Homeಅಂಕಣಗಳುಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಭವಿಷ್ಯಕ್ಕೆ ಕುತ್ತು ಇದೆ ಎಂಬುದು ಇತ್ತೀಚಿನ ಬಿಜೆಪಿ ಶಾಸಕರ ನಡಾವಳಿಗಳಿಂದ ವ್ಯಕ್ತವಾಗುತ್ತದೆ. ಯಡಿಯೂರಪ್ಪನವರು ಕೊರೊನಾ ತಡೆಗಟ್ಟುವ ಕೆಲಸದಲ್ಲಿ ತನ್ಮಯತೆಯಿಂದ ಕಾರ್ಯನಿರ್ವಹಿಸಿದ್ದಾರೆ, ಅದರಲ್ಲಿ ಎರಡು ಮಾತಿಲ್ಲ. ಕೊರೊನಾ ತಡೆಗೆ ಬಳಸಲಾದ ಅಪಾರ ಹಣದಲ್ಲಿ ದೊಡ್ಡ ಮೊತ್ತದ ಗೋಲ್‍ಮಾಲ್ ಆಗಿದೆ. ತಿನ್ನುವುದಕ್ಕೆ ಅವಕಾಶ ಇರುವ ಎಲ್ಲ ಧನಪಿಶಾಚಿ ಮಂತ್ರಿಗಳು, ಶಾಸಕರು, ಅಧಿಕಾರಿಗಳು ತಿಂದು ಹಾಕಿದ್ದಾರೆ. ಈ ಹಣ ದುರುಪಯೋಗದ ತನಿಖೆಯನ್ನು ಯಡಿಯೂರಪ್ಪನವರು ತಡ ಮಾಡದೆ ಆರಂಭಿಸಬೇಕು. ಈ ಹಗರಣದಲ್ಲಿ ಯಡಿಯೂರಪ್ಪನವರದು ಯಾವ ಪಾತ್ರವೂ ಇಲ್ಲವೆಂದು ನನಗನಿಸುತ್ತದೆ. ಆದ್ದರಿಂದ ಭ್ರಷ್ಟ ಪ್ರಕರಣಗಳನ್ನು ಮುಚ್ಚಿಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಆಲಸ್ಯ ತೋರಬಾರದು.

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ. ಇದು ಇತರ ಪಕ್ಷಗಳಲ್ಲೂ ಇರುವ ವ್ಯಾಧಿಯೇ. ಇಂತಹವರ ಮಧ್ಯೆ ಸರ್ಕಾರವನ್ನು ಸುಗುಮವಾಗಿ ನಡೆಸುವುದು ಸುಲಭ ಸಾಧ್ಯವಲ್ಲ. ಇದು ಯಡಿಯೂರಪ್ಪನವರಿಗೆ ತಿಳಿಯದ ವಿಷಯವೇನಲ್ಲ.

ಕೃಪೆ: ಪ್ರೆಸ್ ರೀಡರ್

ಯಡಿಯೂರಪ್ಪನವರ ಮುಖ್ಯಮಂತ್ರಿ ಪದವಿ ಕಸಿಯಲು ಈ ಸ್ವಾರ್ಥ ರಾಜಕಾರಣಿಗಳ ಮಸಲತ್ತು ಎಷ್ಟು ಅಪಾಯಕಾರಿಯೋ, ಅಷ್ಟೇ ಆಘಾತಕಾರಿ ಬೆಳವಣಿಗೆ ಕೂಡ. ಆರ್‍ಎಸ್‍ಎಸ್ ವಲಯದಿಂದ ಮತ್ತು ಮೋದಿ, ಷಾದ್ವಯರಿಂದ ಯಡಿಯೂರಪ್ಪನವರಿಗೆ ತೊಂದರೆಯಾಗುವ ಎಲ್ಲ ಲಕ್ಷಣಗಳೂ ನನಗೆ ಕಾಣುತ್ತಿದೆ. ಆರ್‍ಎಸ್‍ಎಸ್‍ನ ಪರಿವಾರದವರಿಬ್ಬರನ್ನು ಯಡಿಯೂರಪ್ಪನವರು ತಮ್ಮ ಸಹಜ ಉತ್ಸಾಹದಿಂದ ಮುನ್ನಡೆಯಲು ಅವಕಾಶವಿಲ್ಲದಂತೆ ಕಡಿವಾಣ ಹಾಕುವುದರಲ್ಲಿ ಯಶಸ್ಸು ಕಂಡಿದ್ದಾರೆ. ಅವರಲ್ಲಿ ಒಬ್ಬರು ಕರ್ನಾಟಕದಲ್ಲೇ ಇದ್ದುಕೊಂಡು ಎಡೆಬಿಡದೆ ಕಾಟ ಕೊಡುತ್ತಿದ್ದಾರೆ. ಇನ್ನೊಬ್ಬರು ದೆಹಲಿಯಲ್ಲಿ ಮೋದಿ ಷಾರವರೊಂದಿಗೆ ಬೆರೆತು ಕಾಟ ಕೊಡುತ್ತಿದ್ದಾರೆ. ಈ ಎರಡೂ ಕಾಟದಿಂದ ಪಾರಾಗಲು ಯಡಿಯೂರಪ್ಪನವರಿಗೆ ಸಾಧ್ಯವೇ ಇಲ್ಲದ ವಾತಾವರಣ ಸೃಷ್ಠಿಯಾಗಿದೆ. ಅಶೋಕ್, ಅಶ್ವತ್ಥನಾರಾಯಣ, ಜಾರಕಿಹೊಳಿಯಂಥ ಮುಂತಾದದವರು ಕೊಚ್ಚಿಕೊಳ್ಳುವಂತೆ ಯಾವರೀತಿಯಲ್ಲೂ ಯಡಿಯೂರಪ್ಪನವರಿಗೆ ಬೆಂಬಲಿಸುವ ಯೋಗ್ಯತೆ ಇವರಿಗೆ ಇವತ್ತಿನ ಪರಿಸ್ಥಿತಿಯಲ್ಲಿ ಸಾಧ್ಯವೇ ಇಲ್ಲ. ಮೋದಿ ಮತ್ತು ಷಾರವರಿಗೆ ಇವರಿಂದ ಆಗಬೇಕಾದದ್ದು ಏನೂ ಇಲ್ಲ. ಇವರೆಲ್ಲ ಅಧಿಕಾರದಾಹ ಉಳ್ಳವರೇ ಹೊರತು ಆಡಳಿತ ಚತುರರೇನಲ್ಲ. ಈ ವಿಚಾರ ಅನುಭವಿ ರಾಜಕಾರಣಿ ಯಡಿಯೂರಪ್ಪನವರಿಗೆ ತಿಳಿಯದೇನಿಲ್ಲ.

ಈ ಸಂದರ್ಭದಲ್ಲಿ ಮಹತ್ವಾಕಾಂಕ್ಷಿಗಳಾದ ಮೋದಿ, ಷಾ ಇವರ ವಿಚಾರ ಸರಣಿ ಏನಿರಬಹುದು? ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಯಂತಹವರನ್ನು ಕೂಡಿಸುವ ದುರಾಲೋಚನೆ ಇದೆ. ಆ ಛದ್ಮವೇಷದ ಕಾವಿಯ ವಸ್ತ್ರ ಧಾರಿಯಂತಹವರನ್ನು ತಂದು ಕೂಡಿಸುವ ತವಕ ಇದೆ. ಅಷ್ಟೇ ರುತ್‍ಲೆಸ್ ಆದ ವ್ಯಕ್ತಿಯೊಬ್ಬನ ತಲಾಷಿನಲ್ಲಿದ್ದಾರೆ ಅವರು. ಶಾಸಕರಲ್ಲಿ ಈ ಅರ್ಹತೆ ಉಳ್ಳವರು ಯಾರು ಇಲ್ಲ. ಆರ್‍ಎಸ್‍ಎಸ್‍ನಲ್ಲಾದರೂ, ಕರ್ನಾಟಕದಲ್ಲಿ ಇಂತಹ ಧೂರ್ತರು ಇದ್ದಾರೆಯೇ ಎಂದು ತಲಾಷ್ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯೇನೋ ಹೌದು. ಆದರೆ ಉತ್ತರಪ್ರದೇಶದ ಕಾವಿ ಮುಖ್ಯಮಂತ್ರಿಯ Ruthlessnessನ ಸಾವಿರದಲ್ಲಿ ಒಂದು ಅಂಶಕೂಡ ಪ್ರಹ್ಲಾದ್ ಜೋಶಿಯಲಿಲ್ಲ ಎಂಬುದು ಮೋದಿ-ಷಾಗಳಿಗೆ ಗೊತ್ತಿದೆ. ಉತ್ತರ ಪ್ರದೇಶದ ಛದ್ಮವೇಷಾದಾರಿಯಂತಹ ಕಾಠಿಣ್ಯ ಮನುಷ್ಯ ಮೋದಿ ಷಾ ಅವರಿಗೆ ಸಿಗುವವರೆಗೂ ಯಡಿಯೂರಪ್ಪನವರಿಗೆ ಅಧಿಕಾರದ ಜೀವದಾನ ಮುಂದುವರೆಯುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ.

  • ಎಚ್.ಎಸ್ ದೊರೆಸ್ವಾಮಿ.

ಇದನ್ನು ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...