Homeಅಂಕಣಗಳುಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಭವಿಷ್ಯಕ್ಕೆ ಕುತ್ತು ಇದೆ ಎಂಬುದು ಇತ್ತೀಚಿನ ಬಿಜೆಪಿ ಶಾಸಕರ ನಡಾವಳಿಗಳಿಂದ ವ್ಯಕ್ತವಾಗುತ್ತದೆ. ಯಡಿಯೂರಪ್ಪನವರು ಕೊರೊನಾ ತಡೆಗಟ್ಟುವ ಕೆಲಸದಲ್ಲಿ ತನ್ಮಯತೆಯಿಂದ ಕಾರ್ಯನಿರ್ವಹಿಸಿದ್ದಾರೆ, ಅದರಲ್ಲಿ ಎರಡು ಮಾತಿಲ್ಲ. ಕೊರೊನಾ ತಡೆಗೆ ಬಳಸಲಾದ ಅಪಾರ ಹಣದಲ್ಲಿ ದೊಡ್ಡ ಮೊತ್ತದ ಗೋಲ್‍ಮಾಲ್ ಆಗಿದೆ. ತಿನ್ನುವುದಕ್ಕೆ ಅವಕಾಶ ಇರುವ ಎಲ್ಲ ಧನಪಿಶಾಚಿ ಮಂತ್ರಿಗಳು, ಶಾಸಕರು, ಅಧಿಕಾರಿಗಳು ತಿಂದು ಹಾಕಿದ್ದಾರೆ. ಈ ಹಣ ದುರುಪಯೋಗದ ತನಿಖೆಯನ್ನು ಯಡಿಯೂರಪ್ಪನವರು ತಡ ಮಾಡದೆ ಆರಂಭಿಸಬೇಕು. ಈ ಹಗರಣದಲ್ಲಿ ಯಡಿಯೂರಪ್ಪನವರದು ಯಾವ ಪಾತ್ರವೂ ಇಲ್ಲವೆಂದು ನನಗನಿಸುತ್ತದೆ. ಆದ್ದರಿಂದ ಭ್ರಷ್ಟ ಪ್ರಕರಣಗಳನ್ನು ಮುಚ್ಚಿಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಆಲಸ್ಯ ತೋರಬಾರದು.

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ. ಇದು ಇತರ ಪಕ್ಷಗಳಲ್ಲೂ ಇರುವ ವ್ಯಾಧಿಯೇ. ಇಂತಹವರ ಮಧ್ಯೆ ಸರ್ಕಾರವನ್ನು ಸುಗುಮವಾಗಿ ನಡೆಸುವುದು ಸುಲಭ ಸಾಧ್ಯವಲ್ಲ. ಇದು ಯಡಿಯೂರಪ್ಪನವರಿಗೆ ತಿಳಿಯದ ವಿಷಯವೇನಲ್ಲ.

ಕೃಪೆ: ಪ್ರೆಸ್ ರೀಡರ್

ಯಡಿಯೂರಪ್ಪನವರ ಮುಖ್ಯಮಂತ್ರಿ ಪದವಿ ಕಸಿಯಲು ಈ ಸ್ವಾರ್ಥ ರಾಜಕಾರಣಿಗಳ ಮಸಲತ್ತು ಎಷ್ಟು ಅಪಾಯಕಾರಿಯೋ, ಅಷ್ಟೇ ಆಘಾತಕಾರಿ ಬೆಳವಣಿಗೆ ಕೂಡ. ಆರ್‍ಎಸ್‍ಎಸ್ ವಲಯದಿಂದ ಮತ್ತು ಮೋದಿ, ಷಾದ್ವಯರಿಂದ ಯಡಿಯೂರಪ್ಪನವರಿಗೆ ತೊಂದರೆಯಾಗುವ ಎಲ್ಲ ಲಕ್ಷಣಗಳೂ ನನಗೆ ಕಾಣುತ್ತಿದೆ. ಆರ್‍ಎಸ್‍ಎಸ್‍ನ ಪರಿವಾರದವರಿಬ್ಬರನ್ನು ಯಡಿಯೂರಪ್ಪನವರು ತಮ್ಮ ಸಹಜ ಉತ್ಸಾಹದಿಂದ ಮುನ್ನಡೆಯಲು ಅವಕಾಶವಿಲ್ಲದಂತೆ ಕಡಿವಾಣ ಹಾಕುವುದರಲ್ಲಿ ಯಶಸ್ಸು ಕಂಡಿದ್ದಾರೆ. ಅವರಲ್ಲಿ ಒಬ್ಬರು ಕರ್ನಾಟಕದಲ್ಲೇ ಇದ್ದುಕೊಂಡು ಎಡೆಬಿಡದೆ ಕಾಟ ಕೊಡುತ್ತಿದ್ದಾರೆ. ಇನ್ನೊಬ್ಬರು ದೆಹಲಿಯಲ್ಲಿ ಮೋದಿ ಷಾರವರೊಂದಿಗೆ ಬೆರೆತು ಕಾಟ ಕೊಡುತ್ತಿದ್ದಾರೆ. ಈ ಎರಡೂ ಕಾಟದಿಂದ ಪಾರಾಗಲು ಯಡಿಯೂರಪ್ಪನವರಿಗೆ ಸಾಧ್ಯವೇ ಇಲ್ಲದ ವಾತಾವರಣ ಸೃಷ್ಠಿಯಾಗಿದೆ. ಅಶೋಕ್, ಅಶ್ವತ್ಥನಾರಾಯಣ, ಜಾರಕಿಹೊಳಿಯಂಥ ಮುಂತಾದದವರು ಕೊಚ್ಚಿಕೊಳ್ಳುವಂತೆ ಯಾವರೀತಿಯಲ್ಲೂ ಯಡಿಯೂರಪ್ಪನವರಿಗೆ ಬೆಂಬಲಿಸುವ ಯೋಗ್ಯತೆ ಇವರಿಗೆ ಇವತ್ತಿನ ಪರಿಸ್ಥಿತಿಯಲ್ಲಿ ಸಾಧ್ಯವೇ ಇಲ್ಲ. ಮೋದಿ ಮತ್ತು ಷಾರವರಿಗೆ ಇವರಿಂದ ಆಗಬೇಕಾದದ್ದು ಏನೂ ಇಲ್ಲ. ಇವರೆಲ್ಲ ಅಧಿಕಾರದಾಹ ಉಳ್ಳವರೇ ಹೊರತು ಆಡಳಿತ ಚತುರರೇನಲ್ಲ. ಈ ವಿಚಾರ ಅನುಭವಿ ರಾಜಕಾರಣಿ ಯಡಿಯೂರಪ್ಪನವರಿಗೆ ತಿಳಿಯದೇನಿಲ್ಲ.

ಈ ಸಂದರ್ಭದಲ್ಲಿ ಮಹತ್ವಾಕಾಂಕ್ಷಿಗಳಾದ ಮೋದಿ, ಷಾ ಇವರ ವಿಚಾರ ಸರಣಿ ಏನಿರಬಹುದು? ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಯಂತಹವರನ್ನು ಕೂಡಿಸುವ ದುರಾಲೋಚನೆ ಇದೆ. ಆ ಛದ್ಮವೇಷದ ಕಾವಿಯ ವಸ್ತ್ರ ಧಾರಿಯಂತಹವರನ್ನು ತಂದು ಕೂಡಿಸುವ ತವಕ ಇದೆ. ಅಷ್ಟೇ ರುತ್‍ಲೆಸ್ ಆದ ವ್ಯಕ್ತಿಯೊಬ್ಬನ ತಲಾಷಿನಲ್ಲಿದ್ದಾರೆ ಅವರು. ಶಾಸಕರಲ್ಲಿ ಈ ಅರ್ಹತೆ ಉಳ್ಳವರು ಯಾರು ಇಲ್ಲ. ಆರ್‍ಎಸ್‍ಎಸ್‍ನಲ್ಲಾದರೂ, ಕರ್ನಾಟಕದಲ್ಲಿ ಇಂತಹ ಧೂರ್ತರು ಇದ್ದಾರೆಯೇ ಎಂದು ತಲಾಷ್ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯೇನೋ ಹೌದು. ಆದರೆ ಉತ್ತರಪ್ರದೇಶದ ಕಾವಿ ಮುಖ್ಯಮಂತ್ರಿಯ Ruthlessnessನ ಸಾವಿರದಲ್ಲಿ ಒಂದು ಅಂಶಕೂಡ ಪ್ರಹ್ಲಾದ್ ಜೋಶಿಯಲಿಲ್ಲ ಎಂಬುದು ಮೋದಿ-ಷಾಗಳಿಗೆ ಗೊತ್ತಿದೆ. ಉತ್ತರ ಪ್ರದೇಶದ ಛದ್ಮವೇಷಾದಾರಿಯಂತಹ ಕಾಠಿಣ್ಯ ಮನುಷ್ಯ ಮೋದಿ ಷಾ ಅವರಿಗೆ ಸಿಗುವವರೆಗೂ ಯಡಿಯೂರಪ್ಪನವರಿಗೆ ಅಧಿಕಾರದ ಜೀವದಾನ ಮುಂದುವರೆಯುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ.

  • ಎಚ್.ಎಸ್ ದೊರೆಸ್ವಾಮಿ.

ಇದನ್ನು ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...