Homeಅಂಕಣಗಳುಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಭವಿಷ್ಯಕ್ಕೆ ಕುತ್ತು ಇದೆ ಎಂಬುದು ಇತ್ತೀಚಿನ ಬಿಜೆಪಿ ಶಾಸಕರ ನಡಾವಳಿಗಳಿಂದ ವ್ಯಕ್ತವಾಗುತ್ತದೆ. ಯಡಿಯೂರಪ್ಪನವರು ಕೊರೊನಾ ತಡೆಗಟ್ಟುವ ಕೆಲಸದಲ್ಲಿ ತನ್ಮಯತೆಯಿಂದ ಕಾರ್ಯನಿರ್ವಹಿಸಿದ್ದಾರೆ, ಅದರಲ್ಲಿ ಎರಡು ಮಾತಿಲ್ಲ. ಕೊರೊನಾ ತಡೆಗೆ ಬಳಸಲಾದ ಅಪಾರ ಹಣದಲ್ಲಿ ದೊಡ್ಡ ಮೊತ್ತದ ಗೋಲ್‍ಮಾಲ್ ಆಗಿದೆ. ತಿನ್ನುವುದಕ್ಕೆ ಅವಕಾಶ ಇರುವ ಎಲ್ಲ ಧನಪಿಶಾಚಿ ಮಂತ್ರಿಗಳು, ಶಾಸಕರು, ಅಧಿಕಾರಿಗಳು ತಿಂದು ಹಾಕಿದ್ದಾರೆ. ಈ ಹಣ ದುರುಪಯೋಗದ ತನಿಖೆಯನ್ನು ಯಡಿಯೂರಪ್ಪನವರು ತಡ ಮಾಡದೆ ಆರಂಭಿಸಬೇಕು. ಈ ಹಗರಣದಲ್ಲಿ ಯಡಿಯೂರಪ್ಪನವರದು ಯಾವ ಪಾತ್ರವೂ ಇಲ್ಲವೆಂದು ನನಗನಿಸುತ್ತದೆ. ಆದ್ದರಿಂದ ಭ್ರಷ್ಟ ಪ್ರಕರಣಗಳನ್ನು ಮುಚ್ಚಿಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಆಲಸ್ಯ ತೋರಬಾರದು.

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ. ಇದು ಇತರ ಪಕ್ಷಗಳಲ್ಲೂ ಇರುವ ವ್ಯಾಧಿಯೇ. ಇಂತಹವರ ಮಧ್ಯೆ ಸರ್ಕಾರವನ್ನು ಸುಗುಮವಾಗಿ ನಡೆಸುವುದು ಸುಲಭ ಸಾಧ್ಯವಲ್ಲ. ಇದು ಯಡಿಯೂರಪ್ಪನವರಿಗೆ ತಿಳಿಯದ ವಿಷಯವೇನಲ್ಲ.

ಕೃಪೆ: ಪ್ರೆಸ್ ರೀಡರ್

ಯಡಿಯೂರಪ್ಪನವರ ಮುಖ್ಯಮಂತ್ರಿ ಪದವಿ ಕಸಿಯಲು ಈ ಸ್ವಾರ್ಥ ರಾಜಕಾರಣಿಗಳ ಮಸಲತ್ತು ಎಷ್ಟು ಅಪಾಯಕಾರಿಯೋ, ಅಷ್ಟೇ ಆಘಾತಕಾರಿ ಬೆಳವಣಿಗೆ ಕೂಡ. ಆರ್‍ಎಸ್‍ಎಸ್ ವಲಯದಿಂದ ಮತ್ತು ಮೋದಿ, ಷಾದ್ವಯರಿಂದ ಯಡಿಯೂರಪ್ಪನವರಿಗೆ ತೊಂದರೆಯಾಗುವ ಎಲ್ಲ ಲಕ್ಷಣಗಳೂ ನನಗೆ ಕಾಣುತ್ತಿದೆ. ಆರ್‍ಎಸ್‍ಎಸ್‍ನ ಪರಿವಾರದವರಿಬ್ಬರನ್ನು ಯಡಿಯೂರಪ್ಪನವರು ತಮ್ಮ ಸಹಜ ಉತ್ಸಾಹದಿಂದ ಮುನ್ನಡೆಯಲು ಅವಕಾಶವಿಲ್ಲದಂತೆ ಕಡಿವಾಣ ಹಾಕುವುದರಲ್ಲಿ ಯಶಸ್ಸು ಕಂಡಿದ್ದಾರೆ. ಅವರಲ್ಲಿ ಒಬ್ಬರು ಕರ್ನಾಟಕದಲ್ಲೇ ಇದ್ದುಕೊಂಡು ಎಡೆಬಿಡದೆ ಕಾಟ ಕೊಡುತ್ತಿದ್ದಾರೆ. ಇನ್ನೊಬ್ಬರು ದೆಹಲಿಯಲ್ಲಿ ಮೋದಿ ಷಾರವರೊಂದಿಗೆ ಬೆರೆತು ಕಾಟ ಕೊಡುತ್ತಿದ್ದಾರೆ. ಈ ಎರಡೂ ಕಾಟದಿಂದ ಪಾರಾಗಲು ಯಡಿಯೂರಪ್ಪನವರಿಗೆ ಸಾಧ್ಯವೇ ಇಲ್ಲದ ವಾತಾವರಣ ಸೃಷ್ಠಿಯಾಗಿದೆ. ಅಶೋಕ್, ಅಶ್ವತ್ಥನಾರಾಯಣ, ಜಾರಕಿಹೊಳಿಯಂಥ ಮುಂತಾದದವರು ಕೊಚ್ಚಿಕೊಳ್ಳುವಂತೆ ಯಾವರೀತಿಯಲ್ಲೂ ಯಡಿಯೂರಪ್ಪನವರಿಗೆ ಬೆಂಬಲಿಸುವ ಯೋಗ್ಯತೆ ಇವರಿಗೆ ಇವತ್ತಿನ ಪರಿಸ್ಥಿತಿಯಲ್ಲಿ ಸಾಧ್ಯವೇ ಇಲ್ಲ. ಮೋದಿ ಮತ್ತು ಷಾರವರಿಗೆ ಇವರಿಂದ ಆಗಬೇಕಾದದ್ದು ಏನೂ ಇಲ್ಲ. ಇವರೆಲ್ಲ ಅಧಿಕಾರದಾಹ ಉಳ್ಳವರೇ ಹೊರತು ಆಡಳಿತ ಚತುರರೇನಲ್ಲ. ಈ ವಿಚಾರ ಅನುಭವಿ ರಾಜಕಾರಣಿ ಯಡಿಯೂರಪ್ಪನವರಿಗೆ ತಿಳಿಯದೇನಿಲ್ಲ.

ಈ ಸಂದರ್ಭದಲ್ಲಿ ಮಹತ್ವಾಕಾಂಕ್ಷಿಗಳಾದ ಮೋದಿ, ಷಾ ಇವರ ವಿಚಾರ ಸರಣಿ ಏನಿರಬಹುದು? ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಯಂತಹವರನ್ನು ಕೂಡಿಸುವ ದುರಾಲೋಚನೆ ಇದೆ. ಆ ಛದ್ಮವೇಷದ ಕಾವಿಯ ವಸ್ತ್ರ ಧಾರಿಯಂತಹವರನ್ನು ತಂದು ಕೂಡಿಸುವ ತವಕ ಇದೆ. ಅಷ್ಟೇ ರುತ್‍ಲೆಸ್ ಆದ ವ್ಯಕ್ತಿಯೊಬ್ಬನ ತಲಾಷಿನಲ್ಲಿದ್ದಾರೆ ಅವರು. ಶಾಸಕರಲ್ಲಿ ಈ ಅರ್ಹತೆ ಉಳ್ಳವರು ಯಾರು ಇಲ್ಲ. ಆರ್‍ಎಸ್‍ಎಸ್‍ನಲ್ಲಾದರೂ, ಕರ್ನಾಟಕದಲ್ಲಿ ಇಂತಹ ಧೂರ್ತರು ಇದ್ದಾರೆಯೇ ಎಂದು ತಲಾಷ್ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯೇನೋ ಹೌದು. ಆದರೆ ಉತ್ತರಪ್ರದೇಶದ ಕಾವಿ ಮುಖ್ಯಮಂತ್ರಿಯ Ruthlessnessನ ಸಾವಿರದಲ್ಲಿ ಒಂದು ಅಂಶಕೂಡ ಪ್ರಹ್ಲಾದ್ ಜೋಶಿಯಲಿಲ್ಲ ಎಂಬುದು ಮೋದಿ-ಷಾಗಳಿಗೆ ಗೊತ್ತಿದೆ. ಉತ್ತರ ಪ್ರದೇಶದ ಛದ್ಮವೇಷಾದಾರಿಯಂತಹ ಕಾಠಿಣ್ಯ ಮನುಷ್ಯ ಮೋದಿ ಷಾ ಅವರಿಗೆ ಸಿಗುವವರೆಗೂ ಯಡಿಯೂರಪ್ಪನವರಿಗೆ ಅಧಿಕಾರದ ಜೀವದಾನ ಮುಂದುವರೆಯುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ.

  • ಎಚ್.ಎಸ್ ದೊರೆಸ್ವಾಮಿ.

ಇದನ್ನು ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...