Homeಕರ್ನಾಟಕಕಾವಲುಗಾರನಿಲ್ಲದ ಕೋಟೆ!

ಕಾವಲುಗಾರನಿಲ್ಲದ ಕೋಟೆ!

- Advertisement -
- Advertisement -

ಫೆಡರಿಕ್ ನೀಷ್ಹೆ ಎಂಬ ಜರ್ಮನ್ ತತ್ತ್ವಶಾಸ್ತ್ರಜ್ಞ ತನ್ನ ’ಎಟರ್‍ನಲ್ ರಿಟರ್ನ್’ ಅಥವಾ ’ನಿರಂತರ ಪುನರಾವರ್ತನೆ’ ಅನ್ನೊ ತತ್ತ್ವದ ಮೂಲಕ ಮನುಕುಲಕ್ಕೆ ಸವಾಲು ಹಾಕಿದ. ಎಂದರೆ ನಾವು ಸತ್ತಮೇಲೆ ಮತ್ತೆಮತ್ತೆ ಮರಳಿ ಹುಟ್ಟಿ ಬಂದರೂ ಈಗ ನಾವು ಬದುಕಿ ಬಿಟ್ಟ ಬದುಕನ್ನೇ ಯಥಾವತ್ ಹಾಗೆ ಬದುಕುತ್ತೇವೆ. ಯಾವ ರೀತಿಯ ಮಾರ್ಪಾಟೂ, ಯಾವ ರೀತಿಯ ಬದಲಾವಣೆಯೂ ಇಲ್ಲದೆ; ಹಾಗೊಂದು ವೇಳೆ ಆದರೆ ಅದೆಂತಹ ದುಃಸ್ವಪ್ನ-ಮತ್ತೆ ಅದೇ ದುರಂತ ಬದುಕನ್ನು ಬದುಕುತ್ತಾ ಇರುವುದೆಂದರೆ? ಅವನ ಕಳಕಳಿ ಆಶಯ ಇಷ್ಟೆ: ಪುನಃ ಬದುಕಿದರೂ ಹೊಸಹೊಸ ಅರ್ಥ ಕೊಡುವ ಹಾಗೆ ನಿಮ್ಮ ವ್ಯಕ್ತಿತ್ವವನ್ನು, ನಿಮ್ಮ ಜೀವನವನ್ನು ನೀವೇ ಕಟ್ಟಿಕೊಳ್ಳಿ; ಸೃಜನಶೀಲರಾಗಿ ಬದುಕಿ ಎಂಬುದು.

ಮಾನವ ಇತಿಹಾಸವನ್ನು ಅವಲೋಕಿಸಿದರೆ ನೀಷ್ಹೆಯ ಸಿದ್ಧಾಂತವನ್ನೇ ನಿಜಮಾಡುವತ್ತ ಸಾಗಿ ಬರುತ್ತಿರುವುದು ಕಂಡುಬರುತ್ತಿದೆ. ಉದಾಹರಣೆಗೆ ನಮ್ಮ ಕಣ್ಮುಂದಿನ ಇಂದಿನ ಬದುಕನ್ನೇ ನೋಡಬಹುದು. ಕಳೆದೆರಡು ವರ್ಷಗಳಿಂದ ಕೊರೊನಾ ವೈರಾಣು ಸೋಂಕಿನಿಂದ ಮನುಕುಲ ಸತ್ತಂತಾಗಿತ್ತು. ಒಂದಾದ ಮೇಲೊಂದು ಕೊರೊನಾ ಅಲೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು, ನಿಜ. ಆದರೆ ನೆಲ ಜಲ ಗಾಳಿ ನಿರ್ಮಲವಾಗುತ್ತಿತ್ತು. ಈಗಿನ್ನೂ ಆ ವೈರಾಣು ಸಂಪೂರ್ಣ ನಾಶವಾಗಿಲ್ಲ. ನಿಯಂತ್ರಣಕ್ಕೆ ಬರುವ ಸೂಚನೆ ಇದೆ ಅಷ್ಟೆ. ಆದರೆ ಮನುಷ್ಯಕುಲ ಮಾತ್ರ ಪುನಃ ನಿಯಂತ್ರಣ ತಪ್ಪುತ್ತಿದೆ. ತನ್ನ ಮೊದಲಿನ ಚಾಳಿಗೇ ಹಿಂತಿರುಗುತ್ತಿದೆ. ಅತ್ತ ಉಕ್ರೇನ್-ರಷ್ಯಾ ಸಂಘರ್ಷದ ಸಾವು ನೋವು, ಆಸ್ತಿ ಪಾಸ್ತಿ ನಾಶವಾಗುತ್ತಿದ್ದರೆ ಇತ್ತ ಭಾರತದಲ್ಲಿ ರಾಜಕೀಯ ಹಿತಾಸಕ್ತಿಯ ಕೋಮು ಗಲಭೆಗಳು ಶಾಂತಿಯನ್ನು ಕದಡುತ್ತಿವೆ.

ಫೆಡರಿಕ್ ನೀಷ್ಹೆ

ಭಾರತ ಜನನಿಯ ತನುಜಾತೆಯಾದ ಕರ್ನಾಟಕವೂ ಅದಕ್ಕೆ ಹೊರತಲ್ಲ. ಕರುನಾಡು ಕೋಮು ಸಂಘರ್ಷ ಆಡುಬಲವಾಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಬೀಳುತ್ತಿದೆ. ಇದೆಲ್ಲ ಯಾಕಾಗಿ? ಯಾರಿಗಾಗಿ? ಈ ಕೇಡಿಗೆ ಕೊನೆಯುಂಟೆ? ಎಂಬ ಆತಂಕ ಕಾಡುತ್ತಿದೆ. ದಿನಬೆಳಗಾದರೆ ಕೇಡುಗಳ ಕೆಂಡದ ಮಳೆ ಧಾರಾಕಾರ ಸುರಿಯುತ್ತಿದೆ. ಅದನ್ನೇ ಮಾಧ್ಯಮಗಳು ತಿರುತಿರುಗಿ ಅಪ್ಪಳಿಸುತ್ತಿವೆ.

ಕಳೆದೆರಡು ತಿಂಗಳುಗಳಿಂದ ಹಲವು ಹಿಂದೂಪರ ಸಂಘಟನೆ ಕಾರ್ಯಕರ್ತರು ಮುಸ್ಲಿಮರ ಮೇಲೆ ಒಂದಲ್ಲ ಒಂದು ಕಿತಾಪತಿ ಜಗಳ ಝೂಟ್ ತೆಗೆಯುತ್ತಲೆ ಇದ್ದಾರೆ. ಅವರಿಗೆ ಗದರಿ ಕಿವಿಮಾತು ಹೇಳುವ ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ. ರಾಜ್ಯ ಕಾವಲುಗಾರರಿಲ್ಲದ ಕೋಟೆಯಂತಾಗುತ್ತಿದೆ. ಮುಸ್ಲಿಂ ಜನಾಂಗದ ವಿರುದ್ಧ ಅಜೆಂಡಾಗಳು ಅದೆಲ್ಲಿಂದ ಸೃಷ್ಟಿಯಾಗುತ್ತವೋ ಯಾರು ಸೃಷ್ಟಿ ಮಾಡುತ್ತಾರೋ? ಆ ಮರ್‍ಯಾದಾ ಪುರುಷೋತ್ತಮ ಶ್ರೀರಾಮನೇ ಬಲ್ಲ.

ಹಿಜಾಬ್-ಕೇಸರಿ ಶಾಲು ವಿವಾದದಿಂದ ಆರಂಭಗೊಂಡ ಈ ಘರ್ಷಣೆಗೆಳು ಹಲಾಲ್ ಕಟ್-ಜಟಕಾ ಕಟ್‌ವರೆಗೆ, ಆಜಾನ್ ನಿಷೇಧ, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಇತ್ಯಾದಿ ಕಿಡಿ ಹಾರುತ್ತಲೇ ಇವೆ. ಆದರೆ ಕರುನಾಡ ಜನ ಕಿವಿಗೊಡದೆ ಆ ಕಿಡಿಗಳಿಗೆ ಭಾವೈಕ್ಯದ ತಣ್ಣೀರು ಸುರಿದು ತಮ್ಮ ದೈನಂದಿನ ಬದುಕನ್ನು ಸಾಗಿಸುತ್ತಿರುವುದು ಸ್ವಾಗತಾರ್ಹ. ಆದರೆ ಬಿಸಿಬಿಸಿ ಸುದ್ದಿಗಾಗಿ ಹಾತೊರೆಯುವ ದೃಶ್ಯ ಮಾಧ್ಯಮಗಳ ಬೇಟೆಗಾರರು ಸುಮ್ಮನೆ ಇರಬೇಕಲ್ಲ! ಅಲ್ಲಿ ಇಲ್ಲಿ ಹಾರುವ ಕೊಳ್ಳಿ ಕಿಡಿಗಳಿಗೇ ಭೂತಗನ್ನಡಿ ಹಿಡಿದು ಬಹುಸಂಖ್ಯಾತ ಹಿಂದೂಗಳ ಹಾಲಿನಂತ ಮನಸ್ಸುಗಳಿಗೆ ಹುಳಿ ಹಿಂಡುವುದೂ ಅಲ್ಪಸಂಖ್ಯಾತರಿಗೆ ಅತಂಕ-ಕೀಳರಿಮೆ ಹುಟ್ಟಿಸುವುದೂ ಸತತ ನಡೆಯುತ್ತಲೇ ಇದೆ.

ಇತ್ತ ಒಳ ಜಗಳಗಳಿಂದ ಸತ್ತಂತಿರುವ ವಿರೋಧ ಪಕ್ಷಗಳನ್ನು ಬಡಿದೆಬ್ಬಿಸುವ ನವ ನಿರ್ಮಾಣ ವ್ಯಕ್ತಿ ಇಲ್ಲದೆ ಅವು ಗೊಂದಲದ ಗೂಡಾಗಿವೆ. ಒಟ್ಟಾರೆ ಮುಸ್ಲಿಮರ ಕೈಯಿಂದ ಅನ್ನಕ್ಕೆ ಮಾರ್ಗವಾದ ವ್ಯಾಪಾರ-ಸಾಪಾರ ಎಲ್ಲವನ್ನು ಕಿತ್ತುಕೊಳ್ಳುವ ’ಅನ್ನೇಕಾರರು’ ವಿಜೃಂಭಿಸುತ್ತಿದ್ದಾರೆ. ಬೇಟೆ ನಾಯಿಗೇನು ಗೊತ್ತು ಒಡೆಯನ ಕರಾಮತ್ತು? ಅವರೀಗ, ಸಂಗೀತ, ಸಾಹಿತ್ಯ, ಕ್ರೀಡೆ ಮುಂತಾದ ಸಕಲೆಂಟು ಕ್ಷೇತ್ರಗಳಿಗೂ ನುಗ್ಗಿ ದಾಂಧಲೆ ಎಬ್ಬಿಸುತ್ತಿದ್ದಾರೆ. ಅವುಗಳ ಪಾವಿತ್ರ್ಯತೆಯನ್ನು ಹಾಳುಮಾಡುವ ಮುನ್ಸೂಚನೆಗಳು ಕಂಡುಬರುತ್ತಿವೆ.

ತೆರೆಮರೆಯಲ್ಲಿ ಕುಮ್ಮಕ್ಕು ಇಲ್ಲದಿದ್ದರೆ ಇದೆಲ್ಲ ಸಂಭವಿಸುವುದಾದರೂ ಹೇಗೆ? ಇಡೀ ಮುಸ್ಲಿಮ್ ಜನಾಂಗ ಕೀಳರಿಮೆ ತೊರೆದು ಸ್ವಾಭಿಮಾನ ಸರ್ವೋತ್ಕೃಷ್ಟವೆಂದು ಬಗೆದು ಒಟ್ಟಾಗಿ ಬೀದಿಗಿಳಿದು ಭಾರತೀಯರು ನಾವು, ನಾವೇನು ವಲಸೆ ಬಂದವರಲ್ಲ. ಈ ಮಣ್ಣಿನ ಮಕ್ಕಳು, ಇಲ್ಲಿ ಬದುಕುವುದು ನಮ್ಮ ಹಕ್ಕು; ಸಂವಿಧಾನ ನಮ್ಮ ಪವಿತ್ರ ದೇವರಿದ್ದಂತೆ. ಎಂದು ಗಲಭೆಕೋರರ ಮುಖಕ್ಕೆ ರಾಚಿ ತೂರುವ ಸಾತ್ವಿಕ ಸಿಟ್ಟು ರೂಢಿಸಿಕೊಳ್ಳಬೇಕು ಮತ್ತು ನ್ಯಾಯಾಲಯದ ಮೆಟ್ಟಿಲು ಹತ್ತುವ ಒಗ್ಗಟ್ಟು ಗಳಿಸಿಕೊಳ್ಳಬೇಕು. ’ಸಹಿಷ್ಣು ಹಿಂದೂಗಳಿಗೆ ಇದೇನು ಸಭ್ಯತೆ, ಇದೇನು ಸಂಸ್ಕೃತಿ?’ ಎಂದು ಕೇಳುವ ನೈತಿಕತೆಯನ್ನು ಗಳಿಸಿಕೊಳ್ಳಬೇಕು.

ಕೊನೆಯದಾಗಿ ’ಪರಮಾತ್ಮ ನಮ್ಮನ್ನು ಕಾಪಾಡಲಿ, ನಾವು ಜೊತೆಗೂಡಿ ಒಟ್ಟಾಗಿ ಕೆಲಸ ಮಾಡೋಣ. ನಮ್ಮ ಶಕ್ತಿ ಬೆಳೆಯಲಿ, ಸಾಮರ್ಥ್ಯ ಬೆಳೆಯಲಿ. ನಾವು ಓದಿದ್ದು ತೇಜಸ್ಸು ಆಗಲಿ. ನಾವು ಯಾರನ್ನು ದ್ವೇಷಿಸುವುದು ಬೇಡ, ನಮಗೆ ಹಗೆತನ ಬೇಡ’ ಎಂದ ಉಪನಿಷತ್ ಋಷಿ – ಅವನ ’ಓಂ ಸಹನಾ ಭವತು’ ಎಂಬ ಶಾಂತಿಮಂತ್ರಕ್ಕೆ ನಾವು ವಾರಸುದಾರರಲ್ಲವೆ? ’ಸಹಿಷ್ಣು ಹಿಂದೂ’ ವಾದಿಗಳು ಈ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ದುರಿತಕಾಲ ಕೊನೆಗೊಳ್ಳಲಿ. ಶಾಂತಿ ನೆಲೆಸಲಿ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....