Homeಅಂಕಣಗಳುಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಭವಿಷ್ಯಕ್ಕೆ ಕುತ್ತು ಇದೆ ಎಂಬುದು ಇತ್ತೀಚಿನ ಬಿಜೆಪಿ ಶಾಸಕರ ನಡಾವಳಿಗಳಿಂದ ವ್ಯಕ್ತವಾಗುತ್ತದೆ. ಯಡಿಯೂರಪ್ಪನವರು ಕೊರೊನಾ ತಡೆಗಟ್ಟುವ ಕೆಲಸದಲ್ಲಿ ತನ್ಮಯತೆಯಿಂದ ಕಾರ್ಯನಿರ್ವಹಿಸಿದ್ದಾರೆ, ಅದರಲ್ಲಿ ಎರಡು ಮಾತಿಲ್ಲ. ಕೊರೊನಾ ತಡೆಗೆ ಬಳಸಲಾದ ಅಪಾರ ಹಣದಲ್ಲಿ ದೊಡ್ಡ ಮೊತ್ತದ ಗೋಲ್‍ಮಾಲ್ ಆಗಿದೆ. ತಿನ್ನುವುದಕ್ಕೆ ಅವಕಾಶ ಇರುವ ಎಲ್ಲ ಧನಪಿಶಾಚಿ ಮಂತ್ರಿಗಳು, ಶಾಸಕರು, ಅಧಿಕಾರಿಗಳು ತಿಂದು ಹಾಕಿದ್ದಾರೆ. ಈ ಹಣ ದುರುಪಯೋಗದ ತನಿಖೆಯನ್ನು ಯಡಿಯೂರಪ್ಪನವರು ತಡ ಮಾಡದೆ ಆರಂಭಿಸಬೇಕು. ಈ ಹಗರಣದಲ್ಲಿ ಯಡಿಯೂರಪ್ಪನವರದು ಯಾವ ಪಾತ್ರವೂ ಇಲ್ಲವೆಂದು ನನಗನಿಸುತ್ತದೆ. ಆದ್ದರಿಂದ ಭ್ರಷ್ಟ ಪ್ರಕರಣಗಳನ್ನು ಮುಚ್ಚಿಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಆಲಸ್ಯ ತೋರಬಾರದು.

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ. ಇದು ಇತರ ಪಕ್ಷಗಳಲ್ಲೂ ಇರುವ ವ್ಯಾಧಿಯೇ. ಇಂತಹವರ ಮಧ್ಯೆ ಸರ್ಕಾರವನ್ನು ಸುಗುಮವಾಗಿ ನಡೆಸುವುದು ಸುಲಭ ಸಾಧ್ಯವಲ್ಲ. ಇದು ಯಡಿಯೂರಪ್ಪನವರಿಗೆ ತಿಳಿಯದ ವಿಷಯವೇನಲ್ಲ.

ಕೃಪೆ: ಪ್ರೆಸ್ ರೀಡರ್

ಯಡಿಯೂರಪ್ಪನವರ ಮುಖ್ಯಮಂತ್ರಿ ಪದವಿ ಕಸಿಯಲು ಈ ಸ್ವಾರ್ಥ ರಾಜಕಾರಣಿಗಳ ಮಸಲತ್ತು ಎಷ್ಟು ಅಪಾಯಕಾರಿಯೋ, ಅಷ್ಟೇ ಆಘಾತಕಾರಿ ಬೆಳವಣಿಗೆ ಕೂಡ. ಆರ್‍ಎಸ್‍ಎಸ್ ವಲಯದಿಂದ ಮತ್ತು ಮೋದಿ, ಷಾದ್ವಯರಿಂದ ಯಡಿಯೂರಪ್ಪನವರಿಗೆ ತೊಂದರೆಯಾಗುವ ಎಲ್ಲ ಲಕ್ಷಣಗಳೂ ನನಗೆ ಕಾಣುತ್ತಿದೆ. ಆರ್‍ಎಸ್‍ಎಸ್‍ನ ಪರಿವಾರದವರಿಬ್ಬರನ್ನು ಯಡಿಯೂರಪ್ಪನವರು ತಮ್ಮ ಸಹಜ ಉತ್ಸಾಹದಿಂದ ಮುನ್ನಡೆಯಲು ಅವಕಾಶವಿಲ್ಲದಂತೆ ಕಡಿವಾಣ ಹಾಕುವುದರಲ್ಲಿ ಯಶಸ್ಸು ಕಂಡಿದ್ದಾರೆ. ಅವರಲ್ಲಿ ಒಬ್ಬರು ಕರ್ನಾಟಕದಲ್ಲೇ ಇದ್ದುಕೊಂಡು ಎಡೆಬಿಡದೆ ಕಾಟ ಕೊಡುತ್ತಿದ್ದಾರೆ. ಇನ್ನೊಬ್ಬರು ದೆಹಲಿಯಲ್ಲಿ ಮೋದಿ ಷಾರವರೊಂದಿಗೆ ಬೆರೆತು ಕಾಟ ಕೊಡುತ್ತಿದ್ದಾರೆ. ಈ ಎರಡೂ ಕಾಟದಿಂದ ಪಾರಾಗಲು ಯಡಿಯೂರಪ್ಪನವರಿಗೆ ಸಾಧ್ಯವೇ ಇಲ್ಲದ ವಾತಾವರಣ ಸೃಷ್ಠಿಯಾಗಿದೆ. ಅಶೋಕ್, ಅಶ್ವತ್ಥನಾರಾಯಣ, ಜಾರಕಿಹೊಳಿಯಂಥ ಮುಂತಾದದವರು ಕೊಚ್ಚಿಕೊಳ್ಳುವಂತೆ ಯಾವರೀತಿಯಲ್ಲೂ ಯಡಿಯೂರಪ್ಪನವರಿಗೆ ಬೆಂಬಲಿಸುವ ಯೋಗ್ಯತೆ ಇವರಿಗೆ ಇವತ್ತಿನ ಪರಿಸ್ಥಿತಿಯಲ್ಲಿ ಸಾಧ್ಯವೇ ಇಲ್ಲ. ಮೋದಿ ಮತ್ತು ಷಾರವರಿಗೆ ಇವರಿಂದ ಆಗಬೇಕಾದದ್ದು ಏನೂ ಇಲ್ಲ. ಇವರೆಲ್ಲ ಅಧಿಕಾರದಾಹ ಉಳ್ಳವರೇ ಹೊರತು ಆಡಳಿತ ಚತುರರೇನಲ್ಲ. ಈ ವಿಚಾರ ಅನುಭವಿ ರಾಜಕಾರಣಿ ಯಡಿಯೂರಪ್ಪನವರಿಗೆ ತಿಳಿಯದೇನಿಲ್ಲ.

ಈ ಸಂದರ್ಭದಲ್ಲಿ ಮಹತ್ವಾಕಾಂಕ್ಷಿಗಳಾದ ಮೋದಿ, ಷಾ ಇವರ ವಿಚಾರ ಸರಣಿ ಏನಿರಬಹುದು? ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಯಂತಹವರನ್ನು ಕೂಡಿಸುವ ದುರಾಲೋಚನೆ ಇದೆ. ಆ ಛದ್ಮವೇಷದ ಕಾವಿಯ ವಸ್ತ್ರ ಧಾರಿಯಂತಹವರನ್ನು ತಂದು ಕೂಡಿಸುವ ತವಕ ಇದೆ. ಅಷ್ಟೇ ರುತ್‍ಲೆಸ್ ಆದ ವ್ಯಕ್ತಿಯೊಬ್ಬನ ತಲಾಷಿನಲ್ಲಿದ್ದಾರೆ ಅವರು. ಶಾಸಕರಲ್ಲಿ ಈ ಅರ್ಹತೆ ಉಳ್ಳವರು ಯಾರು ಇಲ್ಲ. ಆರ್‍ಎಸ್‍ಎಸ್‍ನಲ್ಲಾದರೂ, ಕರ್ನಾಟಕದಲ್ಲಿ ಇಂತಹ ಧೂರ್ತರು ಇದ್ದಾರೆಯೇ ಎಂದು ತಲಾಷ್ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯೇನೋ ಹೌದು. ಆದರೆ ಉತ್ತರಪ್ರದೇಶದ ಕಾವಿ ಮುಖ್ಯಮಂತ್ರಿಯ Ruthlessnessನ ಸಾವಿರದಲ್ಲಿ ಒಂದು ಅಂಶಕೂಡ ಪ್ರಹ್ಲಾದ್ ಜೋಶಿಯಲಿಲ್ಲ ಎಂಬುದು ಮೋದಿ-ಷಾಗಳಿಗೆ ಗೊತ್ತಿದೆ. ಉತ್ತರ ಪ್ರದೇಶದ ಛದ್ಮವೇಷಾದಾರಿಯಂತಹ ಕಾಠಿಣ್ಯ ಮನುಷ್ಯ ಮೋದಿ ಷಾ ಅವರಿಗೆ ಸಿಗುವವರೆಗೂ ಯಡಿಯೂರಪ್ಪನವರಿಗೆ ಅಧಿಕಾರದ ಜೀವದಾನ ಮುಂದುವರೆಯುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ.

  • ಎಚ್.ಎಸ್ ದೊರೆಸ್ವಾಮಿ.

ಇದನ್ನು ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...