Homeಅಂಕಣಗಳುಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಭವಿಷ್ಯಕ್ಕೆ ಕುತ್ತು ಇದೆ ಎಂಬುದು ಇತ್ತೀಚಿನ ಬಿಜೆಪಿ ಶಾಸಕರ ನಡಾವಳಿಗಳಿಂದ ವ್ಯಕ್ತವಾಗುತ್ತದೆ. ಯಡಿಯೂರಪ್ಪನವರು ಕೊರೊನಾ ತಡೆಗಟ್ಟುವ ಕೆಲಸದಲ್ಲಿ ತನ್ಮಯತೆಯಿಂದ ಕಾರ್ಯನಿರ್ವಹಿಸಿದ್ದಾರೆ, ಅದರಲ್ಲಿ ಎರಡು ಮಾತಿಲ್ಲ. ಕೊರೊನಾ ತಡೆಗೆ ಬಳಸಲಾದ ಅಪಾರ ಹಣದಲ್ಲಿ ದೊಡ್ಡ ಮೊತ್ತದ ಗೋಲ್‍ಮಾಲ್ ಆಗಿದೆ. ತಿನ್ನುವುದಕ್ಕೆ ಅವಕಾಶ ಇರುವ ಎಲ್ಲ ಧನಪಿಶಾಚಿ ಮಂತ್ರಿಗಳು, ಶಾಸಕರು, ಅಧಿಕಾರಿಗಳು ತಿಂದು ಹಾಕಿದ್ದಾರೆ. ಈ ಹಣ ದುರುಪಯೋಗದ ತನಿಖೆಯನ್ನು ಯಡಿಯೂರಪ್ಪನವರು ತಡ ಮಾಡದೆ ಆರಂಭಿಸಬೇಕು. ಈ ಹಗರಣದಲ್ಲಿ ಯಡಿಯೂರಪ್ಪನವರದು ಯಾವ ಪಾತ್ರವೂ ಇಲ್ಲವೆಂದು ನನಗನಿಸುತ್ತದೆ. ಆದ್ದರಿಂದ ಭ್ರಷ್ಟ ಪ್ರಕರಣಗಳನ್ನು ಮುಚ್ಚಿಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಆಲಸ್ಯ ತೋರಬಾರದು.

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ. ಇದು ಇತರ ಪಕ್ಷಗಳಲ್ಲೂ ಇರುವ ವ್ಯಾಧಿಯೇ. ಇಂತಹವರ ಮಧ್ಯೆ ಸರ್ಕಾರವನ್ನು ಸುಗುಮವಾಗಿ ನಡೆಸುವುದು ಸುಲಭ ಸಾಧ್ಯವಲ್ಲ. ಇದು ಯಡಿಯೂರಪ್ಪನವರಿಗೆ ತಿಳಿಯದ ವಿಷಯವೇನಲ್ಲ.

ಕೃಪೆ: ಪ್ರೆಸ್ ರೀಡರ್

ಯಡಿಯೂರಪ್ಪನವರ ಮುಖ್ಯಮಂತ್ರಿ ಪದವಿ ಕಸಿಯಲು ಈ ಸ್ವಾರ್ಥ ರಾಜಕಾರಣಿಗಳ ಮಸಲತ್ತು ಎಷ್ಟು ಅಪಾಯಕಾರಿಯೋ, ಅಷ್ಟೇ ಆಘಾತಕಾರಿ ಬೆಳವಣಿಗೆ ಕೂಡ. ಆರ್‍ಎಸ್‍ಎಸ್ ವಲಯದಿಂದ ಮತ್ತು ಮೋದಿ, ಷಾದ್ವಯರಿಂದ ಯಡಿಯೂರಪ್ಪನವರಿಗೆ ತೊಂದರೆಯಾಗುವ ಎಲ್ಲ ಲಕ್ಷಣಗಳೂ ನನಗೆ ಕಾಣುತ್ತಿದೆ. ಆರ್‍ಎಸ್‍ಎಸ್‍ನ ಪರಿವಾರದವರಿಬ್ಬರನ್ನು ಯಡಿಯೂರಪ್ಪನವರು ತಮ್ಮ ಸಹಜ ಉತ್ಸಾಹದಿಂದ ಮುನ್ನಡೆಯಲು ಅವಕಾಶವಿಲ್ಲದಂತೆ ಕಡಿವಾಣ ಹಾಕುವುದರಲ್ಲಿ ಯಶಸ್ಸು ಕಂಡಿದ್ದಾರೆ. ಅವರಲ್ಲಿ ಒಬ್ಬರು ಕರ್ನಾಟಕದಲ್ಲೇ ಇದ್ದುಕೊಂಡು ಎಡೆಬಿಡದೆ ಕಾಟ ಕೊಡುತ್ತಿದ್ದಾರೆ. ಇನ್ನೊಬ್ಬರು ದೆಹಲಿಯಲ್ಲಿ ಮೋದಿ ಷಾರವರೊಂದಿಗೆ ಬೆರೆತು ಕಾಟ ಕೊಡುತ್ತಿದ್ದಾರೆ. ಈ ಎರಡೂ ಕಾಟದಿಂದ ಪಾರಾಗಲು ಯಡಿಯೂರಪ್ಪನವರಿಗೆ ಸಾಧ್ಯವೇ ಇಲ್ಲದ ವಾತಾವರಣ ಸೃಷ್ಠಿಯಾಗಿದೆ. ಅಶೋಕ್, ಅಶ್ವತ್ಥನಾರಾಯಣ, ಜಾರಕಿಹೊಳಿಯಂಥ ಮುಂತಾದದವರು ಕೊಚ್ಚಿಕೊಳ್ಳುವಂತೆ ಯಾವರೀತಿಯಲ್ಲೂ ಯಡಿಯೂರಪ್ಪನವರಿಗೆ ಬೆಂಬಲಿಸುವ ಯೋಗ್ಯತೆ ಇವರಿಗೆ ಇವತ್ತಿನ ಪರಿಸ್ಥಿತಿಯಲ್ಲಿ ಸಾಧ್ಯವೇ ಇಲ್ಲ. ಮೋದಿ ಮತ್ತು ಷಾರವರಿಗೆ ಇವರಿಂದ ಆಗಬೇಕಾದದ್ದು ಏನೂ ಇಲ್ಲ. ಇವರೆಲ್ಲ ಅಧಿಕಾರದಾಹ ಉಳ್ಳವರೇ ಹೊರತು ಆಡಳಿತ ಚತುರರೇನಲ್ಲ. ಈ ವಿಚಾರ ಅನುಭವಿ ರಾಜಕಾರಣಿ ಯಡಿಯೂರಪ್ಪನವರಿಗೆ ತಿಳಿಯದೇನಿಲ್ಲ.

ಈ ಸಂದರ್ಭದಲ್ಲಿ ಮಹತ್ವಾಕಾಂಕ್ಷಿಗಳಾದ ಮೋದಿ, ಷಾ ಇವರ ವಿಚಾರ ಸರಣಿ ಏನಿರಬಹುದು? ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಯಂತಹವರನ್ನು ಕೂಡಿಸುವ ದುರಾಲೋಚನೆ ಇದೆ. ಆ ಛದ್ಮವೇಷದ ಕಾವಿಯ ವಸ್ತ್ರ ಧಾರಿಯಂತಹವರನ್ನು ತಂದು ಕೂಡಿಸುವ ತವಕ ಇದೆ. ಅಷ್ಟೇ ರುತ್‍ಲೆಸ್ ಆದ ವ್ಯಕ್ತಿಯೊಬ್ಬನ ತಲಾಷಿನಲ್ಲಿದ್ದಾರೆ ಅವರು. ಶಾಸಕರಲ್ಲಿ ಈ ಅರ್ಹತೆ ಉಳ್ಳವರು ಯಾರು ಇಲ್ಲ. ಆರ್‍ಎಸ್‍ಎಸ್‍ನಲ್ಲಾದರೂ, ಕರ್ನಾಟಕದಲ್ಲಿ ಇಂತಹ ಧೂರ್ತರು ಇದ್ದಾರೆಯೇ ಎಂದು ತಲಾಷ್ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯೇನೋ ಹೌದು. ಆದರೆ ಉತ್ತರಪ್ರದೇಶದ ಕಾವಿ ಮುಖ್ಯಮಂತ್ರಿಯ Ruthlessnessನ ಸಾವಿರದಲ್ಲಿ ಒಂದು ಅಂಶಕೂಡ ಪ್ರಹ್ಲಾದ್ ಜೋಶಿಯಲಿಲ್ಲ ಎಂಬುದು ಮೋದಿ-ಷಾಗಳಿಗೆ ಗೊತ್ತಿದೆ. ಉತ್ತರ ಪ್ರದೇಶದ ಛದ್ಮವೇಷಾದಾರಿಯಂತಹ ಕಾಠಿಣ್ಯ ಮನುಷ್ಯ ಮೋದಿ ಷಾ ಅವರಿಗೆ ಸಿಗುವವರೆಗೂ ಯಡಿಯೂರಪ್ಪನವರಿಗೆ ಅಧಿಕಾರದ ಜೀವದಾನ ಮುಂದುವರೆಯುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ.

  • ಎಚ್.ಎಸ್ ದೊರೆಸ್ವಾಮಿ.

ಇದನ್ನು ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...