದುಕಿದರೂ ಹೊಸಹೊಸ ಅರ್ಥ ಕೊಡುವ ಹಾಗೆ ನಿಮ್ಮ ವ್ಯಕ್ತಿತ್ವವನ್ನು, ನಿಮ್ಮ ಜೀವನವನ್ನು ನೀವೇ ಕಟ್ಟಿಕೊಳ್ಳಿ; ಸೃಜನಶೀಲರಾಗಿ ಬದುಕಿ ಎಂಬುದು.

ಮಾನವ ಇತಿಹಾಸವನ್ನು ಅವಲೋಕಿಸಿದರೆ ನೀಷ್ಹೆಯ ಸಿದ್ಧಾಂತವನ್ನೇ ನಿಜಮಾಡುವತ್ತ ಸಾಗಿ ಬರುತ್ತಿರುವುದು ಕಂಡುಬರುತ್ತಿದೆ. ಉದಾಹರಣೆಗೆ ನಮ್ಮ ಕಣ್ಮುಂದಿನ ಇಂದಿನ ಬದುಕನ್ನೇ ನೋಡಬಹುದು. ಕಳೆದೆರಡು ವರ್ಷಗಳಿಂದ ಕೊರೊನಾ ವೈರಾಣು ಸೋಂಕಿನಿಂದ ಮನುಕುಲ ಸತ್ತಂತಾಗಿತ್ತು. ಒಂದಾದ ಮೇಲೊಂದು ಕೊರೊನಾ ಅಲೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು, ನಿಜ. ಆದರೆ ನೆಲ ಜಲ ಗಾಳಿ ನಿರ್ಮಲವಾಗುತ್ತಿತ್ತು. ಈಗಿನ್ನೂ ಆ ವೈರಾಣು ಸಂಪೂರ್ಣ ನಾಶವಾಗಿಲ್ಲ. ನಿಯಂತ್ರಣಕ್ಕೆ ಬರುವ ಸೂಚನೆ ಇದೆ ಅಷ್ಟೆ. ಆದರೆ ಮನುಷ್ಯಕುಲ ಮಾತ್ರ ಪುನಃ ನಿಯಂತ್ರಣ ತಪ್ಪುತ್ತಿದೆ. ತನ್ನ ಮೊದಲಿನ ಚಾಳಿಗೇ ಹಿಂತಿರುಗುತ್ತಿದೆ. ಅತ್ತ ಉಕ್ರೇನ್-ರಷ್ಯಾ ಸಂಘರ್ಷದ ಸಾವು ನೋವು, ಆಸ್ತಿ ಪಾಸ್ತಿ ನಾಶವಾಗುತ್ತಿದ್ದರೆ ಇತ್ತ ಭಾರತದಲ್ಲಿ ರಾಜಕೀಯ ಹಿತಾಸಕ್ತಿಯ ಕೋಮು ಗಲಭೆಗಳು ಶಾಂತಿಯನ್ನು ಕದಡುತ್ತಿವೆ.

ಫೆಡರಿಕ್ ನೀಷ್ಹೆ

ಭಾರತ ಜನನಿಯ ತನುಜಾತೆಯಾದ ಕರ್ನಾಟಕವೂ ಅದಕ್ಕೆ ಹೊರತಲ್ಲ. ಕರುನಾಡು ಕೋಮು ಸಂಘರ್ಷ ಆಡುಬಲವಾಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಬೀಳುತ್ತಿದೆ. ಇದೆಲ್ಲ ಯಾಕಾಗಿ? ಯಾರಿಗಾಗಿ? ಈ ಕೇಡಿಗೆ ಕೊನೆಯುಂಟೆ? ಎಂಬ ಆತಂಕ ಕಾಡುತ್ತಿದೆ. ದಿನಬೆಳಗಾದರೆ ಕೇಡುಗಳ ಕೆಂಡದ ಮಳೆ ಧಾರಾಕಾರ ಸುರಿಯುತ್ತಿದೆ. ಅದನ್ನೇ ಮಾಧ್ಯಮಗಳು ತಿರುತಿರುಗಿ ಅಪ್ಪಳಿಸುತ್ತಿವೆ.

ಕಳೆದೆರಡು ತಿಂಗಳುಗಳಿಂದ ಹಲವು ಹಿಂದೂಪರ ಸಂಘಟನೆ ಕಾರ್ಯಕರ್ತರು ಮುಸ್ಲಿಮರ ಮೇಲೆ ಒಂದಲ್ಲ ಒಂದು ಕಿತಾಪತಿ ಜಗಳ ಝೂಟ್ ತೆಗೆಯುತ್ತಲೆ ಇದ್ದಾರೆ. ಅವರಿಗೆ ಗದರಿ ಕಿವಿಮಾತು ಹೇಳುವ ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ. ರಾಜ್ಯ ಕಾವಲುಗಾರರಿಲ್ಲದ ಕೋಟೆಯಂತಾಗುತ್ತಿದೆ. ಮುಸ್ಲಿಂ ಜನಾಂಗದ ವಿರುದ್ಧ ಅಜೆಂಡಾಗಳು ಅದೆಲ್ಲಿಂದ ಸೃಷ್ಟಿಯಾಗುತ್ತವೋ ಯಾರು ಸೃಷ್ಟಿ ಮಾಡುತ್ತಾರೋ? ಆ ಮರ್‍ಯಾದಾ ಪುರುಷೋತ್ತಮ ಶ್ರೀರಾಮನೇ ಬಲ್ಲ.

ಹಿಜಾಬ್-ಕೇಸರಿ ಶಾಲು ವಿವಾದದಿಂದ ಆರಂಭಗೊಂಡ ಈ ಘರ್ಷಣೆಗೆಳು ಹಲಾಲ್ ಕಟ್-ಜಟಕಾ ಕಟ್‌ವರೆಗೆ, ಆಜಾನ್ ನಿಷೇಧ, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಇತ್ಯಾದಿ ಕಿಡಿ ಹಾರುತ್ತಲೇ ಇವೆ. ಆದರೆ ಕರುನಾಡ ಜನ ಕಿವಿಗೊಡದೆ ಆ ಕಿಡಿಗಳಿಗೆ ಭಾವೈಕ್ಯದ ತಣ್ಣೀರು ಸುರಿದು ತಮ್ಮ ದೈನಂದಿನ ಬದುಕನ್ನು ಸಾಗಿಸುತ್ತಿರುವುದು ಸ್ವಾಗತಾರ್ಹ. ಆದರೆ ಬಿಸಿಬಿಸಿ ಸುದ್ದಿಗಾಗಿ ಹಾತೊರೆಯುವ ದೃಶ್ಯ ಮಾಧ್ಯಮಗಳ ಬೇಟೆಗಾರರು ಸುಮ್ಮನೆ ಇರಬೇಕಲ್ಲ! ಅಲ್ಲಿ ಇಲ್ಲಿ ಹಾರುವ ಕೊಳ್ಳಿ ಕಿಡಿಗಳಿಗೇ ಭೂತಗನ್ನಡಿ ಹಿಡಿದು ಬಹುಸಂಖ್ಯಾತ ಹಿಂದೂಗಳ ಹಾಲಿನಂತ ಮನಸ್ಸುಗಳಿಗೆ ಹುಳಿ ಹಿಂಡುವುದೂ ಅಲ್ಪಸಂಖ್ಯಾತರಿಗೆ ಅತಂಕ-ಕೀಳರಿಮೆ ಹುಟ್ಟಿಸುವುದೂ ಸತತ ನಡೆಯುತ್ತಲೇ ಇದೆ.

ಇತ್ತ ಒಳ ಜಗಳಗಳಿಂದ ಸತ್ತಂತಿರುವ ವಿರೋಧ ಪಕ್ಷಗಳನ್ನು ಬಡಿದೆಬ್ಬಿಸುವ ನವ ನಿರ್ಮಾಣ ವ್ಯಕ್ತಿ ಇಲ್ಲದೆ ಅವು ಗೊಂದಲದ ಗೂಡಾಗಿವೆ. ಒಟ್ಟಾರೆ ಮುಸ್ಲಿಮರ ಕೈಯಿಂದ ಅನ್ನಕ್ಕೆ ಮಾರ್ಗವಾದ ವ್ಯಾಪಾರ-ಸಾಪಾರ ಎಲ್ಲವನ್ನು ಕಿತ್ತುಕೊಳ್ಳುವ ’ಅನ್ನೇಕಾರರು’ ವಿಜೃಂಭಿಸುತ್ತಿದ್ದಾರೆ. ಬೇಟೆ ನಾಯಿಗೇನು ಗೊತ್ತು ಒಡೆಯನ ಕರಾಮತ್ತು? ಅವರೀಗ, ಸಂಗೀತ, ಸಾಹಿತ್ಯ, ಕ್ರೀಡೆ ಮುಂತಾದ ಸಕಲೆಂಟು ಕ್ಷೇತ್ರಗಳಿಗೂ ನುಗ್ಗಿ ದಾಂಧಲೆ ಎಬ್ಬಿಸುತ್ತಿದ್ದಾರೆ. ಅವುಗಳ ಪಾವಿತ್ರ್ಯತೆಯನ್ನು ಹಾಳುಮಾಡುವ ಮುನ್ಸೂಚನೆಗಳು ಕಂಡುಬರುತ್ತಿವೆ.

ತೆರೆಮರೆಯಲ್ಲಿ ಕುಮ್ಮಕ್ಕು ಇಲ್ಲದಿದ್ದರೆ ಇದೆಲ್ಲ ಸಂಭವಿಸುವುದಾದರೂ ಹೇಗೆ? ಇಡೀ ಮುಸ್ಲಿಮ್ ಜನಾಂಗ ಕೀಳರಿಮೆ ತೊರೆದು ಸ್ವಾಭಿಮಾನ ಸರ್ವೋತ್ಕೃಷ್ಟವೆಂದು ಬಗೆದು ಒಟ್ಟಾಗಿ ಬೀದಿಗಿಳಿದು ಭಾರತೀಯರು ನಾವು, ನಾವೇನು ವಲಸೆ ಬಂದವರಲ್ಲ. ಈ ಮಣ್ಣಿನ ಮಕ್ಕಳು, ಇಲ್ಲಿ ಬದುಕುವುದು ನಮ್ಮ ಹಕ್ಕು; ಸಂವಿಧಾನ ನಮ್ಮ ಪವಿತ್ರ ದೇವರಿದ್ದಂತೆ. ಎಂದು ಗಲಭೆಕೋರರ ಮುಖಕ್ಕೆ ರಾಚಿ ತೂರುವ ಸಾತ್ವಿಕ ಸಿಟ್ಟು ರೂಢಿಸಿಕೊಳ್ಳಬೇಕು ಮತ್ತು ನ್ಯಾಯಾಲಯದ ಮೆಟ್ಟಿಲು ಹತ್ತುವ ಒಗ್ಗಟ್ಟು ಗಳಿಸಿಕೊಳ್ಳಬೇಕು. ’ಸಹಿಷ್ಣು ಹಿಂದೂಗಳಿಗೆ ಇದೇನು ಸಭ್ಯತೆ, ಇದೇನು ಸಂಸ್ಕೃತಿ?’ ಎಂದು ಕೇಳುವ ನೈತಿಕತೆಯನ್ನು ಗಳಿಸಿಕೊಳ್ಳಬೇಕು.

ಕೊನೆಯದಾಗಿ ’ಪರಮಾತ್ಮ ನಮ್ಮನ್ನು ಕಾಪಾಡಲಿ, ನಾವು ಜೊತೆಗೂಡಿ ಒಟ್ಟಾಗಿ ಕೆಲಸ ಮಾಡೋಣ. ನಮ್ಮ ಶಕ್ತಿ ಬೆಳೆಯಲಿ, ಸಾಮರ್ಥ್ಯ ಬೆಳೆಯಲಿ. ನಾವು ಓದಿದ್ದು ತೇಜಸ್ಸು ಆಗಲಿ. ನಾವು ಯಾರನ್ನು ದ್ವೇಷಿಸುವುದು ಬೇಡ, ನಮಗೆ ಹಗೆತನ ಬೇಡ’ ಎಂದ ಉಪನಿಷತ್ ಋಷಿ – ಅವನ ’ಓಂ ಸಹನಾ ಭವತು’ ಎಂಬ ಶಾಂತಿಮಂತ್ರಕ್ಕೆ ನಾವು ವಾರಸುದಾರರಲ್ಲವೆ? ’ಸಹಿಷ್ಣು ಹಿಂದೂ’ ವಾದಿಗಳು ಈ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ದುರಿತಕಾಲ ಕೊನೆಗೊಳ್ಳಲಿ. ಶಾಂತಿ ನೆಲೆಸಲಿ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...