Homeಅಂಕಣಗಳುಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಭವಿಷ್ಯಕ್ಕೆ ಕುತ್ತು ಇದೆ ಎಂಬುದು ಇತ್ತೀಚಿನ ಬಿಜೆಪಿ ಶಾಸಕರ ನಡಾವಳಿಗಳಿಂದ ವ್ಯಕ್ತವಾಗುತ್ತದೆ. ಯಡಿಯೂರಪ್ಪನವರು ಕೊರೊನಾ ತಡೆಗಟ್ಟುವ ಕೆಲಸದಲ್ಲಿ ತನ್ಮಯತೆಯಿಂದ ಕಾರ್ಯನಿರ್ವಹಿಸಿದ್ದಾರೆ, ಅದರಲ್ಲಿ ಎರಡು ಮಾತಿಲ್ಲ. ಕೊರೊನಾ ತಡೆಗೆ ಬಳಸಲಾದ ಅಪಾರ ಹಣದಲ್ಲಿ ದೊಡ್ಡ ಮೊತ್ತದ ಗೋಲ್‍ಮಾಲ್ ಆಗಿದೆ. ತಿನ್ನುವುದಕ್ಕೆ ಅವಕಾಶ ಇರುವ ಎಲ್ಲ ಧನಪಿಶಾಚಿ ಮಂತ್ರಿಗಳು, ಶಾಸಕರು, ಅಧಿಕಾರಿಗಳು ತಿಂದು ಹಾಕಿದ್ದಾರೆ. ಈ ಹಣ ದುರುಪಯೋಗದ ತನಿಖೆಯನ್ನು ಯಡಿಯೂರಪ್ಪನವರು ತಡ ಮಾಡದೆ ಆರಂಭಿಸಬೇಕು. ಈ ಹಗರಣದಲ್ಲಿ ಯಡಿಯೂರಪ್ಪನವರದು ಯಾವ ಪಾತ್ರವೂ ಇಲ್ಲವೆಂದು ನನಗನಿಸುತ್ತದೆ. ಆದ್ದರಿಂದ ಭ್ರಷ್ಟ ಪ್ರಕರಣಗಳನ್ನು ಮುಚ್ಚಿಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಆಲಸ್ಯ ತೋರಬಾರದು.

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ. ಇದು ಇತರ ಪಕ್ಷಗಳಲ್ಲೂ ಇರುವ ವ್ಯಾಧಿಯೇ. ಇಂತಹವರ ಮಧ್ಯೆ ಸರ್ಕಾರವನ್ನು ಸುಗುಮವಾಗಿ ನಡೆಸುವುದು ಸುಲಭ ಸಾಧ್ಯವಲ್ಲ. ಇದು ಯಡಿಯೂರಪ್ಪನವರಿಗೆ ತಿಳಿಯದ ವಿಷಯವೇನಲ್ಲ.

ಕೃಪೆ: ಪ್ರೆಸ್ ರೀಡರ್

ಯಡಿಯೂರಪ್ಪನವರ ಮುಖ್ಯಮಂತ್ರಿ ಪದವಿ ಕಸಿಯಲು ಈ ಸ್ವಾರ್ಥ ರಾಜಕಾರಣಿಗಳ ಮಸಲತ್ತು ಎಷ್ಟು ಅಪಾಯಕಾರಿಯೋ, ಅಷ್ಟೇ ಆಘಾತಕಾರಿ ಬೆಳವಣಿಗೆ ಕೂಡ. ಆರ್‍ಎಸ್‍ಎಸ್ ವಲಯದಿಂದ ಮತ್ತು ಮೋದಿ, ಷಾದ್ವಯರಿಂದ ಯಡಿಯೂರಪ್ಪನವರಿಗೆ ತೊಂದರೆಯಾಗುವ ಎಲ್ಲ ಲಕ್ಷಣಗಳೂ ನನಗೆ ಕಾಣುತ್ತಿದೆ. ಆರ್‍ಎಸ್‍ಎಸ್‍ನ ಪರಿವಾರದವರಿಬ್ಬರನ್ನು ಯಡಿಯೂರಪ್ಪನವರು ತಮ್ಮ ಸಹಜ ಉತ್ಸಾಹದಿಂದ ಮುನ್ನಡೆಯಲು ಅವಕಾಶವಿಲ್ಲದಂತೆ ಕಡಿವಾಣ ಹಾಕುವುದರಲ್ಲಿ ಯಶಸ್ಸು ಕಂಡಿದ್ದಾರೆ. ಅವರಲ್ಲಿ ಒಬ್ಬರು ಕರ್ನಾಟಕದಲ್ಲೇ ಇದ್ದುಕೊಂಡು ಎಡೆಬಿಡದೆ ಕಾಟ ಕೊಡುತ್ತಿದ್ದಾರೆ. ಇನ್ನೊಬ್ಬರು ದೆಹಲಿಯಲ್ಲಿ ಮೋದಿ ಷಾರವರೊಂದಿಗೆ ಬೆರೆತು ಕಾಟ ಕೊಡುತ್ತಿದ್ದಾರೆ. ಈ ಎರಡೂ ಕಾಟದಿಂದ ಪಾರಾಗಲು ಯಡಿಯೂರಪ್ಪನವರಿಗೆ ಸಾಧ್ಯವೇ ಇಲ್ಲದ ವಾತಾವರಣ ಸೃಷ್ಠಿಯಾಗಿದೆ. ಅಶೋಕ್, ಅಶ್ವತ್ಥನಾರಾಯಣ, ಜಾರಕಿಹೊಳಿಯಂಥ ಮುಂತಾದದವರು ಕೊಚ್ಚಿಕೊಳ್ಳುವಂತೆ ಯಾವರೀತಿಯಲ್ಲೂ ಯಡಿಯೂರಪ್ಪನವರಿಗೆ ಬೆಂಬಲಿಸುವ ಯೋಗ್ಯತೆ ಇವರಿಗೆ ಇವತ್ತಿನ ಪರಿಸ್ಥಿತಿಯಲ್ಲಿ ಸಾಧ್ಯವೇ ಇಲ್ಲ. ಮೋದಿ ಮತ್ತು ಷಾರವರಿಗೆ ಇವರಿಂದ ಆಗಬೇಕಾದದ್ದು ಏನೂ ಇಲ್ಲ. ಇವರೆಲ್ಲ ಅಧಿಕಾರದಾಹ ಉಳ್ಳವರೇ ಹೊರತು ಆಡಳಿತ ಚತುರರೇನಲ್ಲ. ಈ ವಿಚಾರ ಅನುಭವಿ ರಾಜಕಾರಣಿ ಯಡಿಯೂರಪ್ಪನವರಿಗೆ ತಿಳಿಯದೇನಿಲ್ಲ.

ಈ ಸಂದರ್ಭದಲ್ಲಿ ಮಹತ್ವಾಕಾಂಕ್ಷಿಗಳಾದ ಮೋದಿ, ಷಾ ಇವರ ವಿಚಾರ ಸರಣಿ ಏನಿರಬಹುದು? ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಯಂತಹವರನ್ನು ಕೂಡಿಸುವ ದುರಾಲೋಚನೆ ಇದೆ. ಆ ಛದ್ಮವೇಷದ ಕಾವಿಯ ವಸ್ತ್ರ ಧಾರಿಯಂತಹವರನ್ನು ತಂದು ಕೂಡಿಸುವ ತವಕ ಇದೆ. ಅಷ್ಟೇ ರುತ್‍ಲೆಸ್ ಆದ ವ್ಯಕ್ತಿಯೊಬ್ಬನ ತಲಾಷಿನಲ್ಲಿದ್ದಾರೆ ಅವರು. ಶಾಸಕರಲ್ಲಿ ಈ ಅರ್ಹತೆ ಉಳ್ಳವರು ಯಾರು ಇಲ್ಲ. ಆರ್‍ಎಸ್‍ಎಸ್‍ನಲ್ಲಾದರೂ, ಕರ್ನಾಟಕದಲ್ಲಿ ಇಂತಹ ಧೂರ್ತರು ಇದ್ದಾರೆಯೇ ಎಂದು ತಲಾಷ್ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯೇನೋ ಹೌದು. ಆದರೆ ಉತ್ತರಪ್ರದೇಶದ ಕಾವಿ ಮುಖ್ಯಮಂತ್ರಿಯ Ruthlessnessನ ಸಾವಿರದಲ್ಲಿ ಒಂದು ಅಂಶಕೂಡ ಪ್ರಹ್ಲಾದ್ ಜೋಶಿಯಲಿಲ್ಲ ಎಂಬುದು ಮೋದಿ-ಷಾಗಳಿಗೆ ಗೊತ್ತಿದೆ. ಉತ್ತರ ಪ್ರದೇಶದ ಛದ್ಮವೇಷಾದಾರಿಯಂತಹ ಕಾಠಿಣ್ಯ ಮನುಷ್ಯ ಮೋದಿ ಷಾ ಅವರಿಗೆ ಸಿಗುವವರೆಗೂ ಯಡಿಯೂರಪ್ಪನವರಿಗೆ ಅಧಿಕಾರದ ಜೀವದಾನ ಮುಂದುವರೆಯುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ.

  • ಎಚ್.ಎಸ್ ದೊರೆಸ್ವಾಮಿ.

ಇದನ್ನು ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...