Homeಕರ್ನಾಟಕಕಾವಲುಗಾರನಿಲ್ಲದ ಕೋಟೆ!

ಕಾವಲುಗಾರನಿಲ್ಲದ ಕೋಟೆ!

- Advertisement -
- Advertisement -

ಫೆಡರಿಕ್ ನೀಷ್ಹೆ ಎಂಬ ಜರ್ಮನ್ ತತ್ತ್ವಶಾಸ್ತ್ರಜ್ಞ ತನ್ನ ’ಎಟರ್‍ನಲ್ ರಿಟರ್ನ್’ ಅಥವಾ ’ನಿರಂತರ ಪುನರಾವರ್ತನೆ’ ಅನ್ನೊ ತತ್ತ್ವದ ಮೂಲಕ ಮನುಕುಲಕ್ಕೆ ಸವಾಲು ಹಾಕಿದ. ಎಂದರೆ ನಾವು ಸತ್ತಮೇಲೆ ಮತ್ತೆಮತ್ತೆ ಮರಳಿ ಹುಟ್ಟಿ ಬಂದರೂ ಈಗ ನಾವು ಬದುಕಿ ಬಿಟ್ಟ ಬದುಕನ್ನೇ ಯಥಾವತ್ ಹಾಗೆ ಬದುಕುತ್ತೇವೆ. ಯಾವ ರೀತಿಯ ಮಾರ್ಪಾಟೂ, ಯಾವ ರೀತಿಯ ಬದಲಾವಣೆಯೂ ಇಲ್ಲದೆ; ಹಾಗೊಂದು ವೇಳೆ ಆದರೆ ಅದೆಂತಹ ದುಃಸ್ವಪ್ನ-ಮತ್ತೆ ಅದೇ ದುರಂತ ಬದುಕನ್ನು ಬದುಕುತ್ತಾ ಇರುವುದೆಂದರೆ? ಅವನ ಕಳಕಳಿ ಆಶಯ ಇಷ್ಟೆ: ಪುನಃ ಬದುಕಿದರೂ ಹೊಸಹೊಸ ಅರ್ಥ ಕೊಡುವ ಹಾಗೆ ನಿಮ್ಮ ವ್ಯಕ್ತಿತ್ವವನ್ನು, ನಿಮ್ಮ ಜೀವನವನ್ನು ನೀವೇ ಕಟ್ಟಿಕೊಳ್ಳಿ; ಸೃಜನಶೀಲರಾಗಿ ಬದುಕಿ ಎಂಬುದು.

ಮಾನವ ಇತಿಹಾಸವನ್ನು ಅವಲೋಕಿಸಿದರೆ ನೀಷ್ಹೆಯ ಸಿದ್ಧಾಂತವನ್ನೇ ನಿಜಮಾಡುವತ್ತ ಸಾಗಿ ಬರುತ್ತಿರುವುದು ಕಂಡುಬರುತ್ತಿದೆ. ಉದಾಹರಣೆಗೆ ನಮ್ಮ ಕಣ್ಮುಂದಿನ ಇಂದಿನ ಬದುಕನ್ನೇ ನೋಡಬಹುದು. ಕಳೆದೆರಡು ವರ್ಷಗಳಿಂದ ಕೊರೊನಾ ವೈರಾಣು ಸೋಂಕಿನಿಂದ ಮನುಕುಲ ಸತ್ತಂತಾಗಿತ್ತು. ಒಂದಾದ ಮೇಲೊಂದು ಕೊರೊನಾ ಅಲೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು, ನಿಜ. ಆದರೆ ನೆಲ ಜಲ ಗಾಳಿ ನಿರ್ಮಲವಾಗುತ್ತಿತ್ತು. ಈಗಿನ್ನೂ ಆ ವೈರಾಣು ಸಂಪೂರ್ಣ ನಾಶವಾಗಿಲ್ಲ. ನಿಯಂತ್ರಣಕ್ಕೆ ಬರುವ ಸೂಚನೆ ಇದೆ ಅಷ್ಟೆ. ಆದರೆ ಮನುಷ್ಯಕುಲ ಮಾತ್ರ ಪುನಃ ನಿಯಂತ್ರಣ ತಪ್ಪುತ್ತಿದೆ. ತನ್ನ ಮೊದಲಿನ ಚಾಳಿಗೇ ಹಿಂತಿರುಗುತ್ತಿದೆ. ಅತ್ತ ಉಕ್ರೇನ್-ರಷ್ಯಾ ಸಂಘರ್ಷದ ಸಾವು ನೋವು, ಆಸ್ತಿ ಪಾಸ್ತಿ ನಾಶವಾಗುತ್ತಿದ್ದರೆ ಇತ್ತ ಭಾರತದಲ್ಲಿ ರಾಜಕೀಯ ಹಿತಾಸಕ್ತಿಯ ಕೋಮು ಗಲಭೆಗಳು ಶಾಂತಿಯನ್ನು ಕದಡುತ್ತಿವೆ.

ಫೆಡರಿಕ್ ನೀಷ್ಹೆ

ಭಾರತ ಜನನಿಯ ತನುಜಾತೆಯಾದ ಕರ್ನಾಟಕವೂ ಅದಕ್ಕೆ ಹೊರತಲ್ಲ. ಕರುನಾಡು ಕೋಮು ಸಂಘರ್ಷ ಆಡುಬಲವಾಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಬೀಳುತ್ತಿದೆ. ಇದೆಲ್ಲ ಯಾಕಾಗಿ? ಯಾರಿಗಾಗಿ? ಈ ಕೇಡಿಗೆ ಕೊನೆಯುಂಟೆ? ಎಂಬ ಆತಂಕ ಕಾಡುತ್ತಿದೆ. ದಿನಬೆಳಗಾದರೆ ಕೇಡುಗಳ ಕೆಂಡದ ಮಳೆ ಧಾರಾಕಾರ ಸುರಿಯುತ್ತಿದೆ. ಅದನ್ನೇ ಮಾಧ್ಯಮಗಳು ತಿರುತಿರುಗಿ ಅಪ್ಪಳಿಸುತ್ತಿವೆ.

ಕಳೆದೆರಡು ತಿಂಗಳುಗಳಿಂದ ಹಲವು ಹಿಂದೂಪರ ಸಂಘಟನೆ ಕಾರ್ಯಕರ್ತರು ಮುಸ್ಲಿಮರ ಮೇಲೆ ಒಂದಲ್ಲ ಒಂದು ಕಿತಾಪತಿ ಜಗಳ ಝೂಟ್ ತೆಗೆಯುತ್ತಲೆ ಇದ್ದಾರೆ. ಅವರಿಗೆ ಗದರಿ ಕಿವಿಮಾತು ಹೇಳುವ ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ. ರಾಜ್ಯ ಕಾವಲುಗಾರರಿಲ್ಲದ ಕೋಟೆಯಂತಾಗುತ್ತಿದೆ. ಮುಸ್ಲಿಂ ಜನಾಂಗದ ವಿರುದ್ಧ ಅಜೆಂಡಾಗಳು ಅದೆಲ್ಲಿಂದ ಸೃಷ್ಟಿಯಾಗುತ್ತವೋ ಯಾರು ಸೃಷ್ಟಿ ಮಾಡುತ್ತಾರೋ? ಆ ಮರ್‍ಯಾದಾ ಪುರುಷೋತ್ತಮ ಶ್ರೀರಾಮನೇ ಬಲ್ಲ.

ಹಿಜಾಬ್-ಕೇಸರಿ ಶಾಲು ವಿವಾದದಿಂದ ಆರಂಭಗೊಂಡ ಈ ಘರ್ಷಣೆಗೆಳು ಹಲಾಲ್ ಕಟ್-ಜಟಕಾ ಕಟ್‌ವರೆಗೆ, ಆಜಾನ್ ನಿಷೇಧ, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಇತ್ಯಾದಿ ಕಿಡಿ ಹಾರುತ್ತಲೇ ಇವೆ. ಆದರೆ ಕರುನಾಡ ಜನ ಕಿವಿಗೊಡದೆ ಆ ಕಿಡಿಗಳಿಗೆ ಭಾವೈಕ್ಯದ ತಣ್ಣೀರು ಸುರಿದು ತಮ್ಮ ದೈನಂದಿನ ಬದುಕನ್ನು ಸಾಗಿಸುತ್ತಿರುವುದು ಸ್ವಾಗತಾರ್ಹ. ಆದರೆ ಬಿಸಿಬಿಸಿ ಸುದ್ದಿಗಾಗಿ ಹಾತೊರೆಯುವ ದೃಶ್ಯ ಮಾಧ್ಯಮಗಳ ಬೇಟೆಗಾರರು ಸುಮ್ಮನೆ ಇರಬೇಕಲ್ಲ! ಅಲ್ಲಿ ಇಲ್ಲಿ ಹಾರುವ ಕೊಳ್ಳಿ ಕಿಡಿಗಳಿಗೇ ಭೂತಗನ್ನಡಿ ಹಿಡಿದು ಬಹುಸಂಖ್ಯಾತ ಹಿಂದೂಗಳ ಹಾಲಿನಂತ ಮನಸ್ಸುಗಳಿಗೆ ಹುಳಿ ಹಿಂಡುವುದೂ ಅಲ್ಪಸಂಖ್ಯಾತರಿಗೆ ಅತಂಕ-ಕೀಳರಿಮೆ ಹುಟ್ಟಿಸುವುದೂ ಸತತ ನಡೆಯುತ್ತಲೇ ಇದೆ.

ಇತ್ತ ಒಳ ಜಗಳಗಳಿಂದ ಸತ್ತಂತಿರುವ ವಿರೋಧ ಪಕ್ಷಗಳನ್ನು ಬಡಿದೆಬ್ಬಿಸುವ ನವ ನಿರ್ಮಾಣ ವ್ಯಕ್ತಿ ಇಲ್ಲದೆ ಅವು ಗೊಂದಲದ ಗೂಡಾಗಿವೆ. ಒಟ್ಟಾರೆ ಮುಸ್ಲಿಮರ ಕೈಯಿಂದ ಅನ್ನಕ್ಕೆ ಮಾರ್ಗವಾದ ವ್ಯಾಪಾರ-ಸಾಪಾರ ಎಲ್ಲವನ್ನು ಕಿತ್ತುಕೊಳ್ಳುವ ’ಅನ್ನೇಕಾರರು’ ವಿಜೃಂಭಿಸುತ್ತಿದ್ದಾರೆ. ಬೇಟೆ ನಾಯಿಗೇನು ಗೊತ್ತು ಒಡೆಯನ ಕರಾಮತ್ತು? ಅವರೀಗ, ಸಂಗೀತ, ಸಾಹಿತ್ಯ, ಕ್ರೀಡೆ ಮುಂತಾದ ಸಕಲೆಂಟು ಕ್ಷೇತ್ರಗಳಿಗೂ ನುಗ್ಗಿ ದಾಂಧಲೆ ಎಬ್ಬಿಸುತ್ತಿದ್ದಾರೆ. ಅವುಗಳ ಪಾವಿತ್ರ್ಯತೆಯನ್ನು ಹಾಳುಮಾಡುವ ಮುನ್ಸೂಚನೆಗಳು ಕಂಡುಬರುತ್ತಿವೆ.

ತೆರೆಮರೆಯಲ್ಲಿ ಕುಮ್ಮಕ್ಕು ಇಲ್ಲದಿದ್ದರೆ ಇದೆಲ್ಲ ಸಂಭವಿಸುವುದಾದರೂ ಹೇಗೆ? ಇಡೀ ಮುಸ್ಲಿಮ್ ಜನಾಂಗ ಕೀಳರಿಮೆ ತೊರೆದು ಸ್ವಾಭಿಮಾನ ಸರ್ವೋತ್ಕೃಷ್ಟವೆಂದು ಬಗೆದು ಒಟ್ಟಾಗಿ ಬೀದಿಗಿಳಿದು ಭಾರತೀಯರು ನಾವು, ನಾವೇನು ವಲಸೆ ಬಂದವರಲ್ಲ. ಈ ಮಣ್ಣಿನ ಮಕ್ಕಳು, ಇಲ್ಲಿ ಬದುಕುವುದು ನಮ್ಮ ಹಕ್ಕು; ಸಂವಿಧಾನ ನಮ್ಮ ಪವಿತ್ರ ದೇವರಿದ್ದಂತೆ. ಎಂದು ಗಲಭೆಕೋರರ ಮುಖಕ್ಕೆ ರಾಚಿ ತೂರುವ ಸಾತ್ವಿಕ ಸಿಟ್ಟು ರೂಢಿಸಿಕೊಳ್ಳಬೇಕು ಮತ್ತು ನ್ಯಾಯಾಲಯದ ಮೆಟ್ಟಿಲು ಹತ್ತುವ ಒಗ್ಗಟ್ಟು ಗಳಿಸಿಕೊಳ್ಳಬೇಕು. ’ಸಹಿಷ್ಣು ಹಿಂದೂಗಳಿಗೆ ಇದೇನು ಸಭ್ಯತೆ, ಇದೇನು ಸಂಸ್ಕೃತಿ?’ ಎಂದು ಕೇಳುವ ನೈತಿಕತೆಯನ್ನು ಗಳಿಸಿಕೊಳ್ಳಬೇಕು.

ಕೊನೆಯದಾಗಿ ’ಪರಮಾತ್ಮ ನಮ್ಮನ್ನು ಕಾಪಾಡಲಿ, ನಾವು ಜೊತೆಗೂಡಿ ಒಟ್ಟಾಗಿ ಕೆಲಸ ಮಾಡೋಣ. ನಮ್ಮ ಶಕ್ತಿ ಬೆಳೆಯಲಿ, ಸಾಮರ್ಥ್ಯ ಬೆಳೆಯಲಿ. ನಾವು ಓದಿದ್ದು ತೇಜಸ್ಸು ಆಗಲಿ. ನಾವು ಯಾರನ್ನು ದ್ವೇಷಿಸುವುದು ಬೇಡ, ನಮಗೆ ಹಗೆತನ ಬೇಡ’ ಎಂದ ಉಪನಿಷತ್ ಋಷಿ – ಅವನ ’ಓಂ ಸಹನಾ ಭವತು’ ಎಂಬ ಶಾಂತಿಮಂತ್ರಕ್ಕೆ ನಾವು ವಾರಸುದಾರರಲ್ಲವೆ? ’ಸಹಿಷ್ಣು ಹಿಂದೂ’ ವಾದಿಗಳು ಈ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ದುರಿತಕಾಲ ಕೊನೆಗೊಳ್ಳಲಿ. ಶಾಂತಿ ನೆಲೆಸಲಿ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...